ಅಧ್ಯಕ್ಷರಾಗಿ ಲಕ್ಷ್ಮಣ್ ಉಪಾಧ್ಯಕ್ಷರಾಗಿ ಸುರೇಶ್ ಆಯ್ಕೆ
ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಬೆಳೆಸುವ ಜೊತೆಗೆ ಒಗ್ಗಟ್ಟು ಪ್ರದರ್ಶನ ಹಾಗೂ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗುವುದು. ತಾಲ್ಲೂಕು ಕೇಂದ್ರದಲ್ಲಿ ಹಾಸ್ಟೆಲ್ ನಿರ್ಮಾಣ ಹಾಗೂ ಬಡ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಜೊತೆಗೆ ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಟಿ, ಆರೋಗ್ಯ ವಿಚಾರದಲ್ಲಿ ಸಹಕಾರ ಹೀಗೆ ಅನೇಕ ವಿಚಾರ ಮಹಾಸಭಾ ನಡೆಸಲಿದೆ