ಬಂಗಾರ ಅಡವಿಟ್ಟು 30 ಕೋಟಿ ರು.ಯ ಚಹಾ ಸಾಮ್ರಾಜ್ಯ ಕಟ್ಟಿದ ಕಥೆ
Malgudi Amrutha Chaha: 2020ರಲ್ಲಿ ಇಡೀ ಜಗತ್ತನ್ನೇ ಕೋವಿಡ್ ಆವರಿಸಿದಾಗ ಶಿವರಾಜಕುಮಾರ್ ಅವರ ಬದುಕು ತಲ್ಲಣಿಸಿತು. ಕಂಪೆನಿಯಲ್ಲಿ ಉಂಟಾದ ಸ್ಟ್ರೈಕ್ ಹಾಗೂ ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಾಯಿತು. ಒಂದು ಹಂತದಲ್ಲಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲು ಮತ್ತು ಮನೆಗೆ ರೇಷನ್ ತರಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಯಿತು. ಕಣ್ಣೆದುರೇ ಕತ್ತಲು ಆವರಿಸಿದಾಗ ಅವರು ತಮ್ಮ ಬದುಕಿನ ಅತ್ಯಂತ ದೊಡ್ಡ ನಿರ್ಧಾರ ಕೈಗೊಂಡರು. ಮನೆಯಲ್ಲಿದ್ದ ಚಿನ್ನದ ಒಡವೆಯನ್ನು ಅಡವಿಟ್ಟರು. ಆ ಹಣವನ್ನು ಬಂಡವಾಳವಾಗಿಸಿ, ಚಹಾ ಉದ್ಯಮಕ್ಕೆ ಕೈಹಾಕಿದರು.