ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Gubbi News ಮಾದಾರ ಮಹಾಸಭಾದ ಕಡಬ ಹೋಬಳಿ ಘಟಕದ ಅಧ್ಯಕ್ಷರಾಗಿ ಲಕ್ಷ್ಮಣ್ ಉಪಾಧ್ಯಕ್ಷರಾಗಿ ಸುರೇಶ್ ಆಯ್ಕೆ

ಅಧ್ಯಕ್ಷರಾಗಿ ಲಕ್ಷ್ಮಣ್ ಉಪಾಧ್ಯಕ್ಷರಾಗಿ ಸುರೇಶ್ ಆಯ್ಕೆ

ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಬೆಳೆಸುವ ಜೊತೆಗೆ ಒಗ್ಗಟ್ಟು ಪ್ರದರ್ಶನ ಹಾಗೂ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗುವುದು. ತಾಲ್ಲೂಕು ಕೇಂದ್ರದಲ್ಲಿ ಹಾಸ್ಟೆಲ್ ನಿರ್ಮಾಣ ಹಾಗೂ ಬಡ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಜೊತೆಗೆ ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಟಿ, ಆರೋಗ್ಯ ವಿಚಾರದಲ್ಲಿ ಸಹಕಾರ ಹೀಗೆ ಅನೇಕ ವಿಚಾರ ಮಹಾಸಭಾ ನಡೆಸಲಿದೆ

Deputy Lokayukta: ದೂರುದಾರರಿಗೆ ಕಾನೂನಾತ್ಮಕ ಪರಿಹಾರ ದೊರಕಿಸುವುದು ಕರ್ತವ್ಯವಾಗಲಿ: ಉಪಲೋಕಾಯುಕ್ತ ಫಣೀಂದ್ರ

ದೂರುದಾರರಿಗೆ ಕಾನೂನಾತ್ಮಕ ಪರಿಹಾರ ದೊರಕಿಸುವುದು ಕರ್ತವ್ಯವಾಗಲಿ

ಇಲಾಖೆಗೆ ಸಾರ್ವಜನಿಕರಿಂದ ದೂರು ಅಥವಾ  ಅರ್ಜಿ ಬಂದಾಗ ಅದನ್ನು ಮೊದಲು ತಮಗೆ ಬರುತ್ತದೆ ಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿ ಪರಿಶೀಲನೆ ನಡೆಸಿ ಖಚಿತ ಪಡಿಸಿಕೊಳ್ಳ ಬೇಕು. ಒಂದು ವೇಳೆ ಆ ದೂರು ಅಥವಾ ಅರ್ಜಿ ತಮ್ಮ ವ್ಯಾಪ್ತಿಗೆ ಬರದಿದ್ದಲ್ಲಿ ಸಂಬಂಧಿಸಿದ ದೂರು ದಾರ ಅಥವಾ ಅರ್ಜಿದಾರರನ್ನು ಕರೆಯಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ದೂರು ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ ಮುಕ್ತಿ ದೊರಕಿಸಿಕೊಡಬೇಕೆ ಹೊರತು ಅನವಶ್ಯಕವಾಗಿ ಧೂಳು ತಿನ್ನುವಂತೆ ಮಾಡಿ ಕಾಲಹರಣ ಮಾಡಬಾರದು

Five Guarantee Scheme: ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪಂಚ ದಿನಗಳ ಕಾಲ ಜಿಲ್ಲೆಯಲ್ಲಿ ಕಲಾಜಾಥ ಪ್ರಚಾರ ವಾಹನ ಸಂಚಾರ

ಜಿಲ್ಲೆಯಲ್ಲಿ ಕಲಾಜಾಥ ಪ್ರಚಾರ ವಾಹನ ಸಂಚಾರ

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್ ರವರು ಮಾತ ನಾಡಿ, ಇಂದಿರಾ ಕಿಟ್ ಸೌಲಭ್ಯವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬರುವ ಯುಗಾದಿ ಹಬ್ಬದ ವೇಳೆಗೆ ಘೋಷಿಸಲಿದ್ದಾರೆ. ಶೀಘ್ರದಲ್ಲೇ ಜನರಿಗೆ ಈ ಸೌಲಭ್ಯ ಸಿಗುವ ಭರವಸೆ ಇದೆ. ಒಬ್ಬ ವ್ಯಕ್ತಿಗೆ ಪ್ರಸ್ತುತ ನೀಡುತ್ತಿರುವ 10 ಕೆ.ಜಿ ಅಕ್ಕಿ ಬದಲಾಗಿ 5 ಕೆ.ಜಿ. ದವಸ ಧಾನ್ಯಗಳನ್ನು ಹಾಗೂ 5 ಕೆ.ಜಿ. ಅಕ್ಕಿಸೇರಿ ಒಟ್ಟು 10 ಕೆ.ಜಿ.ಯ ಇಂದಿರಾ ಕಿಟ್ ಜನರ ಕೈಸೇರಲಿದೆ

Chikkaballapur News: ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಆಯ್ಕೆ

ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಆಯ್ಕೆ

ಸಂಘದ ಮೂಲಕ ರೈತರಿಗೆ ಹಾಗೂ ಸ್ತ್ರೀಶಕ್ತಿ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಂಘದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಕೇವಲ ರೈತರ ಅಭಿವೃದ್ಧಿಯೇ ನಮ್ಮ ಉದ್ದೇಶವಾಗಿದೆ. ಈ ಬಾರಿ ಚುನಾವಣೆಗೆ ಕೆಲವರು ಮುಂದಾದರೂ, ರಾಜಕೀಯ ಬೆರೆಸದೆ ಅವಿರೋಧ ಆಯ್ಕೆ ಮಾಡ ಬೇಕೆಂಬ ಮನವಿಗೆ ಸದಸ್ಯರು ಸ್ಪಂದಿಸಿದ್ದು, ಮತ್ತೊಮ್ಮೆ ಅಧ್ಯಕ್ಷ–ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ.

ಸಿ.ಜೆ. ರಾಯ್‌ ಬೆನ್ನಲ್ಲೇ ಕರ್ನಾಟಕದ ಮತ್ತೊಬ್ಬ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಸಾಲ ಕೊಟ್ಟಿದ್ದೇ ಮುಳುವಾಯ್ತು

ಕರ್ನಾಟಕದ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಕಾರಣವೇನು?

Kodagu News: ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಎಂದು ಗುರುತಿಸಲಾಗಿದೆ. ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ದುರುಪಯೋಗ ತಡೆಯಲು ದಿಟ್ಟ ಹೆಜ್ಜೆ ಇಟ್ಟ ಸರ್ಕಾರ; ಇನ್ಮುಂದೆ ಜೀವಿತ ಪ್ರಮಾಣ ಪತ್ರ ಕಡ್ಡಾಯ

ಗೃಹಲಕ್ಷ್ಮಿ ಯೋಜನೆ: ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಹೊಸ ಸೂಚನೆ ಸದ್ಯದಲ್ಲೇ ಹೊರ ಬೀಳಲಿದೆ. ಯೋಜನೆಯ ದುರ್ಬಳಕೆ ತಡೆಯಲು ಸರ್ಕಾರ ಮುಖ್ಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಇನ್ನುಮುಂದೆ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಲಿದೆ.

ಮೆಟ್ರೋ ಪ್ರಯಾಣಿಕರಿಗೆ ರಿಲೀಫ್‌; ಫೆಬ್ರವರಿ 9ರಂದು ಟಿಕೆಟ್‌ ದರ ಏರಿಯಾಗಲ್ಲ ಎಂದ ಸಂಸದ ತೇಜಸ್ವಿ ಸೂರ್ಯ

ಫೆಬ್ರವರಿ 9ರಂದು ಮೆಟ್ರೋ ಟಿಕೆಟ್‌ ದರ ಏರಿಯಾಗಲ್ಲ

Tejasvi Surya: ಸೋಮವಾರ (ಫೆಬ್ರವರಿ 9) ಏರಿಕೆಯಾಬೇಕಿದ್ದ ಮೆಟ್ರೋ ದರಕ್ಕೆ ಬ್ರೇಕ್‌ ಹಾಕಲಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಅವರು ಕೇಂದ್ರದ ಜತೆ ಮಾತನಾಡಿ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ ಒಡ್ಡಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ. 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಪಾಪ ಆತನಿಗೆ ಅನುಭವ ಕಡಿಮೆ; ಮೆಟ್ರೋ ದರ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಡಿ.ಕೆ. ಶಿವಕುಮಾರ್‌ ತಿರುಗೇಟು

ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು: ಡಿ.ಕೆ. ಶಿವಕುಮಾರ್‌

DK Shivakumar: ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ಅವರು ಹೇಳಿದ್ದಾರೆ.

Bengaluru News: ಸಾವಿನಲ್ಲೂ ಒಂದಾದ ದಂಪತಿ; ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ

ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ

Self Harming: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಪತಿ ಮೃತಪಟ್ಟಿರುವ ಸುದ್ದಿ ತಿಳಿದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು 48 ವರ್ಷದ ರಾಜು ಮತ್ತು 42 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಎಂಎಸ್‌ಐಎಲ್‌ ಚಿಟ್‌ ವಹಿವಾಟು 5 ವರ್ಷಗಳಲ್ಲಿ 5 ಸಾವಿರ ಕೋಟಿ ರುಪಾಯಿಗೆ ಏರಿಸುವ ಗುರಿ: ಸಿದ್ದರಾಮಯ್ಯ

MSIL ಚಿಟ್‌ ವಹಿವಾಟು 5 ವರ್ಷಗಳಲ್ಲಿ 5 ಸಾವಿರ ಕೋಟಿ ರು.ಗೆ ಏರಿಕೆ: ಸಿಎಂ

CM Siddaramaiah: ಎಂಎಸ್‌ಐಎಲ್‌ ಸರ್ಕಾರಿ ಸಂಸ್ಥೆಯಾಗಿರುವುದರಿಂದ ಮೋಸದ ಪ್ರಶ್ನೆ ಬರುವುದಿಲ್ಲ. ಸಂಸ್ಥೆಯ ವಹಿವಾಟು ಈಗ ವರ್ಷಕ್ಕೆ 500 ಕೋಟಿ ರು.ಗಿಂತಲೂ ಕಡಿಮೆ ಇದೆ. ಇದನ್ನು ಐದು ವರ್ಷಗಳಲ್ಲಿ 5 ಸಾವಿರ ಕೋಟಿ ರು.ಗೆ ಏರಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ʼʼಪ್ರೀತಿ ಸುಳ್ಳಲ್ಲ; ಆದರೆ..." ಚಿಕ್ಕ ವಾಕ್ಯದಲ್ಲಿ ಬದುಕಿನ ದೊಡ್ಡ ಸಂದೇಶ ಸಾರಿದ ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕರ ಬರಹಕ್ಕೆ ನೆಟ್ಟಿಗರು ಫಿದಾ

Viral Video: ಬೆಂಗಳೂರಿನ ಆಟೋದಲ್ಲಿ ಬರೆದಿರುವ ಸಾಲೊಂದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ದೃಶ್ಯ ಸೋಶಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಪ್ರೇಮಿಗಳ ಕುರಿತಾಗಿ ಬರೆದ ಈ ಬರಹ ವ್ಯಾಲಂಟೈನ್ಸ್‌ ಡೇಗೆ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆಟೋ ಹಿಂಭಾಗದಲ್ಲಿ ಸಂಜಯ್ ದತ್ ಫೋಟೊ ಹಾಕಿ, ಅದರ ಪಕ್ಕದಲ್ಲಿ ʼʼಪ್ರೀತಿ ಸುಳ್ಳಲ್ಲ, ಪ್ರೀತಿಸುವವರು ಸುಳ್ಳರುʼʼ ಎಂದು ಬರೆಯಲಾಗಿದೆ. ಬದುಕಿನ ಸಂದೇಶವೇ ಈ ವಾಕ್ದಯದಲ್ಲಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

Terrorist Death: ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಕಳೆದ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

Moti Veeranna passes away: ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ ಇನ್ನಿಲ್ಲ

ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ ಇನ್ನಿಲ್ಲ

ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಯಜಮಾನ್‌ ಮೋತಿ ವೀರಣ್ಣ ಅವರ ಪಾರ್ಥಿವ ಶರೀರದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

KSRTC: ಜನಾಕ್ರೋಶಕ್ಕೆ ಮಣಿದ ಸರ್ಕಾರ, ಬಸ್‌ಗಳ ಮೇಲಿನ ತಂಬಾಕು ಜಾಹೀರಾತು 15 ದಿನದೊಳಗೆ ತೆರವಿಗೆ ಸೂಚನೆ

ಸರ್ಕಾರಿ ಬಸ್‌ಗಳ ಮೇಲಿನ ತಂಬಾಕು ಜಾಹೀರಾತು 15 ದಿನದೊಳಗೆ ತೆರವಿಗೆ ಸೂಚನೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತಿನ ಪೋಸ್ಟರ್ ಅಂಟಿಸೋದರ ವಿರುದ್ಧ ಒಂದು ಆಂದೋಲನವೇ ಶುರುವಾಗಿತ್ತು. ಈ ರೀತಿಯ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹ ಕೂಡ ಮಾಡಿದ್ದರು. ಸದ್ಯ ಜನಾಕ್ರೋಶಕ್ಕೆ ಮಣಿದಿರುವ ಸರ್ಕಾರ, ಕೂಡಲೇ ತಂಬಾಕು ಉತ್ಪನ್ನಗಳನ್ನು ಪ್ರಮೋಟ್ ಮಾಡುವ ಜಾಹಿರಾತುಗಳ ತೆರವಿಗೆ ಕೆಎಸ್‌ಆರ್‌ಟಿಸಿ ಎಂಡಿಗೆ ಸೂಚನೆ ನೀಡಿದೆ.

Appanna Hegde no more: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬನ್ನೂರು ಅಪ್ಪಣ್ಣ ಹೆಗ್ಡೆ ಅವರು ಸಹಕಾರಿ ಕ್ಷೇತ್ರದ ಧುರೀಣರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

Self Hraming: ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

Upendra: ಉಪೇಂದ್ರ- ಪ್ರಿಯಾಂಕಾ ದಂಪತಿಯ ಹಣ ಲಪಟಾಯಿಸಿದ್ದ ಬಿಹಾರ ಮೂಲದ ವಂಚಕ ಆರೆಸ್ಟ್!

ಉಪೇಂದ್ರ- ಪ್ರಿಯಾಂಕಾ ದಂಪತಿಯ ಹಣ ಲಪಟಾಯಿಸಿದ್ದ ಬಿಹಾರ ಮೂಲದ ವಂಚಕ ಆರೆಸ್ಟ್!

ಹಣ ಕಳೆದುಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಪ್ರಿಯಾಂಕಾ ಉಪೇಂದ್ರ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರಿಗೆ ಇದರ ಸುಳಿವು ಬಿಹಾರದ ದಶರಥಪುರದಲ್ಲಿ ಸಿಕ್ಕಿದೆ. ಅಲ್ಲಿನ ವಿಕಾಸ್ ಕುಮಾರ್ ಎಂಬ ಯುವಕನನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಬೆಂಗಳೂರು – ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆಯ ಚಂದಾಪುರ ಸಮೀಪ ಬುಧವಾರ ಬೆಳಗ್ಗೆ 9:00ರ ಸಮಯದಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅದಾದ ನಂತರ ವ್ಯಕ್ತಿ ಅಲ್ಲಿಯೇ ಕೆಳಗೆ ಬಿದ್ದು, ಸಾವನ್ನಪ್ಪಿದ್ದರು. ರಾತ್ರಿ 9:00ರ ವರೆಗೂ ಅವರ ಶವ ಅಲ್ಲೇ ಬಿದ್ದಿತ್ತು ಎಂದು ತಿಳಿದು ಬಂದಿದೆ.

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ : ಅಂಬೇಡ್ಕರ್ ಭವನದಲ್ಲಿ ಸನ್ಮಾನ

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶಕ್ಕೆ ಅನ್ನ ನೀಡುವ ಅನ್ನದಾತರು ಸಮಸ್ಯೆಗಳ ಸುಳಿಯಿಂದ ಹೊರಬರಲಾಗದೆ ನರಳುತ್ತಿದ್ದಾರೆ.ಬೆವರು ಹರಿಸಿ ದುಡಿದರೂ ಕೂಡ ಬೆಳೆದ ಬೆಳೆಗಳಿಗೆ ಸ0ರಿಯಾದ ಬೆಲೆ ದೊರೆಯುತ್ತಿಲ್ಲ. ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಕೂಡ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹರ ಕಂಡುಹಿಡಿಯುವಲ್ಲಿ ಸಂಪೂರ್ಣ ಸೋತಿವೆ.

Gubbi News: ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಸಂಸ್ಕಾರವಿಲ್ಲದ ಶಿಕ್ಷಣ ದೇಶಕ್ಕೆ ಮಾರಕ. ದೇಶದ್ರೋಹ ಕೆಲಸ, ಮೋಸ, ಭ್ರಷ್ಟಾಚಾರ ಎಲ್ಲವೂ ವಿದ್ಯಾ ವಂತರಿಂದ ನಡೆದಿದೆ ಎಂಬುದು ವಿಷಾದನೀಯ. ಅದರಲ್ಲೂ ಸಂಸ್ಕಾರರಹಿತ ಶಿಕ್ಷಣ ಪಡೆದವರಲ್ಲಿ ಸಮಾಜಘಾತುಕ ಶಕ್ತಿಗಳು ಕಾಣುತ್ತಿವೆ ಎಂದ ವಿಷಾದಿಸಿದ ಅವರು ವೃದ್ಧಾ ಶ್ರಮ, ಅನಾಥಾಶ್ರಮ ಹೆಚ್ಚಾ ಗಲು ಈ ಸಂಸ್ಕಾರವಿಲ್ಲದ ವಿದ್ಯೆ ಕಾರಣ.

Gubbi News: ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ: ಗುಬ್ಬಿ ಬಸವರಾಜ್

ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ

ಸಮುದಾಯದ ಅಭಿವೃದ್ಧಿಗಾಗಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಹೀಗೆ ಅನೇಕ ಉದ್ದೇಶಗಳನ್ನು ಹೊಂದಿ ದ್ದು ಇದರ ಬಗ್ಗೆ ಸಮುದಾಯದ ಜನರಿಗೆ ತಿಳುವಳಿಕೆ ನೀಡುವ ಅಧ್ಯಯನ ಪ್ರವಾಸ ವಾಗಿದ್ದು, ಮಾದಿಗ ಸಮುದಾಯದ ಮೂಲ ದೇವತೆ ಮಾತಂಗೇಶ್ವರಿ ಬೆಟ್ಟವನ್ನೇರಿ ದರ್ಶನ ಮಾಡಿಸುವ ಮೂಲಕ ಕ್ಷೇತ್ರದ ಮಹತ್ವ ತಿಳಿಸಲಾಗಿದೆ

ನಮ್ಮ ಮೆಟ್ರೋ ಪ್ರಯಾಣ ದರ ಇಳಿಕೆಯಾಗುತ್ತ? ಬೆಲೆ ಏರಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಮೆಟ್ರೋ ಟಿಕೆಟ್‌ ಬೆಲೆ ಏರಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

Namma Metro Ticket Price Hike: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆಬ್ರವರಿ 9ರಂದು ಹೊಸ ದರ ಜಾರಿಗೆ ಬರಲಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಕೇಂದ್ರದ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರದಿಂದ ಬಂಪರ್‌ ಕೊಡುಗೆ; ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಸಾಧ್ಯತೆ

ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಭರವಸೆ

Pralhad Joshi: ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಬಗ್ಗೆ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

Loading...