ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Shocking News: ರಾಜ್ಯದಲ್ಲಿ ಮತ್ತೆ ಗೋವಿನ ಮೇಲೆ ಕಿಡಿಗೇಡಿತನ, ಕೆಚ್ಚಲು ಕೊಯ್ದು ವಿಕೃತಿ

ರಾಜ್ಯದಲ್ಲಿ ಮತ್ತೆ ಗೋವಿನ ಮೇಲೆ ಕಿಡಿಗೇಡಿತನ, ಕೆಚ್ಚಲು ಕೊಯ್ದು ವಿಕೃತಿ

shocking News: ಹಸುವಿನ ಕೆಚ್ಚಲಿನಿಂದ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಭರಮಪ್ಪ ಅವರು ತಕ್ಷಣವೇ ಹಸುವನ್ನು ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವ್ಯಾಪ್ತಿಯ ಕುಳಗೇರಿ ಉಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್‌!

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 14th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 25 ರೂ. ಹೆಚ್ಚಾಗಿ 9,320 ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 28 ರೂ. ಏರಿಕೆಯಾಗಿದ್ದು, 10,168 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 93,200 ರೂ. ಮತ್ತು 100 ಗ್ರಾಂಗೆ 9,32,000 ರೂ. ನೀಡಬೇಕಾಗುತ್ತದೆ.

Mobile Addiction: ರಾಜ್ಯದಲ್ಲಿ 99% ಮಕ್ಕಳಲ್ಲಿ ಮೊಬೈಲ್‌ ಗೀಳು, 42%  ಮಕ್ಕಳಿಗೆ ಆನ್‌ಲೈನ್‌ ಲೈಂಗಿಕ ದೌರ್ಜನ್ಯ

99% ಮಕ್ಕಳಲ್ಲಿ ಮೊಬೈಲ್‌ ಗೀಳು, 42% ಮಕ್ಕಳಿಗೆ ಆನ್‌ಲೈನ್‌ ದೌರ್ಜನ್ಯ

Mobile Addiction: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಚೈಲ್ಡ್‌ ಫಂಡ್‌ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿರುವ ‘ರಾಜ್ಯದಲ್ಲಿ ಮಕ್ಕಳ ಆನ್‌ಲೈನ್‌ ಅಪಾಯಗಳ ಕುರಿತು ವಿಶೇಷ ಅಧ್ಯಯನ’ ವರದಿಯಲ್ಲಿ ಹಲವು ಅಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಅಧ್ಯಯನ ವರದಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ ಮಾಡಿದರು.

Road Accident: ಭೀಕರ ಸರಣಿ ಅಪಘಾತ: ಕಾಪಾಡಲು ಧಾವಿಸಿದವನೂ ಸೇರಿ ಮೂವರು ಸಾವು

ಭೀಕರ ಸರಣಿ ಅಪಘಾತ: ಕಾಪಾಡಲು ಧಾವಿಸಿದವನೂ ಸೇರಿ ಮೂವರು ಸಾವು

Road Accident: ಸ್ಕಾರ್ಪಿಯೋ ಚಾಲಕ ವಾಹನ ಪಕ್ಕಕ್ಕೆ ಹಾಕಿ ರಸ್ತೆ ದಾಟುವಾಗ ಹಿಂದಿನಿಂದ ಜೋರಾಗಿ ಬಂದ ಎರ್ಟಿಗಾ ಕಾರು ಆತನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಎರ್ಟಿಗಾ ಕಾರು ಲಾರಿಗೆ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಎರ್ಟಿಗಾ ಕಾರಿನಲ್ಲಿದ್ದ ಇಬ್ಬರು, ಸ್ಕಾರ್ಪಿಯೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

SL Bhyrappa: ʼಡಾ. ಎಸ್ ಎಲ್ ಭೈರಪ್ಪ ಪ್ರತಿಷ್ಠಾನʼ ಇಂದು ಬೆಂಗಳೂರಿನಲ್ಲಿ ಉದ್ಘಾಟನೆ

ʼಡಾ. ಎಸ್ ಎಲ್ ಭೈರಪ್ಪ ಪ್ರತಿಷ್ಠಾನʼ ಇಂದು ಬೆಂಗಳೂರಿನಲ್ಲಿ ಉದ್ಘಾಟನೆ

SL Bhyrappa: ಭೈರಪ್ಪನವರ ಸಮಾಜಮುಖಿ ಕಾರ್ಯಗಳು ಹಾಗೂ ಯೋಜನೆಗಳನ್ನು ಜಾರಿಗೆ ತರಲು ಉದ್ದೇಶಿಸಿರುವ ʼಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ)ʼದ ಉದ್ಘಾಟನೆ ಇಂದು (ಜೂನ್‌ 14) ನೆರವೇರಲಿದೆ. ಬೆಂಗಳೂರಿನ ಬಸವನಗುಡಿ ರಸ್ತೆಯ ಬಿಎಂಎಸ್‌ ಇಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

Bike taxi: ರಾಜ್ಯದಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿ ಜೂನ್‌ 16ರಿಂದ ಬಂದ್‌, ಹೈಕೋರ್ಟ್‌ ನಿಲುವು ಅಚಲ

ರಾಜ್ಯದಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿ ಜೂನ್‌ 16ರಿಂದ ಬಂದ್‌

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್, ಓಲಾ, ಬೈಕ್ ಟ್ಯಾಕ್ಸಿಗಳ ಮಾಲೀಕರು ಮತ್ತಿತರರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

19ಕ್ಕೆ ನಡೆಯಲಿದೆ ನಂದಿ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ : ಜನತೆಯ ನಿರೀಕ್ಷೆಯ ಭಾರ ಕಡಿಮೆ ಮಾಡುವುದೇ ಸರ್ಕಾರ

19ಕ್ಕೆ ನಡೆಯಲಿದೆ ನಂದಿ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ

ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ 1986ರಲ್ಲಿ ಸಾರ್ಕ್ ಸಮ್ಮೇಳನ ನಡೆದು ಹೊಸ ಇತಿಹಾಸ ಸೃಷ್ಟಿಸಿತ್ತು. ಸ್ವಾತಂತ್ರ‍್ಯ ಸಂಗ್ರಾಮದ ಸಂದರ್ಭದಲ್ಲಿ ದಕ್ಷಿಣ ಭಾರತದ ಪ್ರವಾಸ ಕೈಗೊಂಡಿದ್ದ ವೇಳೆ ಮಹಾತ್ಮಾಗಾಂಧಿ ಯವರ ಆರೋಗ್ಯ ಕೈ ಕೊಟ್ಟಿತ್ತು. ಆಗ 1927ಮತ್ತು 1934 ಈ ಎರಡು ಅವಧಿಯಲ್ಲಿ ನಂದಿ ಬೆಟ್ಟದಲ್ಲಿ ಅವರು ೬೦ಕ್ಕೂ ಹೆಚ್ಚು ದಿನ ಬಿಡು ಬಿಟ್ಟು ಆರೋಗ್ಯ ಸುಧಾರಿಸಿಕೊಂಡಿದ್ದರು.

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ನಿರೀಕ್ಷೆ!

ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Weather update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

MLA Pradeep Eshwar: ಸಂಪುಟ ಸಭೆ ಜಿಲ್ಲೆಯ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ವಿಶ್ವಾಸವಿದೆ : ಪ್ರದೀಪ್ ಈಶ್ವರ್

ಜಿಲ್ಲೆಯ ಅಭಿವೃದ್ಧಿ, ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ವಿಶ್ವಾಸವಿದೆ

ಸಚಿವ ಸಂಪುಟ ಸಭೆ ಈ ಭಾಗದ ಜಿಲ್ಲೆಗಳ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ನಿರೀಕ್ಷೆ ಇದೆ. ಈಗಾಗಲೇ ಹಲವು ವಿಷಯಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗಳಿಗೆ ನೀಡಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ನಿರೀಕ್ಷೆ ಇದೆ.

Yoga Training: ನಂದಿ ವೈದ್ಯಕೀಯ ಕಾಲೇಜಿನಲ್ಲಿ ಯೋಗ ತರಬೇತಿ

ನಂದಿ ವೈದ್ಯಕೀಯ ಕಾಲೇಜಿನಲ್ಲಿ ಯೋಗ ತರಬೇತಿ

11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತವಾಗಿ ಶುಕ್ರವಾರ ನಂದಿ ಸರ್ಕಾರಿ ವೈದ್ಯಕೀಯ ಮತ್ತು ಸಂಶೋಧನ ಕಾಲೇಜು, ಅರೂರು ಇಲ್ಲಿ ಯೋಗ ತರಬೇತಿಯನ್ನು ನಡೆಸ ಲಾಯಿತು. ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ನಂದಿ ವೈದ್ಯಕೀಯ ಕಾಲೇಜಿನ ಹೆಚ್.ಓ.ಡಿ ಡಾ.ಸುರೇಶ್ ನಾಯಕ್, ಸಹಾಯಕ ಪ್ರಾಧ್ಯಾಪಕರಾದ ಡಾ.ಮನೋಜ್ ಹಾಗೂ ತಜ್ಞ ವೈದ್ಯರಾದ ಡಾ.ಅನಿಲ್ ಕುಮಾರ್, ತರಬೇತುದಾರ ಮುನಿರಾಜು ರವರು ಕಾರ್ಯಕ್ರಮ ನಡೆಸಿಕೊಟ್ಟರು

ಬಿತ್ತನೆಗೆ ಮುಂಚೆ ಬೀಜೋಪಚಾರ ಮಾಡುವುದು ಮರೆಯದಿರಿ: ಸಹಾಯಕ ಕೃಷಿ ನಿರ್ದೇಶಕ ಮುನಿರಾಜ.ಸಿ

ಬಿತ್ತನೆಗೆ ಮುಂಚೆ ಬೀಜೋಪಚಾರ ಮಾಡುವುದು ಮರೆಯದಿರಿ

ಕೃಷಿಯಲ್ಲಿ ಎಲ್ಲದಕ್ಕೂ ಬಿತ್ತನೆ ಬೀಜವೇ ಪ್ರಮುಖವಾದದ್ದು ಸಾಮಾನ್ಯವಾಗಿ ಸಹಾಯಧನದಲ್ಲಿ ವಿತರಿಸುವ ಬಿತ್ತನೆ ಬೀಜಗಳು ಬಹುತೇಕ ಬೀಜೋಪಚಾರ ಆಗಿಯೇ ಇರುತ್ತದೆ. ಆದರೂ ಕೆಲವು ಬಾರಿ ಮನೆಯಲ್ಲಿ ಸಂಗ್ರಹಿಸಿಟ್ಟ ಬಿತ್ತನೆ ಬೀಜ ಬಳಸುವಾಗ, ಮಣ್ಣಿನಿಂದ ಹರಡುವ ರೋಗ ಮತ್ತು ಕೀಟಗಳ ಹತೋಟಿಗೆ ಹಾಗೂ ಬೀಜದ ಮೊಳಕೆ ಪ್ರಮಾಣ ಹೆಚ್ಚಿಸಲು, ಜೈವಿಕ ಗೊಬ್ಬರಗಳ ಮೂಲಕ ವಾತಾ ವರಣದಲ್ಲಿರುವ ಪೋಷಕಾಂಶಗಳನ್ನು ಸ್ವೀಕರಿಸಿ ಬೆಳೆಗಳಿಗೆ ಒದಗಿಸುವಂತೆ ಮಾಡಲು ಬೀಜೋಪಚಾರ ಪ್ರಮುಖ ಪಾತ್ರ ವಹಿಸುತ್ತದೆ

ಬೆಳ್ಳಂ ಬೆಳಗ್ಗೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿಯೇ ಪಾದಚಾರಿ ವ್ಯಕ್ತಿ ಸಾವು

ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿಯೇ ಪಾದಚಾರಿ ವ್ಯಕ್ತಿ ಸಾವು

ನಗರದ ಹೊರವಲಯದಲ್ಲಿರುವ ಶಿಡ್ಲಘಟ್ಟ ರಸ್ತೆಯ ತಿಮ್ಮಸಂದ್ರದ ಬಿವಿಎಂ ಕನ್ವೆಷನ್ ಹಾಲ್ ಬಳಿ ಬೆಳಗಿನ ಜಾವ ಸುಮಾರು 6 ಗಂಟೆ ಸಮಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ  ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಶಾಶ್ವತ ನೀರಾವರಿ ಯೋಜನೆ ಘೋಷಣೆ ಮಾಡಬೇಕು; ತಪ್ಪಿದ್ದಲ್ಲಿ ಜನತಾ ನ್ಯಾಯಾಲಯದಲ್ಲಿ ಹೋರಾಟ ಖಚಿತ : ಶಾಶ್ವತ ನೀರಾವರಿ ಹೋರಾಟ ಸಮಿತಿ ಎಚ್ಚರಿಕೆ

ಯೋಜನೆ ಘೋಷಣೆ ತಪ್ಪಿದ್ದಲ್ಲಿ ಜನತಾ ನ್ಯಾಯಾಲಯದಲ್ಲಿ ಹೋರಾಟ ಖಚಿತ

ನಾಯನಹಳ್ಳಿಯ ಆಂಜನೇಯರೆಡ್ಡಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೋರಾಟಗಾರರು ಭಾಗವಹಿಸಿದ್ದರು. ಈ ವೇಳೆ, ಸರ್ಕಾ ರಕ್ಕೆ ನೀರಾವರಿ ವಿಚಾರದಲ್ಲಿ ಬಹಿರಂಗ ಸವಾಲಿನ ಪತ್ರವನ್ನು ರವಾನಿಸಲು ತೀರ್ಮಾನಿಸಿದರು.

Chikkaballapur News: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ ಹಾಗೂ ತಹಸೀಲ್ದಾರ್ ಗೆ ಮನವಿ ಪತ್ರ

ವಿವಿಧ ಬೇಡಿಕೆಗಳ ಈಡೇರಿಕೆ: ತಹಸೀಲ್ದಾರ್ ಗೆ ಮನವಿ ಪತ್ರ

ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆ ಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು. ಕಿರಿಯ ವಕೀಲರ ವೃತ್ತಿ ಆರಂಭದ ಬದುಕಿಗೆ ಪೂರಕವಾಗುವಂತೆ ೨ ವರ್ಷಗಳ ಕಾಲ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಬೇಕು.

Child Labour: ಆರ್ಥಿಕವಾಗಿ ಬಡತನವಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುತ್ತಿರುವುದು ವಿಷಾಧನೀಯ: ನ್ಯಾಯಾಧೀಶ ಮಂಜುನಾಥಾಚಾರಿ

ಬಡತನವಿರುವ ಮಕ್ಕಳು ಬಾಲಕಾರ್ಮಿಕರಾಗುತ್ತಿರುವುದು ವಿಷಾಧನೀಯ

ಶುಕ್ರವಾರ ಕಾನೂನು ಸೇವಾ ಸಮಿತಿ, ಬಾಗೇಪಲ್ಲಿ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ,ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಇವರುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು

Drug Smuggling: ಚೂಡಿದಾರ್ ಡ್ರೆಸ್ ಪೀಸ್​​ಗಳಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!; ಬೆಂಗಳೂರಲ್ಲಿ ನೈಜೀರಿಯಾ ಯುವತಿ ಅರೆಸ್ಟ್‌

ಚೂಡಿದಾರ್ ಡ್ರೆಸ್ ಪೀಸ್​​ಗಳಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

Drug Smuggling: ಬೆಂಗಳೂರಿನಲ್ಲಿ ಡ್ರಗ್ಸ್‌ ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಯುವತಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 5.325 ಕೆಜಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್, ಒಂದು ಆ್ಯಪಲ್ ಮೊಬೈಲ್ ಹಾಗೂ 11 ಹೊಸ ಚೂಡಿದಾರ್ ಡ್ರೆಸ್ ಪೀಸ್​​ಗಳನ್ನು ವಶಕ್ಕೆ ಪಡೆಯಲಾಗಿದೆ.

ಗ್ರಾಹಕರಿಗೆ ಈಗ ಬ್ಯಾಂಕಿನ ' ಸೈಬರ್ನೆಟ್ ' ಪ್ಲಾಟ್ಫಾರ್ಮ್ ಮೂಲಕ ಪಾವತಿ ಮಾಡುವ ಅವಕಾಶ

ಕರ್ನಾಟಕ ರಾಜ್ಯ ಖಜಾನೆಯೊಂದಿಗೆ ಸೌತ್ ಇಂಡಿಯನ್ ಬ್ಯಾಂಕ್ ಸಂಯೋಜನೆ

ಕರ್ನಾಟಕ ರಾಜ್ಯ ತೆರಿಗೆಗಳಿಗೆ ಪಾವತಿಗಳನ್ನು ಈಗ ಸೌತ್ ಇಂಡಿಯನ್ ಬ್ಯಾಂಕಿನ ನೆಟ್ ಬ್ಯಾಂಕಿಂಗ್ ಮೂಲಕ ಮಾಡಬಹುದಾಗಿದೆ. ಬ್ಯಾಂಕಿನ ನೆಟ್ ಬ್ಯಾಂಕಿಂಗ್ ಪೋರ್ಟಲ್ ಆದ ಸೈಬರ್ನೆಟ್ (SIBerNet), ಈಗ ಕರ್ನಾಟಕ ರಾಜ್ಯ ಖಜಾನೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ, ಖಜಾನೆ 2 ನೊಂದಿಗೆ ಏಕೀಕತಿಸಲ್ಪಟ್ಟಿದೆ.

ಟೊಯೋ ಮತ್ತು ಮೊಡೆಕ್ ಅಧಿಕೃತವಾಗಿ ತೆರೆಯಲಿದೆ ಬೆಂಗಳೂರಿನಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ

ಮೂರು ವರ್ಷಗಳಲ್ಲಿ 750 ಉದ್ಯೋಗಿಗಳ ನೇಮಕಕ್ಕೆ ಸಿದ್ಧತೆ

ಒಎಫ್ಎಸ್ ಇಂಡಿಯಾ ಟೊಯೊ ಎಂಜಿನಿಯರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಟೊಯೊ ಇಂಡಿಯಾ) ನ ಜಂಟಿ ಉದ್ಯಮ ಕಂಪನಿಯಾಗಿದ್ದು, ಇದು ಟೊಯೊ ಜಪಾನ್ ಮತ್ತು ಆರ್ಫ್ರೋ ಫ್ರಾಂಟಿರ್ಯರ್ ಸೊಲ್ಯೂಷನ್ಸ್ ಪಿಟಿಇಯ ಅಂಗಸಂಸ್ಥೆಯಾಗಿದೆ. ಲಿಮಿಟೆಡ್ (ಒಎಫ್ಎಸ್), ಮೊಡೆಕ್ ಗ್ರೂಪ್ ಕಂಪನಿ. ಹೊಸ ಕೇಂದ್ರವು ಕಂಪನಿಗಳ ಜಾಗತಿಕ ಬೆಳವಣಿಗೆಯ ಕಾರ್ಯತಂತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ

Tumkur University: ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

Tumkur News: ತುಮಕೂರಿನ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ ಪರಿಚಯ ಮಾಡಿಕೊಡುವ ಉದ್ದೇಶದಿಂದ ನಗರ ಕ್ಯಾಂಪಸ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಜ್ಞಾನಸಿರಿ ಕ್ಯಾಂಪಸ್‌ಗೆ ಭೇಟಿ ನೀಡುವ ಅವಕಾಶವನ್ನು ಕಲ್ಪಿಸಲಾಗಿತ್ತು. ಪ್ರಶಾಂತ ಪರಿಸರದಲ್ಲಿ ನೆಲೆಸಿರುವ ಈ ಕ್ಯಾಂಪಸ್‌ನಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇದೆ.

Bike Taxi Ban: ಓಲಾ, ಉಬರ್‌, ರ‍್ಯಾಪಿಡೋಗೆ ಶಾಕ್; ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Bike Taxi Service: ಈ ಮೊದಲು ಜೂನ್‌ 15ರವರೆಗೆ ಬೈಕ್‌ ಟ್ಯಾಕ್ಸಿ ಸೇವೆ ವಿಸ್ತರಣೆಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ವಿಭಾಗೀಯ ಪೀಠವು, ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

16th Finance Commission: ಬೆಂಗಳೂರು ಅಭಿವೃದ್ಧಿಗೆ 1.15 ಲಕ್ಷ ಕೋಟಿ ಒದಗಿಸಿ; 16ನೇ ಹಣಕಾಸಿನ ಆಯೋಗಕ್ಕೆ ಸಿಎಂ ಜ್ಞಾಪನ ಪತ್ರ

ಬೆಂಗಳೂರು ಅಭಿವೃದ್ಧಿಗೆ 1.15 ಲಕ್ಷ ಕೋಟಿ ನೀಡಿ; ಸಿಎಂ ಮನವಿ

CM Siddaramaiah: ನವದೆಹಲಿಯಲ್ಲಿ 16ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪನಗಾರಿಯಾ ಮತ್ತು ಸದಸ್ಯರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ಒಕ್ಕೂಟದ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

MLA Vinay Kulkarni: ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ!

ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ

MLA Vinay Kulkarni: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿ, ಶರಣಾಗತಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ವಿಚಾರಣೆ ಬಳಿಕ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Karnataka Rains: ಜೂ.17ರವರೆಗೆ ಕರಾವಳಿಯಲ್ಲಿ ಭಾರಿ ಮಳೆ, Red Alert; ಸಮುದ್ರಕ್ಕಿಳಿಯಂತೆ ಮೀನುಗಾರರಿಗೆ ಎಚ್ಚರಿಕೆ!

Red Alert: ಜೂ.17ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

CM Siddaramaiah: 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಭಾಗಿ; ರಾಜ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಲು ಪ್ರಸ್ತಾವನೆ

16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಭಾಗಿ; ಕರ್ನಾಟಕದ ಪ್ರಸ್ತಾವನೆ ಸಲ್ಲಿಕೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನವದೆಹಲಿಯಲ್ಲಿ 16ನೇ ಹಣಕಾಸು ಆಯೋಗದಲ್ಲಿ ಭಾಗಿಯಾಗಿ, ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ. ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದಾರೆ.