ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Guarantee schemes: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಬೇಕು: ಸಿಎಂ ಸೂಚನೆ

ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

Doddaballapur News: ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ದುರ್ಘಟನೆ ನಡೆದಿದೆ. ಶನಿವಾರ ಸಂಜೆ ಮಕ್ಕಳು ಕೃಷಿ ಹೊಂಡದ ಪಕ್ಕದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕೃಷಿ ಹೊಂಡಕ್ಕೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸದ ಕಾರಣ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ನೆಹರು ಮೊದಲ ಪ್ರಧಾನಿ ನಿಜ, ಆದ್ರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ

ನೆಹರು ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಆಗಿರಲಿಲ್ಲ: ಛಲವಾದಿ

Chalavadi Narayanaswamy: ಪ್ರಧಾನಿ ಮೋದಿ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಂದ ನಂತರ ಚುನಾವಣೆಯಲ್ಲಿ ಸತತವಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ದೀರ್ಘಕಾಲ ಆಳಿದ ದಾಖಲೆ ಹೊಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಂಗ್ರೆಸ್‍ನವರು ಗೌರವಿಸುವುದನ್ನು ಕಲಿಯಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Bengaluru Rains: ಬೆಂಗಳೂರಿನ ಹಲವೆಡೆ ಮಳೆರಾಯನ ಆರ್ಭಟ; ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಹೈರಾಣ

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ಹಲವೆಡೆ ಟ್ರಾಫಿಕ್ ಜಾಮ್‌

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29° ಸೆ. ಮತ್ತು 20° ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Mandya News: ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ಮೃತಪಟ್ಟಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

PES University: ಸಂಶೋಧನೆ, ಕೌಶಲ್ಯ ಅಭಿವೃದ್ಧಿ ಸಹಯೋಗಕ್ಕೆ ಇ-ಗವ್ ಗ್ಲೋಬಲ್ ಜತೆ ಪಿಇಎಸ್ ವಿಶ್ವವಿದ್ಯಾಲಯ ಒಪ್ಪಂದ

ಇ-ಗವ್ ಗ್ಲೋಬಲ್ ಜತೆ ಪಿಇಎಸ್ ವಿಶ್ವವಿದ್ಯಾಲಯ ಒಪ್ಪಂದ

PES University: ಪಿಇಎಸ್ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ನಾವೀನ್ಯತೆ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ), ಸಂಶೋಧನೆ, ಇಂಟರ್ನ್‌ಶಿಪ್‌ಗಳು, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮದ ತೊಡಗಿಸಿಕೊಳ್ಳುವಿಕೆಯಲ್ಲಿ ಸಹಯೋಗಕ್ಕಾಗಿ ಫೈವ್ ಥ್ರೆಡ್ಸ್ ಫೌಂಡೇಶನ್, ಇ-ಗವ್ ಗ್ಲೋಬಲ್ ಜತೆ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.

ಕೆಲಸಕ್ಕಲ್ಲ, ಮಾವಿನ ಹಣ್ಣಿನ ರುಚಿ ಸವಿಯಲು ಸಂಜೆ 4 ಗಂಟೆಗೆ ಆಫೀಸ್‌ಗೆ ಎಂಟ್ರಿ ಕೊಟ್ಟ ಉದ್ಯೋಗಿ

ಮ್ಯಾಂಗೋ ಫೆಸ್ಟಿವಲ್‌ಗಾಗಿ 4 ಗಂಟೆಗೆ ಕಚೇರಿಗೆ ಆಗಮಿಸಿದ ಗೂಗಲ್ ಉದ್ಯೋಗಿ

Viral Video: ಗೂಗಲ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಮ್ಯಾಂಗೋ ಫೆಸ್ಟಿವಲ್‌ನಲ್ಲಿ ಭಾಗವಹಿಸಲು ಉದ್ಯೋಗಿಯೊಬ್ಬರು ಸಂಜೆ 4 ಗಂಟೆಗೆ ಕಚೇರಿಗೆ ಧಾವಿಸಿದ್ದಾರೆ. ಬೆಂಗಳೂರಿನಲ್ಲಿರುವ ಗೂಗಲ್ ಸಂಸ್ಥೆಯೂ ಮಾವಿನ ಹಣ್ಣಿನ ಹಬ್ಬ ಆಯೋಜಿಸಲಾಗಿತ್ತು. ಉದ್ಯೋಗಿಯೊಬ್ಬರು ಈ ಉತ್ಸವದಲ್ಲಿ ಭಾಗವಹಿಸಲು ತಮ್ಮ ಕಚೇರಿಗೆ ಸಂಜೆ ಭೇಟಿ ನೀಡಿದ್ದಾರೆ.

Smrti Academy: ಸ್ಮೃತಿ ಅಕಾಡೆಮಿ ಮಕ್ಕಳಿಗೆ ಸ್ಫೂರ್ತಿ ತುಂಬಿದ ಸಂಗಮೇಶ್‌ ಉಪಾಸೆ

ಸ್ಮೃತಿ ಅಕಾಡೆಮಿ ಮಕ್ಕಳಿಗೆ ಸ್ಫೂರ್ತಿ ತುಂಬಿದ ಸಂಗಮೇಶ್‌ ಉಪಾಸೆ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಹುಸ್ಕೂರ್‌ನಲ್ಲಿರುವ ಸ್ಮೃತಿ ಅಕಾಡೆಮಿ ಶಾಲೆಯಲ್ಲಿ ಶನಿವಾರ ನಡೆದ, ʼಸ್ಮೃತಿ ಕನೆಕ್ಟ್‌ ವಿತ್‌ ಅಚೀವರ್ಸ್‌ʼ ಕಾರ್ಯಕ್ರಮದಲ್ಲಿ ಕೆಎಎಸ್‌ ಅಧಿಕಾರಿ ಸಂಗಮೇಶ್‌ ಉಪಾಸೆ ಅವರು ಮಾತನಾಡಿದ್ದು, ಯಾವುದೇ ರಂಗದಲ್ಲಾದರೂ, ಸತತ ಪರಿಶ್ರಮದಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

Pravasi Prapancha: ರ‍್ಯಾಡಿಸನ್ ಬ್ಲೂ ಏಟ್ರಿಯಾ; 3 ದಶಕಗಳ ಆತಿಥ್ಯ ಪರಂಪರೆ

ರ‍್ಯಾಡಿಸನ್ ಬ್ಲೂ ಏಟ್ರಿಯಾ: 3 ದಶಕಗಳ ಆತಿಥ್ಯ ಪರಂಪರೆ

Radisson Blu Atria: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಹೊಟೇಲ್‌ಗಳು ಕೇವಲ ಕಟ್ಟಡಗಳಲ್ಲ. ಅವು ಈ ನಗರದ ಬೆಳವಣಿಗೆಯ ಕಥೆಯ ಭಾಗವಾಗಿವೆ. ಕೆಲವು ಹೊಟೇಲ್‌ಗಳು ಕೇವಲ ಅತಿಥಿಗಳಿಗೆ ಆಹಾರ ಮತ್ತು ಕೊಠಡಿಗಳನ್ನು ನೀಡುವ ಸರಳ ಆತಿಥ್ಯ ತಾಣಗಳಲ್ಲ, ಅವು ಒಂದು ತಲೆಮಾರಿನ ನೆನಪುಗಳನ್ನು ಸಂಗ್ರಹಿಸಿಟ್ಟಿರುವ ಮ್ಯೂಸಿಯಂಗಳಂತೆ, ಇತಿಹಾಸದ ಕೊಂಡಿಯಂತೆ ನಗರದೊಂದಿಗೆ ಬೆಸೆದುಕೊಂಡಿರುತ್ತವೆ. ಬೆಂಗಳೂರಿನ ಹೃದಯ ಭಾಗದ ಪ್ಯಾಲೇಸ್ ರಸ್ತೆಯಲ್ಲಿರುವ ರ‍್ಯಾಡಿಸನ್ ಬ್ಲೂ ಏಟ್ರಿಯಾ ಅಂಥ ಅಪರೂಪದ ಪಂಚತಾರಾ ಹೊಟೇಲ್ ಗಳಲ್ಲೊಂದು.

Bengaluru Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಶಾಲಾ ಬಸ್‌ ಹರಿದು ಮಗಳ ಕಣ್ಣೆದುರೇ ತಾಯಿ ಸಾವು!

ಬೆಂಗಳೂರಿನಲ್ಲಿ ಶಾಲಾ ಬಸ್‌ ಹರಿದು ಮಹಿಳೆ ಸಾವು

ಬೆಂಗಳೂರಿನಲ್ಲಿ ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಹಾಗೂ ಮಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ರಸ್ತೆ ಗುಂಡಿಯಿಂದ ಸ್ಕೂಟರ್ ಸ್ಕಿಡ್ ಆಗಿದ್ದರಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬಂದ ಶಾಲಾ ಬಸ್‌ ಹರಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Kapu MLA Gurme Suresh Shetty: ಬಡತನದ ಬೇಗೆಯಿಂದ ವಿಧಾನಸೌಧದ ಮೆಟ್ಟಿಲವರೆಗೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಗುರ್ಮೆ ಸುರೇಶ್ ಶೆಟ್ಟಿ ಅವರ ಆರಂಭಿಕ ಜೀವನ ಕಷ್ಟದಾಯಕವಾಗಿತ್ತು. ಊರಿನಲ್ಲೊಂದು ಸಣ್ಣ ಹುಲ್ಲಿನ ಮನೆ. ಮನೆಯಲ್ಲಿ ನಾಲ್ಕು ಜನ ಅಕ್ಕ-ತಂಗಿಯರು ಹಾಗೂ ತಾಯಿ. ತಂದೆಯ ನೆರಳಿಲ್ಲದ ಆ ಕುಟುಂಬಕ್ಕೆ ಇವರೇ ದೊಡ್ಡ ಮಗ. ಕಾಲೇಜಿಗೆ ಸೇರಲು ಕೇವಲ 130 ರುಪಾಯಿ ಫೀಸ್ ಕಟ್ಟಲಾ ಗದೆ, ಕೇವಲ ಒಂದು ಜತೆ ಬಟ್ಟೆಯನ್ನು ಕೈಯಲ್ಲಿ ಹಿಡಿದು ಬದುಕನ್ನು ಹುಡುಕುತ್ತಾ ದೂರದ ಬಳ್ಳಾರಿಗೆ ರೈಲು ಹತ್ತಿದವರು ಸುರೇಶ್ ಶೆಟ್ಟಿ.

ಮತ್ತೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ; ಏರ್ಪೋರ್ಟ್‌ ರೋಡ್‌ನಲ್ಲಿ ಡ್ರಾಫ್ಟಿಂಗ್‌

ಮತ್ತೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ; ತನಿಖೆ ಶುರು

ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮತ್ತೆ ಸುದ್ದಿಯಾಗಿದ್ದಾರೆ. ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ರನ್-ವೇ) ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿದ್ದಾರೆ ಎನ್ನಲಾಗಿದೆ.

'Burude' fight: ಬಿಜೆಪಿ-ಕಾಂಗ್ರೆಸ್ ನಡುವೆ 'ಬುರುಡೆ' ಜಗಳ

'Burude' fight: ಬಿಜೆಪಿ-ಕಾಂಗ್ರೆಸ್ ನಡುವೆ 'ಬುರುಡೆ' ಜಗಳ

ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಆರೋಪ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಪ್ರಸ್ತಾಪವಾದ ಹೆಸರುಗಳು ಹಾಗೂ ಕೋಟಿ ಕೋಟಿ ಹಣ ಬಳಕೆಯ ವಿಚಾರ ಸಂಬಂಧ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಸರಕಾರ ಹೇಳಿದ್ದರೆ, ಎಸ್‌ಐಟಿ ತನಿಖಾ ವರದಿ ಬಹಿರಂಗಪಡಿಸಲಿ ಎಂದು ಬಿಜೆಪಿ ಪ್ರತಿ ಸವಾಲು ಎಸೆದಿದೆ.

Cabinet Expansion: ಮಾಸಾಂತ್ಯಕ್ಕೆ ʼಸಂಪುಟʼ ವಿಸ್ತರಣೆ

Cabinet Expansion: ಮಾಸಾಂತ್ಯಕ್ಕೆ ʼಸಂಪುಟʼ ವಿಸ್ತರಣೆ

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ತಮ್ಮೊಂದಿಗೆ 13 ಮಂದಿ ಸಚಿವ ರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆರಂಭದಲ್ಲಿ ಎದ್ದಿದ್ದ ಖಾತೆ ಹಂಚಿಕೆಯ ಕ್ಯಾತೆ ಪೂರ್ಣ ಪ್ರಮಾಣದಲ್ಲಿ ನಿಲ್ಲದಿದ್ದರೂ, ವಿಸ್ತರಣೆ ವೇಳೆ ಕೆಲ ಖಾತೆಗಳು ಅದಲು-ಬದಲಾಗುವ ಭರವಸೆ ಸಿಕ್ಕಿರುವುದರಿಂದ ಸಚಿವರೆಲ್ಲರೂ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಖಾಲಿಯಿರುವ 20 ಸಚಿವ ಸ್ಥಾನವನ್ನು ತಿಂಗಳಾಂತ್ಯಕ್ಕೆ ಭರ್ತಿ ಮಾಡುವ ಸಾಧ್ಯತೆಯಿದೆ.

ಬೆಂಗಳೂರು ಸರಣಿ ಸ್ಫೋಟ ಕೇಸ್‌; ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು

ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದ (Serial Bomb Blast) ಶಂಕಿತ ಉಗ್ರ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆಯವನಾದ ಅಬ್ದುಲ್ ಖಾದರ್ ಎಂದು ತಿಳಿದು ಬಂದಿದೆ.

ತರಗತಿ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸರ್ಕಾರಿ ಶಾಲಾ ಛಾವಣಿ; ವಿಡಿಯೋ ವೈರಲ್‌

ತರಗತಿ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸರ್ಕಾರಿ ಶಾಲಾ ಛಾವಣಿ

ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲೆಯ ಮೇಲ್ಚಾವಣಿಯ ಒಂದು ಭಾಗ ಕುಸಿದ ಪರಿಣಾಮ ಐದು ಮಂದಿ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ಎಸ್ಪಿ ಕಚೇರಿ ಸಮೀಪದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಸರ್ಕಾರಿ ವೈದ್ಯನ ನಿರ್ಲಕ್ಷ್ಯದಿಂದ ಸಾವು ಬದುಕಿನ ನಡುವೆ ಬಾಣಂತಿ ಹೋರಾಟ; ಹಾವೇರಿಯಲ್ಲಿ ದೂರು ದಾಖಲು

ಹೆರಿಗೆ ಬಳಿಕ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ; ವೈದ್ಯನ ವಿರುದ್ಧ ದೂರು

Haveri News: ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯ ಡಾ. ಪ್ರದೀಪ ಬಿ ಅವರ ವಿರುದ್ಧ ಹಾವೇರಿ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆರಿಗೆ ನಂತರ ಸೂಕ್ತ ಚಿಕಿತ್ಸೆ ನೀಡದ ಕಾರಣ ಮಹಿಳೆ ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ. ಈ ಬಗ್ಗೆ ಪತಿ ದೂರು ನೀಡಿದ್ದಾರೆ.

ಜೈಲುಗಳ ಆಧುನೀಕರಣ, ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಡಿಕೆಶಿ ಮನವಿ

ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಿ; ಅಮಿತ್‌ ಶಾಗೆ ಸಿಎಂ ಮನವಿ

CM DK Shivakumar: ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಇಲಾಖೆಯ ಮೂಲ ಸೌಕರ್ಯ ಸುಧಾರಣೆಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಕೋರಿದ್ದಾರೆ.

POCSO: ಬಾಲ ಕಾರ್ಮಿಕತೆ, ಪೋಕ್ಸೋ ಪ್ರಕರಣ ತಡೆಗೆ ತಂಡದ ರೀತಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳ ಸಲಹೆ

ಬಾಲ ಕಾರ್ಮಿಕತೆ, ಪೋಕ್ಸೋ ಪ್ರಕರಣ ತಡೆಗೆ ತಂಡದ ರೀತಿ ಕೆಲಸ ಮಾಡಿ

ಬಾಲ ಕಾರ್ಮಿಕತೆ, ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವುದು ಕೇವಲ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ ಯ ಕೆಲಸ ಎಂದು ಭಾವಿಸಬಾರದು. ಎಲ್ಲ ಇಲಾಖೆ ಯವರು ತಮ್ಮ ಇಲಾಖೆಯ ಕಾರ್ಯ ವ್ಯಾಪ್ತಿಯಲ್ಲಿ ಸಂಪರ್ಕಕ್ಕೆ ಬರುವವರ ಬಗ್ಗೆ ನಿಗಾವಹಿಸಬೇಕು. ಒಂದು ವೇಳೆ ಇಂತಹ ಪ್ರಕರಣ ಗಳು ಕಂಡು ಬಂದರೆ ಸಕ್ಷಮ ಪ್ರಾಧಿಕಾರಿ ಗಳಿಗೆ ಮಾಹಿತಿ ನೀಡುವ ಜೊತೆಗೆ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಆಗುವಂತೆ ಮಾಡಬೇಕು.

MLC Naseer Ahmed: ಸಾವಿರಾರು ಕೋಟಿ ಸಾಲದ ಹಿನ್ನೆಲೆ ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ 'ದಿವಾಳಿ'; ಎಂಎಲ್‌ಸಿ  ಸ್ಥಾನಕ್ಕೆ ಕುತ್ತು!

ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ ʼದಿವಾಳಿʼ; ಎಂಎಲ್‌ಸಿ ಸ್ಥಾನಕ್ಕೆ ಕುತ್ತು!

ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿಯು ಪಡೆದಿದ್ದ 1,454 ಕೋಟಿಗೂ ಅಧಿಕ ಮೊತ್ತದ ಬಾಕಿ ಸಾಲದ ವಸೂಲಾತಿಗಾಗಿ ಕಳೆದ 2019ರಿಂದಲೇ ಈ ಕಾನೂನು ಪ್ರಕ್ರಿಯೆ ನಡೆದಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳ ಒಕ್ಕೂಟ 2019ರಿಂದಲೇ ಕಾನೂನು ಪ್ರಕ್ರಿಯೆ ನಡೆಸಿತ್ತು.

Free Bus Pass: ಹೊರ ರಾಜ್ಯದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್

ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗಳನ್ನು ಉಪಯೋಗಿಸಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಯಾಣಿ ಸಲು ಅವಕಾಶ ಕಲ್ಪಿಸಲಾಗಿದೆ.

Sirsi News: ಶಿರಸಿಯಲ್ಲಿ ಆಘಾತಕಾರಿ ಘಟನೆ; ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತೋಡದಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಲಕಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದಳು. ಈ ವೇಳೆ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯಿಂದ ಮಾನವೀಯ ಕಾಳಜಿಯ ಆರೋಗ್ಯ ಸೇವೆಗೆ ಹೊಸ ಮುನ್ನುಡಿ: ಭಾರತದ ಪ್ರಥಮ 'ಚೈಲ್ಡ್ ಲೈಫ್' ವಿಚಾರ ಸಂಕಿರಣ ಯಶಸ್ವಿ

ಭಾರತದ ಪ್ರಥಮ 'ಚೈಲ್ಡ್ ಲೈಫ್' ವಿಚಾರ ಸಂಕಿರಣ ಯಶಸ್ವಿ

ಈ ಕಾರ್ಯಕ್ರಮದಲ್ಲಿ ಪ್ರಮುಖ ಮಕ್ಕಳ ವೈದ್ಯರು, ಮನಶ್ಶಾಸ್ತ್ರಜ್ಞರು, ಆರೋಗ್ಯ ರಂಗದ ಆಡಳಿತಾಧಿಕಾರಿಗಳು, ದಾದಿಯರು ಹಾಗೂ ಮಕ್ಕಳ ಜೀವನ ನಿರ್ವಹಣಾ ತಜ್ಞರು ಭಾಗವಹಿಸಿ ದ್ದರು. ಅನಾರೋಗ್ಯ ಮತ್ತು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿ ಮಕ್ಕಳು ಹಾಗೂ ಅವರ ಕುಟುಂಬಗಳು ಎದುರಿಸುವ ಭಾವನಾತ್ಮಕ ಸವಾಲುಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಕೇಂದ್ರ ಜಲಶಕ್ತಿ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ: ಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸಚಿವರಿಂದ ಟಿಬಿ ಡ್ಯಾಂ ನೂತನ ಗೇಟ್ ಉದ್ಘಾಟನೆ: ಡಿ.ಕೆ. ಶಿವಕುಮಾರ್

CM DK Shivakumar: ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್‌ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Loading...