ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Chikkaballapur News: ಕೈಗಾರಿಕೆಗೆ ಭೂಮಿ ಕೊಡಲು ರೈತರು ಸಿದ್ಧ ಸರಕಾರ ಮುಂದಾಗುತ್ತಿಲ್ಲ: ಪ್ರತಿಭಟನಾಕಾರರ ಆಕ್ರೋಶ

ಕೈಗಾರಿಕೆಗೆ ಭೂಮಿ ಕೊಡಲು ರೈತರು ಸಿದ್ಧ ಸರಕಾರ ಮುಂದಾಗುತ್ತಿಲ್ಲ

ಜಂಗಮಕೋಟೆ ಹೋಬಳಿ 13 ಹಳ್ಳಿಗಳಲ್ಲಿ ಸರಕಾರ 2823 ಎಕೆರೆ ಭೂಮಿಯನ್ನು ಕೆಐಎಡಿಬಿಗೆ ಸ್ವಾದೀನಪಡಿಸಿಕೊಳ್ಳಲು 2024ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿ ಸಿತ್ತು. ಈ ಪೈಕಿ 730 ಎಕರೆ ಖರಾಬು, 539 ಎಕರೆ ಬೀಳು ಭೂಮಿ, 525 ಎಕರೆ ಪಿಎಸ್‌ಎಲ್ ಕಂಪನಿಗೆ ಸೇರಿದ ಭೂಮಿ ಒಟ್ಟು 1794 ಎಕರೆ ಭೂಮಿ ಈಗಾಗಲೇ ಸರಕಾರದ ವಶದಲ್ಲಿದೆ.

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಮಲೆನಾಡಿದ ಸಾಂಪ್ರದಾಯಿಕ ಆತಿಥ್ಯದೊಂದಿಗೆ ಸೇವೆ ನೀಡಲಿದೆ. ಉತ್ತರ ಕನ್ನಡದ ಹಸಿರು ಸಿರಿಯ ನಡುವೆ ನೆಲೆಸಿರುವ ಈ ತಾಣವು ಆರಾಮದಾಯಕ ಮತ್ತು ಸೊಗಸಾದ ವಾಸ್ತವ್ಯಕ್ಕೆ ಹೇಳಿ ಮಾಡಿಸಿದಂತಿದೆ. ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಬಯಸುವವರಿಗಾಗಿ ಇಲ್ಲಿ ಆಧುನಿಕ ಸೌಲಭ್ಯಗಳನ್ನು ಹೊಂದಿರುವ 40 ಐಷಾರಾಮಿ ಕೊಠಡಿಗಳು ಮತ್ತು ಸೂಟ್‌ಗಳಿವೆ.

SSLC exam: ಹಿಂದಿ ಭಾಷೆ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು ಎಂದ ಸಿಎಂ

ಹಿಂದಿ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು: ಸಿಎಂ

Third Language In SSLC Exam: ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ. ಈ ನಿಯಮ ಈ ವರ್ಷದಿಂದಲೇ ಜಾರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿ ಡಿಸಿ ಕಚೇರಿ ಮುಂದೆ ಆಟೋ ಚಾಲಕರ ಪ್ರತಿಭಟನೆ

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಆಟೋ ರಿಕ್ಷಾಗಳಿಗೆ ಬಳಸುವ ಆಟೋ ಎಲ್‌ಪಿಜಿ (Auto LPG) ದರ ಏರಿಕೆಯನ್ನು ಖಂಡಿಸಿ ನೂರಾರು ಆಟೋ ಚಾಲಕರು, ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಆಟೋಗಳ ಸಮೇತ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.

Hassan Accident: ಹಾಸನದಲ್ಲಿ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು; SSLC ಪರೀಕ್ಷೆ ಬರೆದು ಹೋಗುತ್ತಿದ್ದಾಗ ದುರ್ಘಟನೆ

ಹಾಸನದಲ್ಲಿ ಕಾರು ಡಿಕ್ಕಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಸಕಲೇಶಪುರದಲ್ಲಿ ಧಾರ್ಮಿಕ ಶಿಷ್ಟಾಚಾರ ಉಲ್ಲಂಘನೆ: ಶೂ ಧರಿಸಿ ಪ್ರಿವೆಡ್ಡಿಂಗ್ ಫೋಟೊಶೂಟ್ ನಡೆಸುತ್ತಿದ್ದ ಛಾಯಾಗ್ರಾಹಕರ ಮೇಲೆ  ಹಲ್ಲೆ

ಪ್ರಿವೆಡ್ಡಿಂಗ್ ಫೋಟೊಶೂಟ್: ಛಾಯಾಗ್ರಾಹಕರ ಮೇಲೆ ಹಲ್ಲೆ

ಪ್ರಿವೆಡ್ಡಿಂಗ್ ಫೊಟೋಶೂಟ್ ವಿವಾದಕ್ಕೆ ತಿರುಗಿ ಹಿಂಸಾಚಾರಕ್ಕೆ ಕಾರಣವಾದ ಘಟನೆ ಸಕಲೇಶಪುರ ತಾಲೂಕಿನ ದಟ್ಟವಾದ ಐತಿಹಾಸಿಕ ಬೆಟ್ಟದ ಮೇಲಿರುವ ಭೈರವೇಶ್ವರ ದೇವಾಲಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸ್ಥಳೀಯರು ವೃತ್ತಿಪರ ಛಾಯಾಗ್ರಾಹಕರ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಸದ ತೇಜಸ್ವಿ ಸೂರ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು: ಸರ್ಕಾರದ ವಿಷಯದಲ್ಲಿ ತಲೆಹಾಕುವುದು ಬೇಡ ಎಂದು ಎಚ್ಚರಿಕೆ Video

ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಡಿ.ಕೆ. ಶಿವಕುಮಾರ್ ತಿರುಗೇಟು

DKS hits back at Tejasvi Surya: ಸಂಸದ ತೇಜಸ್ವಿ ಸೂರ್ಯ ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳಲಿ. ಅವರ ಪಕ್ಷಕ್ಕೆ ಸಲಹೆಗಳನ್ನು ನೀಡಲಿ. ಬೇರೆಯವರ ವಿಷಯದಲ್ಲಿ ಅಥವಾ ಸರ್ಕಾರದ ವಿಷಯದಲ್ಲಿ ಅವರು ತಲೆಹಾಕುವುದು ಬೇಡ ಎಂದು ಎಂದು ಖಡಕ್ ಆಗಿ ಹೇಳಿದ್ದಾರೆ.

IPL 2026 tickets: ಸಿದ್ದರಾಮಯ್ಯ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ; ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಶಾಸಕ ಸುರೇಶ್‌ ಕುಮಾರ್‌

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಶಾಸಕ ಸುರೇಶ್‌ ಕುಮಾರ್‌

ನಾವೆಲ್ಲರೂ ವೇದಿಕೆಯ ಮೇಲೆ ನಮ್ಮನ್ನು 'ಜನಸೇವಕರು' ಎಂದು ಕರೆದುಕೊಳ್ಳುತ್ತೇವೆ. ಇಂತಹ ಹಿನ್ನೆಲೆಯಲ್ಲಿ ಈ ವಿಐಪಿ ಸಂಸ್ಕೃತಿಗೆ ಇಂದು ಪುರಸ್ಕಾರ ಸಿಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ದಯವಿಟ್ಟು ನನಗೆ ಐಪಿಎಲ್‌ ಟಿಕೆಟ್‌ಗಳು ಖಂಡಿತ ಬೇಡ ಎಂದು ಶಾಸಕ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Road Accident: ನೈಟ್‌ ಔಟ್‌ ಹೊರಟಿದ್ದ ವಿದ್ಯಾರ್ಥಿಗಳ ಬೈಕ್‌ಗೆ ಲಾರಿ ಡಿಕ್ಕಿ, ಮೂವರು ಸಾವು

ನೈಟ್‌ ಔಟ್‌ ಹೊರಟಿದ್ದ ವಿದ್ಯಾರ್ಥಿಗಳ ಬೈಕ್‌ಗೆ ಲಾರಿ ಡಿಕ್ಕಿ, ಮೂವರು ಸಾವು

ಪಿಜಿಯಲ್ಲಿ ವಾಸವಾಗಿದ್ದ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Gram Panchayat Employees: ಗ್ರಾಮ ಪಂಚಾಯಿತಿ ನೌಕರರ ವೇತನ ಎಷ್ಟು?; ಭತ್ಯೆ ಸೇರಿ ಏನೆಲ್ಲಾ ಸೌಲಭ್ಯ ಸಿಗುತ್ತದೆ?

ಗ್ರಾಮ ಪಂಚಾಯಿತಿ ನೌಕರರ ವೇತನ ಎಷ್ಟು?; ಏನೆಲ್ಲಾ ಸೌಲಭ್ಯ ಸಿಗುತ್ತೆ?

ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ. ಸದರಿ ನೌಕರರಿಗೆ 'ಸಿ' ಮತ್ತು 'ಡಿ' ದರ್ಜೆ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಾಗುವುದಿಲ್ಲ. ಸಿಬ್ಬಂದಿಗೆ ಸೇವಾ ಹಿರಿತನದ ವೇತನ ನಿಗದಿಪಡಿಸಲು ಮತ್ತು ವೇತನ ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Indi News: ಅಕ್ಷರ ಜಾತ್ರೆಗೆ ಇಂಡಿ ಸನ್ನದ್ಧ: ಏಪ್ರಿಲ್ 10ರಿಂದ ವಿಜಯಪುರದಲ್ಲಿ ಭವ್ಯ ಪುಸ್ತಕ ಮೇಳ

ಏಪ್ರಿಲ್ 10ರಿಂದ ವಿಜಯಪುರದಲ್ಲಿ ಭವ್ಯ ಪುಸ್ತಕ ಮೇಳ

ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏಪ್ರಿಲ್ 10 ರಿಂದ 14 ರವರೆಗೆ ಆಯೋಜಿಸಲಾಗಿರುವ 'ಬಸವ-ಬಾಬಾ ಸಾಹೇಬ್ ಅಂಬೇಡ್ಕರ್ ಪುಸ್ತಕ ಮೇಳ'ದ ಪೂರ್ವ ಭಾವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ್ ಅವರು ಮಾತನಾಡಿ, "ಇಂಡಿ ತಾಲೂಕಿನ ಪ್ರತಿಯೊಬ್ಬ ನಾಗರಿಕರು, ಯುವಕರು ಮತ್ತು ವಿದ್ಯಾರ್ಥಿಗಳು ಈ ಜ್ಞಾನದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು

Golden Hour Network: ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ: ಮೊದಲ ಬಾರಿಗೆ 'ಗೋಲ್ಡನ್ ಅವರ್ ನೆಟ್‌ ವರ್ಕ್' ಆರಂಭ

ಭಾರತದ ತುರ್ತು ಚಿಕಿತ್ಸಾ ಕ್ಷೇತ್ರಕ್ಕೆ ಹೊಸ ಚೈತನ್ಯ

ಆರ್ಥೊಪೆಡಿಕ್ಸ್ ಮತ್ತು ಟ್ರಾಮಾ ಕೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವೈದ್ಯಕೀಯ ಸಂಸ್ಥೆ ಹೊಸ್ಮಟ್ ಆಸ್ಪತ್ರೆಯು ಬೆಂಗಳೂರು ಆರ್ಥೊಪೆಡಿಕ್ ಸೊಸೈಟಿಯ ಸಹಯೋಗದೊಂದಿಗೆ ಮೊಟ್ಟಮೊದಲ ಬಾರಿಗೆ ಹಮ್ಮಿಕೊಂಡಿದ್ದ 'ಹೊಸ್ಮಟ್ ಟ್ರಾಮಾ ಕಾನ್ 2026' ಸಮಾವೇಶದಲ್ಲಿ ತನ್ನ ವಿನೂತನ 'ಗೋಲ್ಡನ್ ಅವರ್ ನೆಟ್‌ ವರ್ಕ್' (ಜಿಎಚ್ಎನ್) ಯೋಜನೆಗೆ ಅಧಿಕೃತ ಚಾಲನೆವಾಗಿ ನೀಡಿದೆ.

terrorist: ವಿದ್ಯಾರ್ಥಿಗೆ ʼಟೆರರಿಸ್ಟ್‌ʼ ಎಂದ ಪಿಇಎಸ್ ವಿವಿ ಉಪನ್ಯಾಸಕ ಅಮಾನತು

ವಿದ್ಯಾರ್ಥಿಗೆ ʼಟೆರರಿಸ್ಟ್‌ʼ ಎಂದ ಪಿಇಎಸ್ ವಿವಿ ಉಪನ್ಯಾಸಕ ಅಮಾನತು

ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

Road Accident: ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಮೂವರು ಅಪಘಾತದಲ್ಲಿ ಸಾವು

ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಮೂವರು ಅಪಘಾತದಲ್ಲಿ ಸಾವು

ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಲ್ಲಿ ವಾಸವಿದ್ದ ಕುಟುಂಬ ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಟಿಕೆಟ್‌ ಪಡೆದುಕೊಂಡಿತ್ತು.

Bhatkal News: ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಬಂದರ ರಸ್ತೆ ನ್ಯೂ ಇಂಗ್ಲೀಷ್ ಶಾಲೆಯ ಎದುರು ರಮ್ಜಾನ್ ಹಬ್ಬದ ಅಂಗವಾಗಿ ಸ್ಥಾಪಿಸಲಾದ ಮುಸ್ಲಿಂ ಧ್ವಜವನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನೆಲೆ ಯಲ್ಲಿ ಸ್ಥಳದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಧ್ವಜ ತೆರವುಗೊಳಿಸಿದ ಕ್ರಮ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವರು ಸ್ಥಳದಲ್ಲಿ ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಪರಿಸ್ಥಿತಿ ತೀವ್ರ ಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Chief Minister's Medal : 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಪಿ.ಎಸ್.ಐ ನವೀನ್ ನಾಯ್ಕ ಆಯ್ಕೆ

ಮುಖ್ಯಮಂತ್ರಿ ಪದಕಕ್ಕೆ ಪಿ.ಎಸ್.ಐ ನವೀನ್ ನಾಯ್ಕ ಆಯ್ಕೆ

ರಾಜ್ಯ ಸರ್ಕಾರವು 2025ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟಿಸಿದ್ದು, ಭಟ್ಕಳ ಶಹರಾ ಠಾಣೆಯ ಪಿ.ಎಸ್.ಐ ನವೀನ್ ಎಸ್ ನಾಯ್ಕ ಗೌರವಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆ ಯಲ್ಲಿ ಅವರು ತೋರಿದ ಸಾಧನೆ ಹಾಗೂ ಕರ್ತವ್ಯ ನಿಷ್ಠೆಯನ್ನು ಗಮನಿಸಿ ಅವರಿಗೆ ಈ ಗೌರವವನ್ನು ನೀಡಲಾಗುತ್ತಿದೆ. ಈ ಕುರಿತಂತೆ ಸಾರ್ವಜನಿಕ ವಲಯ ದಲ್ಲಿ ಬಾರಿ ಪ್ರಶಂಸೆ ವ್ಯಕ್ತವಾಗಿದೆ. ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Bomb threat: ದೇಶಾದ್ಯಂತ ಬಾಂಬ್‌ ಬೆದರಿಕೆ ಹಾಕಿ ಮೈಸೂರಿನಲ್ಲಿ ಕುಳಿತಿದ್ದ ಆರೋಪಿ ಆರೆಸ್ಟ್‌

ದೇಶಾದ್ಯಂತ ಬಾಂಬ್‌ ಬೆದರಿಕೆ ಹಾಕುತ್ತಿದ್ದ ಮೈಸೂರಿನ ಆರೋಪಿ ಆರೆಸ್ಟ್‌

ಮೈಸೂರು (Mysuru) ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಎಂಬುದು ತಿಳಿದುಬಂದಿದೆ.

ಬೆಂಗಳೂರು ಉತ್ತರ ಮಹಾನಗರ ಪಾಲಿಕೆ: 4344 ಕೋಟಿ ರೂ. ವೆಚ್ಚದ ಚೊಚ್ಚಲ ಬಜೆಟ್ ಮಂಡನೆ

ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಬರುವ ಐದು ಹೊಸ ಪಾಲಿಕೆಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಆಯವ್ಯಯವನ್ನು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಪ್ರಸ್ತುತಿ ಪಡಿಸಿದರು. ಮಹಿಳಾ ಸಬಲೀಕರಣ, ಆರೋಗ್ಯ, ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿಗೆ ಈ ಬಾರಿ ಒತ್ತು ನೀಡಲಾಗಿದೆ.

ಐಪಿಎಲ್ ಟಿಕೆಟ್ ಕೇಳಿ ಮರ್ಯಾದೆ ಕಳೆದುಕೊಂಡ ಶಾಸಕರು

ಐಪಿಎಲ್ ಟಿಕೆಟ್ ಕೇಳಿ ಮರ್ಯಾದೆ ಕಳೆದುಕೊಂಡ ಶಾಸಕರು

ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ಐಪಿಎಲ್ ನೋಡಲು ಐದು ಟಿಕೆಟ್ ಕೊಡಿಸಬೇಕು, ಶಾಸಕರಿಗಾಗಿ ವಿಐಪಿ ಜಾಗ ಮಾಡಬೇಕು ಎಂದು ಸ್ಪೀಕರ್‌ಗೆ ದುಂಬಾಲು ಬಿದ್ದ ಘಟನೆ ಹಾಗೂ ಐದು ಟಿಕೆಟ್ ಕೊಡಿಸುವಂತೆ ಸರಕಾರಕ್ಕೆ ಸೂಚನೆ ನೀಡಿರುವ ನಡೆ ತೀವ್ರ ಅಕ್ಷೇಪಕ್ಕೆ ಕಾರಣವಾಗಿದೆ.

V Somanna: ಕರ್ನಾಟಕಕ್ಕೆ ಹೊಸ ರೈಲು ಘೋಷಿಸಿದ ಸಚಿವ ಸೋಮಣ್ಣ, 4 ಜಿಲ್ಲೆಗಳ ನಡುವೆ ಸಂಚಾರ

ಕರ್ನಾಟಕಕ್ಕೆ ಹೊಸ ರೈಲು ಘೋಷಿಸಿದ ಸಚಿವ ಸೋಮಣ್ಣ, 4 ಜಿಲ್ಲೆಗಳ ನಡುವೆ ಸಂಚಾರ

ಬೆಂಗಳೂರಿನ ಯಲಹಂಕ - ಅರಸೀಕೆರೆ ನಡುವೆ ಭಾನುವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚಾರ ನಡೆಸಲಿದೆ. ಹಾಸನ, ತುಮಕೂರು, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ. ಇದು ಬೆಳಿಗ್ಗೆ 6:45ಕ್ಕೆ ಯಲಹಂಕದಿಂದ ಹಾಗೂ ಅರಸೀಕೆರೆಯಿಂದ ಮಧ್ಯಾಹ್ನ 02:15ಕ್ಕೆ ಹೊರಡುತ್ತದೆ.

Sub Registrar Office: ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ ಉಪನೋಂದಣಾಧಿಕಾರಿ ಕಚೇರಿ ಓಪನ್‌

ರಾಜ್ಯದಲ್ಲಿ ಇಂದು, ನಾಳೆ ರಜೆ ಇದ್ದರೂ ಉಪನೋಂದಣಾಧಿಕಾರಿ ಕಚೇರಿ ಓಪನ್‌

ಮಾರ್ಚ್ 28 ನಾಲ್ಕನೇ ಶನಿವಾರ ಹಾಗೂ ಮಾರ್ಚ್ 29 ಭಾನುವಾರವಾಗಿರುವ ಕಾರಣ ಕಚೇರಿಗಳಿಗೆ ನಿಯಮಾನುಸಾರ ಸರ್ಕಾರಿ ರಜೆ ಇರುತ್ತದೆ. ಆದರೆ, ಈ ಬಾರಿ ಸಾಲು ಸಾಲು ರಜೆಗಳಿರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಬಾರದು ಹಾಗೂ ವರ್ಷಾಂತ್ಯದ ಆಡಳಿತಾತ್ಮಕ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

IPL cricket match: ಇಂದಿನಿಂದ ಐಪಿಎಲ್‌ ಪಂದ್ಯ, ನಮ್ಮ ಮೆಟ್ರೋದಿಂದ ರಾತ್ರಿ 2 ಗಂಟೆಯವರೆಗೆ ರೈಲು

ಇಂದಿನಿಂದ ಐಪಿಎಲ್‌ ಪಂದ್ಯ, ನಮ್ಮ ಮೆಟ್ರೋದಿಂದ ರಾತ್ರಿ 2 ಗಂಟೆಯವರೆಗೆ ರೈಲು

ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲಾಗಿ ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1:30ಕ್ಕೆ ಹೊರಡಲಿದೆ. ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ.

ಇಂದು ಐಪಿಎಲ್‌ ಉದ್ಘಾಟನ ಪಂದ್ಯ; ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

IPL 2026 Bengaluru Traffic Advisory: ಈ ಬಾರಿ ಟೂರ್ನಿ ಬೆಂಗಳೂರು ಸೇರಿದಂತೆ ಒಟ್ಟು 13 ನಗರಗಳಲ್ಲಿ ನಡೆಯಲಿವೆ. ಅಹಮದಾಬಾದ್‌, ಚೆನ್ನೈ, ಮುಂಬೈ, ಕೋಲ್ಕತಾ, ನವದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್‌, ಜೈಪುರ, ಲಖನೌ, ಮುಲ್ಲಾನ್‌ಪುರ, ರಾಯ್ಪುರದಲ್ಲೂ ಪಂದ್ಯಗಳು ಆಯೋಜನೆಗೊಳ್ಳಲಿವೆ.

Self Harming: ಕಿರುಕುಳ ಆರೋಪ, ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಕಿರುಕುಳ, ಹಾಲು ಉತ್ಪಾದಕರ ಮಹಿಳಾ ಸಂಘ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆ

2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು.

Loading...