ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sirsi News: 23 ರಂದು ಕಾರವಾರ ಚಲೋ

23 ರಂದು ಕಾರವಾರ ಚಲೋ

ನಮ್ಮ ತಾಲೂಕಿಗೆ ತಹಸೀಲ್ದಾರ್ ಅವಶ್ಯಕತೆ ಇದ್ದು, ಸಾರ್ವಜನಿಕ ವಲಯದಲ್ಲಿ ತಹಸೀ ಲ್ದಾರ್ ಇಲ್ಲದೇ ಪರದಾಡುವಂತಾಗಿದೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ 23 ರಂದು ಕಾರವಾರ ಚಲೋ ಹಮ್ಮಿಕೊಂಡಿದ್ದೇವೆ. ಸಮಾನ ಮನಸ್ಕರೆಲ್ಲರೂ ಎಲ್ಲರೂ ಕೈ ಜೋಡಿಸಿ ಎಂದು ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Aishwarya Gowda Case: ಐಶ್ವರ್ಯಾಗೌಡ ಪ್ರಕರಣ; ವಿಚಾರಣೆಗೆ ಬರುವಂತೆ ಡಿ.ಕೆ.ಸುರೇಶ್‌ಗೆ ಇಡಿ ನೋಟಿಸ್‌

ಐಶ್ವರ್ಯಾಗೌಡ ಪ್ರಕರಣ; ಡಿ.ಕೆ.ಸುರೇಶ್‌ಗೆ ಇಡಿ ನೋಟಿಸ್‌

Aishwarya Gowda Case: ಐಶ್ವರ್ಯಗೌಡ ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತ ಹೇಳಿಕೊಂಡು ಓಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇದೀಗ ಗುರುವಾರ ವಿಚಾರಣೆಗೆ ಬನ್ನಿ ಎಂದು ಇಡಿ ನೋಟಿಸ್‌ ನೀಡಿರುವುದರ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿದ್ದಾರೆ.

ಮೊದಲ ಹೈ-ಸ್ಪೀಡ್ ರೈಲು ಯೋಜನೆಯನ್ನು ಸುಧಾರಿತ ಸಿಗ್ನಲಿಂಗ್ ಮತ್ತು ದೂರಸಂಪರ್ಕ ತಂತ್ರಜ್ಞಾನಗಳೊಂದಿಗೆ ಸಜ್ಜುಗೊಳಿಸಲು ಸೀಮೆನ್ಸ್ ಒಕ್ಕೂಟ

ಭಾರತದ ಮೊದಲ ಹೈ-ಸ್ಪೀಡ್ ರೈಲ್ವೆ ಯೋಜನೆಗಾಗಿ ಅನುಷ್ಠಾನ

ಸೀಮೆನ್ಸ್ ಲಿಮಿಟೆಡ್‌ನ ದಿನೇಶಾಂಡ್ರಾ ಆರ್ ಅಗ್ರವಾಲ್ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದ ಒಕ್ಕೂಟ ಮತ್ತು ಸೀಮೆನ್ಸ್ ಮೊಬಿಲಿಟಿ ಜಿಎಂಬಿಹೆಚ್ ಅನ್ನು ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊ ರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಹೆಗ್ಗುರುತು ಒಪ್ಪಂದ ವನ್ನು ನೀಡಲಾಗಿದೆ.

CM Siddaramaiah: ಅವಘಡಗಳಾದಾಗ ಬಿಜೆಪಿಯ ಎಷ್ಟು ನಾಯಕರು ರಾಜೀನಾಮೆ ಕೊಟ್ಟಿದ್ದಾರೆ?: ಸಿಎಂ ಕಿಡಿ

ಬಿಜೆಪಿಯ ಎಷ್ಟು ನಾಯಕರು ರಾಜೀನಾಮೆ ಕೊಟ್ಟಿದ್ದಾರೆ?: ಸಿಎಂ

CM Siddaramaiah: ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Bike Taxi: ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಓಡಾಟ; ಪಾರ್ಸೆಲ್‌ ಹೆಸರಲ್ಲಿ ಸೇವೆ, 103 ದ್ವಿಚಕ್ರ ವಾಹನ ವಶಕ್ಕೆ

ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸೇವೆ; 103 ದ್ವಿಚಕ್ರ ವಾಹನ ವಶಕ್ಕೆ

Bike Taxi: ನಿಷೇಧ ಹಿನ್ನೆಲೆಯಲ್ಲಿ ಓಲಾ, ಉಬರ್, ರ‍್ಯಾಪಿಡೋ ಸೇರಿ ಎಲ್ಲ ಅಗ್ರಿಗೇಟರ್‌ಗಳು ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿವೆ. ಅದರಂತೆ ಆ್ಯಪ್‌ಗಳಲ್ಲೂ ಬೈಕ್‌ ಟ್ಯಾಕ್ಸಿ ಸೇವೆ ಆಯ್ಕೆ ತೆಗೆದು ಹಾಕಲಾಗಿದೆ. ಆದರೆ, ಬೈಕ್ ಪಾರ್ಸೆಲ್ ಸೇವೆ ಆರಂಭಿಸಿರುವುದರಿಂದ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

Bengaluru stampede case: ಕಾಲ್ತುಳಿತ ಕೇಸ್‌; ಬಿಜೆಪಿ ಪ್ರೊಟೆಸ್ಟ್‌- ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

Bengaluru stampede case: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

DK Shivakumar: ಸೈಕಲ್‌ ರೈಡ್‌ ವೇಳೆ ವಿಧಾನಸೌಧದ ಮೆಟ್ಟಿಲ ಮೇಲೆ ಮುಗ್ಗರಿಸಿ ಬಿದ್ದ ಡಿಕೆಶಿ; ವಿಡಿಯೊ ಇದೆ

ವಿಧಾನಸೌಧದ ಮೆಟ್ಟಿಲ ಮೇಲೆ ಮುಗ್ಗರಿಸಿ ಬಿದ್ದ ಡಿಕೆಶಿ

ಸೈಕಲ್‌ ಜಾಥಾದ ವೇಳೆ ಡಿಕೆ ಶಿವಕುಮಾರ್‌ ಆಯತಪ್ಪಿ ಕೆಳಗೆ ಬಿದ್ದಿರುವ ಘಟನೆಯೂ ನಡೆದಿದೆ. ಸೈಕಲ್‌ ನಿಯಂತ್ರಣ ತಪ್ಪಿ ಡಿಕೆಶಿ ವಿಧಾನಸೌಧದ ಮೆಟ್ಟಿಲಿಗಳ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ನಾಯಕರು ಹಾಗೂ ಸಿಬ್ಬಂದಿ ಡಿಕೆಶಿ ಅವರನ್ನು ಮೇಲಕ್ಕೆ ಎಬ್ಬಿಸಿದ್ದಾರೆ. ಅವರಿಗೆ ಡಿಸಿಎಂ ಅವರಿಗೆ ಯಾವುದೇ ಗಾಯಗಳಾಗಿಲ್ಲ.

Gold Price Today: ಚಿನ್ನದ ದರದಲ್ಲಿ ಭಾರೀ ಇಳಿಕೆ; ಸ್ವರ್ಣಪ್ರಿಯರಿಗೆ ಕೊಂಚ ನಿರಾಳ!

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 17th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 105 ರೂ. ಇಳಿಕೆಯಾಗಿ 9,200ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 114 ರೂ. ಇಳಿಕಯಾಗಿದ್ದು, 10,037 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,600 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 92,000 ರೂ. ಮತ್ತು 100 ಗ್ರಾಂಗೆ 9,20,000 ರೂ. ನೀಡಬೇಕಾಗುತ್ತದೆ.

Wall collapses: ಮಹಾಮಳೆಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಗೋಡೆ ಕುಸಿದು ಬಾಲಕ ಸಾವು

ಮನೆ ಗೋಡೆ ಕುಸಿದು ಬಾಲಕ ದಾರುಣ ಸಾವು

ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .

Child death: ಪೋಷಕರೇ ಎಚ್ಚರ...ಎಚ್ಚರ! ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ  ಹತ್ತು ತಿಂಗಳ ಮಗು ದುರ್ಮರಣ

ಬೀಡಿಯ ತುಂಡು ನುಂಗಿ ಹತ್ತು ತಿಂಗಳ ಮಗು ದುರ್ಮರಣ

ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ.

Karnataka Rain news: ರಾಜ್ಯದಲ್ಲಿ ಮಳೆಗೆ ಮೂರು ಬಲಿ, ಹಲವೆಡೆ ಭೂಕುಸಿತ, ಸಾರಿಗೆ ಅಸ್ತವ್ಯಸ್ತ

ರಾಜ್ಯದಲ್ಲಿ ಮಳೆಗೆ ಮೂರು ಬಲಿ, ಹಲವೆಡೆ ಭೂಕುಸಿತ, ಸಾರಿಗೆ ಅಸ್ತವ್ಯಸ್ತ

Karnataka Rain news: ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಿಗೆ ಇಂದು ರೆಡ್​ ಅಲರ್ಟ್ ನೀಡಲಾಗಿದೆ. ಸತತ ಮಳೆಯಾದ ಸ್ಥಳಗಳಲ್ಲಿ ಭೂಕುಸಿತ ಸಾಧ್ಯತೆ ಹೆಚ್ಚಿದ್ದು, ಬಿರುಗಾಳಿ 50-60 ಕಿ.ಮೀ. ವೇಗ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Police Firing: ದಿವ್ಯಾಂಗ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ: ಆರೋಪಿಯ ಕಾಲಿಗೆ ಗುಂಡು

ದಿವ್ಯಾಂಗ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ: ಆರೋಪಿಯ ಕಾಲಿಗೆ ಗುಂಡು

Police Firing: ಹಲ್ಲೆ ಆರೋಪಿ ದಾಂಡೇಲಿಯ ಬೈಲ್ಪಾರ್ ನಿವಾಸಿ ಫೈರೋಜ್ ಯರಗಟ್ಟಿ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು, ಆತನ ವಿರುದ್ಧ ಅಕ್ರಮ ಮದ್ಯ ವ್ಯಾಪಾರ, ಗಾಂಜಾ ಮಾರಾಟ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ನಿಂದನೆ ಸೇರಿದಂತೆ ಸಾಕಷ್ಟು ಆರೋಪಗಳಿವೆ. ಆತ ಚಾಲಕನಾಗಿದ್ದು, ಮರಳು ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Madhu Bangarappa: ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

Karnataka Weather: ಇಂದೂ ಮುಂದುವರಿಯಲಿದೆ ಮಳೆಯ ಆರ್ಭಟ; ಕರಾವಳಿ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇಂದೂ ಮುಂದುವರಿಯಲಿದೆ ಮಳೆಯ ಆರ್ಭಟ

Karnataka Rains: ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ ಮಂಗಳವಾರ (ಜೂ. 17)ವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಆರ್‌ಸಿಬಿ 11 ಜನರ ಸಾವಿಗೆ ಕಾರಣರಾದ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಯಾವುದೇ ಸಿದ್ಧತೆ ಮಾಡಿಕೊಳ್ಳದೆ ತರಾತುರಿಯಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸ ಲಾಗಿದೆ. ಕಾರ್ಯಕ್ರಮ ಆಯೋಜಿಸಬಾರದು ಎಂದು ಪೊಲೀಸ್ ಇಲಾಖೆ ಪತ್ರ ಬರೆದಿದ್ದರೂ ನಿರ್ಲಕ್ಷಿಸಿ ಸರ್ಕಾರ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅವಕಾಶ ಕಲ್ಪಿಸಿ ೧೧ ಅಭಿಮಾನಿಗಳ ಬಲಿ ಪಡೆದಿದೆ.

Bus Staff Humanity: ಬಸ್ ನಲ್ಲಿ ಮರೆತಿದ್ದ ಲ್ಯಾಪ್ ಟಾಪ್ ಮತ್ತು ನಗದನ್ನು ಪ್ರಯಾಣಿಕನಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ

ಮಾನವೀಯತೆ ಮೆರೆದ ಬಸ್ ಸಿಬ್ಬಂದಿ

ಡಿಪೋ ಘಟಕಕ್ಕೆ ಸೇರಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿಗೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಸೋಮವಾರ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕ ನರಸಿಂಹಯ್ಯ ಎಂಬುವರು ತಮ್ಮ ಲ್ಯಾಪ್ಟಾಪ್ ಮತ್ತು 27 ಸಾವಿರ ನಗದನ್ನು ಬಸ್ಸಿನಲ್ಲಿಯೇ ಮರೆತು ಹೋಗಿರುತ್ತಾರೆ.

Child Labour: ಬಾಲ ಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ: ನ್ಯಾ ಗಣೇಶ್

ಬಾಲ ಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ: ನ್ಯಾ ಗಣೇಶ್

ಸಂವಿಧಾನದಲ್ಲಿ  ಅನುಚ್ಚೇಧ ಕಲಂ  ೨೩,೨೪ ಮತ್ತು ೩೦ ಅಡಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಅದೇಶ ಮಾಡಿದ್ದಾರೆ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು, ಅವರಿಗೆ ಉಚಿತ ಶಿಕ್ಷಣ ನೀಡಲು ಸಂವಿಧಾನದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಮಕ್ಕಳು ಶಿಕ್ಷಣ ಪಡೆದು ದೇಶದ ಸಮಗ್ರ ಅಭಿವೃದ್ದಿಗೆ ಕೈಜೋಡಿಸಬೇಕಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಬಿಜೆಪಿಯಿಂದ ದೂರು

ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

CM Siddaramaiah: ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ ಸವಾಲು

ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ ಸವಾಲು

ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. 56 ಇಂಚಿನ ಎದೆಯ ಪ್ರಧಾನಿ ಮೋದಿ ಯೂಸ್‌ಲೆಸ್‌ ಆಗಿದ್ದಾರೆ ಎಂದೂ ವಾಗ್ದಾಳಿ ನಡೆಸಿದ್ದಾರೆ.

CM Siddaramaiah: ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ,ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು: ಸಿಎಂ

CM Siddaramaiah: ಕೇಂದ್ರ ಸರ್ಕಾರ ಜನಗಣತಿಯನ್ನು 27ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜತೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ; ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ನಿಖಿಲ್ ಕುಮಾರಸ್ವಾಮಿ

ಹೇಮಾವತಿ ಲಿಂಕ್ ಕೆನಾಲ್ ಹೋರಾಟ-ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ: ನಿಖಿಲ್

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ ರೈತರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರೋದೆ ರಾಜ್ಯ ಸರ್ಕಾರ, ರಾಜ್ಯದ ಸಿಎಂ ಹಾಗೂ ಡಿಸಿಎಂ ಅವರು, ಇವತ್ತು ಡಿಸಿಎಂ ಜಲ ಸಂಪನ್ಮೂಲ ಸಚಿವರಾಗಿದ್ದಾರೆ. ಇಷ್ಟೆಲ್ಲಾ ರಾದ್ಧಾಂತವಾಗಿದೆ ಇನ್ನೂ ಕೂಡ ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‌Viral Video: ಯಾಕಪ್ಪಾ ಇಷ್ಟೊಂದು ಸ್ಪೀಡ್‌ ಅಂದಿದ್ದೇ ತಪ್ಪಾಯ್ತಾ? ಮಹಿಳೆ ಕಪಾಳಕ್ಕೆ ಬಾರಿಸಿದ ರ‍್ಯಾಪಿಡೊ ಚಾಲಕ

ರ‍್ಯಾಪಿಡೊ ಬೈಕ್ ಚಾಲಕನಿಂದ ಮಹಿಳೆಗೆ ಕಪಾಳಮೋಕ್ಷ; ಅಷ್ಟಕ್ಕೂ ಆಗಿದ್ದೇನು?

ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸ್ಪೀಡಾಗಿ ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪ್ರಯಾಣಿಕಳೊಬ್ಬಳಿಗೆ ಸಾರ್ವಜನಿಕರ ಮುಂದೆಯೇ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಆಕೆ ಹೋಗಿ ರಸ್ತೆಯಲ್ಲಿ ಬಿದ್ದಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

Citizens Report Cards: ಬೆಂಗಳೂರು ಶಾಸಕ, ಸಂಸದರ ರಿಪೋರ್ಟ್‌ ಕಾರ್ಡ್‌ ಔಟ್‌; ನಂ. 1 ಶ್ರೀಮಂತ ಶಾಸಕ ಗೋಪಾಲಯ್ಯ ಆಸ್ತಿ ಶೇ.1,399ರಷ್ಟು ಹೆಚ್ಚಳ

ಬೆಂಗಳೂರಿನ ನಂ. 1 ಶ್ರೀಮಂತ ಶಾಸಕ ಗೋಪಾಲಯ್ಯ ಆಸ್ತಿ ಶೇ.1,399ರಷ್ಟು ಹೆಚ್ಚಳ

K.Gopalaiah: ಬೆಂಗಳೂರಿನಿಂದ ಆಯ್ಕೆಯಾಗಿರುವ ಶಾಸಕರು ಹಾಗೂ ಸಂಸದರ ಸಾಧನೆ ಕುರಿತು ಸಿವಿಕ್‌ ಸಂಸ್ಥೆಯು ನಾಗರಿಕ ವರದಿಯನ್ನು ಬಿಡುಗಡೆ ಮಾಡಿದೆ. ಕಾರ್ಯಕ್ಷಮತೆಯ ಮೌಲ್ಯಮಾಪನ, ಕ್ರಿಮಿನಲ್ ಪ್ರಕರಣಗಳು ಹಾಗೂ ಶಾಸಕರ ಆದಾಯವನ್ನು ವರದಿಯಲ್ಲಿ ತಿಳಿಸಲಾಗಿದ್ದು, ಬೆಂಗಳೂರಿನ ಶಾಸಕರ ಪೈಕಿ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಆದಾಯವು ಶೇ.1,399ರಷ್ಟು ಹೆಚ್ಚಳವಾಗಿದ್ದು, ನಂಬರ್ 1 ಶ್ರೀಮಂತ ಶಾಸಕರೆನಿಸಿಕೊಂಡಿದ್ದಾರೆ.

Viral Video: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ; ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ ಯುವತಿಗೆ ಹೊಡೆದ ರ‍್ಯಾಪಿಡೋ ಬೈಕ್ ಚಾಲಕ

ರ‍್ಯಾಪಿಡೋ ಬೈಕ್ ಚಾಲಕನಿಂದ ಯುವತಿ ಮೇಲೆ ಹಲ್ಲೆ

Rapido Bike Driver: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿರುವ ವಿಡಿಯೊವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ರ‍್ಯಾಶ್‌ ಡ್ರೈವಿಂಗ್‌ ಬಗ್ಗೆ ಯುವತಿ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಚಾಲಕ ಆಕೆಯ ಕೆನ್ನೆ ಮೇಲೆ ಹೊಡೆದಿದ್ದಾನೆ ಎನ್ನಲಾಗಿದೆ.