ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಕೃಷ್ಣ ನಗರಿಯಲ್ಲಿ ನಾಳೆ ವಿಟ್ಲ ಪಿಂಡಿ ಉತ್ಸವ; ಉಡುಪಿಯಲ್ಲಿ ನಂದಗೋಕುಲ ವೈಭವ

ಉಡುಪಿ ವಿಟ್ಲ ಪಿಂಡಿ ಉತ್ಸವ ವಿಶೇಷ

Udupi krishna janmashtami: ಎಲ್ಲೆಲ್ಲೋ ಪುಟ್ಟ ಪುಟ್ಟ ಬಾಲ ಕೃಷ್ಣರು, ಅಲ್ಲಲ್ಲಿ ವಿವಿಧ ರೀತಿಯ ವೇಷಧಾರಿಗಳು, ಕೃಷ್ಣನ ಬಾಲ ಲೀಲೆಗಳನ್ನು ನೆನಪಿಸುವ ವಿವಿಧ ಕಲಾ ಪ್ರದರ್ಶನಗಳು... ಕೃಷ್ಣ ಜನ್ಮಾಷ್ಟಮಿ ವೇಳೆ ಎರಡು ದಿನಗಳ ಕಾಲ ಸಂಪೂರ್ಣ ಉಡುಪಿ ನಗರಿಯೇ ನಂದ ಗೋಕುಲವಾಗುವುದು. ಸರಿಸುಮಾರು ಸಾವಿರ ವರ್ಷಗಳಿಂದ ನಡೆಯುತ್ತಿರುವ ಈ ಆಚರಣೆಯ ವೈಭವ ಪ್ರತಿ ವರ್ಷ ಹೆಚ್ಚುತ್ತಲೇ ಇದೆ. ಇಲ್ಲಿದೆ ಇದರ ಹಿನ್ನೆಲೆ, ವೈಭವದ ದರ್ಶನ.

Chamarajanagar News: ಪ್ರೀತಿ ಹೆಸರಿನಲ್ಲಿ ಕಿರುಕುಳ; ಚಾಮರಾಜನಗರದಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ಕಾಟಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಮೊಟ್ಟೆಯಲ್ಲಿ ಹುಳು ಪತ್ತೆ: ಬ್ಲಿಂಕಿಟ್ ವಿರುದ್ಧ ದೂರು; ಮಂಗಳೂರಿನ ಆಹಾರ ಮಳಿಗೆ ಮೇಲೆ ಅಧಿಕಾರಿಗಳ ದಾಳಿ

ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆ

ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಬ್ಲಿಂಕಿಟ್ ನಲ್ಲಿ ಆರ್ಡರ್ ಮಾಡಿದ್ದ ಮೊಟ್ಟೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗ್ರಾಹಕರು ದೂರು ನೀಡಿದ ಬಳಿಕ ತನಿಖೆ ಹಿನ್ನೆಲೆಯಲ್ಲಿ ಆಹಾರ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಳಿಗೆಯಲ್ಲಿ ಹಾನಿಗೊಳಗಾಗಿರುವ ಮೊಟ್ಟೆಗಳು ಕಂಡು ಬಂದಿದ್ದರಿಂದ ಶೇಖರಣಾ ಕೊಠಡಿಯನ್ನು ಸೀಲ್ ಮಾಡಲಾಗಿದೆ.

KPSC Recruitment Scam: ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ಅಮಾನತು: ಕರ್ಮಕಾಂಡಕ್ಕೆ ಮತ್ತೊಂದು ಬಲಿ

ಜ್ಞಾನೇಂದ್ರ ಅಮಾನತು: ಕರ್ಮಕಾಂಡಕ್ಕೆ ಮತ್ತೊಂದು ಬಲಿ

2016ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ, ಇತ್ತೀಚೆಗೆ ದಿಢೀರನೆ ದೆಹಲಿಗೆ ಪರಾರಿ ಯಾಗಿದ್ದರು. ಈ ವೇಳೆ ಅವರ ನಿವಾಸದ ಬೀಗ ತೆರೆದು ಇಡಿ ಅಧಿಕಾರಿಗಳು ಮನೆಯ ಶೋಧ ನಡೆಸಿದ್ದರು. ಈ ವೇಳೆ ದೊರೆತ ದಾಖಲೆಗಳು ನೇಮ ಕಾತಿ ಅಕ್ರಮದಲ್ಲಿ ಇವರ ನೇರ ಪಾತ್ರವಿರುವುದನ್ನು ಸೂಚಿಸು ತ್ತವೆ ಎಂದು ಸರಕಾರ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Padayatra completes 3rd Day: ನೇಗಿಲು ಹೊತ್ತ ರೈತ ನಾಯಕ, ಗದ್ದೆಯಲ್ಲಿ ನಾಟಿ ಮಾಡಿದ ಕಾಯಕ

ನೇಗಿಲು ಹೊತ್ತ ರೈತ ನಾಯಕ, ಗದ್ದೆಯಲ್ಲಿ ನಾಟಿ ಮಾಡಿದ ಕಾಯಕ

ಪಾದಯಾತ್ರೆಯುದ್ದಕ್ಕೂ ಸರಕಾರದ ವಿರುದ್ಧ ಧಿಕ್ಕಾರ ಮೊಳಗಿದವು. ಸರಕಾರ ರೈತ, ದಲಿತ, ಯುವಕರ ವಿರೋಧಿ ಎಂಬ ಆಕ್ರೋಶ ವ್ಯಕ್ತವಾಯಿತು. ಮಾರ್ಗಮಧ್ಯೆ ವಿಜಯೇಂದ್ರ ಅವರಿಗಾಗಿ ಕಾದಿದ್ದ ರಂಗಾಪುರದ ಪ್ರಾಥಮಿಕ ಶಾಲಾ ಮಕ್ಕಳತ್ತ ತೆರಳಿದ ವಿಜಯೇಂದ್ರ ಮಕ್ಕಳ ಕೈ ಕುಲುಕಿದರು. ಭತ್ತ ನಾಟಿ: ವಿಜಯೇಂದ್ರ ಅವರು ಪಾದಯಾತ್ರೆಯ ನಡುವೆ ತಾಲೂಕಿನ ಪಾಂಡುರಂಗ ಕ್ಯಾಂಪ್‌ನ ರೈತ ಪಿ. ಸಾಯಿಬಾಬು ಅವರ ಜಮೀನಿಗೆ ಭೇಟಿ ನೀಡಿದರು.

ಉದ್ಯಾನಗಳ ಶೇ.5 ಜಾಗ ಅನ್ಯ ಉದ್ದೇಶಕೆ ಬಳಸಲು ವಿರೋಧ: ವಿಧೇಯಕ ಹಿಂಪಡೆಯಲು ನಿರ್ಧಾರ, ಶೀಘ್ರ ತಿದ್ದುಪಡಿ ಮಂಡನೆ

ಉದ್ಯಾನಗಳ ಶೇ.5 ಜಾಗ ಅನ್ಯ ಉದ್ದೇಶಕೆ ಬಳಸಲು ವಿರೋಧ

ಬೆಂಗಳೂರಿನಲ್ಲಿರುವ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸುವ ವಿಧೇಯಕಕ್ಕೆ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಈ ಬೆನ್ನಲ್ಲೇ ರಾಜ್ಯ ಸರಕಾರ ವಿಧೇಯಕವನ್ನು ಹಿಂಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಪಟ್ರೇನಹಳ್ಳಿ ಜಮೀನಿಗೆ ನಗರಸಭೆಯಿಂದ ಇ-ಖಾತೆ: ಸಮಗ್ರ ತನಿಖೆಗೆ ತ್ರಿಸದಸ್ಯರ ತಂಡ ರಚನೆ

ನಗರಸಭೆಯಿಂದ ಇ-ಖಾತೆ: ಸಮಗ್ರ ತನಿಖೆಗೆ ತ್ರಿಸದಸ್ಯರ ತಂಡ ರಚನೆ

ಪ್ರಸ್ತಾವಿತ ಜಮೀನಿನ ಪಹಣಿ ಪರಿಶೀಲಿಸಿದಾಗ 1983–84ರಿಂದ 2003ರವರೆಗೆ ‘ರೈಲ್ವೆ ಡಿಪೋ’ ಎಂದು ನಮೂದಾಗಿರುವುದು ಕಂಡುಬಂದಿದೆ. ಪ್ರಸ್ತುತ ಪಹಣಿಯಲ್ಲಿ ಜಮೀನು ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಗರಸಭೆ ವ್ಯಾಪ್ತಿಗೆ ಒಳಪಡದ ಜಮೀನಿಗೆ ನಗರಸಭೆಯ ವಾರ್ಡ್ ಸಂಖ್ಯೆ ಸೃಷ್ಟಿಸಿ ಇ-ಖಾತೆ ಮಾಡಿರುವುದು ಕರ್ತವ್ಯಲೋಪ ಹಾಗೂ ಅಧಿಕಾರ ದುರುಪಯೋಗವಾಗಿರುವ ಸಾಧ್ಯತೆ ಕುರಿತು ತನಿಖೆ ನಡೆಯಲಿದೆ.

ಕೃಷ್ಣ ಜನ್ಮಾಷ್ಟಮಿ ನಡುವೆ ರಾಜ್ಯದ ಹಲವೆಡೆ ಮಳೆಯ ಸಿಂಚನ; ಮನೆಯಿಂದ ಹೊರಗಿಳಿಯುವ ಮುನ್ನ ಹವಾಮಾನ ಮುನ್ಸೂಚನೆ ತಿಳಿಯಿರಿ

ಕೃಷ್ಣ ಜನ್ಮಾಷ್ಟಮಿ ನಡುವೆ ರಾಜ್ಯದ ಹಲವೆಡೆ ಮಳೆಯ ಸಿಂಚನ

Karnataka Weather: ಅಷ್ಟಮಿ ಸಂಭ್ರಮದ ಮಧ್ಯೆ ಶುಕ್ರವಾರವೂ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆ ಸುರಿಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ಮೂವರು ಮಹಿಳೆಯರು ಸೇರಿ ನಾಲ್ವರು ಬಂಧನ

ನಗರದ ಕರೇಕಲ್ಲಹಳ್ಳಿ ಸಮೀಪದ ಇಡಗೂರು ಮುಖ್ಯರಸ್ತೆ ಬಳಿಯ ಹಳೆಯ ಮನೆಯೊಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಷ್ಮಾ (41), ಆಯೇಷಾ (25), ಕವಿತಾಬಾಯಿ (31) ಹಾಗೂ ಶಶಿಕುಮಾರ್ (23) ಎಂದು ಗುರುತಿಸಲಾಗಿದೆ.

ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು

ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಗುಡಿಬಂಡೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಆಂಧ್ರಪ್ರದೇಶ ಮೂಲದ 31 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕೊತ್ತವಾರಿ ಪಲ್ಲಿ ಗ್ರಾಮದ ನಿವಾಸಿ ಸಿಂಧೂಜಾ (31) ಎಂದು ಗುರುತಿಸಲಾಗಿದೆ.

Prajaseve Andolana: ಮನೆ ಬಾಗಿಲಿಗೇ ಸರ್ಕಾರದ ಸೇವೆ: ಸೆ.5ರಿಂದ ಜಿಲ್ಲೆಯಲ್ಲಿ ‘ಪ್ರಜಾಸೇವೆ ಆಂದೋಲನ’: ಬಾಗೇಪಲ್ಲಿಯಲ್ಲಿ ಸೆ.೫ರಂದು ಚಾಲನೆ

ಮನೆ ಬಾಗಿಲಿಗೇ ಸರ್ಕಾರದ ಸೇವೆ: ಸೆ.5ರಿಂದ ‘ಪ್ರಜಾಸೇವೆ ಆಂದೋಲನ’

ಜನರ ಕುಂದುಕೊರತೆ, ಅಹವಾಲು ಹಾಗೂ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿ ಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ಆಂದೋಲನದ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಿ ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

Tahsildar makes surprise visit: ಅಲ್ಲಿಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ: ತಹಶೀಲ್ದಾರ್ ಅನಿರೀಕ್ಷಿತ ಭೇಟಿ; ವೈದ್ಯರು, ಸಿಬ್ಬಂದಿ ವಿರುದ್ಧ ಸಾರ್ವಜನಿಕರ ದೂರು

ಅಲ್ಲಿಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ

ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆರೋಗ್ಯ ಕೇಂದ್ರ 24 ಗಂಟೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದ್ದರೂ ವೈದ್ಯಾಧಿಕಾರಿಗಳು ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು, ನಂತರ ಆಸ್ಪತ್ರೆಗೆ ಬರುವ ರೋಗಿಗಳಿಗೆ ನರ್ಸ್‌ಗಳೇ ಚಿಕಿತ್ಸೆ ನೀಡುವ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ರೈಲಿಗೆ ಸಿಲುಕಿ ಯುವಕ ಸಾವು: ಆತ್ಮಹತ್ಯೆ ಶಂಕೆ

ರೈಲಿಗೆ ಸಿಲುಕಿ ಯುವಕ ಸಾವು: ಆತ್ಮಹತ್ಯೆ ಶಂಕೆ

ಸುಮಾರು ಎಂಟು ವರ್ಷಗಳ ಹಿಂದೆ ಬೆಂಗಳೂರಿನ ದೊಮ್ಮಸಂದ್ರದ ಮೀನಾಕ್ಷಿ ಅವರನ್ನು ವಿವಾಹವಾಗಿದ್ದ ಮಂಜುನಾಥ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ 20 ದಿನಗಳ ಹಿಂದೆ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು. ಬಳಿಕ ಅವರು ವಾಪಸ್ ಬಾರದ ಹಿನ್ನೆಲೆಯಲ್ಲಿ ಮಂಜುನಾಥ್ ನೊಂದಿದ್ದರು ಎನ್ನಲಾಗಿದೆ.

ಸಹ ವಿದ್ಯಾರ್ಥಿ ಮೇಲೆ ಹಲ್ಲೆ: ನಟ ʼದುನಿಯಾʼ ವಿಜಯ್‌ ಪುತ್ರ ಸಾಮ್ರಾಟ್‌ಗೆ ಜಾಮೀನು ಮಂಜೂರು

ನಟ ʼದುನಿಯಾʼ ವಿಜಯ್‌ ಪುತ್ರ ಸಾಮ್ರಾಟ್‌ಗೆ ಜಾಮೀನು ಮಂಜೂರು

Actor Duniya Vijay Son Samrat Controversy: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ʼದುನಿಯಾʼ ವಿಜಯ್‌ ಪುತ್ರ ಸಾಮ್ರಾಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಎಸಿಜೆಎಂ 6ನೇ ನ್ಯಾಯಾಲಯದ ಆದೇಶ ಹೊರಡಿಸಿದೆ.

Fake Lokayukat Officer: ಲೋಕಾಯುಕ್ತ ಅಧಿಕಾರಿ ಎಂದು ನರ್ಸ್‌ಗೆ ಬೆದರಿಕೆ: 50 ಸಾವಿರ ವಸೂಲಿ: ನಕಲಿ ಅಧಿಕಾರಿ ಚೇತನ್‌ ಬಂಧನ

ನಕಲಿ ಅಧಿಕಾರಿ ಚೇತನ್‌ ಬಂಧನ

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುನಿತಾ ಅವರು ತಮ್ಮ ಸ್ವಗ್ರಾಮ ಪೆರೇಸಂದ್ರದಲ್ಲಿನ ಮನೆಯಲ್ಲಿ ಸರ್ಕಾರಿ ಔಷಧಿಗಳನ್ನು ಬಳಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತನಿಖೆಗೆ ಆದೇಶಿಸಿದ್ದರೆನ್ನಲಾಗಿದೆ.

Chinthamani News: ಜನರು ತೋರಿದ ಪ್ರೀತಿ–ಸಹಕಾರ ಎಂದಿಗೂ ಮರೆಯಲ್ಲ: ಎಸ್‌ಪಿ ಕುಶಲ್ ಚೌಕ್ಸೆ

ಚಿಂತಾಮಣಿ ಜನರ ಆತ್ಮೀಯ ಸನ್ಮಾನಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೃತಜ್ಞತೆ

ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳಿಗೆ ಬೀಳ್ಕೊಡುಗೆ ನೀಡುವುದು ಸಹಜ. ಆದರೆ ಚಿಂತಾಮಣಿ ಯ ಸಾರ್ವಜನಿಕರು ಹಾಗೂ ಸ್ನೇಹಿತರು ಸ್ವಯಂಪ್ರೇರಿತರಾಗಿ ತಮ್ಮನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿರುವುದು ಅತ್ಯಂತ ಸಂತಸ ತಂದಿದೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಜನರಿಂದ ದೊರೆತ ಸಹಕಾರ ಹಾಗೂ ಪ್ರೀತಿ ಸದಾ ಸ್ಮರಣೀಯವಾಗಿರಲಿದೆ ಎಂದು ತಿಳಿಸಿದರು

Chikkaballapur News: ಆದಿಚುಂಚನಗಿರಿ ಮಠದ ಬಗ್ಗೆ ಟೀಕೆ ಸಲ್ಲದು; ಮಾಜಿ ಶಾಸಕರ ಹೇಳಿಕೆಗೆ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ತಿರುಗೇಟು

ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಘನತೆಗೆ ತಕ್ಕಂತೆ ಮಾತನಾಡಲಿ

ಮಠ ಹಾಗೂ ಪೀಠಾಧಿಪತಿಗಳು ಭಕ್ತರು ಮತ್ತು ಸರ್ಕಾರ ನೀಡಿದ ದೇಣಿಗೆ ಅಥವಾ ಜಮೀನುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದರು. ಮಠದ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿವೆ. ಹೀಗಾಗಿ ಸಂಸ್ಥೆಯ ವಿರುದ್ಧ ಆಧಾರರಹಿತವಾಗಿ ಮಾತನಾಡುವುದನ್ನು ಖಂಡಿಸುವುದಾಗಿ ತಿಳಿಸಿ ದರು.

2 ದಿನಗಳಲ್ಲಿ ಕಬಿನಿ ಕಟ್ಟು ನೀರು ಸಮಸ್ಯೆ ಇತ್ಯರ್ಥ ಎಂದ ಸಚಿವ ಎನ್.ಚಲುವರಾಯಸ್ವಾಮಿ; ರೈತರ ಬೇಡಿಕೆಗೆ ಸ್ಪಂದನೆ

2 ದಿನಗಳಲ್ಲಿ ಕಬಿನಿ ಕಟ್ಟು ನೀರು ಸಮಸ್ಯೆ ಇತ್ಯರ್ಥ: ಸಚಿವ ಚಲುವರಾಯಸ್ವಾಮಿ

N Chaluvarayaswamy: ಕೃಷಿಗೆ ಅನುಕೂಲವಾಗಲು ನಾಲ್ಕು ತಿಂಗಳವರೆಗೂ ನಾಲ್ಕು ಕಟ್ಟು ನೀರು ನೀಡಬೇಕಾಗುತ್ತದೆ. ಮೈಸೂರು ಉಸ್ತುವಾರಿ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗಿದೆ. ನದಿಗೆ ನೀರು ಬಿಡದಿದ್ದರೆ ವನ್ಯಪ್ರಾಣಿಗಳಿಗೂ ಕಷ್ಟವಾಗಲಿದೆ. ಹೀಗಾಗಿ, ಇಂದು ರಾತ್ರಿಯೇ ಮುಖ್ಯ ಎಂಜಿನಿಯರ್ ಜತೆ ಚರ್ಚಿಸಿ, ಎರಡು ಅಥವಾ ನಾಲ್ಕು ಕಟ್ಟು ನೀರು ನೀಡುವ ಬಗ್ಗೆ ಕೇವಲ ಎರಡೇ ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಭರವಸೆ ನೀಡಿದರು.

Krishna Janmastami 2026: ಉದ್ಯಾನನಗರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಶಾಪಿಂಗ್ ಸಡಗರ

ಉದ್ಯಾನನಗರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಶಾಪಿಂಗ್ ಸಡಗರ

ಉದ್ಯಾನನಗರಿ ಬೆಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶಾಪಿಂಗ್ ಸಂಭ್ರಮ ಹೆಚ್ಚಾಗಿದೆ. ಮಾರುಕಟ್ಟೆಗೆ ಬಗೆಬಗೆಯ ರೂಪದ ಮುದ್ದು ಕೃಷ್ಣನ ವಿಗ್ರಹ ಬಂದಿದೆ. ಇದಕ್ಕೆ ಪೂರಕ ಎಂಬಂತೆ, ನಾನಾ ವೆರೈಟಿಯ ಆಕರ್ಷಕ ಅಲಂಕಾರಿಕ ಸಾಮಗ್ರಿಗಳು ಎಲ್ಲೆಡೆ ರಾರಾಜಿಸುತ್ತಿವೆ.

ಕತ್ತಲಲ್ಲಿ ಬೆಳಕು ಹುಡುಕುವಂತೆ ಸಾತ್ವಿಕ ಆಹಾರವನ್ನು ಅರಸಿ: ರಾಘವೇಶ್ವರ ಭಾರತೀ ಶ್ರೀ ಕರೆ

ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ದೇವರ ಸೃಷ್ಟಿಯಲ್ಲಿ ಪ್ರಾಣಿಗಳು ರಾಜಸ ಸೃಷ್ಟಿಯಾದರೆ, ಗಿಡ, ಮರ, ಜಡವಸ್ತುಗಳು ತಾಮಸ ಸೃಷ್ಟಿ ಹಾಗೂ ತಲೆಯನ್ನು ಎತ್ತರದ ಸ್ಥಾನದಲ್ಲಿ ಹೊಂದಿರುವ, ಜ್ಞಾನವೇ ಪ್ರಧಾನವಾದ ಮನುಷ್ಯ ದೇವರ ಸಾತ್ವಿಕ ಸೃಷ್ಟಿ. ಸಾತ್ವಿಕ ಸೃಷ್ಟಿಯಾದ ಮನುಷ್ಯನಿಗೆ ರಾಜಸ ಸೃಷ್ಟಿ ಹಾಗೂ ತಾಮಸ ಸೃಷ್ಟಿಗಳು ಆಹಾರವಾಗಿವೆ. ಅಂದರೆ ಸಸ್ಯಜನ್ಯ ಹಾಗೂ ಪ್ರಾಣಿಜನ್ಯಗಳು ಮನುಷ್ಯನ ಆಹಾರಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ಡಾ.ದ.ರಾ. ಬೇಂದ್ರೆ ಬದುಕಿನ ಮೇಲೆ ಬೆಳಕು ಚೆಲ್ಲುವ ʼಗಂಗಾವತರಣʼ ನಾಟಕ ಪ್ರದರ್ಶನ

ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ʼಗಂಗಾವತರಣʼ ನಾಟಕ ಪ್ರದರ್ಶನ

Bengaluru News: ರಂಗಸೌರಭ ವತಿಯಿಂದ ಸೆಪ್ಟೆಂಬರ್ 6 ರಂದು ಭಾನುವಾರ ಬೆಂಗಳೂರಿನ ಜೆಪಿ ನಗರದ ರಂಗಶಂಕರದಲ್ಲಿ ವರಕವಿ ಡಾ. ದ.ರಾ. ಬೇಂದ್ರೆ ಅವರ ಬದುಕು ಮತ್ತು ಬರಹಗಳ ಸಮಗ್ರ ಚಿತ್ರಣವುಳ್ಳ ʼಗಂಗಾವತರಣʼ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತವರು ಜಿಲ್ಲೆ ಕಲಬುರಗಿಗೆ ರಾಜ್ಯ ಸರ್ಕಾರದಿಂದ ಬಂಪರ್‌ ಕೊಡುಗೆ; 105 ಕೋಟಿ ರುಪಾಯಿ ಮೊತ್ತದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

ಕಲಬುರಗಿಯ 2 ಮಹತ್ವದ ನೀರಾವರಿ ಯೋಜನೆಗಳಿಗೆ ಸಂಪುಟ ಅನುಮೋದನೆ

Priyank Kharge: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ; ಕೇರ್ ಬೈ ಬಿಎಲ್‌ಆರ್ ಪ್ರೀಮಿಯಂ ಸೇವೆ ಆರಂಭ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೇರ್ ಬೈ ಬಿಎಲ್‌ಆರ್ ಪ್ರೀಮಿಯಂ ಸೇವೆ ಆರಂಭ

Care by BLR: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ತನ್ನ ಪ್ರಯಾಣಿಕರ ವಿಮಾನಯಾನ ಅನುಭವವನ್ನು ಮತ್ತಷ್ಟು ಸುಗಮ, ಆರಾಮದಾಯಕ ಹಾಗೂ ಐಷಾರಾಮಿಯಾಗಿಸುವ ಉದ್ದೇಶದಿಂದ ʼಕೇರ್ ಬೈ ಬಿಎಲ್‌ಆರ್ʼ ಎಂಬ ಹೊಸ ವೈಯಕ್ತಿಕ ಸೇವಾ ಬ್ರ್ಯಾಂಡ್ ಅನ್ನು ಪರಿಚಯಿಸಿದೆ.

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್: ಅಮಾನತು ಆದೇಶಕ್ಕೆ ತಡೆ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಅಮಾನತು ರದ್ದು

RSS Route March: ಕಳೆದ ವರ್ಷ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕೆ ಅಮಾನತುಗೊಂಡ ಇಬ್ಬರು ಶಿಕ್ಷಕರಿಗೆ ರಿಲೀಫ್‌ ಸಿಕ್ಕಿದೆ. ರಾಜ್ಯದ ಸರ್ಕಾರದ ಅಮಾನತು ಆದೇಶಕ್ಕೆ ಕಲಬುರಗಿ ಕೆಎಟಿ ತಡೆ ನೀಡಿದೆ. ಆ ಮೂಲಕ ಯಾದಗಿರಿ ಜಿಲ್ಲೆಯ ಇಬ್ಬರು ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾ ಸಾಹೇಬ್ ದೇಶಮುಖ್ ಅವರಿಗೆ ರಿಲೀಫ್‌ ಸಿಕ್ಕಿದೆ.

Loading...