ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಖಾತೆ ಹಂಚಿಕೆ ಕಗ್ಗಂಟು; ಮತ್ತೆ ದೆಹಲಿಗೆ ಸಿಎಂ ಡಿಕೆಶಿ?

ಖಾತೆ ಹಂಚಿಕೆ ಕಗ್ಗಂಟು; ಮತ್ತೆ ದೆಹಲಿಗೆ ಸಿಎಂ ಡಿಕೆಶಿ?

13ಕ್ಕೆ ಸಂತಾಪ ಸೂಚನೆ ಮಂಡಿಸಿ ಸದನ ಮುಂದೂಡಿದರೂ, 14ಕ್ಕೆ ನೂತನ ವಿಧಾನಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್‌ನ ಸಭಾಪತಿ, ಉಪಸಭಾ-ತಿಗಳ ಚುನಾವಣಾ ಪ್ರಕ್ರಿಯೆ ಇರುವುದರಿಂದ ಸದನ ನಡೆಯುವುದಿಲ್ಲ. ಆ,15, 16ರಿಂದಲೇ ಪೂರ್ಣಪ್ರಮಾಣದಲ್ಲಿ ಆರಂಭವಾಗುತ್ತದೆ. ಆದ್ದರಿಂದ ಆ ವೇಳೆಗೆ ಎಲ್ಲ ಗೊಂದಲಗಳಿಗೂ ಉತ್ತರ ಸಿಗಲಿದೆ ಎನ್ನುವ ವಿಶ್ವಾಸದಲ್ಲಿ ಸಚಿವರಿದ್ದಾರೆ.

ಹೊರಟ್ಟಿ ರಾಜೀನಾಮೆ ಪತ್ರಕ್ಕೆ ಬಲವಂತದ ಸಹಿ

ಹೊರಟ್ಟಿ ರಾಜೀನಾಮೆ ಪತ್ರಕ್ಕೆ ಬಲವಂತದ ಸಹಿ

"ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ಆ.14ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ" ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಮಧುಗಿರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

Madhugiri News: ಜನರ ಅಗತ್ಯಗಳಿಗೆ ಸ್ಪಂದಿಸುವ, ಗುಣಮಟ್ಟದ ಹಾಗೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಅಪ್ಪ-ಅಮ್ಮ ಕ್ಷಮಿಸಿ, ನಾನು ಮಾಡುತ್ತಿರೋದು ಸರಿಯಲ್ಲ; ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಹಾಸ್ಟೆಲ್‌ನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

Bengaluru Student Death: ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಐಐಎಸ್‌ಸಿಯಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ತೆರಳಿ ಕೇಸ್‌ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಸದ್ಗುರು ಶ್ರೀ ಮಧುಸೂದನ ಸಾಯಿ

ಉ.ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಕರ್ನಾಟಕದಲ್ಲಿ ಪ್ರತಿದಿನ ಒಟ್ಟು 55 ಲಕ್ಷ ಮಕ್ಕಳಿಗೆ ಸಾಯಿ ಶ್ಯೂರ್ ಪೌಷ್ಟಿಕ ಉಪಾಹಾರ ಸಿಗುತ್ತಿದೆ. ವಿಜಯಪುರ ಜಿಲ್ಲೆಯ 3 ಲಕ್ಷ ಮಕ್ಕಳು ಇದರ ಫಲಾನುಭವಿಗಳಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ವರ್ಷಕ್ಕೆ 100 ಕೋಟಿ ಖರ್ಚು ಬರುತ್ತಿದೆ ಎಂದು 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್' ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

Dakshina Kannada Rain: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

ನಾಳೆ ದ.ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather: ಜುಲೈ 8ರಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ರೀಲ್ಸ್‌ ಗೀಳಿಗೆ ಪತ್ನಿಯನ್ನೇ ಕೊಂದ; ಬೆಂಗಳೂರಿನಿಂದ  ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

ಪತ್ನಿಯನ್ನು ಕೊಂದು ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

Crime News: ಪತ್ನಿಯನ್ನು ಕೊಂದು ತನ್ನ ತವರು ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪದ ಮೇಲೆ 24 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಕೂಡಲೇ ಬೆಂಗಳೂರು ಪೊಲೀಸರು ಬಿಹಾರಕ್ಕೆ ತೆರಳಿ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ನಂತರ ವಿಚಾರಣೆಗಾಗಿ ಕುಂಬಳಗೋಡಿಗೆ ಕರೆತಂದರು.

ಕುಶಾಲನಗರದಲ್ಲಿ ಘೋರ ಘಟನೆ; ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

Kushalnagar News: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

Karnataka SIR: ರಾಜ್ಯದಲ್ಲಿ ಎಸ್‌ಐಆರ್‌ ಅವಧಿ ಮತ್ತೆ ವಿಸ್ತರಣೆ; ಆ.17ರವರೆಗೆ ಮನೆ ಮನೆಗೆ ಬಿಎಲ್‌ಒಗಳ ಭೇಟಿ

ರಾಜ್ಯದಲ್ಲಿ ಎಸ್‌ಐಆರ್‌ ಅವಧಿ ಮತ್ತೆ ವಿಸ್ತರಣೆ; ಆ.17ರವರೆಗೆ ಮನೆ ಮನೆ ಭೇಟಿ

ಎಸ್‌ಐಆರ್‌ ಭಾಗವಾಗಿ ಈ ಮೊದಲು ಕರ್ನಾಟಕದಲ್ಲಿ ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಪ್ರಕ್ರಿಯೆಯು ಜುಲೈ 29ರ ಬದಲಾಗಿ ಆಗಸ್ಟ್ 8ರವರೆಗೆ ಅವಧಿ ವಿಸ್ತರಿಸಲಾಗಿತ್ತು. ಇದೀಗ ಆಗಸ್ಟ್‌ 17ರ ವರೆಗೆ ವಿಸ್ತರಿಸಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Annabrahma Chaturmasya: ಭೋಜನವೆಂಬುದು ಯಜ್ಞ, ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ: ರಾಘವೇಶ್ವರ ಭಾರತೀ ಶ್ರೀ

Annabrahma Chaturmasya: ಭೋಜನವೆಂಬುದು ಯಜ್ಞ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಮ್ಮೊಳಗಿರುವ ಜಠರಾಗ್ನಿಯೇ ಅಗ್ನಿಯಾಗಿದ್ದು, ನಾವು ಮಾಡುವ ಊಟವೇ ಇದಕ್ಕೆ ಅರ್ಪಿಸುವ ಹವಿಸ್ಸಾಗಿದೆ. ನಮಗೇ ಎಂದು ಕೊಳ್ಳದೇ ನಮ್ಮೊಳಗಿರುವ ಪರಮಾತ್ಮನಿಗೆ ಎಂದು ಊಟವನ್ನು ವಿಧಿವತ್ತಾಗಿ ಸೇವಿಸಿದಾಗ ಅದು ನಿಜವಾಗಿ ಯಜ್ಞವೇ ಆಗುತ್ತದೆ. ಸರಿಯಾದ ಕ್ರಮ ಹಾಗೂ ಹೊತ್ತಿನಲ್ಲಿ ಮಾಡುವ ಭೋಜನವು ಅಗ್ನಿಹೋತ್ರವೇ ಆಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಆ.14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ; ಬದಲಿ ವ್ಯವಸ್ಥೆ ಆಗೋವರೆಗೆ ಬಸವರಾಜ ಹೊರಟ್ಟಿಯೇ ಪರಿಷತ್‌ ಸಭಾಪತಿ ಎಂದ ಸಿಎಂ

ಆ.14 ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಸಿಎಂ

Karnataka Assembly Session 2026: ಆಗಸ್ಟ್ 13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ” ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಕೊಲೆ!

Udupi News: ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ನೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

City Lights Movie: ದುನಿಯಾ ವಿಜಯ್‌ ನಿರ್ದೇಶನದ 'ಸಿಟಿಲೈಟ್ಸ್‌' ಸಿನಿಮಾದ 3ನೇ ಹಾಡು ರಿಲೀಸ್‌; ಜಾನಪದ ಹಾಡಿಗೆ ರ‍್ಯಾಪ್‌ ಟಚ್‌

ಸಿಟಿ ಲೈಟ್ಸ್‌ ಚಿತ್ರದ 3ನೇ ಹಾಡು ಬಿಡುಗಡೆ; ಜಾನಪದ ಹಾಡಿಗೆ ರ‍್ಯಾಪ್‌ ಟಚ್‌

ನಟ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿರುವ ʼಸಿಟಿ ಲೈಟ್ಸ್‌ʼ ಸಿನಿಮಾ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇನ್ನು ಪ್ರತಿ ಬಾರಿ ಜಾನಪದ, ಬುಡಕಟ್ಟು ಹಾಡುಗಳಿಗೆ ಹೊಸ ರೂಪ ಕೊಟ್ಟು ಪ್ರೇಕ್ಷಕರ ಮುಂದಿಡುವ ದುನಿಯಾ ವಿಜಯ್‌, ಈ ಬಾರಿ ಮಾದಪ್ಪನ ಜಾನಪದ ಹಾಡುಗಳ ಸಾಲುಗಳನ್ನು ಬಳಸಿಕೊಂಡು ಈಗಿನ ಟ್ರೆಂಡ್‌ಗೆ ತಕ್ಕಂತೆ ಹೊಸ ಸಾಂಗ್‌ ರಿಲೀಸ್‌ ಮಾಡಿದ್ದಾರೆ.

ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾ ತಂಡ ಆಯ್ಕೆ

ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾ ತಂಡ ಆಯ್ಕೆ

18 ವರ್ಷದ ಬಾಲಕಿಯರ ವಿಭಾಗದಲ್ಲಿ 100 ಮೀಟರ್ ಓಟಕ್ಕೆ ಸುಪ್ರಿತಾ, 200 ಮೀಟರ್ ಓಟಕ್ಕೆ ಭಗವತಿ, 400 ಮೀಟರ್ ಓಟಕ್ಕೆ ಮಧುಶ್ರೀ ಹಾಗೂ ಭಾರ್ಗವಿ, 1000 ಮೀಟರ್ ಓಟಕ್ಕೆ ಮಧುಶ್ರೀ, ಮಿಡ್ಲಿ ರಿಲೇ ಸ್ಪರ್ಧೆಗೆ ಸುಪ್ರಜಾ, ಭಾರ್ಗವಿ, ಮಧುಶ್ರೀ ಹಾಗೂ ರೋಶಿನಿ ಮತ್ತು ಉದ್ದ ಜಿಗಿತಕ್ಕೆ ಸುಪ್ರಜಾ ಆಯ್ಕೆ ಯಾಗಿದ್ದಾರೆ.

Chikkaballapur News: ಕ್ರಿಯಾ ಯೋಜನೆ ವಿಳಂಬಕ್ಕೆ ಅವಕಾಶವಿಲ್ಲ: ಆಗಸ್ಟ್ 8ರೊಳಗೆ ಸಲ್ಲಿಸಿ, ಅಕ್ಟೋಬರ್ 30ರೊಳಗೆ ಕಾಮಗಾರಿ ಪೂರ್ಣಗೊಳಿಸಿ

ಅನುದಾನ ಬಳಕೆಯಲ್ಲಿ ಪಾರದರ್ಶಕತೆಗೆ ಒತ್ತು: ಜಿ. ಪ್ರಭು ಸೂಚನೆ

ಕ್ರಿಯಾ ಯೋಜನೆಗಳಿಗೆ ಜಿಲ್ಲಾ ಮಟ್ಟದಲ್ಲಿ ತ್ವರಿತ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸೆಪ್ಟೆಂಬರ್ 15ರೊಳಗೆ ಕಾರ್ಯಾದೇಶಗಳನ್ನು ನೀಡಬೇಕು. ಕಾರ್ಯಾದೇಶ ಪಡೆದ ಎಲ್ಲ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಅಕ್ಟೋಬರ್ 30ರೊಳಗೆ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆ.30 ರೊಳಗೆ ಮುಕ್ತಾಯಗೊಳಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Shidlaghatta News: ಪಾದಚಾರಿಗಳ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕಾರ್ಯಾಚರಣೆ; ಶಿಡ್ಲಘಟ್ಟದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಜಾರಿ

ಫುಟ್ಪಾತ್ ಒತ್ತುವರಿ ತೆರವುಗೊಳಿಸಿ; ಇಲ್ಲದಿದ್ದರೆ ಕಠಿಣ ಕಾನೂನು ಕ್ರಮ

ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಹಾಗೂ ವ್ಯಾಪಾರಿಗಳು ಫುಟ್ಪಾತ್‌ಗಳನ್ನು ಅತಿಕ್ರಮಿಸಿ ಕೊಂಡಿರುವ ಪರಿಣಾಮ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸಾರ್ವಜನಿಕರಿಗೆ ಸ್ವಯಂ ಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಲು ಅವಕಾಶ ನೀಡಲಾಗಿದೆ

ಕುರುಕ್ಷೇತ್ರ ಪೌರಾಣಿಕ ನಾಟಕಕ್ಕೆ ಮೆಚ್ಚುಗೆ; ಜಾತ್ರೆಯ ಸಂಭ್ರಮದಲ್ಲಿ ಸಾವಿರಾರು ಭಕ್ತರು ಭಾಗಿ

ಗ್ರಾಮ ದೇವತೆಗಳಿಗೆ ದೀಪಾರಾಧನೆ: ಮುತ್ತುರಾಯನಹಳ್ಳಿಯಲ್ಲಿ ಭಕ್ತಿಸಾಗರ

ದೀಪೋತ್ಸವದ ಅಂಗವಾಗಿ ಮುತ್ತುರಾಯನಸ್ವಾಮಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಹಾಗೂ ಸಪ್ಪಲಮ್ಮ ದೇವಸ್ಥಾನಗಳನ್ನು ತಳಿರು ತೋರಣ ಮತ್ತು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಹೂಗಳಿಂದ ವಿಶೇಷವಾಗಿ ಸಿಂಗರಿಸಲಾದ ತಂಬಿಟ್ಟಿನ ದೀಪಗಳನ್ನು ಮಹಿಳೆಯರು ಕೊಂಬು, ಕಹಳೆ ಹಾಗೂ ತಮಟೆ ವಾದ್ಯಗಳ ನಾದದೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ದೇವರಿಗೆ ಅರ್ಪಿಸಿದರು.

ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಆ.14ರಂದು ಚುನಾವಣೆ: ಸಿಎಂ ಮಾಹಿತಿ

ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ನಿಗದಿ

Karnataka legislative council chairman: ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆಗಸ್ಟ್ 13ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Bengaluru News: ಸಲಿಂಗ ಪ್ರೀತಿಗೆ ಮನೆಯವರ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರು!

ಸಲಿಂಗ ಪ್ರೀತಿ; ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು!

ನೇಪಾಳ ಮೂಲದ ಇಬ್ಬರು ಯುವತಿಯರು ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇವರ ಸಾವಿನ ಬಗ್ಗೆ ಯಲಹಂಕ ಓಲ್ಡ್ ಟೌನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಕೋಲಾಹಲ ಎಬ್ಬಿಸಿದ ಮೇಕೆದಾಟು ಯೋಜನೆ: ಸಿಎಂ ವಿಜಯ್ ಬೆಂಗಳೂರು ಭೇಟಿ ಪ್ರಶ್ನಿಸಿದ ಉದಯನಿಧಿ ಸ್ಟಾಲಿನ್

ಕರ್ನಾಟಕದೊಂದಿಗೆ ಮಾತನಾಡುವುದೇನಿದೆ.. ಉದಯನಿಧಿ ಸ್ಟಾಲಿನ್ ಪ್ರಶ್ನೆ

ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕದೊಂದಿಗೆ ಮಾತನಾಡುವುದು ಏನಿದೆ ಎಂದು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಪ್ರಶ್ನಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಕಾವೇರಿ ನೀರಿನ ವಿಚಾರವಾಗಿ ಸಿಎಂ ವಿಜಯ್ ಮತ್ತು ಜೂನಿಯರ್ ಸ್ಟಾಲಿನ್ ನಡುವೆ ತೀವ್ರ ವಾಗ್ವಾದ ನಡೆಯಿತು.

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ; ಸಿಎಂ ಭೇಟಿ ವೇಳೆ ಆಗಿದ್ದೇನು?

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ

Basavaraj Horatti: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಇಂದು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸಹಿ ಹಾಕಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಶಿಲ್ಪಾಗೆ 15 ಲಕ್ಷ , ನೌಕರಿ

ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತೆ ಶಿಲ್ಪಾಗೆ ಅದ್ಧೂರಿ ಸ್ವಾಗತ

Shilpa Shyla: ಕ್ರೀಡೆ ಹಾಗೂ ಶಿಕ್ಷಕಿ ಹುದ್ದೆ, ಈ ಎರಡು ಒಟ್ಟಿಗೇ ಸಾಗಲು ಸಾಧ್ಯವಿಲ್ಲ ಎಂದು ಅರಿತ ಶಿಲ್ಪಾ ಅವರು 2024ರಲ್ಲಿ ತಮ್ಮ ವೃತ್ತಿ ತೊರೆದರು. ಜೊತೆಗೆ ಮೈಸೂರು ಬಿಟ್ಟು ಬೆಂಗಳೂರಿಗೆ ಬಂದ ಅವರು ಪೂರ್ಣ ಪ್ರಮಾಣದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ.

ಗಾರ್ಡನ್ ಸಿಟಿ ಬೆಂಗಳೂರಿಗೆ ಇನ್ನಷ್ಟು ಕಳೆ: ತಲೆ ಎತ್ತಲಿವೆ ಲಾಲ್ ಬಾಗ್ ಮಾದರಿಯ ಇನ್ನೂ 3 ಉದ್ಯಾನವನಗಳು

ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆ ಅನಾವರಣ

ಉತ್ತರ ಬೆಂಗಳೂರಿನ ಪ್ರಸ್ತಾವಿತ ಸುರಂಗ ಯೋಜನೆಯ ಪರಿಣಾಮ ಸುಮಾರು 900 ಮರಗಳು ನಾಶವಾಗುತ್ತವೆ ಎನ್ನುವ ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆಗಳನ್ನು ಅನಾವರಣಗೊಳಿಸಿದರು. ಇದರಲ್ಲಿ ಒಂದು ರಕ್ಷಣಾ ಭೂಮಿಯಲ್ಲಿ ಹಾಗೂ ಮತ್ತೆರಡು ನಗರದೊಳಗಿನ ಅರಣ್ಯ ಭೂಮಿಯಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಆಡಳಿತ, ಬರ ಪರಿಹಾರ ಸೇರಿ ಅಭಿವೃದ್ಧಿ ಅಜೆಂಡಾ ಮುಂದಿಟ್ಟ ಶಾಸಕ; ಉಸ್ತುವಾರಿ ಸಚಿವರಿಂದ ಬೇಡಿಕೆ ಈಡೇರಿಕೆಯ ಭರವಸೆ

ಕೆಡಿಪಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ದಿಟ್ಟ ಧ್ವನಿ

ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

Loading...