ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಒಂದು ವರ್ಷದ ನೋವಿಗೆ ಅಂತ್ಯ: ಪ್ರಗತಿಪರ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಯಿಂದ 48 ವರ್ಷದ ವ್ಯಕ್ತಿಗೆ ಹೊಸ ಜೀವನ

ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಯಿಂದ 48 ವರ್ಷದ ವ್ಯಕ್ತಿಗೆ ಹೊಸ ಜೀವನ

ಕಳೆದ ಒಂದು ವರ್ಷದಲ್ಲಿ ಒಂದೇ ಸಮಸ್ಯೆಗೆ ಸಂಬಂಧಿಸಿದಂತೆ ಹಲವಾರು ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರೂ, ಯಾವುದೇ ಪ್ರಮುಖ ಸುಧಾರಣೆ ಕಂಡಿರಲಿಲ್ಲ. ಮರುಮರು ನೋವು, ನಡೆಯಲು ಆಗದಿ ರುವುದು ಮತ್ತು ಸ್ಪಷ್ಟವಾದ ಚಿಕಿತ್ಸೆ ದೊರೆಯದಿರುವುದು ಅವರಿಗೆ ತೀವ್ರ ಬೇಸರ ಉಂಟು ಮಾಡಿತ್ತು. ಈ ಸಂದರ್ಭದಲ್ಲೇ ಅವರು ಮಯ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಂದರು.

Kaveri Water: ಬೆಂಗಳೂರು ಜನತೆಯ ಗಮನಕ್ಕೆ : ಈ ಏರಿಯಾಗಳಲ್ಲಿ ಇಂದು ನಾಳೆ ಕಾವೇರಿ ನೀರು ಪೂರೈಕೆ ಇಲ್ಲ

ಬೆಂಗಳೂರು ಜನತೆ ಗಮನಕ್ಕೆ: ಈ ಏರಿಯಾಗಳಲ್ಲಿ ಇಂದು ನಾಳೆ ಕಾವೇರಿ ನೀರು ಇಲ್ಲ

ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ಒಟ್ಟು 24 ಗಂಟೆ ಹಲವೆಡೆ ನೀರು ಸ್ಥಗಿತಗೊಳಿಸಲಾಗುತ್ತಿದೆ.

Road Acident: ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

CT Ravi: ವಿಧಾನ ಪರಿಷತ್‌ನಲ್ಲಿ ಒಂದು ದಿನದ ಮಟ್ಟಿಗೆ ಸಿಟಿ ರವಿ ಅಮಾನತು

ವಿಧಾನ ಪರಿಷತ್‌ನಲ್ಲಿ ಒಂದು ದಿನದ ಮಟ್ಟಿಗೆ ಸಿಟಿ ರವಿ ಅಮಾನತು

ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್ ಅವರಿಗೆ ಪಾಕಿಸ್ತಾನದ ನಾಲಿಗೆ ಎಂದು ಹೇಳಿದ್ದ ಸಿಟಿ ರವಿಯವರು ಕ್ಷಮೆಯಾಚನೆ ಮಾಡಬೇಕೆಂದು ಕಾಂಗ್ರೆಸ್‌ ಸದಸ್ಯರು ಪಟ್ಟು ಹಿಡಿದಿದ್ದರು. ಈ ಸಂಬಂಧ ರವಿ ಕೂಡಲೇ ಸದನಕ್ಕೆ ಹಾಜರಾಗಬೇಕೆಂದು ಸಭಾಪತಿ ಹೊರಟ್ಟಿ ಸೂಚಿಸಿದ್ದರು. ಆದರೂ ಸಿಟಿ ರವಿ ಬರದಿದ್ದರಿಂದ ಸಭಾಪತಿ ಈ ಕ್ರಮ ಕೈಗೊಂಡಿದ್ದಾರೆ.

Namma Metro ticket price hike: ಬೆಂಗಳೂರಿಗರಿಗೆ ಮತ್ತೆ ಬರೆ, ನಮ್ಮ ಮೆಟ್ರೋ ಪ್ರಯಾಣ ದರ ಶೇ.5 ಹೆಚ್ಚಳ

ಬೆಂಗಳೂರಿಗರಿಗೆ ಮತ್ತೆ ಬರೆ, ನಮ್ಮ ಮೆಟ್ರೋ ಪ್ರಯಾಣ ದರ ಶೇ.5 ಹೆಚ್ಚಳ

ಕಳೆದ ಕೆಲವು ದಿನಗಳ ಹಿಂದಷ್ಟೇ ನಡೆದ ಬೆಂಗಳೂರು ಮೆಟ್ರೋ ರೈಲು ನಿಗಮದ ಉನ್ನತ ಮಟ್ಟದ ಬೋರ್ಡ್ ಸಭೆಯಲ್ಲಿ ದರ ಏರಿಕೆಯ ಕುರಿತು ಸುದೀರ್ಘ ಚರ್ಚೆ ನಡೆದಿತ್ತು. ವಿದ್ಯುತ್ ವೆಚ್ಚದ ಹೆಚ್ಚಳ, ನಿರ್ವಹಣಾ ವೆಚ್ಚ ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳದ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂದು ಬಿಎಂಆರ್‌ಸಿಎಲ್ ಪ್ರಸ್ತಾವನೆ ಸಲ್ಲಿಸಿತ್ತು.

Gubbi News: ಒಳ್ಳೆ ಕೆಲಸಕ್ಕೆ ಕಲ್ಲು ಹಾಕುವವರೇ ಹೆಚ್ಚು : ಭಾರತಿ ಶ್ರೀನಿವಾಸ್

ಒಳ್ಳೆ ಕೆಲಸಕ್ಕೆ ಕಲ್ಲು ಹಾಕುವವರೇ ಹೆಚ್ಚು : ಭಾರತಿ ಶ್ರೀನಿವಾಸ್

ಖಾಸಗಿ ಡೈರಿಗಳು ಪ್ರತಿದಿನ ಹಣ ಪಾವತಿ ಮಾಡುತ್ತದೆ ಎಂಬ ಕಾರಣಕ್ಕೆ ಖಾಸಗಿ ಡೈರಿಯತ್ತ ಹೋಗು ತ್ತಿದ್ದ ರೈತರಿಗೆ ಈಗ ನಂದಿನಿ ಒಕ್ಕೂಟದ ಕೆಲಸ ಅರಿವಿಗೆ ಬಂದಿದೆ. ಸರ್ಕಾರ ಸ್ವಾಮ್ಯದ ಕೆಎಂಎಫ್ ಹೈನುಗಾರಿಕೆಗೆ ಹತ್ತು ಹಲವು ಕಾರ್ಯಕ್ರಮ ರೂಪಿಸಿದೆ. ನಂದಿನಿ ಹಾಲಿನ ಡೈರಿ ಷೇರುದಾರರಿಗೆ ಆರೋಗ್ಯ ವಿಮೆ ಜಾರಿ ಮಾಡಿದೆ. ಈ ಹಿನ್ನಲೆ 25 ಸಾವಿರ ರೂಗಳ ಸಹಾಯಧನ, ಮರಣ ಹೊಂದಿದಲ್ಲಿ 50 ಸಾವಿರ ರೂ ಪರಿಹಾರ ಧನ ಸಹ ಸಿಗಲಿದೆ

VB-G RAM G act: ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ' (MGNREGA) ಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

No Mining: ತಿರುಮಣಿ ವ್ಯಾಪ್ತಿಯ ಸರಕಾರಿ ಭೂಮಿಯಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗೆ ರೈತರ ಮನವಿ

ಕಲ್ಲು ಗಣಿಗಾರಿಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗೆ ರೈತರ ಮನವಿ

ರೈತರು ಈಗಾಗಲೇ ಸರ್ಕಾರಿ ಫಾರಂ ನಂಬರ್ 50, 53 ಹಾಗೂ 57ರ ಅಡಿಯಲ್ಲಿ ಅಕ್ರಮ–ಸಕ್ರಮ ಮತ್ತು ಬಗರ್ ಹುಕುಂ ಭೂಮಿ ಮಂಜೂರಾತಿ ಗಾಗಿ ಅರ್ಜಿಗಳನ್ನು ಸಲ್ಲಿಸಿ ದಾಖಲೆಗಳನ್ನು ಹೊಂದಿದ್ದಾರೆ. ಈ ಜಮೀನನ್ನು ಹೊರತುಪಡಿಸಿ ನಮಗೆ ಬೇರೆ ಯಾವುದೇ ಜೀವನೋಪಾಯವಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಉಸಿರಾಟ ತೊಂದರೆ; ಆಕ್ಸಿಜನ್ ಸಿಲಿಂಡರ್‌ ಸಮೇತ ತೆರಳಿ ಪತ್ನಿಗೆ ಮಾಯಕ್ಕ ದೇವಿ ದರ್ಶನ ಮಾಡಿಸಿದ ಪತಿ

ಆಕ್ಸಿಜನ್ ಸಿಲಿಂಡರ್‌ ಸಮೇತ ತೆರಳಿ ಪತ್ನಿಗೆ ದೇವಿಯ ದರ್ಶನ ಮಾಡಿಸಿದ ಪತಿ

ಪತ್ನಿಗೆ ಉಸಿರಾಟ ತೊಂದರೆ ಇದ್ದರೂ ಆಕ್ಸಿಜನ್ ಸಿಲಿಂಡರ್ ಜತೆಗೆ ಮಹಾರಾಷ್ಟ್ರದ ಪಂಢರಪುರದ ದಂಪತಿ 176 ಕಿ.ಮೀಟರ್ ಸಂಚರಿಸಿ, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದ ಘಟನೆ ಬುಧವಾರ ನಡೆದಿದೆ.

Bagepally News: ಹೊಸಹುಡ್ಯ ಗ್ರಾಮದ ಎಸ್‌ಆರ್‌ಟಿ ವಿಧಾನದಲ್ಲಿ ಸಿರಿಧಾನ್ಯಗಳ ಬೆಳೆಸುವಿಕೆ ಹಾಗೂ ಪ್ರಾಥಮಿಕ ಸಂಸ್ಕರಣೆ ಕುರಿತು ಪ್ರಾಯೋಗಿಕ ಕಾರ್ಯಾಗಾರ

ಸಿರಿಧಾನ್ಯಗಳ ಬೆಳೆಸುವಿಕೆ, ಪ್ರಾಥಮಿಕ ಸಂಸ್ಕರಣೆ: ಪ್ರಾಯೋಗಿಕ ಕಾರ್ಯಾಗಾರ

ಸಿರಿಧಾನ್ಯಗಳನ್ನು ಬೆಳೆಯುವ ರೈತರ ಸಂಖ್ಯೆ ಕಡಿಮೆ ಆಗುತ್ತಿದೆ. ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಾ ಗುವುದರಿಂದ ರೈತರ ಆರ್ಥಿಕ ಸ್ಥಿತಿ ಬಲಗೊಳ್ಳುವುದಲ್ಲದೆ, ಜನರ ಆರೋಗ್ಯ ಕಾಪಾಡುವಲ್ಲಿ ಮಹ ತ್ತರ ಪಾತ್ರ ನಿರ್ವಹಿಸಲಿದೆ. ಆದರೆ ಇಂದಿನ ದಿನಗಳಲ್ಲಿ ರೈತರು ಸಿರಿ ಧಾನ್ಯಗಳನ್ನು ಬೆಳೆಯುವುದು ವಿರಳವಾಗಿದೆ.

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರಗಳ ಅಭಿವೃದ್ಧಿಪಡಿಸಲು ಅಮೆಜಾನ್ ಮತ್ತು ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರಕ್ಕೆ ಸಹಭಾಗಿತ್ವ

ಐಐಟಿ ರೂರ್ಕಿಯ ಪೇಪರ್ ಮತ್ತು ಪ್ಯಾಕೇಜಿಂಗ್ ಟೆಕ್ನಾಲಜಿ ವಿಭಾಗದೊಂದಿಗಿನ ಈ ಸಹಭಾಗಿ ತ್ವವು, ಮುಂದಿನ 15 ತಿಂಗಳ ಅವಧಿಯಲ್ಲಿ ಪ್ರಯೋಗಾಲಯ ಮಟ್ಟದ ಅಭಿವೃದ್ಧಿ ಮತ್ತು ಪರೀಕ್ಷೆಯೊಂದಿಗೆ ಪ್ರಾರಂಭವಾಗಲಿದೆ. ಈ ಪರೀಕ್ಷೆಗಳು ಯಶಸ್ವಿಯಾದಲ್ಲಿ, ಮುಂದಿನ ವರ್ಷದ ಮಧ್ಯಭಾಗ ಅಥವಾ ಅಂತ್ಯದ ವೇಳೆಗೆ ಕೈಗಾರಿಕಾ ಮಟ್ಟದ ಪ್ರಯೋಗಗಳು, ಪ್ರಕ್ರಿಯೆ ದೃಢೀಕರಣ ಮತ್ತು ವಾಣಿಜ್ಯ ಉತ್ಪಾದನೆಗೆ ಅಮೆಜಾನ್ ಮುಂದಾಗಲಿದೆ

Bagepally News: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವುದು ಅತ್ಯಗತ್ಯ: ಶಿಕ್ಷಕ ವೆಂಕಟೇಶ್ವರಲು

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವುದು ಅತ್ಯಗತ್ಯ

ಅರಣ್ಯ, ವನ್ಯಜೀವಿ ಸಂಕುಲ ಸಂರಕ್ಷಣೆ, ಮಾಲಿನ್ಯ ಮುಕ್ತ ಪರಿಸರ, ಭವಿಷ್ಯಕ್ಕೆ ಅರಣ್ಯಗಳ ಉಳಿವು ಅತ್ಯವಶ್ಯ ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸುವುದು, ಪ್ರತಿಯೊಬ್ಬರನ್ನು ಭವಿಷ್ಯದ ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ದೃಷ್ಟಿಯಿಂದ ಶಾಲಾ ಮಕ್ಕಳಿಗೆ ಅರಿವು ಮೂಡಿಸುವುದು ನಿಸರ್ಗ ಇಕೋ ಕ್ಲಬ್ ನ ಉದ್ದೇಶವಾಗಿದೆ

ತಲಕಾಯಲಬೆಟ್ಟ ಲಕ್ಷ್ಮೀವೆಂಕಟೇಶ್ವರಸ್ವಾಮಿಯ ಬ್ರಹ್ಮರಥೋತ್ಸವ : ಮೀನಾಕ್ಷಿ ಫೌಂಡೇಶನ್ ಸೇವಾಕಾರ್ಯದಲ್ಲಿನ ಕೆ.ಹೆಚ್.ಭಾಗಿ ರಾಜಕೀಯದ ಲೇಪನ

ತಲಕಾಯಲಬೆಟ್ಟ ಲಕ್ಷ್ಮೀವೆಂಕಟೇಶ್ವರಸ್ವಾಮಿಯ ಬ್ರಹ್ಮರಥೋತ್ಸವ

ಸಮಾಜ ಸೇವಕ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ನಡೆದ ಅನ್ನದಾನ ಕಾರ್ಯಕ್ರಮಕ್ಕೆ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾಗವಹಿಸಿ, ಭಕ್ತಾದಿಗಳಿಗೆ ಒಟ್ಟಾಗಿ ಅನ್ನದಾನಕ್ಕೆ ಚಾಲನೆ ನೀಡಿರುವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

ಸಂಸತ್ತಿನಲ್ಲಿ‌ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಧ್ವನಿ ಅಡಗಿಸುವ ಯತ್ನ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ

ಸಂಸತ್ತಿನಲ್ಲಿ‌ ರಾಹುಲ್‌ ಗಾಂಧಿ ಧ್ವನಿ ಅಡಗಿಸುವ ಯತ್ನ: ಸಿಎಂ ಆಕ್ರೋಶ

ರಾಷ್ಟ್ರಪತಿಯ ಭಾಷಣದ ಮೇಲೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವನ್ನೇ ನಿರಾಕರಿಸಿರುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದ ಕ್ರಮವಾಗಿದೆ. ಮೋದಿ ಸರ್ಕಾರವು ಒತ್ತಡ ತಂತ್ರದ ಮೂಲಕ ಎದುರಾಳಿಗಳ ಧ್ವನಿಯನ್ನೇ ಹತ್ತಿಕ್ಕಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಗುರುಮಠಕಲ್‌ನಲ್ಲಿ ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ; ಕೇಸ್ ದಾಖಲು

ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ

Gurumitkal News: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ತಾಯಿ-ಮಗನ ಮೇಲೆ ಹಲ್ಲೆ ನಡೆದಿತ್ತು. ಘಟನೆ ಖಂಡಿಸಿ ಶಿವ ಮಾಲಾಧಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿದೆ.

ಸಂಪಾಯಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ದೈವವಾಣಿಯ ಅರ್ಥವೇನು?

ಸಂಪಾಯಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕವಾಣಿಯ ಅರ್ಥವೇನು?

Mylara Lingeshwara Karnika 2026: ಜನಪದ ಸಂಸ್ಕೃತಿಯಲ್ಲಿ ದೈವವಾಣಿಗೆ ಅಪಾರವಾದ ಗೌರವವಿದೆ. ಅಂತಹ ದೈವವಾಣಿಗಳಲ್ಲಿ ಪ್ರಸಿದ್ಧವಾದುದು ಮೈಲಾರದ 'ಮೈಲಾರ ಕಾರ್ಣಿಕ'. ಪ್ರತಿ ವರ್ಷ ಭರತ ಹುಣ್ಣಿಮೆಯ ಸಂದರ್ಭದಲ್ಲಿ ಆಚರಣೆ ಮಾಡಲಾಗುತ್ತದೆ. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.

ಬೆಂಗಳೂರಿನ ಹೊಸ ಕಚೇರಿ ತೆರೆಯಲು ಮುಂದಾದ ಗೂಗಲ್‌ನ ಪೋಷಕ ಕಂಪೆನಿ ಆಲ್ಫಾಬೆಟ್

ಬೆಂಗಳೂರಿನಲ್ಲಿ ಕಚೇರಿ ತೆರೆಯಲು ಆಲ್ಫಾಬೆಟ್ ನಿರ್ಧಾರ

ಗೂಗಲ್‌ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಆಸೆ ಇರುವವರಿಗೆ ಒಂದು ಶುಭ ಸುದ್ದಿ. ಗೂಗಲ್‌ನ ಪೋಷಕ ಕಂಪೆನಿ ಆಲ್ಫಾಬೆಟ್ ಇದೀಗ ಬೆಂಗಳೂರಿನಲ್ಲಿ ಹೊಸ ಕಚೇರಿ ತೆರೆಯಲು ಮುಂದಾಗಿದೆ. ಇದಕ್ಕಾಗಿ ವೈಟ್‌ಫೀಲ್ಡ್ ಟೆಕ್ ಕಾರಿಡಾರ್‌ನಲ್ಲಿ ಮೂರು ಕಟ್ಟಡಗಳನ್ನು ಗುತ್ತಿಗೆ ಪಡೆಯಲು ನಿರ್ಧರಿಸಿದೆ. ಒಂದು ಕಟ್ಟಡವು ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎನ್ನಲಾಗಿದೆ.

ಪ್ರೀಮಿಯಮೈಸೇಶನ್, ವೆಲ್ನೆಸ್ ಅಳವಡಿಕೆ ಮತ್ತು ಮೆಟ್ರೋ ಅಲ್ಲದ ನಗರಗಳ ಬಲವಾದ ಭಾಗವಹಿಸುವಿಕೆಯಿಂದ ಹೆಚ್ಚಿದ ಬೇಡಿಕೆ

ಅಮೆಜಾನ್ ಇಂಡಿಯಾದ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2026

ವಿಶಾಲವಾದ ಆಯ್ಕೆಗಳು, ವೇಗದ ವಿತರಣೆ ಮತ್ತು ಸುಗಮ ಅನುಭವದಿಂದ ಪ್ರೇರಿತರಾದ ಗ್ರಾಹಕರು, ಪ್ರೀಮಿಯಂ ಉತ್ಪನ್ನಗಳಿಗೆ ಅಪ್‌ಗ್ರೇಡ್ ಆಗಿದ್ದಾರೆ, ಆರೋಗ್ಯಕರ ಜೀವನಶೈಲಿಯ ಆಯ್ಕೆಗಳನ್ನು ಅಳವಡಿಸಿಕೊಂಡಿದ್ದಾರೆ ಮತ್ತು ಆಕಾಂಕ್ಷೆಯ ಹಾಗೂ ಅಗತ್ಯ ವಸ್ತುಗಳೆರಡನ್ನೂ ಖರೀದಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರೈಮ್ ಗ್ರಾಹಕರಿಂದ ಬಂದ 'ಸೇಮ್-ಡೇ ಡೆಲಿವರಿ' ಆರ್ಡರ್‌ಗಳು 2.5 ಪಟ್ಟು ಹೆಚ್ಚಾಗಿವೆ

ಸಿದ್ದಾಪುರ ಕೊಲೆ ಕೇಸ್‌; ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾಗೆ 8 ದಿನ ನ್ಯಾಯಾಂಗ ಬಂಧನ

ಕೊಲೆ ಪ್ರಕರಣ; ಕಮಲಾಕರ ಭಟ್, ಸುಚಿತ್ರಾಗೆ ನ್ಯಾಯಾಂಗ ಬಂಧನ

ಎರಡು ಮಕ್ಕಳ ತಾಯಿ ಸುಚಿತ್ರಾ ಜತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ನಡೆದ ಗಲಾಟೆ ವೇಳೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಂಧನವಾದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರ ಜತೆ ಎಚ್‌.ಡಿ. ಕುಮಾರಸ್ವಾಮಿ ಮಾತುಕತೆ

ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್‌ಗೆ ಗ್ರೀನ್‌ ಸಿಗ್ನಲ್‌

ಈಗಾಗಲೇ ರಾಜ್ಯಕ್ಕೆ 2 ಹೈ ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ.

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಬಾರ್‌ ಲೈಸೆನ್ಸ್ ನೀಡಲು 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಡಿಸಿ ಅಮಾನತು

Bribe case: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದರ ಬೆನ್ನಲ್ಲೇ ಮದ್ಯದಂಗಡಿ ಲೈಸೆನ್ಸ್ ನೀಡಲು ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯದ ಅಬಕಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ವಂಟಮೂರಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ವಂಟಮೂರಿ ಮಹಿಳೆಗೆ ಹಲ್ಲೆ ಕೇಸ್‌; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

Vantamuri case: 2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.6, 7ರಂದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.6, 7ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಅಬಕಾರಿ ಸಚಿವರ ರಾಜೀನಾಮೆ ಪಡೆದು ಭ್ರಷ್ಟಾಚಾರದ ತನಿಖೆ ನಡೆಸಿ: ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆಯಿರಿ; ವಿಜಯೇಂದ್ರ ಆಗ್ರಹ

ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Loading...