ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಪೋಕ್ಸೊ ಕೇಸ್‌ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ; 4 ಮೊಬೈಲ್‌ಗಳು ವಶಕ್ಕೆ

ಪೋಕ್ಸೊ ಕೇಸ್‌ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗಾಗಿ ಶಹಾಪುರ ಸಿಪಿಐ ಕಚೇರಿಗೆ ಮಲ್ಲಿಕಾರ್ಜುನ ಮುತ್ಯಾ ಗುರುವಾರ ಹಾಜರಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುತ್ಯಾ ಅವರು, ವಿಚಾರಣೆ ಹಾಜರಾಗಿ ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮುಂದೆಯೂ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

MLA K.H.Puttaswamy Gowda: ನಾಟಕಗಳು ಗ್ರಾಮೀಣ ಜನರ ಮತ್ತು ಸಂಸ್ಕೃತಿಯ ಜೀವನಾಡಿ: ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ

ನಾಟಕಗಳು ಗ್ರಾಮೀಣ ಜನರ ಮತ್ತು ಸಂಸ್ಕೃತಿಯ ಜೀವನಾಡಿ

ಬಸವಣ್ಣನವರ ಸಮಕಾಲೀನ ರಾದ ಶ್ರೇಷ್ಠ ಶಿವಶರಣ ಹರಳಯ್ಯ ಅವರು ಚಮ್ಮಾರಿಕೆ ಕಾಯಕದ ಮೂಲಕ ಗುರುಲಿಂಗ ಜಂಗಮ ಸೇವೆ ಮಾಡಿದವರು, ಅನುಭವ ಮಂಟಪದ ಮೂಲಕ ಕಾಯಕವೇ ಕೈಲಾಸ ತತ್ವ ಪಾಲಿಸಿದವರು. ಹರಳಯ್ಯ ಮತ್ತು ಕಲ್ಯಾಣಮ್ಮ ದಂಪತಿ ಯ ಭಕ್ತಿನಿಷ್ಠೆ ಮತ್ತು ಕಾಯಕ ನಿಷ್ಠೆಯನ್ನು ನಾಟಕದ ಮೂಲಕ ಅನಾವರಣ ಮಾಡಿರುವುದು ನಿಜಕ್ಕೂ ಶ್ಲಾಘನೀಯ

Leopard attack: ಚದುಮನಹಳ್ಳಿ ಬೆಟ್ಟದ ತಪ್ಪಲಿನಲ್ಲಿ ಹಾಡಹಗಲೇ ಚಿರತೆ ದಾಳಿ, ಜಾನುವಾರುಗಳ ಸಾವು

ಹಾಡಹಗಲೇ ಚಿರತೆ ದಾಳಿ, ಜಾನುವಾರುಗಳ ಸಾವು

ಸ್ಥಳೀಯ ನಿವಾಸಿ ಚಿರಂಜೀವಿ ಎಂಬುವವರಿಗೆ ಸೇರಿದ ಕರುಗಳನ್ನು ಬೆಟ್ಟದ ತಪ್ಪಲಿನಲ್ಲಿ ಮೇಯಿಸಲು ಬಿಡಲಾಗಿತ್ತು. ಈ ವೇಳೆ ಹಠಾತ್ತನೆ ದಾಳಿ ಮಾಡಿದ ಚಿರತೆ, ಎರಡು ಕರುಗಳ ಕುತ್ತಿಗೆಯನ್ನು ಕಚ್ಚಿ ಕೊಂದಿದೆ. ಜಾನುವಾರುಗಳು ಜೋರಾಗಿ ಕಿರಾಚಾಡಿದಾಗ ಭಯಭೀತ ಗೊಂಡ ಮಾಲೀಕ ಸ್ಥಳಕ್ಕೆ ಹೋಗಿ ನೋಡಿದ್ದಾರೆ.

ಬಿಂದಿಗೆ ಹಿಡಿದು ಪಂಚಾಯಿತಿಗೆ ಮುತ್ತಿಗೆ: ನೀರಿಗಾಗಿ ದೇವರ ಮಳ್ಳೂರು ಮಹಿಳೆಯರ ಗಟ್ಟಿಯಾದ ಪ್ರತಿಭಟನೆ..!

ನೀರಿಗಾಗಿ ದೇವರ ಮಳ್ಳೂರು ಮಹಿಳೆಯರ ಗಟ್ಟಿ ಪ್ರತಿಭಟನೆ..!

ಪಂಚಾಯಿತಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಧಿಕಾರಿಗಳ ನಿರ್ಲಕ್ಷ್ಯ ದಿಂದಲೇ ಸಮಸ್ಯೆ ಗಂಭೀರ ವಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. “ಕುಡಿಯುವ ನೀರು ನಮ್ಮ ಮೂಲಭೂತ ಹಕ್ಕು. ತಕ್ಷಣ ನೀರು ಒದಗಿಸಬೇಕು” ಎಂದು ಘೋಷಣೆ ಕೂಗಿದರು

ಎಸ್‍ಸಿಪಿ, ಟಿಎಸ್‍ಪಿ ಹಣ ಗ್ಯಾರಂಟಿಗಳಿಗೆ ಬಳಸಿ ರಾಜ್ಯ ಸರ್ಕಾರದಿಂದ ದಲಿತರಿಗೆ ಮೋಸ: ಅರವಿಂದ ಬೆಲ್ಲದ್

ಸಿದ್ದರಾಮಯ್ಯ ಸರ್ಕಾರದಿಂದ ದಲಿತರಿಗೆ ಮೋಸ: ಅರವಿಂದ ಬೆಲ್ಲದ್

ದಲಿತರು ಮತ್ತು ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ಸರ್ಕಾರ ದಲಿತರಿಗೆ ಏನು ಮಾಡದೇ ಹಗಲು ದರೋಡೆ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳಿಂದ ಎಸ್‍ಸಿಪಿ/ಟಿಎಸ್‍ಪಿಯಿಂದ ರೂ. 38,859ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ ಪಕ್ಷಕ್ಕೆ ಬಲ: ನಿಖಿಲ್ ಕುಮಾರಸ್ವಾಮಿ

ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಬಲ: ನಿಖಿಲ್

JDS Karnataka: ಮಾಲೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಹೂಡಿ ವಿಜಯ್ ಕುಮಾರ್ ಮತ್ತವರ ಬೆಂಬಲಿಗರು, ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಈ ವೇಳೆ ನಿಖಿಲ್‌ ಕುಮಾರಸ್ವಾಮಿ ಮಾತನಾಡಿದ್ದಾರೆ.

ಬೆಂಗಳೂರಿನ ಈ ಖಿಲಾಡಿ ಜೋಡಿಯನ್ನು ನೋಡಿದ್ದೀರಾ? ಆಟೋ ಚಾಲಕನ ಹೆಗಲ ಮೇಲೆ ಸವಾರಿ ಮಾಡುವ ಗಿಳಿಯನ್ನು ಸ್ಪರ್ಶಿಸಿ ಖುಷಿಪಟ್ಟ ಗ್ರಾಹಕರು

ಸಾಕುಪ್ರಾಣಿ ಗಿಣಿಯೊಂದಿಗೆ ಆಟೋ ಚಾಲಕನ ಸವಾರಿ

Viral Video: ಬೆಂಗಳೂರಿನಲ್ಲಿ ಆಟೋ ಚಾಲಕರೊಬ್ಬರು ತಮ್ಮ ಮುದ್ದಿನ ಹಸಿರು ಗಿಳಿಯೊಂದಿಗೆ ಸವಾರಿ ಮಾಡಿದ ದೃಶ್ಯ ಕಂಡು ಬಂದಿದೆ. ಈ ವಿಡಿಯೊವು ಪ್ರಾಣಿಗಳು ಮತ್ತು ಪಕ್ಷಿಗಳು ದೈನಂದಿನ ಜೀವನಕ್ಕೆ ಸರಳ ಸಂತೋಷವನ್ನು ಹೇಗೆ ತರುತ್ತವೆ ಎಂಬುದಕ್ಕೆ ಸಾಕ್ಷಿ ಎನಿಸಿಕೊಂಡಿದೆ.

Karnataka Budget 2026: ರಾಜ್ಯದಲ್ಲಿ ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ರಾಜ್ಯದಲ್ಲಿ ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

BY Vijayendra: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ಬಿ.ವೈ. ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ಬಿ.ವೈ. ವಿಜಯೇಂದ್ರ

BY Vijayendra: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಆಕಾಂಕ್ಷಿಗಳನ್ನು ಇವತ್ತು ಕೂಡ ಭೇಟಿ ಮಾಡಿದ್ದೇವೆ. ಅವರ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಇವತ್ತು ಬಂದಿರುವ ಉದ್ದೇಶವೇ ಅದು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಿದ್ದೇವೆ ಎಂದು ಬಿ.ವೈ. ವಿಜಯೇಂದ್ರ ಭರವಸೆ ನೀಡಿದ್ದಾರೆ.

8 ಕೋಟಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಗುರಿ: ಸದ್ಗುರು ಶ್ರೀ ಮಧುಸೂದನ ಸಾಯಿ

8 ಕೋಟಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಗುರಿ

Sadhguru Shri Madhusudan Sai: ಮುಂದಿನ ದಿನಗಳಲ್ಲಿ ಆರರಿಂದ ಎಂಟು ಕೋಟಿ ಮಕ್ಕಳಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪ್ರತಿಯೊಬ್ಬ ತಂದೆ ತಾಯಂದಿರು ಮಕ್ಕಳಿಗೆ ವಿಷಮುಕ್ತ ಆಹಾರವನ್ನು ನೀಡಲು ಪ್ರತಿಜ್ಞೆ ಮಾಡೋಣ ಎಂದು ಶ್ರೀ ಸತ್ಯಸಾಯಿ ಆಶ್ರಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ತಿಳಿಸಿದ್ದಾರೆ.

Karnataka Budget 2026: ನಾಳೆ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ; ಏನೆಲ್ಲಾ ನಿರೀಕ್ಷೆಗಳಿವೆ?

ನಾಳೆ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ರಾಜ್ಯ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಜತೆಗೆ, ದೀರ್ಘ ಕಾಲದ ಜನಪರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆ ಇದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ಕೃಷಿ, ಸಹಕಾರ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಬಜೆಟ್‌ ಬಗ್ಗೆ ಭಾರೀ ನಿರೀಕ್ಷೆಗಳಿವೆ.

Chikkaballapur News: ಮಾ.24 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

ಮಾ.24 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

ಹವಾಮಾನ ಬದಲಾವಣೆ ಮತ್ತು ನೀರಿನ ಭದ್ರತೆಯ ಹಿನ್ನೆಲೆಯಲ್ಲಿ ಸರೋವರ ಮತ್ತು ಜಲಾಶಯಗಳ ಸಂರಕ್ಷಣೆಗೆ ಸುಸ್ಥಿರ ಹಾಗೂ ಮಾಹಿತಿ-ಆಧಾರಿತ ಪರಿಹಾರಗಳನ್ನು ಚರ್ಚಿಸಲು ಈ ಸಮ್ಮೇಳನವು ವಿದ್ಯಾರ್ಥಿಗಳು, ಸಂಶೋಧಕರು, ಅಧ್ಯಾಪಕರು, ನೀತಿ ನಿರೂಪಕರು ಮತ್ತು ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುತ್ತದೆ.

ನನ್ನ ಮಗನ ಮೇಲೆ ಆತನ ಕಣ್ಣು ಏಕೆ ಬಿತ್ತೋ ಅರ್ಥವಾಗಿಲ್ಲ: ತ್ರಿಶಾಲ್‌ ಆತ್ಮಹತ್ಯೆ ಬಗ್ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಭಾವುಕ ಪೋಸ್ಟ್‌

ಮಗನ ಆತ್ಮಹತ್ಯೆ ಬಗ್ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಭಾವುಕ ಪೋಸ್ಟ್‌

ಡೆತ್‌ನೋಟ್‌ನಲ್ಲಿ "ನನ್ನನ್ನು ಕ್ಷಮಿಸು ಅಮ್ಮ ನಾನು ಸಾಯ್ತಾ ಇದ್ದೀನಿ, ನನಗೆ ತುಂಬಾ ಚಿತ್ರಹಿಂಸೆ ಮಾಡಿದ್ದಾರೆ, ನನ್ನ ಕನಸುಗಳೆಲ್ಲ ನುಚ್ಚುನೂರಾಗಿವೆ, ಆ ಇಬ್ಬರೇ ನನ್ನ ಸಾವಿಗೆ ಕಾರಣ. ಅವರನ್ನು ಬಿಡಬೇಡ ಜೈಲಿಗೆ ಹಾಕಿಸು ಎಂದು ತಮ್ಮ ಮಗ ತ್ರಿಶಾಲ್‌ ಡೆತ್‌ನೋಟ್‌ನಲ್ಲಿ ಬರೆದಿದ್ದ ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ತಿಳಿಸಿದ್ದಾರೆ.

Hindu Samavesha: ಮಾ.6ರಂದು ಇಂಡಿಯಲ್ಲಿ ವಿರಾಟ ಹಿಂದು ಸಮಾವೇಶ

ಮಾ.6ರಂದು ಇಂಡಿಯಲ್ಲಿ ವಿರಾಟ ಹಿಂದು ಸಮಾವೇಶ

ಬೃಹತ್ ಹಿಂದು ಸಮಾವೇಶಕ್ಕೆ ಜಮಖಂಡಿ ತಾಲೂಕು ಮೈಗೂರಿನ ಪೂಜ್ಯ ಗುರುಪ್ರಸಾದ ಶ್ರೀಗಳು ಸಾನಿದ್ಯ, ಜೇವರ್ಗಿ ಅಂದೂಲ ಶ್ರೀ ಕರುಣೇಶ್ವರ ಮಠದ ಸಿದ್ದಲಿಂಗ ಶಿವಾಚಾರ್ಯರರು ಸಾನಿದ್ಯ, ಹಿರೇಮಣೂರದ ಶ್ರೀ ವೇದೇಶ ತೀರ್ಥ ವಿದ್ಯಾಪೀಠದ ಉಪಕುಲಪತಿ ಪಂಡಿತ ಶ್ರೀ ಸರ್ವೇಶಚಾರ್ಯ ಮತ್ತು ಪ್ರಾಂತ ಕಾರ್ಯವಾಹಕರು ಕರ್ನಾಟಕ ಉತ್ತರ ಪ್ರಾಂತದ ಶ್ರೀ ರಾಘವೇಂದ್ರ ಕಾಗವಾಡ ವಕ್ತಾರರಾಗಿ ಆಗಮಿಸುವರು

Karnataka Budget: ಕೇಂದ್ರ ಹಣ ಕೊಡದಿದ್ದರೆ ಕೊರತೆ ಬಜೆಟ್

ಕೇಂದ್ರ ಹಣ ಕೊಡದಿದ್ದರೆ ಕೊರತೆ ಬಜೆಟ್

ಒಂದು ವೇಳೆ ಕೇಂದ್ರದಿಂದ ಸೂಕ್ತ ಅನುದಾನ ಹಂಚಿಕೆಯಾಗದಿದ್ದರೆ, ರಾಜ್ಯ ಸರಕಾರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕೇಂದ್ರ ಸರಕಾರ ಕೈಗೊಂಡಿ ರುವ ಜಿಎಸ್‌ಟಿ ಇಳಿಕೆಯಿಂದ ಸರಕಾರಕ್ಕೆ ಬರಬೇಕಿದ್ದ ಅನುದಾನದಲ್ಲಿ ಸುಮಾರು 9000 ಕೋಟಿ ರು. ಖೋತಾ ಆಗಲಿದೆ.

Gubbi News: ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ದೇವಾಲಯ ಸೇರಿದಂತೆ ಸುತ್ತಲಿನ ಆವರಣ ದೀಪಾಲಂಕಾರ ಎಲ್ಲರನ್ನೂ ಸೆಳೆದಿತ್ತು. ಮಕ್ಕಳ ಆಟಿಕೆ, ವಿವಿಧ ತಿಂಡಿ ತಿನಿಸು, ಸ್ಥಳೀಯ ಕಲಾವಿದರಿಂದ ನಾಟಕ ಪ್ರದರ್ಶನ ಜೊತೆಗೆ ಯಳವಯ್ಯ ತೋಟದ ಯುವಕರು ಆಯೋಜಿಸಿದ್ದ ಗುಬ್ಬಿ ಉತ್ಸವ ಕಾರ್ಯಕ್ರಮ ಅದ್ದೂರಿ ಯಾಗಿ ನಡೆಯಿತು

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕರಣ​: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ ಮತ್ತು ಬಿ.ಆರ್.​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ತನಿಖೆಗೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

Iran-Israel War: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್‌

ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್‌

ದುಬೈ ಪ್ರವಾಸಕ್ಕೆ ತೆರಳಿ ಅಲ್ಲಿನ ಮುನುಕುಲ್ ನಗರದಲ್ಲಿ ವಿಮಾನಯಾನ ಸೇವೆ ರದ್ದಾಗಿ ಬಳ್ಳಾರಿ ಜಿಲ್ಲೆಯ 32 ಜನ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದರು. ಬಳ್ಳಾರಿ ಪ್ರವಾಸಿಗರು ಸೇರಿ 50 ಮಂದಿ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್‌ ಆಗಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದ ಕನ್ನಡಿಗರನ್ನು ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಹಾಗೂ ಜಗಳೂರು ಶಾಸಕ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಸ್ವಾಗತಿಸಿದ್ದಾರೆ.

Murder Case: ರುಂಡವಿಲ್ಲದ ಮಹಿಳೆಯ ಶವದ ರಹಸ್ಯ ಬಯಲು: ಬಂಗಾರದ ಆಸೆಗಾಗಿ ಕೊಂದ ಪಾಪಿ!

ರುಂಡವಿಲ್ಲದ ಮಹಿಳೆಯ ಶವದ ರಹಸ್ಯ ಬಯಲು: ಬಂಗಾರದ ಆಸೆಗಾಗಿ ಕೊಂದ ಪಾಪಿ!

ಮುಂಡಗೋಡು ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಅರಣ್ಯದಲ್ಲಿ ಕಂಡುಬಂದ ರುಂಡ ಇಲ್ಲದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೊಲೆಯಾದವರು ಗೂಡಂಗಡಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ 75 ವರ್ಷದ ವೃದ್ಧೆ ಶಿವಕ್ಕ ಪಾಟೀಲ್‌.

ಭಾರತದ ದೇಶೀಯ ಕ್ವಾಂಟಮ್ ಹಾರ್ಡ್‌ವೇರ್ ಅಭಿವೃದ್ಧಿಗೆ 'ಮಾಹೆ' ಕ್ವಾಂಟಮ್ ಹಬ್ ಸ್ಥಾಪನೆ

ಭಾರತದ ಕ್ವಾಂಟಮ್‌ ಪ್ರಗತಿಗೆ ಮಾಹೆ ಕೊಡುಗೆ: ಕ್ವಾಂಟಮ್-ಹಬ್@ಮಾಹೆ ಸ್ಥಾಪನೆ

ವಿನ್ಯಾಸದಿಂದ ಅನುಷ್ಠಾನದ ತನಕ ಎಲ್ಲವನ್ನೂ ಒಳಗೊಂಡ ವೇದಿಕೆಯಾಗಿರುವ ಕ್ಯು-ಹಬ್@ಮಾಹೆ, ಕ್ವಾಂಟಮ್ ಹಾರ್ಡ್‌ವೇರ್ ಪ್ರಯೋಗಗಳು, ಡೀಪ್ ಟೆಕ್ ಸ್ಟಾರ್ಟಪ್ ಇಂಕ್ಯು ಬೇಶನ್, ಮಾನವ ಸಂಪನ್ಮೂಲ ಅಭಿವೃದ್ಧಿ, ಪರೀಕ್ಷಾ ಮೂಲಸೌಕರ್ಯ, ಮತ್ತು ಏಕೀಕೃತ ಶೈಕ್ಷಣಿಕ ವ್ಯವಸ್ಥೆಯಡಿ ಸಂಶೋಧನೆಗಳನ್ನು ಒಳಗೊಂಡಿದೆ. ಈ ಕ್ರಮ ಭಾರತದ ಕ್ವಾಂಟಮ್ ತಂತ್ರಜ್ಞಾನ ಮೌಲ್ಯ ವ್ಯವಸ್ಥೆಯ ಎಲ್ಲ ಹಂತಗಳಲ್ಲೂ ಭಾರತವನ್ನು ಸಂಪೂರ್ಣವಾಗಿ ಸ್ವಾವಲಂಬಿಯಾಗಿಸುವ ಗುರಿ ಹೊಂದಿದೆ.

ಮಧುಗಿರಿಯ ಶ್ರೀ ದಂಡಿನ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಎಸಿ ಗೋಟೂರು ಶಿವಪ್ಪ ಚಾಲನೆ

ಮಧುಗಿರಿ ಶ್ರೀ ದಂಡಿನ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ

Madhugiri News: ಮಧುಗಿರಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮನವರ-2026ನೇ ಸಾಲಿನ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ

Gold Rate Today 5th March 2026: ಮತ್ತೆ ಕಡಿಮೆಯಾಯ್ತು ಚಿನ್ನದ ದರ; ಇಂದು ಇಳಿಕೆಯಾಗಿದ್ದು 900 ರುಪಾಯಿ

ಮತ್ತೆ ಕಡಿಮೆಯಾಯ್ತು ಚಿನ್ನದ ದರ

Gold Price Today: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಗುರುವಾರ ಕೆಳಮುಖವಾಗಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 90 ರುಪಾಯಿ ಇಳಿಕೆಯಾಗಿ 14,990 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 98 ರುಪಾಯಿ ಕಡಿಮೆಯಾಗಿದ್ದು, 16,353 ರುಪಾಯಿಗೆ ಕುಸಿದಿದೆ.

Iran- Israel War: ಖಮೇನಿ ಹತ್ಯೆ ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್‌ ಶಾಸಕನಿಗೆ ಈಗ ಸಂಕಷ್ಟ

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್‌ ಶಾಸಕನಿಗೆ ಈಗ ಸಂಕಷ್ಟ

ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಅವರು ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

Hi-tech Cricket Stadium: ಕಲಬುರಗಿಗೆ ಹೈಟೆಕ್‌ ಕ್ರಿಕೆಟ್‌ ಕ್ರೀಡಾಂಗಣ ಕೊಡಿ

ಕಲಬುರಗಿಗೆ ಹೈಟೆಕ್‌ ಕ್ರಿಕೆಟ್‌ ಕ್ರೀಡಾಂಗಣ ಕೊಡಿ

ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಹಾಗೂ ಗುಜರಾತ್‌ನಂತಹ ರಾಜ್ಯ ಗಳಲ್ಲಿ ಐದಾರು ಅಂತಾರಾಷ್ಟ್ರೀಯ ಮೈದಾನಗಳಿದ್ದರೆ, ಕರ್ನಾಟಕದಲ್ಲಿ ಮಾತ್ರ ಕೇವಲ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೀಮಿತವಾಗಿರುವುದು ರಾಜ್ಯದ ಕ್ರೀಡಾ ಬದ್ಧತೆ ಪ್ರಶ್ನಿಸುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಿಸಲು ಕಲಬುರಗಿ ಯಲ್ಲಿ ಹೈಟೆಕ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡುವುದು ಸರಕಾರದ ಆದ್ಯತೆಯಾಗಬೇಕಿದೆ.

Loading...