ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Dr Sharanabasappa Appa: ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ; ಅಂತ್ಯಕ್ರಿಯೆ ಯಾವಾಗ?

ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಕಲಬುರಗಿಯ ಮಹಾದಾಸೋಹಿ ಡಾ. ಶರಣಬಸಪ್ಪ ಅಪ್ಪ (Sharanabasappa Appa) ಲಿಂಗೈಕ್ಯರಾಗಿದ್ದಾರೆ. ಪೂಜ್ಯ ಡಾ. ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದ ದಾಸೋಹ ಮಹಾಮನೇಯ 8ನೇ ಪಿಠಾಧಿಪತಿ ಆಗಿದ್ದರು. ಅಂತಿಮ ವಿಧಿವಿಧಾನದ ಬಳಿಕ 9ನೇ ಪೀಠಾಧಿಪತಿಗೆ ಅಧಿಕಾರ ಹಸ್ತಾಂತರವಾಗಲಿದೆ.

Krishna Janmastami 2025: ಸೀಸನ್ ಟ್ರೆಂಡ್‌ಗೆ ಸೇರಿದ ಕೃಷ್ಣ ಜನ್ಮಾಷ್ಟಮಿ ಥೀಮ್ ಫೋಟೊಶೂಟ್‌

ಸೀಸನ್ ಟ್ರೆಂಡ್‌ಗೆ ಸೇರಿದ ಕೃಷ್ಣ ಜನ್ಮಾಷ್ಟಮಿ ಥೀಮ್ ಫೋಟೊಶೂಟ್‌

Krishna Janmastami: ಕೃಷ್ಣ ಜನ್ಮಾಷ್ಟಮಿ 2025 ಪ್ರಯುಕ್ತ ಈಗಾಗಲೇ ಫೆಸ್ಟೀವ್ ಥೀಮ್ ಫೋಟೋಶೂಟ್‌ ಹೆಚ್ಚಾಗಿದೆ. ಹೆಣ್ಣು ಮಕ್ಕಳು ರಾಧೆಯಂತೆ ಕಂಗೊಳಿಸಿದರೆ, ಗಂಡು ಮಕ್ಕಳು ಮುದ್ದು ಕೃಷ್ಣನಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕುರಿತಂತೆ ಇಲ್ಲಿದೆ ಸಂಕ್ಷಿಪ್ತ ವರದಿ.

Karnataka Weather: ಸ್ವಾತಂತ್ರ್ಯೋತ್ಸವಕ್ಕೆ ಜತೆಯಾಗಲಿದೆ ಮಳೆ; ಕರಾವಳಿ, ಬೆಂಗಳೂರಿನಲ್ಲೂ ಇಂದು ಸುರಿಯಲಿದೆ ಭಾರಿ ವರ್ಷಧಾರೆ

ಕರಾವಳಿ, ಬೆಂಗಳೂರಿನಲ್ಲೂ ಇಂದು ಸುರಿಯಲಿದೆ ಭಾರಿ ವರ್ಷಧಾರೆ

Rain Update: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿ ಜತೆಗೆ ಇಲ್ಲೂ ಧಾರಾಕಾರವಾಗಿ ಸುರಿಯಲಿದೆ. ಮುಂದಿನ 5 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.

Gubbi News: ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಕರೆ

ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ

ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯ ಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ

Dr. Sharanabasappa Appa:  ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಸಿಎಂ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಇಹಲೋಕ ತ್ಯಜಿಸಿದ್ದಾರೆ.

MP K Sudhakar: ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವರನ್ನು ಜನ ನಂಬಲ್ಲ: ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವರನ್ನು ಜನ ನಂಬಲ್ಲ

ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಒಂದೇ ಕಟ್ಟಡದಲ್ಲಿದೆ. ಈ ಕಟ್ಟಡದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ, ಕಾರು ಚಾಲಕ ಬಾಬು ಆವರಣದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ. ಇದು ನನಗೆ ಬಹಳ ದುಃಖ ತಂದಿದೆ.

79th Independence Day: 79ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು: ಸರ್.ಎಂ.ವಿ ಜಿಲ್ಲಾಕ್ರೀಡಾಂಗಣದಲ್ಲಿ ತಾಲೀಮು ಜೋರು

79ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

ರಾಷ್ಟ್ರಭಕ್ತಿಯನ್ನು ಮೆರೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲು ಜಿಲ್ಲಾಡಳಿತ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ನೇತೃತ್ವದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ನಾಳಿನ ಕಾರ್ಯಕ್ರಮದಲ್ಲಿ ಎಲ್ಲೂ ಕೂಡ ಲೋಪವಾಗದಂತೆ ಧ್ವಜವಂಧನೆ ಮತ್ತು ಕವಾಯತು ನಡೆಯಬೇಕಿರುವುದರಿಂದ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.

Chikkaballapur News: ತಾಲೂಕು ಆರೋಗ್ಯ ಅಧಿಕಾರಿಗೆ ಸನ್ಮಾನಿಸಿದ ಭೋವಿ ಸಮಾಜ

ತಾಲೂಕು ಆರೋಗ್ಯ ಅಧಿಕಾರಿಗೆ ಸನ್ಮಾನಿಸಿದ ಭೋವಿ ಸಮಾಜ

ಚಿಂತಾಮಣಿ ನಗರದ ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ! ಸಂತೋಷ್ ಕುಮಾರ್ ರವರ ಉತ್ತಮ ಸೇವೆಯನ್ನು ಗುರುತಿಸಿದ ಬೋವಿ ಸಮಾಜದ ಜಿಲ್ಲಾಧ್ಯಕ್ಷ ಎಂ ಗುರ್ರಪ್ಪ ರವರ ತಂಡ ಅವರಿಗೆ ಹೃದಯಸ್ಪರ್ಶಯಾಗಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತ ನಾಡಿದ ಎಂ ಗುರ್ರಪ್ಪ ಸರ್ಕಾರಿ ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ವ್ಯಕ್ತಿಯ ಜೊತೆಗೆ ಉತ್ತಮವಾದ ಸಂಪರ್ಕ ಇಟ್ಟುಕೊಂಡು ಅವರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬರುತ್ತಿರುವ ಡಾ! ಸಂತೋಷ್ ಕುಮಾರ್ ರವರ ಸೇವೆ ಶ್ಲಾಘನೀಯ ಎಂದು ಹೇಳಿದರು.

Chikkaballapur News: ಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ

ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟಲು, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಈಗಾಗಲೇ ರಚನೆ ಮಾಡಿದ್ದು, ಅವುಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ

Sharanabasappa Appa: ಶೈಕ್ಷಣಿಕ ಕ್ರಾಂತಿಯ ಹರಿಕಾರ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

Kalaburagi News: ಕಲಬುರಗಿಯ ಶರಣ ಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಗುರುವಾರ (ಆಗಸ್ಟ್‌ 14) ಲಿಂಗೈಕ್ಯರಾದರು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Darshan Thoogudeepa: ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲೇ ಗತಿ

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ ಆ್ಯಂಡ್‌ ಗ್ಯಾಂಗ್‌

ಸುಪ್ರೀಂ ಕೋರ್ಟ್‌ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ನಟ ದರ್ಶನ್‌ ಮತ್ತು ಇತರ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸದ್ಯ ಎ 1 ಪವಿತ್ರಾ ಗೌಡ, ಎ 2 ದರ್ಶನ್, ಎ 11 ನಾಗರಾಜು, ಎ 12 ಲಕ್ಷ್ಮಣ, ಎ 14 ಪ್ರದೋಶ್‌ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

Gubbi News: ಸ್ವಚ್ಛತೆ ಶುದ್ಧ ಜಲ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ತಾಪಂ ಇಓ ಶಿವಪ್ರಕಾಶ್

ಜಲ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ತಾಪಂ ಇಓ ಶಿವಪ್ರಕಾಶ್

ಕರಿಶೆಟ್ಟಿಹಳ್ಳಿ ಗ್ರಾಮದ ಬಳಿಯ ಕಸ ವಿಲೇವಾರಿ ಘಟಕ ಹತ್ತಿರ ಸ್ವಚ್ಛತಾ ಕಾರ್ಯ ನಡೆಸಿದ ಇಓ ಶಿವಪ್ರಕಾಶ್ ಅವರು ಸುದ್ದಿಗಾರರ ಜೊತೆ ಮಾತನಾಡಿ ಜಾಗತೀಕ ಯುಗದಲ್ಲಿ ಪರಿಸರ ಕಲುಷಿತ ಗೊಂಡಿದೆ. ಶುದ್ಧ ನೀರು ಗಾಳಿ ದೊರೆಯುವುದು ಕಷ್ಟಕರವಾಗುತ್ತಿದೆ. ಮುಂದಿನ ಪೀಳಿಗೆ ಉಳಿಸುವ ಸಲುವಾಗಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸುವ ಜವಾಬ್ದಾರಿ ಹೊತ್ತ ಸರ್ಕಾರ ಪ್ರತಿ ಹಳ್ಳಿಯಲ್ಲೂ ಸ್ವಚ್ಚತಾ ಅಭಿಯಾನ ಹಮ್ಮಿಕೊಂಡಿದೆ

Laxmi Hebbalkar: ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ ಕೇಂದ್ರ ಚುನಾವಣಾ ಆಯೋಗ: ಹೆಬ್ಬಾಳ್ಕರ್

ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ ಚುನಾವಣಾ ಆಯೋಗ: ಹೆಬ್ಬಾಳ್ಕರ್

ವಿರೋಧ ಪಕ್ಷದ ನಾಯಕರ ಮೇಲೆ ಇಡಿ, ಐಟಿ‌‌ ದಾಳಿ ಮಾಡಿಸುವ ಕೇಂದ್ರದ ಬಿಜೆಪಿ ನಾಯಕರು, ಇದೀಗ ಮತಗಳ್ಳತನಕ್ಕೂ ಕೈ‌ ಹಾಕಿದ್ದಾರೆ. ಚುನಾವಣೆ ಆದ ತಕ್ಷಣ‌ ರಾಹುಲ್ ಗಾಂಧಿ ಮತದಾನ ಪಟ್ಟಿ ಕೇಳಿದರೂ ಕೊಡಲಿಲ್ಲ. ನಮ್ಮ ಹೋರಾಟದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

Laxmi Hebbalkar: ʼʼರಾಜ್ಯ ಸರ್ಕಾರ ಮೀನುಗಾರರ ಪರʼʼ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ: ಲಕ್ಷ್ಮೀ ಹೆಬ್ಬಾಳ್ಕರ್

ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡಬೇಕು. ಕಳೆದ 5 ವರ್ಷಗಳಲ್ಲಿ ‌140 ಜನರು ಪ್ರಾಣ‌ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಎಂದರೆ ಬೆಂಕಿ‌ ಜತೆ ಸರಸವಾಡಿದಂತೆ, ಜೀವ ರಕ್ಷಕಗಳನ್ನು ಸೂಕ್ತವಾಗಿ ಬಳಸಿಕೊಂಡು ಮೀನುಗಾರಿಕೆ ಮಾಡಬೇಕು. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗಲೂ ಮೀನುಗಾರರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಈಗಲೂ ಸರ್ಕಾರ ಮೀನುಗಾರರ ಪರ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

BY Vijayendra: ಧರ್ಮಸ್ಥಳದ ಮುಸುಕುಧಾರಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿ; ಬಿ.ವೈ. ವಿಜಯೇಂದ್ರ ಆಗ್ರಹ

ಮುಸುಕುಧಾರಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿ: ಬಿ.ವೈ. ವಿಜಯೇಂದ್ರ

ಕೋಟ್ಯಂತರ ಭಕ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ತನಿಖೆ ಸರಿಯಾಗಿ ಆಗಲಿ ಎಂಬುದಾಗಿ ನಾವು ಆಗ್ರಹಿಸಿದ್ದೇವೆ. ಆದರೆ ಗುಂಡಿಗಳನ್ನು ಅಗೆಯುವ ಹುಚ್ಚಾಟ ನಡೆಯುತ್ತಿದೆ. ಜನರ ಧಾರ್ಮಿಕ ಭಾವನೆಗಳಿಗೆ ಘಾಸಿ ಆಗಿದೆ. ಇದು ಹಿಟ್ ಆ್ಯಂಡ್‌ ರನ್ ಕೇಸ್ ಆಗಬಾರದು. ತನಿಖೆ ಸಂಬಂಧ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು. ಈ ಮುಸುಕುಧಾರಿ ವ್ಯಕ್ತಿ, ಆತನ ಹಿಂದೆ ಇರುವ ಕೂಟ ಯಾವುದು ಎಂಬುದರ ತನಿಖೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ವಿಶೇಷ ಆಫರ್ ಗಳ ಒದಗಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನ ಆಚರಿಸಲಿರುವ ತನೈರ

ಸ್ವಾತಂತ್ರ್ಯೋತ್ಸವ ದಿನ ಆಚರಿಸಲಿರುವ ತನೈರ

79ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಟಾಟಾ ಅಧೀನದ ತನೈರ ಸಂಸ್ಥೆಯು ಶ್ರೀಮಂತ ಸಾಂಸ್ಕೃತಿಕ ವೈವಿಧ್ಯವನ್ನು ಆಚರಿಸಲು ಗ್ರಾಹಕರಿಗೆ ಆಹ್ವಾನ ನೀಡುತ್ತಿದ್ದು, ದೇಶಾ ದ್ಯಂತ ಇರುವ ನೇಕಾರರ ಕೇಂದ್ರಗಳಿಂದ ತಯಾರಾದ, ವಿವಿಧ ಕೈಗಳು ನೇಯ್ದ ಸೀರೆಗಳನ್ನು ಪ್ರದರ್ಶಿಸುತ್ತಿದೆ.

10 ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆ

10 ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆ

ಅಪೋಲೋ ಆಸ್ಪತ್ರೆಗಳಲ್ಲಿ, ಸಮುದಾಯಗಳಿಗೆ ಸೇವೆ ಸಲ್ಲಿಸುವ ಆಳವಾದ ಬದ್ಧತೆಯೊಂದಿಗೆ ಕ್ಲಿನಿಕಲ್ ಶ್ರೇಷ್ಠತೆಯನ್ನು ಸಂಯೋಜಿಸುವುದು ನಮ್ಮ ಧ್ಯೇಯವಾಗಿದೆ. ಕಳೆದ ದಶಕದಲ್ಲಿ ನಮ್ಮ ಶೇಷಾದ್ರಿಪುರಂ ಘಟಕದ ಪ್ರಯಾಣವು ಈ ನೀತಿಯ ನಿಜವಾದ ಪ್ರತಿಬಿಂಬವಾಗಿದೆ. ಸುಧಾರಿತ ಆರೈಕೆಗೆ ಪ್ರವೇಶವನ್ನು ವಿಸ್ತರಿಸುವ ಮೂಲಕ ಮತ್ತು ಪ್ರತಿಯೊಬ್ಬ ರೋಗಿಯೊಂದಿಗೆ ವಿಶ್ವಾಸವನ್ನು ಬೆಳೆಸುವ ಮೂಲಕ, ಬೆಂಗಳೂರಿನ ಆರೋಗ್ಯ ರಕ್ಷಣಾ ಭೂದೃಶ್ಯವನ್ನು ರೂಪಿಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಿದ್ದೇವೆ

ಪ್ರತಿ ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಸ್ಲೋ ಮತ್ತು ಫಾಸ್ಟ್ ಚಾರ್ಜಿಂಗ್ ಸೌಲಭ್ಯ

ದೇಶವ್ಯಾಪಿ Charge Hub ಸ್ಥಾಪನೆ ಯೋಜನೆ

ಆರಂಭಿಕ ಹಂತದಲ್ಲಿ, ದೇಶದಾದ್ಯಂತ ಇರುವ MATTER Experience Hubs ಗಳಲ್ಲಿ ಎಲ್ಲಾ MATTER AERA ರೈಡರ್‌ಗಳಿಗೆ ಉಚಿತ ಚಾರ್ಜಿಂಗ್ ಸೌಲಭ್ಯ ಲಭ್ಯವಿರುತ್ತದೆ, ಇದು “Right to Charging” ನ್ನು ಪ್ರಾರಂಭದ ದಿನದಿಂದಲೇ ವಾಸ್ತವಕ್ಕೆ ತರುವ MATTER ನ ಬದ್ಧತೆಯನ್ನು ತೋರಿಸುತ್ತದೆ.

ಮಹಿಳೆಯರ ತಮ್ಮ ಫಲವತ್ತತೆ ಕಾಪಾಡಿಕೊಳ್ಳಲು ಎಗ್‌ ಫ್ರೀಜ್‌ ಅಗತ್ಯವೇ? ಇಲ್ಲಿದೆ ವೈದ್ಯರ ಅಭಿಪ್ರಾಯ

ಮಹಿಳೆಯರ ತಮ್ಮ ಫಲವತ್ತತೆ ಕಾಪಾಡಿಕೊಳ್ಳಲು ಎಗ್‌ ಫ್ರೀಜ್‌ ಅಗತ್ಯವೇ?

ಒಬ್ಬರ ಸ್ವಂತ ನಿಯಮಗಳ ಮೇಲೆ ಪೋಷಕರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಹೊಂದಿ ರುವ ಕಲ್ಪನೆಯು ಸಬಲೀಕರಣವಾಗಿದೆ. ಇದು ಮಹಿಳೆಯರು ಜೈವಿಕ ಗಡಿಯಾರದ ಒತ್ತಡವನ್ನು ಮೀರಿ ಚಲಿಸಲು ಸಹಾಯ ಮಾಡುತ್ತದೆ. ಮೊಟ್ಟೆ ಫ್ರೀಜ್‌ನೊಂದಿಗೆ, ಅವರು ಉನ್ನತ ಶಿಕ್ಷಣ, ವೃತ್ತಿಜೀವನವನ್ನು ನಿರ್ಮಿಸುವುದು, ವ್ಯವಹಾರವನ್ನು ಪ್ರಾರಂಭಿಸುವುದು ಅಥವಾ ವೈಯಕ್ತಿಕ ಬೆಳವಣಿಗೆಗೆ ಸಮಯವನ್ನು ತೆಗೆದುಕೊಳ್ಳಬಹುದು

Darshan Bail Cancelled: ಮತ್ತೆ ಜೈಲು ಪಾಲಾದ ದರ್ಶನ್‌ ಮುಂದಿನ ನಡೆ ಏನು? ʼದಿ ಡೆವಿಲ್‌ʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌ ಮುಂದೂಡಿಕೆ

ಮುಂದೂಡಿಕೆಯಾಯ್ತು ʼದಿ ಡೆವಿಲ್‌ʼ ಚಿತ್ರದ ಸಾಂಗ್‌ ರಿಲೀಸ್‌ ಡೇಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ, ಸ್ಯಾಂಡಲ್‌ವುಡ್‌ ನಟ ದರ್ಶನ್‌ ಮತ್ತೆ ಜೈಲು ಪಾಲಾಗಲಿದ್ದಾರೆ. ಈ ಮಧ್ಯೆ ದರ್ಶನ್‌ ಅಭಿನಯದ ʼಡಿ ಡೆವಿಲ್‌ʼ ಚಿತ್ರದ ಹಾಡಿನ ರಿಲೀಸ್‌ ಮುಂದೂಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಹಾಡು ಆಗಸ್ಟ್‌ 15ರ ಬೆಳಗ್ಗೆ 10:05ಕ್ಕೆ ರಿಲೀಸ್‌ ಆಗಬೇಕಿತ್ತು.

DK Shivakumar: ಧರ್ಮಸ್ಥಳಕ್ಕೆ ಡಿಕೆಶಿ ಬೆಂಬಲ; ವೀರೇಂದ್ರ ಹೆಗ್ಗಡೆ, ದೇವಸ್ಥಾನ, ಧಾರ್ಮಿಕ ಸೇವೆ ಬಗ್ಗೆ ಬಿಜೆಪಿಗಿಂತ ಹೆಚ್ಚು ಕಾಳಜಿ, ನಂಬಿಕೆ ನಮಗಿದೆ ಎಂದ ಡಿಸಿಎಂ

ಧರ್ಮಸ್ಥಳಕ್ಕೆ ಡಿಕೆಶಿ ಬೆಂಬಲ

Dharmasthala Temple: ಧರ್ಮಸ್ಥಳ ಪ್ರಕರಣ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದು, ವೀರೇಂದ್ರ ಹೆಗ್ಗಡೆ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.

DK Shivakumar: ಭ್ರಷ್ಟ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಖಡಕ್‌ ಎಚ್ಚರಿಕೆ

ಭ್ರಷ್ಟ ಅಧಿಕಾರಿಗಳಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

DK Shivakumar: ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಟಿ.ಎನ್. ಜವರಾಯಿ ಗೌಡ ಅವರು, ಕೆಂಪೇಗೌಡ ಬಡಾವಣೆ ವಿಚಾರವಾಗಿ ಪ್ರಶ್ನೆ ಕೇಳಿ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಹೇಳಿದಾಗ, ಇದಕ್ಕೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಕೆಂಪೇಗೌಡ ಬಡಾವಣೆಯಲ್ಲಿ ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗುವುದರಲ್ಲಿ ಅವರನ್ನು ಅಮಾನತು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Darshan Thoogudeepa: ಬಳ್ಳಾರಿ ಜೈಲಿಗೆ ಹೋಗಲಿದ್ದಾರಾ ದರ್ಶನ್‌? ʼದಾಸʼನ ಮುಂದಿನ ನಡೆ ಏನು?

ಬಳ್ಳಾರಿ ಜೈಲಿಗೆ ಹೋಗಲಿದ್ದಾರಾ ದರ್ಶನ್‌?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ಎ 2 ಆರೋಪಿ ನಟ ದರ್ಶನ್‌ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಪಡಿಸಿದ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಹೊಸಕೆರೆ ಹಳ್ಳಿಯಿಂದ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇದೀಗ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದ ಎನ್ನಲಾಗಿದೆ.

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿಕೆಶಿ

ಸ್ಟಾರ್‌ ಸ್ಪ್ರಿಂಟರ್‌, ಕನ್ನಡತಿ ವಿಜಯಕುಮಾರಿಗೆ ಡಿಸಿಎಂ ಡಿಕೆಶಿ ಸನ್ಮಾನ

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಹುಮ್ಮಸ್ಸು ಮತ್ತಷ್ಟು ಹೆಚ್ಚಾಗಿದೆ ಎಂದು ವಿಜಯಕುಮಾರಿ ಹೇಳಿದರು.

Loading...