ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಅಧಿಕಾರಕ್ಕೆ ಬರುತ್ತಿದ್ದಂತೆ ಕರ್ನಾಟಕ ವಿರುದ್ಧ ಸಮರ ಸಾರಿದ ದಳಪತಿ ವಿಜಯ್‌; ಮೇಕೆದಾಟು ಯೋಜನೆ ಸ್ಥಗಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ

ಮೇಕೆದಾಟು ಯೋಜನೆ ತಮಿಳುನಾಡು ಆಕ್ಷೇಪ

ಕರ್ನಾಟಕದ ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಿದ್ಧಪಡಿಸಿರುವ ಡಿಪಿಆರ್ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್‌ನ 2018ರ ಅಂತರ್ ರಾಜ್ಯ ಜಲ ವಿವಾದದ ತೀರ್ಪಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Karnataka CM Row: ದೆಹಲಿಯಿಂದ ಬೆಂಗಳೂರಿಗೆ ಹೊರಟ ಸಿದ್ದರಾಮಯ್ಯ; ರಾಜ್ಯದ ಸಿಎಂ ಬದಲಾಗ್ತಾರಾ?

ದೆಹಲಿಯಿಂದ ಬೆಂಗಳೂರಿಗೆ ಹೊರಟ ಸಿದ್ದರಾಮಯ್ಯ; ಸಿಎಂ ಬದಲಾಗ್ತಾರಾ?

ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ಬಳಿಕ ಮಾತನಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡುವುದು ಊಹಾಪೋಹಾ ಎಂದು ಹೇಳಿದ್ದರು. ತಾವು ರಾಜ್ಯ ಸಭೆ, ವಿಧಾನ ಪರಿಷತ್‌ ಚುನಾವಣೆ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬೇರೆ ಏನೂ ಚರ್ಚೆಯಾಗಿಲ್ಲ ಎಂದು ಹೇಳಿದ್ದರು.

Bangalore News: ಶಿಕ್ಷಕರು, ಅತಿಥಿ ಶಿಕ್ಷಕರು, ಅಂಗನವಾಡಿ ನೌಕರರ ನೇಮಕಾತಿಗೂ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಿ: ಡಾ.ಎಸ್.ಸಂಗಮೇಶ್ ಆಗ್ರಹ

ಶಿಕ್ಷಣ, ಉದ್ಯೋಗ ವಲಯದಲ್ಲಿ ಕಡ್ಡಾಯ ಒಳಮೀಸಲಾತಿ ಜಾರಿಗೆ ತರಬೇಕು

ಐಟಿಐ ಕಾಲೇಜುಗಳು, ವಿವಿಧ ವಿಶ್ವವಿದ್ಯಾಲಯಗಳ ಪಿ.ಎಚ್.ಡಿ ಪ್ರವೇಶಾತಿ, ಪಿಯುಸಿ ನಂತರದ 5 ವರ್ಷದ ಎಲ್.ಎಲ್.ಬಿ ಪ್ರವೇಶಾತಿ, ಸರ್ಕಾರಿ ಡಿಗ್ರಿ ಕಾಲೇಜುಗಳ 10,500 ಅತಿಥಿ ಸಹ ಪ್ರಾಧ್ಯಾಪಕರ ನೇಮಕಾತಿ, 52 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ, 5,910 ಅತಿಥಿ ಉಪನ್ಯಾಸಕರ ನೇಮಕಾತಿ, ಅಂಗನವಾಡಿ ಹುದ್ದೆಗಳು, ಆರ್,ಟಿ.ಇ ಮತ್ತು ಆದರ್ಶ ವಿದ್ಯಾಲಯಗಳ ಪ್ರವೇಶಾತಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಒಳಮೀಸಲಾತಿ ಜಾರಿಯಾಗಿಲ್ಲ

ಶಿಕ್ಷಣ ಇಲಾಖೆ ಆದೇಶದ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ: ಆಯುಕ್ತರಿಗೆ ದೂರು

ಶಿಕ್ಷಣ ಇಲಾಖೆ ಆದೇಶದ ವಿರುದ್ಧ ಪ್ರವೇಶ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ನಿರ್ದೇಶಕರು ಮತ್ತಿತರೆ ಅಧಿಕಾರಿಗಳಿಗೆ ದೂರು ಸಲ್ಲಿಸ ಲಾಗಿದೆ. ನಕಲಿ ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ಮುಗ್ಧ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿರುವ ಅನಧಿಕೃತ ವಿದ್ಯಾಸಂಸ್ಥೆಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಟೋ ಓಡಿಸಿ ಬದುಕು ಸಾಗಿಸುವ ಬೆಂಗಳೂರಿನ ಮಹಿಳೆ: ಚಾಲಕಿಯ ಧೈರ್ಯಕ್ಕೆ ಸಲಾಂ

ಬೆಂಗಳೂರು ಆಟೋ ಚಾಲಕಿಯ ಧೈರ್ಯಕ್ಕೆ ಅಮೆಜಾನ್ ಸಿಬ್ಬಂದಿ ಫಿದಾ

Viral News: ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿರದೆ ತಮಗೆ ಸಾಧ್ಯವಾದ ಕೆಲಸ ಮಾಡಿ ಜೀವನ ನಿಭಾಯಿಸುವ ಅನೇಕ ಮಹಿಳೆಯರಿದ್ದಾರೆ. ಅದರಂತೆ ಬೆಂಗಳೂರಿನ ಮಹಿಳೆಯೊಬ್ಬರು ಆಟೋ ಚಲಾಯಿಸುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಆಟೋ ಚಾಲಕಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಮಹಿಳಾ ಆಟೋ ಚಾಲಕಿಯ ಕಥೆಯನ್ನು ಅಮೆಜಾನ್ ಉದ್ಯೋಗಿಯೊಬ್ಬರು ಶೇರ್ ಮಾಡಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ; ನೇರಳೆ ಮಾರ್ಗದ ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಇದರಿಂದ ರಾಜಧಾನಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಮಳೆ ಅಬ್ಬರಿಸಿದೆ.

18 ವರ್ಷ ಪೂರೈಸಿದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ಸಿಕ್ತು ವಿಶೇಷ ಗೌರವ

ಬೆಂಗಳೂರು ಏರ್‌ಪೋರ್ಟ್‌ಗೆ ಅಂಚೆ ಇಲಾಖೆಯಿಂದ ವಿಶೇಷ ಗೌರವ

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ವಿಮಾನ ನಿಲ್ದಾಣದ 18ನೇ ವಾರ್ಷಿಕೋತ್ಸವದ ಅಂಗವಾಗಿ ಅಂಚೆ ಇಲಾಖೆಯು ಚಿತ್ರವನ್ನು ಒಳಗೊಂಡ ಶಾಶ್ವತ ಅಂಚೆ ಮೊಹರನ್ನು ಬಿಡುಗಡೆ ಮಾಡಿದ್ದು, ಇದರ ಜತೆಗೆ 'ವಿಶೇಷ ಅಂಚೆ ಲಕೋಟೆ' ಮತ್ತು 'ಸ್ಮರಣಾರ್ಥ ಅಂಚೆ ಕಾರ್ಡ್‌ಗಳನ್ನು' ಬಿಡುಗಡೆಗೊಳಿಸಿದೆ.

Karnataka CM Row: ಕರ್ನಾಟಕ ಸಿಎಂ ಬದಲಾವಣೆ ಚರ್ಚೆ; ದೆಹಲಿ ಸಭೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಏನು?

ಕರ್ನಾಟಕ ಸಿಎಂ ಬದಲಾವಣೆ; ದೆಹಲಿ ಸಭೆಯಲ್ಲಿ ಹೈಕಮಾಂಡ್‌ ನಿರ್ಧಾರ ಏನು?

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮೀಟಿಂಗ್‌ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸೇರಿ ಪ್ರಮುಖರು ಚರ್ಚೆ ನಡೆಸಿದ್ದಾರೆ.

BJP Protest: ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿಕಾರಿಪುರದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್‌ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಶಿಕಾರಿಪುರದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಶಿಕಾರಿಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ನೂರಾರು ರೈತರು ಭಾವಹಿಸಿದ್ದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಲಾಯಿತು.

Hate speech Bill: ಕರ್ನಾಟಕದ ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್‌; ಹೊಸ ಕಾನೂನಿಗೆ ಆಕ್ಷೇಪ

ಕರ್ನಾಟಕದ ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್‌

ಕರ್ನಾಟಕದ ದ್ವೇಷ ಭಾಷಣ ಮಸೂದೆಯಲ್ಲಿನ ವಿಷಯಗಳು ಈಗಾಗಲೇ ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಇತರ ಕಾನೂನುಗಳಲ್ಲೇ ಇವೆ. ಹೀಗಾಗಿ ಪ್ರತ್ಯೇಕವಾಗಿ ರಾಜ್ಯಗಳು ಕಾನೂನು ಜಾರಿ ಮಾಡುವುದರಿಂದ ಪುನರಾವರ್ತನೆ ಮತ್ತು ಏಕರೂಪತೆಯ ಕೊರತೆ ಉಂಟಾಗಬಹುದು. ಹೀಗಾಗಿ ಹೊಸ ಕಾನೂನಿನ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

ಬೀದರ್ ಪಶು ವಿವಿ ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

Bidar Veterinary University scandal: 2017-18ರ ಅವಧಿಯಲ್ಲಿ ಬೀದರ್‌ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ದರ್ಬಳಕೆ ಮಾಡಲಾಗಿತ್ತು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ.

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ದಿನಾಂಕ ಘೋಷಣೆ; ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ದಿನಾಂಕ ಘೋಷಣೆ

ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕವನ್ನು ಘೋಷಿಸಲಾಗಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಬಿಹಾರದ ಒಂಬತ್ತು ಹಾಗೂ ಕರ್ನಾಟಕದ ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ತಪ್ಪಿದ ಭಾರೀ ದುರಂತ; ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೆಂಗಳೂರಿನಿಂದ ಹೊರಟಿದ್ದ ರೈಲಿನ ಭೋಗಿ

ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೆಂಗಳೂರಿನಿಂದ ಹೊರಟಿದ್ದ ರೈಲಿನ ಭೋಗಿ

ಬೆಂಗಳೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಭಾರೀ ದುರಂತವೊಂದು ತಪ್ಪಿದೆ. ಮೇ 23 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ (Bengaluru SMVT Station) ಬಿಹಾರಕ್ಕೆ ತೆರಳುತ್ತಿದ್ದ ದಾನಪೂರ್ ವಿಶೇಷ ರೈಲು ( ಸಂಖ್ಯೆ 03252) ಚಲಿಸುತ್ತಿದ್ದಾಗಲೇ ಜಾಯಿಂಟ್‌ ವೀಲ್‌ ಕಟ್ಟಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಮಗು ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ.

ಶೌಚಾಲಯ ಬಳಕೆ ವೇಳೆ ಚಿತ್ರೀಕರಣ: ಬೆಂಗಳೂರು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಗರ್ಭಿಣಿ ದೂರು

ಆಸ್ಪತ್ರೆ ಶೌಚಾಲಯ ಬಳಕೆ ವೇಳೆ ಚಿತ್ರೀಕರಣ: ದೂರು

ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಗರ್ಭಿಣಿಯೊಬ್ಬರು ಶೌಚಾಲಯ ಬಳಕೆ ಮಾಡುತ್ತಿದ್ದಾಗ ಚಿತ್ರೀಕರಣ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಮೇ 21ರಂದು ಈ ಘಟನೆ ನಡೆದಿದ್ದು, ರೋಗಿಯ ಗೌಪ್ಯತೆ ಮತ್ತು ಭದ್ರತಾ ಶಿಷ್ಟಾಚಾರಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಿಎಂ ವಿಜಯ್​​​ಗೆ ಸುಪ್ರೀಂ ಕೋರ್ಟ್‌ ಶಾಕ್‌; ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

Mekedatu Project: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ಹಿಂದಿನ ಸರ್ಕಾರಗಳ ಬಳಿಕ ಇದೀಗ ಮೇಕೆದಾಟು ಯೋಜನೆಗೆ ತಮಿಳುನಾಡು ನೂತನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸಹ ಅಡ್ಡಗಾಲು ಹಾಕುತ್ತಿದ್ದಾರೆ.

ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಣೆ; ಹೋಟೆಲ್ ಊಟ- ತಿಂಡಿ ಬೆಲೆಯಲ್ಲಿ ಮತ್ತೆ ಹೆಚ್ಚಳ?

ಹೋಟೆಲ್ ಊಟ- ತಿಂಡಿ ಬೆಲೆಯಲ್ಲಿ ಮತ್ತೆ ಹೆಚ್ಚಳ?

ಸರ್ಕಾರವು ರಾಜ್ಯದ 81 ಉದ್ಯೋಗ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಗರಿಷ್ಠ ಶೇ. 60 ರಷ್ಟು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಈ ನಿರ್ಧಾರದಿಂದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಊಟ, ತಿಂಡಿಗಳ ಬೆಲೆ ತೀವ್ರ ಏರಿಕೆಗೆ ಕಾರಣವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಸೋಮವಾರ ಎಚ್ಚರಿಸಿದೆ.

ಸಾಲಹಳ್ಳಿಯಲ್ಲಿ ಬೆಳಗಾವಿ-ರಾಯಚೂರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಏತ ನೀರಾವರಿ ಕಾಮಗಾರಿಗಳ ವಿಳಂಬಕ್ಕೆ ರೈತರ ಆಕ್ರೋಶ

ಏತ ನೀರಾವರಿ ಕಾಮಗಾರಿಗಳ ವ್ಯಾಪ್ತಿಯ ಗ್ರಾಮಗಳ ರೈತರು, ತಾಲೂಕಿನ ರೈತ ಮುಖಂಡ ರನ್ನು ಒಳಗೊಂಡಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತ ಸಮೂಹ ನೀರಾವರಿ ಕಾಮಗಾರಿ ಗಳ ವಿಳಂಬ ನೀತಿಯ ವಿರುದ್ಧ ಸ್ಥಳೀಯ ಜನಪ್ರತಿನಿಧಿಗಳು, ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Gauribidanur News: ಇಂಟೆಕ್ ಉಪಾಧ್ಯಕ್ಷರಾಗಿ ಕುದುರೇಬ್ಯಾಲ್ಯದ ಪದ್ಮರಾಜ್ ಆಯ್ಕೆ

ಇಂಟೆಕ್ ಉಪಾಧ್ಯಕ್ಷರಾಗಿ ಕುದುರೇಬ್ಯಾಲ್ಯದ ಪದ್ಮರಾಜ್ ಆಯ್ಕೆ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟೆಕ್ ವಿಭಾಗದ ಅಧ್ಯಕ್ಷ ಡಾ.ಜಿ.ಸಂಜೀವ್ ರೆಡ್ಡಿ ಅವರ ಆದೇಶದ ಮೇರೆಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆಯ ಮೇರೆಗೆ ರಾಜ್ಯ ಇಂಟೆಕ್ ಅಧ್ಯಕ್ಷ ಡಿ.ಲಕ್ಷ್ಮೀ ವೆಂಕಟೇಶ್ ಅವರು ಪದ್ಮರಾಜ್ ಜೈನ್.ಕೆ. ಎಚ್ ರವರನ್ನು ರಾಜ್ಯ ಇಂಟೆಕ್ ಉಪಾಧ್ಯಕ್ಷ ರನ್ನಾಗಿ ನೇಮಕ ಮಾಡಿ ಬೆಂಗಳೂರು ಕೆ.ಪಿ.ಸಿ.ಸಿ ಕಚೇರಿಯಲ್ಲಿ ನೇಮಕ ಆದೇಶ ಪತ್ರವನ್ನು ವಿತರಣೆ ಮಾಡಿದ್ದಾರೆ

Kolar News: ಬೇಸಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಸಹೋದರರು ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರರು ಸಾವು

ಬೇಸಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಜರುಗಿದೆ. ದೇವಕಿರಣ್ (12) ಹಾಗೂ ವಿನುತ್ (9) ಎಂದು ಮೃತ ಸಹೋದರರು.

ರಾಗಿ ಖರೀದಿ ಕೇಂದ್ರವಿರುವ ವರದಳ್ಳಿ ಗ್ರಾಮಸ್ಥರಿಗೆ ಇನ್ನೂ ಸಿಕ್ಕಿಲ್ಲ ರಸ್ತೆ ಭಾಗ್ಯ

ಮಣ್ಣಿನ ರಸ್ತೆಯಲ್ಲಿಯೇ ಸಂಚರಿಸಬೇಕಾದ ದುಸ್ಥಿತಿಗೆ ಸಾರ್ವಜನಿಕರ ಹಿಡಿ ಶಾಪ

ಇತ್ತೀಚಿಗೆ ಸುರಿದ ಮಳೆಯಿಂದಾಗಿ ಈ ರಸ್ತೆ ಕೆಸರುಗದ್ದೆಯಂತಾಗಿದ್ದು ವಾಹನ ಸಂಚಾರ ದುಸ್ತರ ವಾಗಿದೆ. ಈ ಸಂಬಂಧ ಗ್ರಾಮಸ್ಥರು ತಾಲೂಕ ಆಡಳಿತ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ನೂತನ ಜಿಲ್ಲಾಧಿಕಾರಿಗಳಾದರೂ ಇತ್ತ ಗಮನ ಹರಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸ ಬೇಕೆಂಬುದು ಪ್ರಜ್ಞಾವಂತ ನಾಗರೀಕರ ಆಗ್ರಹವಾಗಿದೆ

Loading...