ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಒಂದು ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ

ಒಂದು ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು

ಈ ಯೋಜನೆಯಡಿಯಲ್ಲಿ ಜಿಲ್ಲೆಯ 4 ಪ್ಯಾಕೇಜ್ ಗಳ ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಮೊದಲ ಪ್ಯಾಕೇಜ್ ನಲ್ಲಿ ಗೌರಿಬಿದನೂರು ಭಾಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೇ.90 ರಷ್ಟು ಕಾಮಗಾರಿಯೂ ಮುಗಿದಿದೆ. ಉಳಿದ ತಾಲೂಕುಗಳಲ್ಲಿ ಮುಂದಿನ ಆರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ.

ಪ್ರಚೋದನಕಾರಿ ಭಾಷಣ ಆರೋಪ; ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

ಪ್ರಚೋದನಕಾರಿ ಭಾಷಣ ಆರೋಪ; ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

ಗಣೇಶೋತ್ಸವ ಶೋಭಾಯಾತ್ರೆಯಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.

KPSC Recruitment Scam: ಜೈಲಿನಲ್ಲಿರುವ ಕೆಪಿಎಸ್‌ಸಿ ಖದೀಮರು ಇಡಿ ವಶಕ್ಕೆ: ಗಂಗ್ವಾರ್‌, ಕನ್ನಾಳೆ ಇ.ಡಿ ಇಕ್ಕಳದಲ್ಲಿ

ಗಂಗ್ವಾರ್‌, ಕನ್ನಾಳೆ ಇ.ಡಿ ಇಕ್ಕಳದಲ್ಲಿ

ಆರೋಪಿಗಳಿಬ್ಬರೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ದ್ದರು. ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದಿರುವ ಇಡಿ, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ. ಕಳೆದ ನಾಲ್ಕು ದಿನಗಳಿಂದ ಇಡಿ ಅಧಿಕಾರಿಗಳು ಇಬ್ಬರೂ ಆರೋಪಿಗಳನ್ನು ಜೈಲಿನ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು.

ಮೀಸಲು ಉಲ್ಲಂಘನೆ: ಕಲಬುರ್ಗಿ ಹೈಕೋರ್ಟ್ ಪೀಠ ಮಹತ್ವದ ತೀರ್ಪು: 5 ಸಾವಿರ ಶಿಕ್ಷಕರ ನೇಮಕ ರದ್ದು

5 ಸಾವಿರ ಶಿಕ್ಷಕರ ನೇಮಕ ರದ್ದು

ಕಲ್ಯಾಣ ಕರ್ನಾಟಕ ಭಾಗದಲ್ಲಿ 2023ರಲ್ಲಿ ನಡೆದ ಆರರಿಂದ ಎಂಟನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್‌ಟಿಆರ್) ನೇಮಕಾತಿ ಪಟ್ಟಿಯನ್ನು ಹೈಕೋರ್ಟ್‌ನ ಕಲಬುರಗಿ ಪೀಠ ರದ್ದುಪಡಿಸಿ ಮಹತ್ವದ ಆದೇಶ ನೀಡಿದೆ. ಇದರೊಂದಿಗೆ ಈಗಾಗಲೇ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 15 ಸಾವಿರ ಶಿಕ್ಷಕರ ಮುಂದಿನ ಸೇವಾ ಸ್ಥಿತಿಗತಿ ಅತಂತ್ರಕ್ಕೆ ಸಿಲುಕಿದೆ.

ಮಗು ಉಳಿಯಿತೆಂಬ ಆನಂದ ಪೋಷಕರ ಕಣ್ಣಲ್ಲಿ ನೋಡುವುದು ದ್ವಿಶತಕ ಸಿಡಿಸುವುದಕ್ಕಿಂತ ಹೆಚ್ಚು ತೃಪ್ತಿ ನೀಡುತ್ತೆ: ಸುನೀಲ್ ಗವಾಸ್ಕರ್

ಸದ್ಗುರುಗಳ ಸೇವಾ ಕಾರ್ಯಕ್ಕೆ ಸುನೀಲ್‌ ಗವಾಸ್ಕರ್‌ ಮೆಚ್ಚುಗೆ

Sunil Gavaskar: ಬೆಂಗಳೂರು ನಗರದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಮಧುಸೂದನ ಸಾಯಿ ಅವರ 'ಕಂಪ್ಯಾಷನ್ ಇನ್ ಆ್ಯಕ್ಷನ್' (ಕ್ರಿಯಾರೂಪದ ಕರುಣೆ) ಕಾರ್ಯಕ್ರಮದಲ್ಲಿ ಕ್ರಿಕೆಟ್ ದಂತಕತೆ ಸುನೀಲ್ ಗವಾಸ್ಕರ್ ಅವರು ಮಾತನಾಡಿದ್ದು, ಸದ್ಗುರುಗಳ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಚಿತ ಯುಪಿಐ ವಹಿವಾಟಿನಲ್ಲಿ ವ್ಯಾಪಾರಿಗಳಿಗೆ ಶುಲ್ಕದ ಬಲೆ, ಅಂತಿಮವಾಗಿ ಗ್ರಾಹಕನಿಗೆ ಬರೆ: ಡಾ. ಆನಂದ ಕುಮಾರ್‌

ಉಚಿತ ಯುಪಿಐ ವಹಿವಾಟಿನಲ್ಲಿ ವ್ಯಾಪಾರಿಗಳಿಗೆ ಶುಲ್ಕದ ಬಲೆ

ಡಿಜಿಟಲ್‌ ಪಾವತಿ ವ್ಯವಸ್ಥೆಯ ಯುಪಿಐಗೆ ಈಗ ಶುಲ್ಕದ ಕರಿನೆರಳು ಆವರಿಸಿದೆ. ವರ್ಷಗಳ ಕಾಲ “ಸರಳ, ವೇಗ, ಸುರಕ್ಷಿತ ಮತ್ತು ಉಚಿತ” ಎಂಬ ಭರವಸೆಯೊಂದಿಗೆ ಜನರನ್ನು ನಂಬಿಸಿ ಡಿಜಿಟಲ್‌ ಪಾವತಿಯತ್ತ ಕರೆದೊಯ್ದ ಬಳಿಕ, ₹2,000ಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ 0.4% ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (ಎಂ.ಡಿ.ಆರ್‌) ತೆರಿಗೆ ವ್ಯವಸ್ಥೆ ಜಾರಿಗೆ ತರಲಾಗಿದೆ.

7ನೇ ತರಗತಿ ಮಕ್ಕಳ ಕಲಿಕಾ ಮಟ್ಟ ಪರಿಶೀಲನೆ: 180 ಶಿಕ್ಷಕರಿಗೆ ನೋಟಿಸ್: ಪ್ರಾಥಮಿಕ ಶಿಕ್ಷಣದ ಗುಣಮಟ್ಟಕ್ಕೆ ಒತ್ತು ನೀಡಿದ ಶಾಸಕ ಪ್ರದೀಪ್ ಈಶ್ವರ್

ಪ್ರಾಥಮಿಕ ಶಿಕ್ಷಣದ ಗುಣಮಟ್ಟಕ್ಕೆ ಒತ್ತು ನೀಡಿದ ಶಾಸಕ ಪ್ರದೀಪ್ ಈಶ್ವರ್

ಶಾಸಕರು ನಮ್ಮೂರಿಗೆ ನಮ್ಮ ಶಾಸಕ ಎಂಬ ಕಾರ್ಯಕ್ರಮದ ಮುಖೇನ ಕ್ಷೇತ್ರ ಸಂಚಾರದ ವೇಳೆ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ, ಕೆಲವು 7ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡದ ಮೂಲ ಅಕ್ಷರಮಾಲೆ ಬರೆಯಲು ಹಾಗೂ ಸರಳ ಸಂಕಲನ–ವ್ಯವಕಲನದಂತಹ ಮೂಲ ಗಣಿತದ ಲೆಕ್ಕಗಳನ್ನು ಬಿಡಿಸಲು ಕಷ್ಟವಾಗುತ್ತಿರುವುದು ಗಮನಕ್ಕೆ ಬಂದಿತ್ತು

Praja Seva: ಅರ್ಜಿ ಸಲ್ಲಿಸುವ ವಿಧಾನ ತಿಳಿದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನೀಡಿ ಶೇ.100ರಷ್ಟು ವಿಲೇವಾರಿಗೆ ಕ್ರಮ

ಪ್ರಜಾಸೇವಾ ಆಂದೋಲನದ ಸದ್ಬಳಕೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಜಿ.ಪ್ರಭು

ಸಾರ್ವಜನಿಕರು ಪ್ರಜಾಸೇವಾ ಆಂದೋಲನದ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸುವ ವಿಧಾನವನ್ನು ಸರಿಯಾಗಿ ತಿಳಿದು, ಅಗತ್ಯ ದಾಖಲೆ ಗಳೊಂದಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದುಕೊಂಡರೆ, ಅರ್ಜಿಗಳ ಶೇ.100ರಷ್ಟು ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಹೇಳಿದರು.

ದೇಶದಲ್ಲಿ ಆರೋಗ್ಯ-ಉನ್ನತ ಶಿಕ್ಷಣ ಸೇವೆಗಳ ವಿಸ್ತರಣೆಗೆ ಒತ್ತು: ಸಚಿವ ಪ್ರಲ್ಹಾದ್‌ ಜೋಶಿ

ದೇಶದಲ್ಲಿ ಆರೋಗ್ಯ-ಉನ್ನತ ಶಿಕ್ಷಣ ಸೇವೆಗಳ ವಿಸ್ತರಣೆಗೆ ಒತ್ತು: ಜೋಶಿ

Pralhad Joshi: ಇಂದು ಭಾರತದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸುತ್ತಿದೆ. ದೇಶ, ಸಮಾಜದಲ್ಲಿ ಶಾಂತಿ ಮತ್ತು ಸುಸ್ಥಿರತೆ ಇದ್ದಾಗ ಮಾತ್ರ ಸಮೃದ್ಧಿ ಕಾಣಲು ಸಾಧ್ಯ. ಅದರಂತೆ ಮೋದಿ ಅವರ ಸರ್ಕಾರ ಆರೋಗ್ಯ, ಶಿಕ್ಷಣ, ರಕ್ಷಣೆ, ಶಾಂತಿ-ಸುವ್ಯವಸ್ಥೆಗೆ ಆದ್ಯತೆ ನೀಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಪ್ರತಿಪಾದಿಸಿದ್ದಾರೆ.

Sri Madhusudan Sai: ಸಮಾಜದ ಕೆಲಸಕ್ಕಾಗಿ ಸಾಲ ಮಾಡಿದ್ದೇವೆ, ಭಿಕ್ಷೆ ಎತ್ತಿದ್ದೇವೆ: ಸದ್ಗುರು ಶ್ರೀ ಮಧುಸೂದನ ಸಾಯಿ

ಸಮಾಜದ ಕೆಲಸಕ್ಕಾಗಿ ಸಾಲ ಮಾಡಿದ್ದೇವೆ, ಭಿಕ್ಷೆ ಎತ್ತಿದ್ದೇವೆ: ಸದ್ಗುರು

ಬೆಂಗಳೂರಿನಲ್ಲಿ ನಡೆದ 'ಕಂಪ್ಯಾಷನ್ ಇನ್ ಆ್ಯಕ್ಷನ್' (ಕ್ರಿಯಾರೂಪದ ಕರುಣೆ) ಕಾರ್ಯಕ್ರಮದಲ್ಲಿ ಕ್ರಿಕೆಟ್ ದಂತಕತೆ ಸುನಿಲ್ ಗವಾಸ್ಕರ್ ಅವರ ಪ್ರಶ್ನೆಗಳಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಉತ್ತರಿಸಿದ್ದಾರೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು, ಹಸಿದು ಶಾಲೆಗೆ ಹೋಗಬಾರದು. ಆರೋಗ್ಯ ಸೇವೆಯಿಂದ ದೂರವಾಗಬಾರದು ಎನ್ನುವುದೇ ನನ್ನ ಕನಸು. ಇದಕ್ಕಾಗಿ ಇನ್ನಷ್ಟು ಕಷ್ಟಪಡಲು ನಾನು ತಯಾರಿದ್ದೇನೆ ಎಂದು ಸದ್ಗುರು ಘೋಷಿಸಿದ್ದಾರೆ.

ದೆಹಲಿ ವಿವಿ ಚುನಾವಣೆ ಗೆದ್ದ ABVP ಅಭ್ಯರ್ಥಿಗಳಿಗೆ ಸಚಿವ ಪ್ರಲ್ಹಾದ್‌ ಜೋಶಿ ಅಭಿನಂದನೆ

ದೆಹಲಿ ವಿವಿ ಚುನಾವಣೆ ಗೆದ್ದ ABVP ಅಭ್ಯರ್ಥಿಗಳಿಗೆ ಸಚಿವ ಜೋಶಿ ಅಭಿನಂದನೆ

Pralhad Joshi: ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ ಚುನಾವಣೆ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, 2026ರ ಡಿಯುಎಸ್‌ಯು ಚುನಾವಣೆಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿದ್ದು, ಬೆಂಬಲಿಸಿದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

Raichur Murder: ರಾಯಚೂರಿನಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಭೀಕರ ಹತ್ಯೆ; ರಕ್ತಸಿಕ್ತವಾಗಿದ್ದ ತಾಯಿಯ ಬಳಿ ಕುಳಿತು 2 ವರ್ಷದ ಮಗು ರೋದನೆ

ರಾಯಚೂರಿನಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಭೀಕರ ಹತ್ಯೆ!

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್‌ಎಚ್.ಕ್ಯಾಂಪ್ 5ರ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಯನಹಳ್ಳಿ, ಗೌರಿಬಿದನೂರಿನಲ್ಲಿ ಆಯೋಜನೆ: ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 93 ಯೂನಿಟ್ ರಕ್ತ ಸಂಗ್ರಹ

ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 93 ಯೂನಿಟ್ ರಕ್ತ ಸಂಗ್ರಹ

ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಶ್ರೀ ಚೆನ್ನಕೇಶವಸ್ವಾಮಿ ವಿನಾಯಕ ಗೆಳೆಯರ ಬಳಗ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 26 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಗೌರಿಬಿದನೂರು ತಾಲ್ಲೂಕಿನ ಸೂರ್ಯ ಕಲ್ಯಾಣ ಮಂಟಪದಲ್ಲಿ ಮೋಹನ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ 67 ಯೂನಿಟ್ ರಕ್ತ ಸಂಗ್ರಹವಾಗಿದ್ದು, ಒಟ್ಟು 93 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Dr.M.C.Sudhakar: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು: ಡಾ.ಎಂ.ಸಿ.ಸುಧಾಕರ್

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕ ಗಳಿಸುವುದೇ ಶಿಕ್ಷಣದ ಅಂತಿಮ ಗುರಿಯಾಗಬಾರದು. ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ, ವೈಜ್ಞಾನಿಕ ಚಿಂತನೆ, ಮಾನವೀಯತೆ, ಸಂವಿಧಾನದ ಮೌಲ್ಯಗಳು, ಸಾಮಾಜಿಕ ಹೊಣೆಗಾರಿಕೆ ಹಾಗೂ ಆತ್ಮವಿಶ್ವಾಸ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ತಂತ್ರ ಜ್ಞಾನ ವೇಗವಾಗಿ ಬದಲಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಕರು ಕೂಡ ಹೊಸ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸಬೇಕು

Vastu Astrologer BK Subhash Chandra Jain: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ.ಸುಭಾಷ್ ಚಂದ್ರ ಜೈನ್ ಭೇಟಿ

ಮುಖ್ಯಮಂತ್ರಿರವರನ್ನು ಭೇಟಿಯಾದ ಕರಾವಳಿಯ ಜೈನ ಜ್ಯೋತಿಷಿ

ಬೆಂಗಳೂರಿನಲ್ಲಿ ಚಾತುರ್ಮಾಸ ಮಾಡುತ್ತಿರುವ ಪ್ರಖ್ಯಾತ ಜೈನಮುನಿ ಗಳಾದ ಅನೇಕಾಂತ ಸಾಗರ ಮಹಾರಾಜರ ಅಪೇಕ್ಷೆಯಂತೆ ಅಕ್ಟೋಬರ್ 25ನೇ ತಾರೀಕು ನಗರದ ಪ್ಯಾಲೇಸ್ ಗ್ರೌಂಡಿನಲ್ಲಿ ನಡೆಯುವ "ಬೃಹತ್ ಸಿದ್ದ ನವಗ್ರಹ ತೀರ್ತಂಕರ ಮಹಾ ಆರಾಧನಾ ಮಹೋತ್ಸವ" ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರನ್ನು ವೈಯಕ್ತಿಕವಾಗಿ ಆಮಂತ್ರಿಸಿದ್ದು ಖಂಡಿತ ಜೈನ ಸಮುದಾಯದ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vishwakarma Jayanti: ವಿಶ್ವಕರ್ಮ ಜಯಂತಿ: ಕೇವಲ ಆಚರಣೆಯಲ್ಲ, ಶ್ರಮ ಸಂಸ್ಕೃತಿಯ ನಿರಂತರ ಜಾಗೃತಿ: ಡಾ.ಬಿ.ಎಂ.ಉಮೇಶ್ ಕುಮಾರ್

ವಿಶ್ವಕರ್ಮ ಜಯಂತಿ ಕೇವಲ ಆಚರಣೆಯಲ್ಲ, ಸಂಸ್ಕೃತಿಯ ನಿರಂತರ ಜಾಗೃತಿ

ಭಗವಾನ್ ವಿಶ್ವಕರ್ಮನು ಜಗತ್ತಿನ ಆದಿ ವಾಸ್ತುಶಿಲ್ಪಿ, ದೇವಶಿಲ್ಪಿ ಮತ್ತು ಸಮಸ್ತ ಕರಕುಶಲತೆಗಳ ಹಾಗೂ ತಂತ್ರಜ್ಞಾನದ ಮೂಲಾಧಾರ. ವೇದಗಳ ಕಾಲದಿಂದಲೂ ವಿಶ್ವಕರ್ಮ ನನ್ನು ಸೃಷ್ಟಿಯ ಅದ್ಭುತ ಶಕ್ತಿ ಎಂದು ಕೊಂಡಾಡಲಾಗಿದೆ. ವಿಶ್ವಕರ್ಮ ಜಯಂತಿಯನ್ನು ಮುಖ್ಯ ವಾಗಿ ಶ್ರಮ, ಕೌಶಲ್ಯ ಮತ್ತು ಸೃಷ್ಟಿಶೀಲತೆಯ ಮಹತ್ವವನ್ನು ಸಮಾಜಕ್ಕೆ ಸಾರಲು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಗುತ್ತದೆ.

ಊಟ ಆರಂಭವಾಗಬೇಕಿರುವುದು ತುಪ್ಪದಿಂದಲೇ ಹೊರತು ಉಪ್ಪಿನಕಾಯಿಯಿಂದಲ್ಲ: ರಾಘವೇಶ್ವರ ಭಾರತೀ ಶ್ರೀ

ಊಟ ಆರಂಭವಾಗಬೇಕಿರುವುದು ತುಪ್ಪದಿಂದ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಗೋವು ಸೃಷ್ಟಿಯ ಸಾರವಾದರೆ, ಹಾಲು ಗೋವಿನ ಸಾರ. ತುಪ್ಪ ಸಾರಗಳ ಸಾರ. ದಿನ ಕಳೆದಂತೆ ಪ್ರಪಂಚದ ಎಲ್ಲಾ ವಸ್ತುಗಳ ಗುಣ ನಾಶವಾಗುತ್ತಾ ಸಾಗುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ತುಪ್ಪದ ಗುಣ ದಿನ ಕಳೆದಂತೆ ಹೆಚ್ಚಾಗುತ್ತಾ ಸಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

MLA Annapurna Tukaram: ಪ್ರಜಾ ಸೇವಾ ಇಲಾಖೆಯ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ

ಪ್ರಜಾ ಸೇವಾ ಇಲಾಖೆಯ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ

ನಮ್ಮ ಸಂಡೂರು ತಾಲೂಕಿನಲ್ಲಿ ಮೊದಲು ಪ್ರಜಾ ಸೇವಾ ಕಾರ್ಯಕ್ರಮ ವಿಠಲಪುರದಲ್ಲಿ ಎರಡನೆ ಯದು ತೋರಣಗಲ್ಲಿನಲ್ಲಿ ಹಾಗೂ ಇದೀಗ ಮೂರನೇ ಕಾರ್ಯಕ್ರಮ ಸಂಡೂರು ಪಟ್ಟಣದಲ್ಲಿ ಆಯೋಜಿಸಲಾಗಿದ್ದು ಮುಖ್ಯವಾಗಿ ನಮ್ಮ ತಾಲೂಕಿನಲ್ಲಿ ಬಾಲ್ಯ ವಿವಾಹದಂತಹ ಮೂಢನಂಬಿಕೆ ಗಳು ಆಚರಣೆಯಲ್ಲಿದ್ದು ಇದಕ್ಕೆ ಸಂಬಂಧಪಟ್ಟಂತಹ ಅಧಿಕಾರಿಗಳು ಕಡಿವಾಣ ಹಾಕಬೇಕಾಗಿದೆ ಎಂದರು.

ಬೆಂಗಳೂರಿನಲ್ಲಿ ರೋಜ್‌ಗಾರ್ ಮೇಳ; ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಎಚ್‍.ಡಿ. ಕುಮಾರಸ್ವಾಮಿ

ರೋಜ್‌ಗಾರ್ ಮೇಳ; ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಎಚ್‌ಡಿಕೆ

HD Kumaraswamy: ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳದ (ರೋಜ್‌ಗಾರ್ ಮೇಳ) ಇಪ್ಪತ್ತನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ವಿತರಿಸಿದರು. ಈ ಉದ್ಯೋಗ ಮೇಳವು ದೇಶದ 45 ವಿವಿಧ ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕೇಂದ್ರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಭಾರತದ ಮೊದಲ ಎಕ್ಸೈಮ್ ಟೆಂಪರರಿ ಪ್ರೊಸ್ಟಾಟಿಕ್ ಶಸ್ತ್ರಚಿಕಿತ್ಸೆ; ಐದು ರೋಗಿಗಳಿಗೆ ಚಿಕಿತ್ಸೆ

ಭಾರತದ ಮೊದಲ ಎಕ್ಸೈಮ್ ಟೆಂಪರರಿ ಪ್ರೊಸ್ಟಾಟಿಕ್ ಶಸ್ತ್ರಚಿಕಿತ್ಸೆ

ಎಕ್ಸೈಮ್ ಟೆಂಪರರಿ ಸ್ಟೆಂಟ್ ಅನ್ನು ಪ್ರೊಸ್ಟಾಟಿಕ್ ಮೂತ್ರನಾಳ ತೆರೆದಿರುವಂತೆ ವಿನ್ಯಾಸಗೊಳಿಸ ಲಾಗಿದ್ದು ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪಡೆಯುವವರೆಗೆ ಅಥವಾ ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲದೇ ಇರುವಾಗ ಬಳಸಲಾಗುತ್ತದೆ. ಈ ಸ್ಟೆಂಟ್ ಅನ್ನು ಒಂದು ವರ್ಷ ಅಲ್ಲಿಯೇ ಇರಿಸಬಹುದಾಗಿದ್ದು ರೋಗಿಯ ಆರೋಗ್ಯ ಸುಧಾರಿಸುವವರೆಗೆ ಅಥವಾ ಮುಂದಿನ ಚಿಕಿತ್ಸೆ ಯೋಜಿಸುವವರೆಗೆ ಸ್ಥಿರತೆಗೆ ಅವಕಾಶ ಕಲ್ಪಿಸುತ್ತದೆ.

Gandhi Sante: ಹೆಗ್ಗೋಡಿನಲ್ಲಿ ಸೆ. 26, 27ರಂದು ಗಾಂಧಿ ಸಂತೆ; ರಂಗಕರ್ಮಿ ಪ್ರಸನ್ನ ವಿಶಿಷ್ಟ ಕಲ್ಪನೆಯಲ್ಲಿ ಕೈಮಗ್ಗ ಪ್ರವಾಸೋದ್ಯಮ

ಹೆಗ್ಗೋಡಿನಲ್ಲಿ ಸೆ. 26, 27ರಂದು ಗಾಂಧಿ ಸಂತೆ ಆಯೋಜನೆ

ಖ್ಯಾತ ರಂಗಕರ್ಮಿ ಪ್ರಸನ್ನ ಅವರ ಸಾರಥ್ಯದ 'ಚರಕʼ ನೇಕಾರರ ಸಂಘದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಸೆ.26, 27ರಂದು ಗಾಂಧಿ ಸಂತೆ ಆಯೋಜಿಸಲಾಗಿದೆ. ಗ್ರಾಹಕರು, ವ್ಯಾಪಾರಿಗಳು ಹೆಗ್ಗೋಡು ಗ್ರಾಮಕ್ಕೇ ಹೋಗಿ ಪರಿಶುದ್ಧ ಕೈಮಗ್ಗದ ಉತ್ಪನ್ನ ಪರೀಕ್ಷಿಸಿ ಖರೀದಿಸುವ ವೇದಿಕೆಯನ್ನು ಕಲ್ಪಿಸಲಾಗಿದೆ.

Kasturirangan Report: ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲಾ ಪಕ್ಷಗಳ ಒಗ್ಗಟ್ಟಿನ ಹೋರಾಟ ಅಗತ್ಯ: ಎಚ್.ಡಿ.ಕುಮಾರಸ್ವಾಮಿ

ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲಾ ಪಕ್ಷಗಳ ಒಗ್ಗಟ್ಟಿನ ಹೋರಾಟ ಅಗತ್ಯ

ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚೆ ನಡೆಯುತ್ತಿರುವುದು ಸಂತೋಷದ ವಿಚಾರವೇ. ಆದರೆ ಈ ಸರಕಾರ ಅದೆಷ್ಟು ದೃಢವಾಗಿ ರೈತರ ಪರ ನಿಲ್ಲುತ್ತದೆ ಎಂಬುದನ್ನು ನಾವು ಗಮನಿಸಬೇಕಾಗಿದೆ. ರಾಜ್ಯ ಸರ್ಕಾರ ಜನಾಭಿಪ್ರಾಯಕ್ಕೆ ಅನುಗುಣವಾಗಿ ನಡೆಯಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಎಸ್.ಟಿ. ಶ್ರೀನಿವಾಸ್

Tumkur News: ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದಲ್ಲಿ ಎಡ ಮತ್ತು ಬಲ ಪಂಗಡಗಳ ನಡುವಿನ ತಿಕ್ಕಾಟ ತೀವ್ರಗೊಳ್ಳುತ್ತಿರುವುದು ಶೋಚನೀಯ. ಇದರೊಂದಿಗೆ ಹಿಂದುಳಿದ ವರ್ಗಗಳಲ್ಲೂ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದ್ದು, ಸಣ್ಣಪುಟ್ಟ ವಿಚಾರಗಳಿಗೆ ಕಿತ್ತಾಡಿದರೆ ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್ ಎಚ್ಚರಿಸಿದ್ದಾರೆ.

Milk Price Hike: ರಾಜ್ಯದಲ್ಲಿ ಹಾಲಿನ ದರ ಮತ್ತೆ ಏರಿಕೆಯಾಗುತ್ತಾ? ಸಿಎಂ ಡಿಕೆಶಿ ಹೇಳಿದ್ದೇನು?

ರಾಜ್ಯದಲ್ಲಿ ಹಾಲಿನ ದರ ಮತ್ತೆ ಏರಿಕೆಯಾಗುತ್ತಾ? ಸಿಎಂ ಹೇಳಿದ್ದೇನು?

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದಾರೆ.ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಿದೆ. ತಮಿಳುನಾಡಿನಲ್ಲಿ 9ರಿಂದ 10 ರೂ. ಹೆಚ್ಚಳ ಮಾಡಲಾಗಿದೆ. ನಮಗೂ 8-9 ರೂ. ಜಾಸ್ತಿ ಮಾಡಿ ಎಂದು ನಮ್ಮ ರೈತರು ಮನವಿ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Loading...