ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Pralhad Joshi: ಬೆಲೆ ಏರಿಕೆಯಲ್ಲೇ ಮಿಂದೇಳುತ್ತಿರುವ ಕಾಂಗ್ರೆಸ್‌ನಿಂದ ಯಾವ ಪುರುಷಾರ್ಥಕ್ಕೆ ಪ್ರತಿಭಟನೆ: ಜೋಶಿ ಪ್ರಶ್ನೆ

ಕಾಂಗ್ರೆಸ್‌ನಿಂದ ಯಾವ ಪುರುಷಾರ್ಥಕ್ಕೆ ಪ್ರತಿಭಟನೆ: ಜೋಶಿ ಪ್ರಶ್ನೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆಯಲ್ಲೇ ಮಿಂದೇಳುತ್ತಿರುವ ಕಾಂಗ್ರೆಸ್‌ ಅದ್ಯಾವ ಪುರುಷಾರ್ಥಕ್ಕೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಇಳಿಯುತ್ತಿದೆ? ರಾಜ್ಯದ ಆರ್ಥಿಕ ದುರಾವಸ್ಥೆಯನ್ನು ಜನರಿಂದ ಮರೆಮಾಚಲೇ? 48 ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ತನ್ನ ವಿರುದ್ಧವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

BBMP: ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ್‌ ರಾವ್‌, ಆಡಳಿತಗಾರರಾಗಿ ತುಷಾರ್‌ ಗಿರಿನಾಥ್‌ ಅಧಿಕಾರ ಸ್ವೀಕಾರ

ಬಿಬಿಎಂಪಿಯಲ್ಲಿ ಮಹೇಶ್ವರ ರಾವ್‌, ತುಷಾರ್‌ ಗಿರಿನಾಥ್‌ ಅಧಿಕಾರ ಸ್ವೀಕಾರ

ಬಿಬಿಎಂಪಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ, ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿನಾಥ್ ಅವರು ಕೂಡ ಅಧಿಕಾರ ಸ್ವೀಕರಿಸಿದರು. ಇತ್ತೀಚೆಗೆ ಸರಕಾರ ಈ ಕುರಿತು ಸೂಚನೆ ಹೊರಡಿಸಿತ್ತು.

Tumkur (Chikkanayakanahalli) News: ನಿಖಿತ್ ರಾಜ್ ಮೌರ್ಯ ಹುಟ್ಟುಹಬ್ಬ ಆಚರಣೆ

ನಿಖಿತ್ ರಾಜ್ ಮೌರ್ಯ ಹುಟ್ಟುಹಬ್ಬ ಆಚರಣೆ

ಭಗವಂತ ಅವರಿಗೆ ಇನ್ನು ಹೆಚ್ಚಿನ ಸಮಾಜ ಸೇವೆ ಸಲ್ಲಿಸಲು ಶಕ್ತಿ ನೀಡುವಂತೆ ಆಶೀರ್ವದಿಸಲಿ. ಬಡವರು, ಶೋಷಿತರು, ಅಲ್ಪ ಸಂಖ್ಯಾತರು, ಹಿಂದು ಳಿದ ವರ್ಗಗಳ ಧ್ವನಿಯಾಗಿ ಶ್ರಮಿಸುತ್ತಿರುವ ಅಣ್ಣನಿಗೆ ಇನ್ನು ಹೆಚ್ಚಿನ ಅಧಿಕಾರ ಪಡೆಯುವ ಮೂಲಕ ಸಮಾಜಸೇವೆಗೆ ಶಕ್ತಿ ಸಿಗಲಿ ಎಂದು ಅವರ ಅಭಿಮಾನಿಗಳು ಹಾರೈಸಿ ತಮ್ಮ ನೆಚ್ಚಿನ ನಾಯಕನ ಜನ್ಮ ದಿನಕ್ಕೆ ಶುಭಾಷಯ ತಿಳಿಸಿದರು.

Pralhad Joshi: ಬೆಂಗಳೂರು-ಬೆಳಗಾವಿ ಮಧ್ಯೆ ʼವಂದೇ ಭಾರತ್ʼ ರೈಲು; ಪ್ರಲ್ಹಾದ್‌ ಜೋಶಿ ಮನವಿಗೆ ಕೇಂದ್ರದಿಂದ ಸ್ಪಂದನೆ

ಬೆಂಗಳೂರು-ಬೆಳಗಾವಿ ಮಧ್ಯೆ ʼವಂದೇ ಭಾರತ್ʼ ರೈಲು

Vande Bharat Train: ಬೆಳಗಾವಿ-ಬೆಂಗಳೂರು ಮಧ್ಯೆ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಪ್ರಲ್ಹಾದ್‌ ಜೋಶಿ ಅವರು ಫೆ.10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏ. 28ರಂದು ಸಚಿವ ಜೋಶಿ ಅವರಿಗೆ ಪತ್ರ ಬರೆದು ತಮ್ಮ ಒತ್ತಾಸೆಯಂತೆ ಬೆಂಗಳೂರು-ಬೆಳಗಾವಿ ಗೆ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.

CM Siddaramaiah: ಭಯೋತ್ಪಾದನೆ ಮೂಲದಿಂದಲೇ ನಾಶವಾಗಬೇಕು: ಸಿದ್ದರಾಮಯ್ಯ

ಭಯೋತ್ಪಾದನೆ ಮೂಲದಿಂದಲೇ ನಾಶವಾಗಲಿ: ಸಿದ್ದರಾಮಯ್ಯ

CM Siddaramaiah: ಅನಿವಾರ್ಯವಾದರೆ ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆ ಮೂಲದಿಂದಲೇ ನಾಶವಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ಕೂಡಲ ಸಂಗಮ ಸಭಾಭವನದ ಬಳಿ ಅವರು ಮಾತನಾಡಿದರು.

CM Siddaramaiah: ಮನ್‌ ಕಿ ಬಾತ್‌ನಲ್ಲಿ ಚರ್ಚೆ ಇಲ್ಲ, ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ: ಸಿದ್ದರಾಮಯ್ಯ

ಮನುವಾದಿಗಳು ಬಸವತತ್ವದ ವಿರೋಧಿಗಳು: ಸಿದ್ದರಾಮಯ್ಯ

ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ. ಸರ್ವಾಧಿಕಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ. ಏಕಮುಖವಾಗಿ ʼನಾನು ಹೇಳಿದ್ದನ್ನು ನೀವು ಕೇಳಿʼ ಎನ್ನುವುದಷ್ಟೆ. ʼಮನ್ ಕಿ ಬಾತ್ʼ ರೀತಿ ನಾನು ಹೇಳ್ತೀನಿ, ನೀವು ಕೇಳಿ ಅನ್ನೋದು ಸರ್ವಾಧಿಕಾರಿ ಧೋರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

Karnataka Weather: ರಾಜ್ಯಾದ್ಯಂತ ಮುಂದಿನ 5 ದಿನ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

ರಾಜ್ಯಾದ್ಯಂತ ಮುಂದಿನ 5 ದಿನ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ʼಚಿನ್ನ ನಿನ್ನ ಮಗ ಪಾಸ್‌ ಆಗಿದ್ದಾನೆʼ; ದಿವಂಗತ ಪತ್ನಿ ನೆನಪಲ್ಲಿ ವಿಜಯ್‌ ರಾಘವೇಂದ್ರ ಪೋಸ್ಟ್

ದಿವಂಗತ ಪತ್ನಿ ನೆನಪಲ್ಲಿ ವಿಜಯ್‌ ರಾಘವೇಂದ್ರ ಪೋಸ್ಟ್

Vijay Raghavendra: 12ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ನಟ ವಿಜಯ್‌ ರಾಘವೇಂದ್ರ ಅವರ ಪುತ್ರ ಶೌರ್ಯ ವಿಜಯ್ ಪಾಸ್‌ ಆಗಿದ್ದು, ಈ ಸಂಭ್ರಮದಲ್ಲಿ ದಿವಂಗತ ಪತ್ನಿ ಸ್ಪಂದನಾ ಅವರನ್ನು ನೆನೆಯುತ್ತಾ ನಟ ವಿಜಯ್‌ ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Akshaya Tritiya 2025: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ವಿಶೇಷ ಆಭರಣಗಳ ಮಾರಾಟಕ್ಕೆ ನಟಿ ಅನುಷಾ ರೈ ಚಾಲನೆ

ವಿಶೇಷ ಆಭರಣಗಳ ಮಾರಾಟಕ್ಕೆ ನಟಿ ಅನುಷಾ ರೈ ಚಾಲನೆ

Akshaya Tritiya 2025: ಬೆಂಗಳೂರಿನ ಬಸವನಗುಡಿಯ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಭರಣಗಳ ಮಾರಾಟಕ್ಕೆ ವಿಧಾನ ಪರಿಷತ್ ಸದಸ್ಯ, ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿ.ಎ.ಶರವಣ ಹಾಗೂ ಬಿಗ್‌ ಬಾಸ್‌ ಖ್ಯಾತಿಯ ನಟಿ ಅನುಷಾ ರೈ ಬುಧವಾರ ಚಾಲನೆ ನೀಡಿದರು.

Chalavadi Narayanaswamy: ಕಾಂಗ್ರೆಸ್ಸಿನವರು ಭಾರತ ದೇಶಕ್ಕಿಂತ ಪಾಕಿಸ್ತಾನದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್‌ನ ವಿರುದ್ಧ ಜನಾಕ್ರೋಶ ಪ್ರಾರಂಭವಾಗಿದೆ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಸಿದ್ದರಾಮಯ್ಯನವರು ಪಾಕಿಸ್ತಾನದಲ್ಲೆಲ್ಲೋ ಜಾಗ ಹುಡುಕುತ್ತಿರಬೇಕು. ಮುಡಾ ಸೈಟ್ ಸಾಕಾಗದೆ ಅವರು ಪಾಕಿಸ್ತಾನದಲ್ಲಿ ಸೈಟ್ ಹುಡುಕಿ ಹೋಗಬಹುದು. ಸಿದ್ದರಾಮಯ್ಯನವರ ನಾಲಿಗೆ ಹೊಲಸಾಗಿದೆ. ಏನು ಬೇಕಾದರೂ ಮಾತನಾಡುತ್ತಾರೆ ಎಂದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಡಾ. ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಬಸವಣ್ಣನವರ ಪ್ರತಿಮೆಗೆ ಮಾಡಿದ ಡಾ. ಶರಣಪ್ರಕಾಶ್ ಪಾಟೀಲ್

ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿನ ಶ್ರೀ ಬಸವಣ್ಣನವರ ಪ್ರತಿಮೆಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

Davanagere News: ದಾವಣಗೆರೆಯ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ದಾವಣಗೆರೆಯ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

Davanagere News: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ.ಆರ್.ಶೇಜೇಶ್ವರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Director Murali Mohan: ಉಪೇಂದ್ರ ಆಪ್ತ ಮುರಳಿ ಮೋಹನ್‌ಗೆ ಕಿಡ್ನಿ ಸಮಸ್ಯೆ; ಚಿಕಿತ್ಸೆಗೆ ನೆರವು ನೀಡಲು ಮನವಿ

ಉಪೇಂದ್ರ ಆಪ್ತ ಮುರಳಿ ಮೋಹನ್‌ಗೆ ಕಿಡ್ನಿ ಸಮಸ್ಯೆ; ನೆರವಿಗಾಗಿ ಮೊರೆ

Director Murali Mohan: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಅವರ ಗರಡಿಯಲ್ಲಿ ಪಳಗಿದ ಶಿಷ್ಯ ಮುರಳಿ ಮೋಹನ್‌, ರಿಯಲ್‌ ಸ್ಟಾರ್‌ ಉಪೇಂದ್ರ ಅವರಿಗೆ ಆಪ್ತ ಸ್ನೇಹಿತ. ಕನ್ನಡ ಚಿತ್ರರಂಗದಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇದೀಗ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಇವರು, ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಲು ಮನವಿ ಮಾಡಿದ್ದಾರೆ.

Pralhad Joshi: ಕರ್ನಾಟಕದ ಮೂವರಿಗೆ ಪದ್ಮಶ್ರೀ ಪುರಸ್ಕಾರ;  ಸನ್ಮಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಕನ್ನಡ ನಾಡಿನ ಮೂವರು ಪದ್ಮಶ್ರೀ ಪುರಸ್ಕೃತರಿಗೆ ಸನ್ಮಾನ

Pralhad Joshi: ಕನ್ನಡ ನಾಡಿನ ಪದ್ಮಶ್ರೀ ಪುರಸ್ಕೃತರಾದ ಕನ್ನಡ ಚಿತ್ರರಂಗದ ಸಾಹಸ ನಿರ್ದೇಶಕರೆಂದೇ ಖ್ಯಾತಿ ಪಡೆದ ಡಾ.ಹಾಸನ ರಘು, ಗೊಂಬೆಯಾಟ ಕಲಾವಿದೆ, ಶತಾಯುಷಿ ಕೊಪ್ಪಳ ತಾಲೂಕಿನ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಹಾಗೂ ಕ್ಯಾನ್ಸರ್ ರೋಗಿಗಳ ಪಾಲಿಗೆ ʼವೈದ್ಯೋ ನಾರಾಯಣ ಹರಿʼ ಎನ್ನುವಂತೆ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯ ಡಾ.ದೇಶಮಾನೆ ವಿಜಯಲಕ್ಷ್ಮಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ, ಅಭಿನಂದಿಸಿದರು.

CM Siddaramaiah: ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

CM Siddaramaiah: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿ ಕೊಲೆ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Murder Case: ನೈಜೀರಿಯದ ಮಹಿಳೆ ಬೆಂಗಳೂರಿನಲ್ಲಿ ಬರ್ಬರ ಕೊಲೆ, ಡ್ರಗ್ಸ್‌ ಜಾಲದ ಶಂಕೆ

ನೈಜೀರಿಯದ ಮಹಿಳೆ ಬೆಂಗಳೂರಿನಲ್ಲಿ ಬರ್ಬರ ಕೊಲೆ, ಡ್ರಗ್ಸ್‌ ಜಾಲದ ಶಂಕೆ

ಬೆಂಗಳೂರಿನಲ್ಲಿ ನೈಜೀರಿಯದ ಅನೇಕ ಮಂದಿ ವಾಸ್ತವ್ಯವಾಗಿದ್ದು, ಡ್ರಗ್ಸ್‌ ಪ್ರಕರಣಗಳಲ್ಲಿ ಇವರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಬೀಳುತ್ತಿದ್ದಾರೆ. ಸೈಬರ್‌ ಕ್ರೈಮ್‌ ಪ್ರಕರಣಗಳಲ್ಲಿಯೂ ಇವರ ಕೈವಾಡ ಆಗಾಗ ಕಂಡುಬರುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಡ್ರಗ್ಸ್‌ ಅಪರಾಧ ಜಾಲದ ಹಿನ್ನೆಲೆಯೂ ಈ ಕೊಲೆ (Murder Case) ಪ್ರಕರಣದ ಹಿಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Mother Dairy milk price Hike: ಗ್ರಾಹಕರಿಗೆ ಶಾಕ್; ಇಂದಿನಿಂದ ಮದರ್ ಡೈರಿ ಹಾಲಿನ ಬೆಲೆ 2 ರೂ. ಹೆಚ್ಚಳ

ಗ್ರಾಹಕರಿಗೆ ಶಾಕ್; ಇಂದಿನಿಂದ ಮದರ್ ಡೈರಿ ಹಾಲಿನ ಬೆಲೆ 2 ರೂ. ಹೆಚ್ಚಳ

Mother Dairy milk price Hike: ಏಪ್ರಿಲ್ 30 ರಿಂದ ಎಲ್ಲಾ ವಿಧದ ಹಾಲಿಗೆ ಬೆಲೆ ಏರಿಕೆ ಅನ್ವಯವಾಗಲಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಲೀಟರ್‌ಗೆ 4-5 ರೂ.ಗಳಷ್ಟು ಹೆಚ್ಚಿರುವ ಖರೀದಿ ವೆಚ್ಚದಲ್ಲಿನ ಗಮನಾರ್ಹ ಹೆಚ್ಚಳವನ್ನು ಸರಿದೂಗಿಸಲು ಈ ಬೆಲೆ ಪರಿಷ್ಕರಣೆ ಅಗತ್ಯವಾಗಿದೆ ಎಂದು ಮದ‌ರ್ ಡೈರಿ ಅಧಿಕಾರಿ ತಿಳಿಸಿದ್ದಾರೆ.

Laxmi Hebbalkar: ಬಸವಣ್ಣನವರ ತತ್ವ, ಆದರ್ಶಗಳು ಎಲ್ಲರಿಗೂ ಮಾದರಿ- ಲಕ್ಷ್ಮೀ ಹೆಬ್ಬಾಳ್ಕರ್

ಬಸವಣ್ಣನವರ ತತ್ವ, ಆದರ್ಶಗಳು ಎಲ್ಲರಿಗೂ ಮಾದರಿ: ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಎಂದೆಂದಿಗೂ ಶಾಶ್ವತವಾಗಿ ಉಳಿಯುವಂತಹ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು 12ನೇ ಶತಮಾನದಲ್ಲೇ ಸಾರಿದ ಮಹಾನ್ ವ್ಯಕ್ತಿ ಬಸವೇಶ್ವರರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Beer prices hike: ಮತ್ತೆ ಬಿಯರ್‌ ದರ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ; ಎಷ್ಟು ಏರಿಕೆಯಾಗಲಿದೆ?

ಮತ್ತೆ ಬಿಯರ್‌ ದರ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Beer prices hike: ರಾಜ್ಯದಲ್ಲಿ ಬಿಯರ್ ಮೇಲಿನ ತೆರಿಗೆ ಉತ್ಪಾದನಾ ವೆಚ್ಚದ ಶೇ.195 ರಷ್ಟಿದೆ. ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 205ಕ್ಕೆ ಹೆಚ್ಚಿಸುವ ಬಗ್ಗೆ ರಾಜ್ಯದ ಹೊಸ ಕರಡು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಬಿಯರ್ ದರ ಭಾರಿ ಹೆಚ್ಚಳವಾಗುವ ಸಾಧ್ಯತೆ ಇದೆ.

Murder Case: ಅನೈತಿಕ ಸಂಬಂಧ ಶಂಕೆ; 3 ವರ್ಷದ ಮಗು ಎದುರೇ ದಂಪತಿಯ ಬರ್ಬರ ಹತ್ಯೆ!

3 ವರ್ಷದ ಮಗು ಎದುರೇ ದಂಪತಿಯ ಬರ್ಬರ ಹತ್ಯೆ!

Murder Case: ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರು ಪಹಾಡ ಬಳಿ ಜೋಡಿ ಕೊಲೆ ನಡೆದಿದೆ. ಪೊಲೀಸರು ಸ್ಥಳ ಪರಿಶೀಲಿಸಿ, ಕೊಲೆ ಮಾಡಿದ ಇಬ್ಬರು ಯುವಕರು ಹಾಗೂ ಆರೋಪಿಯ ಸಹೋದರಿ ಸೇರಿ ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುರುಗಳನ್ನು ಆಧರಿಸುವುದು ಭಾರತೀಯ ಸಂಸ್ಕೃತಿಯ ರೂಪವಾಗಿದೆ : ಶಾಸಕ ಪ್ರದೀಪ್ ಈಶ್ವರ್

ಗುರುಗಳನ್ನು ಆಧರಿಸುವುದು ಭಾರತೀಯ ಸಂಸ್ಕೃತಿಯ ರೂಪವಾಗಿದೆ

ನಗರದ ಕಂದವಾರ ಬಾಗಿಲು ಕೆ.ವಿ.ಕನ್ನಡ ಮಾಧ್ಯಮ ಶಾಲೆಯಲ್ಲಿ 44 ವರ್ಷಗಳ ಕಾಲ ಸಹಶಿಕ್ಷಕಿ ಯಾಗಿ ಸೇವೆ ಸಲ್ಲಿಸಿ ಸಾವಿರಾರು ಮಂದಿ ವಿದ್ಯಾರ್ಥಿಗ ಬಾಳಿಗೆ ಬೆಳಕು ತೋರಿದ ಪಿ.ವಿ.ವೀಣಾ ಅವರಿಗೆ ತಮ್ಮ ಏಕೈಕಪುತ್ರ ನಂದಕಿಶೋರ್ ನಿವೃತ್ತಿಯ ನಂತರದ ಬಾಳಿಗೆ ಶುಭಕೋರುವ ಸಲುವಾಗಿ ಅಭಿನಂದನ ಸಮಾರಂಭ ಏರ್ಪಡಿಸಿ ಏರ್ಪಡಿಸಿ ವಿದ್ಯಾರ್ಥಿಗಳು,ಶಿಕ್ಷಣ ತಜ್ಞರು, ಉದ್ಯೋಗ ನೀಡಿದ ಶಿಕ್ಷಣ ಸಂಸ್ಥೆಯ ಮಾಲಿಕರು,ತಮ್ಮ ಜತೆಗೆ ಕೆಲಸ ಮಾಡಿದ ಸಹೋದ್ಯೋಗಿಗಳು ಸೇರಿದಂತೆ ಅಪಾರ ಬಂಧುಬಳಗವನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿ ತಾಯಿಯ ಋಣವನ್ನು ತೀರಿಸಿಕೊಳ್ಳುತ್ತಿರುವುದು ಸಂತೋಷ ತಂದಿದೆ

Lawyer Jagadish: 93 ದಿನಗಳ ಬಳಿಕ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್ ಜೈಲಿನಿಂದ ರಿಲೀಸ್

93 ದಿನಗಳ ಬಳಿಕ ಲಾಯರ್​ ಜಗದೀಶ್ ಜೈಲಿನಿಂದ ರಿಲೀಸ್

Lawyer Jagadish: ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಜನವರಿ 25ರಂದು ಬಂಧನವಾಗಿದ್ದ ಲಾಯರ್‌ ಜಗದೀಶ್‌, ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ ಎಂದು ತಿಳಿದುಬಂದಿದೆ.

ಪಹಲ್ಗಾಮ ಉಗ್ರರ ಕುಕೃತ್ಯವನ್ನು ಬಿಜೆಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ : ಪ್ರಧಾನ ಕಾರ್ಯದರ್ಶಿ ಕೊಂಡೇನಹಳ್ಳಿ ಮುರಳಿ

ಉಗ್ರರ ಕುಕೃತ್ಯವನ್ನು ಬಿಜೆಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದು ರಕ್ಷಣಾ ಇಲಾಖೆಯ ವೈಫಲ್ಯ.ಪಾಕಿಸ್ಥಾನದ ಮೇಲೆ ಯುದ್ದ ಅನಿವಾರ್ಯವಲ್ಲ ಎಂದು ಹೇಳಿಕೆ ನೀಡಿರುವುದು ಗಡಿಯಲ್ಲಿರುವ ನಮ್ಮ ಯೋಧರ ಆತ್ಮಸ್ತೈರ್ಯವನ್ನು ಕುಗ್ಗಿಸುವಂತಿದೆ.ಈವಿಚಾರ ಪಾಕಿಸ್ಥಾನದ ಟಿ.ವಿ.ಮಾಧ್ಯಮಗಳಲ್ಲಿ ಕೂಡ ಬಿತ್ತರ ವಾಗಿರುವುದು ಭಾರತೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಜವಾಬ್ದಾರಿ ಯುತ ಸ್ಥಾನದಲ್ಲಿ ರುವವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.

BJP MLAs' suspension: 18 ಬಿಜೆಪಿ ಶಾಸಕರ ಅಮಾನತು ಮರು ಪರಿಶೀಲಿಸಲು ಸಿಎಂಗೆ ರಾಜ್ಯಪಾಲರ ಪತ್ರ

ಬಿಜೆಪಿ ಶಾಸಕರ ಅಮಾನತು ಮರು ಪರಿಶೀಲನೆಗೆ ರಾಜ್ಯಪಾಲರ ಸಲಹೆ

BJP MLAs' suspension: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ರಾಜ್ಯ ರಾಜ್ಯಪಾಲರನ್ನು ಭೇಟಿ ಯಾದ ಬಿಜೆಪಿ ನಿಯೋಗ ಅಮಾನತು ಹಿಂಪಡೆಯಲು ಕ್ರಮವಹಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಸಿದ 24 ಗಂಟೆ ಕಳೆಯುವುದರೊಳಗೆ ರಾಜ್ಯಪಾಲರು ಸಿಎಂ ಹಾಗೂ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.