ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Rahul Gandhi: ಬೆಂಗಳೂರಿಗೆ ಬಂದಿಳಿದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರಿಗೆ ಬಂದಿಳಿದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

Bengaluru: ದೆಹಲಿಯಿಂದ ಬೆಂಗಳೂರು HAL ಏರ್‌ಪೋರ್ಟ್‌ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ.

Dharmasthala Case: ಧರ್ಮಸ್ಥಳದಲ್ಲಿ ಅಶಾಂತಿ: ಮಟ್ಟಣ್ಣವರ್‌, ತಿಮರೋಡಿ, ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳ ಗಲಭೆ: ಮಟ್ಟಣ್ಣವರ್‌, ತಿಮರೋಡಿ, ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಗಿರೀಶ್ ಮಟ್ಟಣ್ಣವರ್ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Varamahalakshmi Festival: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಹೂವು ಹಣ್ಣು ತುಟ್ಟಿ

ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಹೂವು ಹಣ್ಣು ತುಟ್ಟಿ

KR Market: ಹಬ್ಬದ ಕಾರಣ ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳಗಿನ ಜಾವ ಎರಡು ಗಂಟೆಯಿಂದಲೂ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹಬ್ಬಕ್ಕೆ ಬೇಕಾದ ಬಗೆ ಬಗೆಯ ಹೂವುಗಳ ಖರೀದಿಗೆ ಸಿಲಿಕಾನ್ ಸಿಟಿ ಜನ ಕೆಆರ್‌ ಮಾರುಕಟ್ಟೆಯಲ್ಲಿ ತೊಡಗಿದ್ದಾರೆ.

Babu Self harming Case: ಚಾಲಕನ ಆತ್ಮಹತ್ಯೆ ಪ್ರಕರಣ, ಸಂಸದ ಕೆ ಸುಧಾಕರ್‌ ಮೇಲೆ ಅಟ್ರಾಸಿಟಿ ಕೇಸ್

ಚಾಲಕನ ಆತ್ಮಹತ್ಯೆ ಪ್ರಕರಣ, ಸಂಸದ ಕೆ ಸುಧಾಕರ್‌ ಮೇಲೆ ಅಟ್ರಾಸಿಟಿ ಕೇಸ್

Atrocity Case: ಬಿಎನ್ಎಸ್ ಕಾಯ್ದೆ ಸೆಕ್ಷನ್ 108, 352 , 351 ಹಾಗೂ ಎಸ್‌ಸಿ ಎಸ್‌ಟಿ ಕಾಯಿದೆ ಅಡಿ ಕೇಸ್ ದಾಖಲಾಗಿದ್ದು, ಡೆತ್ ನೋ‌ಟ್‌ನಲ್ಲಿ ಹೆಸರು ಇರುವ ಸಂಸದ ಸುಧಾಕರ್, ನಾಗೇಶ್ ಮತ್ತು ಮಂಜುನಾಥ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಸಂಸದ ಸುಧಾಕರ್ ಎ1 ಆರೋಪಿಯಾಗಿದ್ದರೆ, ನಾಗೇಶ್ ಎ2, ಮಂಜುನಾಥ್ ಎ3 ಆರೋಪಿ.

Gruhalkahsmi Scheme : ಮಹಿಳೆಯರಿಗೆ ಸಿಹಿ ಸುದ್ದಿ, ವರಮಹಾಲಕ್ಷ್ಮಿ ಹಬ್ಬದ ಸಂದರ್ಭವೇ ಗೃಹಲಕ್ಷ್ಮಿ ಹಣ ಬಿಡುಗಡೆ

ಮಹಿಳೆಯರಿಗೆ ಸಿಹಿ ಸುದ್ದಿ, ಹಬ್ಬದ ಸಂದರ್ಭವೇ ಗೃಹಲಕ್ಷ್ಮಿ ಹಣ ಬಿಡುಗಡೆ

Varamahalakshmi festival: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ರಾಜ್ಯದ ಮಹಿಳೆಯರು ಎರಡು ತಿಂಗಳಿನಿಂದ ಕಾಯುತ್ತಿದ್ದಾರೆ. ರಾಜ್ಯದ 1.24 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದಾರೆ.

Murder Case: ಆನ್‌ಲೈನ್‌ ಗೇಮ್ ಗೀಳು ಹತ್ತಿಸಿಕೊಂಡ ಬಾಲಕನ ಕತ್ತು ಸೀಳಿ ಹತ್ಯೆಗೈದ ಸೋದರಮಾವ

ಆನ್‌ಲೈನ್‌ ಗೇಮ್ ಗೀಳು ಹತ್ತಿಸಿಕೊಂಡ ಬಾಲಕನ ಕತ್ತು ಸೀಳಿ ಹತ್ಯೆಗೈದ ಸೋದರಮಾವ

Bengaluru: ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕ ಮಾವನಿಗೆ ಪದೇ ಪದೆ ಹಣ ಕೇಳುತ್ತಿದ್ದ. ಇದರಿಂದ ಕೋಪಗೊಂಡ ನಾಗಪ್ರಸಾದ್ ಸೋಮವಾರ ರಾತ್ರಿ ತಂಗಿ ಮಗನ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಮೆಜೆಸ್ಟಿಕ್‌ನಲ್ಲಿ 3 ದಿನ ಕಾಲ ಕಳೆದಿದ್ದಾನೆ.

Karnataka Rains: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ರಾಜ್ಯದ ವಿವಿಧೆಡೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

Karnataka Weather: ರಾಜ್ಯದ ವಿವಿಧ ಕಡೆಗಳಲ್ಲಿ ಶುಕ್ರವಾರ (ಆಗಸ್ಟ್‌ 8) ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 9ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ 24 ಗಂಟೆಗಳವೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಐಐಎಂಬಿಯಲ್ಲಿ ಭಾರತದ ಮೊದಲ ಪಿಇವಿಸಿ (PEVC)ಸೆಂಟರ್ ಆರಂಭ

ಐಐಎಂಬಿಯಲ್ಲಿ ಭಾರತದ ಮೊದಲ ಪಿಇವಿಸಿ (PEVC)ಸೆಂಟರ್ ಆರಂಭ

. ಐಐಎಂಬಿಯ ಇತಿಹಾಸದಲ್ಲಿ ಹಳೆಯ ವಿದ್ಯಾರ್ಥಿ ಗಳ ಕೊಡುಗೆಗಳಲ್ಲಿ ಅತಿದೊಡ್ಡ ವೈಯಕ್ತಿಕ ಕೊಡುಗೆ ಇದಾಗಿದ್ದು ಸಿರಿಯಾಕ್‌ ಅವರಿಗೆ ಸ್ಪೂರ್ತಿ ನೀಡಿದ ಪ್ರಮುಖ ಹಣಕಾಸು ಕ್ಷೇತ್ರದ ಅಧ್ಯಾಪಕರ ಹೆಸರನ್ನ ಇಡಲಾಗುವುದು ಮತ್ತು ಪಿಜಿಪಿ ಹಾಗೂ ಡಾಕ್ಟರಲ್‌ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

Varamahalaskhmi : ಬೆಲೆ ಏರಿಕೆ ನಡುವೆ ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿ ಜೋರೋ ಜೋರು

ಗಗನ ಮುಖಿಯಾದ ಹೂ, ಹಣ್ಣು-ಹಂಪಲು ಕಾಯಿ ಕಸ್ತೂರಿ ಬೆಲೆ

ಶ್ರಾವಣ ಮಾಸದ ನಡುವೆ ಬಂದಿರುವ ಸಾಲು ಸಾಲು ಹಬ್ಬಗಳಲ್ಲಿ ವರಮಹಾ ಲಕ್ಷ್ಮಿ ಹಬ್ಬಕ್ಕೆ ಇತ್ತೀಚೆಗೆ ಇನ್ನಿಲ್ಲದ ಮಹತ್ವ ಪ್ರಾಪ್ತಿಯಾಗಿದೆ.ವ್ರತಾಚಾರಣೆ ಮರೆಯಾಗಿ ಹಬ್ಬದ ಸ್ಥಾನ ಪಡೆದಿರುವ ಪರಿಣಾಮ ಹಳ್ಳಿ ನಗರ ಪಟ್ಟಣ ಎನ್ನದೆ ಎಲ್ಲೆಡೆ ಶ್ರದ್ಧಾಭಕ್ತಿಗಿಂತ ಅದ್ಧೂರಿ ತನಕ್ಕೆ ಜನತೆ ಮುಂದಾಗಿದ್ದಾರೆ.

Chikkaballapur News: “ನೀರ ಜಾಡು” ಯುವ ಕೃಷಿಕರ ಅಧ್ಯಯನ ಯಾತ್ರೆಗೆ ಚಾಲನೆ

“ನೀರ ಜಾಡು” ಯುವ ಕೃಷಿಕರ ಅಧ್ಯಯನ ಯಾತ್ರೆಗೆ ಚಾಲನೆ

ಇತ್ತೀಚಿನ ವರ್ಷಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಳೆ ಕೊರತೆಯು ತೀವ್ರವಾಗಿ ಕಾಡುತ್ತಿದೆ. ಪ್ರತಿವರ್ಷವು ಕೃಷಿ ಮಾಡುವ ಪ್ರಮಾಣ ಇಳಿಮುಖವಾಗುತ್ತಿದೆ.  ಪ್ರಸ್ತುತ ವರ್ಷ ಆರಂಭ ದಲ್ಲಿ ಮುಂಗಾರು ಆಸೆ ತೋರಿಸಿ ಬಿತ್ತನೆ ಸಮಯದಲ್ಲಿ ಕೈಕೊಟ್ಟಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕಡಿಮೆ ಮಳೆಯ ನಡುವೆಯೂ ಕೃಷಿಯಲ್ಲಿ ಬದುಕು ಕಂಡುಕೊಂಡ ಬಹಳಷ್ಟು ರೈತರು ನಮ್ಮ ನಡುವೆ ಇದ್ದಾರೆ.

ವ್ಯಸನ ಮುಕ್ತ ದಿನಾಚರಣೆ

ವ್ಯಸನ ಮುಕ್ತ ದಿನಾಚರಣೆ

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ಸರ್ಕಾರದ ಸೂಚನೆ ಯಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಆ.೧ರಂದು ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿರವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ಯನ್ನು ತಾಲ್ಲೂಕು ತಹಸೀಲ್ದಾರ್ ವಿ.ರಶ್ಮಿರವರು ನೆರವೇರಿಸಿದರು.

Sirsi News: ಶಿರಸಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಶಿರಸಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಶಿರಸಿ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ರಸ್ತೆ ಗುಂಡಿ ಮುಚ್ಚುವುದು, ಬಸ್ ಸಮಸ್ಯೆ, ಮಳೆ ಮಾಪನ ಯಂತ್ರ ದುರಸ್ತಿ ಸೇರಿದಂತೆ ಸಾರ್ವಜನಿಕರ ಮೂಲಭೂತ ಸೌಕರ್ಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ, ಗುರುವಾರ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನೂರಾರು ಜನರು ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಧರಣಿ ನಡೆಸಿದರು.

ಫಿಲಿಪೈನ್ಸ್ ನಿಯೋಗದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಚರ್ಚೆ

ಫಿಲಿಪೈನ್ಸ್ ನಿಯೋಗದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಫಿಲಿಪೈನ್ಸ್ ನಿಯೋಗವು ಗುರುವಾರ (ಆಗಸ್ಟ್‌ 7) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಜಾಗತಿಕ ಆರೋಗ್ಯ ಸಹಕಾರ ಹಾಗೂ ಅರಿವು ಹಂಚಿಕೊಳ್ಳುವಿಕೆಯನ್ನು ಉತ್ತೇಜಿಸುವ ಕುರಿತು ಸಚಿವರೊಂದಿಗೆ ಮಾತುಕತೆ ನಡೆಸಿದೆ.

Pralhad Joshi:  2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೇಗೆ ಗೆದ್ದಿತು? ರಾಹುಲ್‌ ಗಾಂಧಿ ಉತ್ತರಿಸಲಿ: ಜೋಶಿ ಸವಾಲು

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೇಗೆ ಗೆದ್ದಿತು?: ಜೋಶಿ

ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮತ್ತು ಚುನಾವಣಾ ಆಯೋಗದ ಲೋಪವಿದೆ ಎನ್ನುವುದಾದರೆ 2023ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಇವಿಎಂಗಳು ಮತ್ತು ಚುನಾವಣಾ ಆಯೋಗ ಕಾರ್ಯ ನಿರ್ವಹಿಸಿದೆ. ಹಾಗಾದರೆ ಕಾಂಗ್ರೆಸ್‌ನವರು ಹೇಗೆ ಆಯ್ಕೆಯಾದರು? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Dinesh Gundu Rao: 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಯಶಸ್ವಿ ಕೌನ್ಸೆಲಿಂಗ್ ವರ್ಗಾವಣೆ: ದಿನೇಶ್ ಗುಂಡೂರಾವ್

ತಾಲೂಕು ಆಸ್ಪತ್ರೆಗಳ ಬಲವರ್ಧನೆಗೆ ಆದ್ಯತೆ: ದಿನೇಶ್ ಗುಂಡೂರಾವ್

ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ ಒಬ್ಬರು ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು ಇರುವಂತೆ ವರ್ಗಾವಣೆ ಪ್ರಕ್ರಿಯೆ ಮಾಡಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ಪಡೆಯಲಾಗುವುದು. ಇದರಿಂದಾಗಿ ತಾಲೂಕು ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ವೈದ್ಯರು ಲಭ್ಯತೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಇನ್ನೂ ಖಾಸಗಿ ಕಟ್ಟಡದಲ್ಲೇ ಕಾರ್ಯಾಚರಿಸುತ್ತಿದೆ ಅಬಕಾರಿ ಇಲಾಖೆ: ದಂಧೆ ರೂಪ ಪಡೆದ ಬಾಡಿಗೆ ವಹಿವಾಟು?

ಖಾಸಗಿ ಕಟ್ಟಡದಲ್ಲೇ ಇದೆ ಅಬಕಾರಿ ಇಲಾಖೆ; ಲಕ್ಷಾಂತರ ರೂ. ವ್ಯರ್ಥ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಸರ್ಕಾರಿ ಕಟ್ಟಡ ಲಭ್ಯವಿದ್ದರೂ ಅಬಕಾರಿ ಇಲಾಖೆ ಕಚೇರಿಯು ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ತೆರಿಗೆ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಾದ ವಿಶೇಷ ವರದಿ ಇಲ್ಲಿದೆ.

Cabinet Decisions: ಕಾರ್ಮಿಕರಿಗೆ ಗುಡ್‌ನ್ಯೂಸ್‌; ವಿಮಾ ಸೊಸೈಟಿ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ

ಕಾರ್ಮಿಕ ರಾಜ್ಯ ವಿಮಾ ಸೊಸೈಟಿ ಸ್ಥಾಪನೆಗೆ ಅನುಮೋದನೆ

CM Siddaramaiah: ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಇಎಸ್‌ಐ ಮಾರ್ಗಸೂಚಿಗಳನ್ವಯ ಸೊಸೈಟಿ ನೋಂದಣಿ ಕಾಯ್ದೆ 1860 ಅಡಿಯಲ್ಲಿ ನೋಂದಾಯಿಸಿ ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

CM Siddaramaiah: ''ಬಿಜೆಪಿಯಿಂದ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎನ್ನುವ ವಿವರ ರಾಹುಲ್‌ ಗಾಂಧಿಯಿಂದ ಬಹಿರಂಗ'': ಸಿದ್ದರಾಮಯ್ಯ

ಮತಗಳ್ಳತನ ವಿವರ ರಾಹುಲ್‌ ಗಾಂಧಿಯಿಂದ ಬಹಿರಂಗ: ಸಿದ್ದರಾಮಯ್ಯ

Rahul Gandhi: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ: ಆಗಸ್ಟ್ 16ಕ್ಕೆ ವಿಶೇಷ ಸಚಿವ ಸಂಪುಟ ಸಭೆ

ಆಗಸ್ಟ್ 16ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ರಾಜ್ಯ ಸರ್ಕಾರ

CM Siddaramaiah: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ ಆಯೋಗವನ್ನು ನೇಮಕ ಮಾಡಿದ್ದು, ವರದಿ ಸಲ್ಲಿಕೆಯಾಗಿದೆ. ಈ ಬಗ್ಗೆ ಅಧ್ಯಯನ ಮಾಡಿ, ಆಗಸ್ಟ್ 16ರಂದು ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

K Sudhakar: ತಮ್ಮ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆಗೆ ಶರಣಾದ ಪ್ರಕರಣ; ಸಂಸದ ಸುಧಾಕರ್‌ ಮೊದಲ ಪ್ರತಿಕ್ರಿಯೆ

ಚಾಲಕ ಆತ್ಮಹತ್ಯೆ; ಸಂಸದ ಸುಧಾಕರ್‌ ಮೊದಲ ಪ್ರತಿಕ್ರಿಯೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀಪ್ ಚಾಲಕ 33 ವರ್ಷದ ಬಾಬು ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುಧಾಕರ್‌ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.

Rohith Vemula Bill 2025: ಸಂವಿಧಾನ ವಿರೋಧಿ ಕರ್ನಾಟಕ ರೋಹಿತ್ ವೇಮುಲ ಬಿಲ್‌ಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ

ಸಂವಿಧಾನ ವಿರೋಧಿ ಕರ್ನಾಟಕ ರೋಹಿತ್ ವೇಮುಲ ಬಿಲ್‌ಗೆ ವಿರೋಧ

Hindu Rashtra Samanvaya Samiti: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಎರಡು ವಿವಾದಾತ್ಮಕ ಮಸೂದೆಗಳಾದ ಕರ್ನಾಟಕ ರೋಹಿತ್ ವೇಮುಲ ಬಿಲ್-2025 ಮತ್ತು ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆ ಕಾಯಿದೆ-2025 ವಿರೋಧಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.

Kalaburagi News: ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್; ಮೇಯರ್ ಆಗಿ ವರ್ಷಾ ಜಾನೆ, ಉಪಮೇಯರ್ ಆಗಿ ತೃಪ್ತಿ ಅಲ್ಲದ್ ಆಯ್ಕೆ

ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್

Kalaburagi News: ಕಲಬುರಗಿ ಮಹಾನಗರ ಪಾಲಿಕೆ 23ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗದ್ದುಗೆಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ವರ್ಷಾ ಜಾನೇ ಮೇಯರ್ ಆಗಿ, ತೃಪ್ತಿ ಅಲ್ಲದ್ (ಲಾಖೆ) ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru Traffic Police: ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ: ಹಲವೆಡೆ ವಾಹನ ಸಂಚಾರ ಬಂದ್; ಈ ಪರ್ಯಾಯ ಮಾರ್ಗ ಬಳಸಿ

ನಾಳೆ ಬೆಂಗಳೂರಿನಲ್ಲಿ ಈ ಪರ್ಯಾಯ ಮಾರ್ಗ ಬಳಸಲು ಸೂಚನೆ

Rahul Gandhi: ಬಿಜೆಪಿ ಹಾಗೂ ಚುನಾವಣಾ ಆಯೋಗ ಸೇರಿ ಭಾರಿ ಪ್ರಮಾಣದ ಮತಕಳವು ನಡೆಸಿವೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಶುಕ್ರವಾರ (ಆಗಸ್ಟ್‌ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಾಹನ ಸಂಚಾರವನ್ನು ನಿರ್ಬಂಧಿಸಲಾಇದ್ದು, ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

Bengaluru News: ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯಿಂದ ಮಹಿಳಾ ಉತ್ಸವ- 2025 ಕಾರ್ಯಕ್ರಮ

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯಿಂದ ಮಹಿಳಾ ಉತ್ಸವ- 2025 ಕಾರ್ಯಕ್ರಮ

Bengaluru News: ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ವತಿಯಿಂದ ಬೆಂಗಳೂರಿನ ಕನ್ನಡ ಭವನದ ನಯನಾ ಸಭಾಂಗಣದಲ್ಲಿ ಮಹಿಳಾ ಉತ್ಸವ- 2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯಕ್ಷಗಾನ ವೈಭವ ಕಾರ್ಯಕ್ರಮದಲ್ಲಿ ಆರು ತಿಂಗಳ ಕಾಲ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ಪಡೆದ ಮಹಿಳಾ ಕಲಾವಿದರಿಂದಲೇ ʼಶಶಿಪ್ರಭಾ ಪರಿಣಯʼ ಎಂಬ ಆಖ್ಯಾನವನ್ನು ಆಡಿತೋರಿಸಲಾಯಿತು.

Loading...