ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಶಿಕ್ಷಕಿಯರು ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿಯ ಮಧುಶ್ರೀ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿಗೆ ಶಾಲೆಯಲ್ಲಿ ಶಿಕ್ಷಕಿಯರು ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕೇಸ್‌ ದಾಖಲಾಗಿದೆ.

375 ಕೋಟಿ ಮೌಲ್ಯದ ಮಾದಕ ವಸ್ತುಗಳ ವಶ; ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ ಘೋಷಿಸಿದ ಸಿಎಂ

ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ: ಸಿಎಂ

CM DK Shivakumar: ಡ್ರಗ್ಸ್ ಜಾಲವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

Kambala at Mysuru Dasara: ಮೈಸೂರು ದಸರಾ ಉತ್ಸವದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದ ಎಚ್‌ಡಿಕೆ

ಮೈಸೂರು ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದ ಎಚ್‌ಡಿಕೆ

ಕರಾವಳಿಯ ಕಂಬಳವನ್ನು ಮೈಸೂರು ದಸರಾದಲ್ಲಿ ಆಯೋಜನೆ ಮಾಡುವ ವಿಚಾರವಾಗಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ದಸರಾದಲ್ಲಿ ಕಂಬಳ ಆಯೋಜನೆಗೆ ಮೈಸೂರು ಸಂಸದ ಯದುವೀರ್‌ ಒಡೆಯರ್ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Gold Price Today On 11th July 2026: ವೀಕೆಂಡ್‌ ಶಾಪಿಂಗ್‌ ಮಾಡೋರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

Gold silver Price Today: ಚಿನ್ನದ ದರ ಶನಿವಾರ (ಜುಲೈ 11) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 45 ರುಪಾಯಿ ಕಡಿಮೆಯಾಗಿ 13,230 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 49 ರುಪಾಯಿ ಅಗ್ಗವಾಗಿ, 14,433 ರುಪಾಯಿಗೆ ಬಂದಿದೆ.

ಕೊಲ್ಲೂರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೊಲ್ಲೂರಿನಲ್ಲಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ರಾತ್ರಿಯೇ ದೇವಾಲಯಕ್ಕೆ ಆಗಮಿಸಿದ್ದ ಅವರು ಶನಿವಾರ ಬೆಳಗ್ಗೆ ಗಣಹೋಮದಲ್ಲಿ ಭಾಗಿಯಾದರು. ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಬತ್ತಿದ ಜಲಮೂಲಗಳು: ರೈತರಲ್ಲಿ ಹೆಚ್ಚಿದ ಆತಂಕ

ಬತ್ತಿದ ಜಲಮೂಲಗಳು: ರೈತರಲ್ಲಿ ಹೆಚ್ಚಿದ ಆತಂಕ

ಬೀದರ್ ಜಿಲ್ಲೆಯ ಪ್ರಮುಖ ಕಾರಂಜಾ ಜಲಾಶಯದಲ್ಲಿ ನೀರಿನ ಮಟ್ಟ ಶೇ.59.50ಕ್ಕೆ ಕುಸಿದಿದ್ದು, ಚುಳಕಿನಾಲಾದಲ್ಲಿ ಶೇ.57.04 ರಷ್ಟಿದೆ. ಅಪ್ಪರ್ ಮುಲ್ಲಾಮಾರಿ ಜಲಾಶಯವು ಶೇ.27.64 ರಷ್ಟಕ್ಕೆ ಕುಸಿದಿರುವುದು ಆ ಭಾಗದ ರೈತರ ಕೃಷಿ ಆಧಾರಿತ ಜೀವನಕ್ಕೆ ದೊಡ್ಡ ಹೊಡೆತ ನೀಡಿದೆ. ಯಾದಗಿರಿ ಜಿಲ್ಲೆಯ ಪರಿಸ್ಥಿತಿಯಂತೂ ಅತ್ಯಂತ ಗಂಭೀರವಾಗಿದ್ದು, ಹತ್ತಿಕುಣಿ ಜಲಾಶಯದಲ್ಲಿ ಕಳೆದ ವರ್ಷ ಶೇ. 80.11 ರಷ್ಟು ನೀರಿದ್ದರೆ, ಈ ಬಾರಿ ಕೇವಲ ಶೇ.25.00 ರಷ್ಟು ಮಾತ್ರ ಇದೆ.

ಮೋದಿಯವರಿಂದ ಇಂಡೊನೇಷಿಯಾ ಜತೆ 100 ಟನ್ ಬೀಜ ಪೂರೈಕೆ ಒಪ್ಪಂದ

ಮೋದಿಯವರಿಂದ ಇಂಡೊನೇಷಿಯಾ ಜತೆ 100 ಟನ್ ಬೀಜ ಪೂರೈಕೆ ಒಪ್ಪಂದ

ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಯವರು ಇಂಡೋನೇಷಿಯಾಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಮಹತ್ವದ ಒಪ್ಪಂದ ಮಾಡಿ ಕೊಂಡು ಬಂದಿದ್ದಾರೆ. ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಡಿಡಬ್ಲೂಆರ್-162 ಹೆಸರಿನ ಗೋಧಿ ತಳಿಯ 100 ಟನ್ ಬೀಜ ಇಂಡೊ ನೇಷಿಯಾಗೆ ಕೊಡುವ ಒಪ್ಪಂದ ಅದಾಗಿದೆ.

GBA elections: ಜಿಬಿಎ ಚುನಾವಣೆ ಮುಂದೂಡಲು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ

ಜಿಬಿಎ ಚುನಾವಣೆ ಮುಂದೂಡುವಂತೆ ಸುಪ್ರೀಂಗೆ ರಾಜ್ಯ ಸರ್ಕಾರ ಮನವಿ

ಎಸ್​ಐಆರ್ ಪ್ರಕ್ರಿಯೆ ನಂತರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7 ರಂದು ಪ್ರಕಟಿಸಲು ದಿನಾಂಕ ನಿಗದಿಪಡಿಸಲಾಗಿದೆ. ನಿಖರ ಮತದಾರರ ಪಟ್ಟಿಯಿಲ್ಲದೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಹಾಗಾಗಿ ಡಿಸೆಂಬರ್ 31 ರವರೆಗೆ ಜಿಬಿಎ ಚುನಾವಣೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ಸರ್ಕಾರ ಕೋರಿದೆ.

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಸಿಎಂಗೆ ಎಚ್‌ಡಿಕೆ ತೀವ್ರ ತರಾಟೆ

ಪ್ರಗತಿ ಪರಿಶೀಲನಾ ನೆಪದಲ್ಲಿ ಮುಖ್ಯಮಂತ್ರಿ ಜಾಲಿ ಟ್ರಿಪ್: ಎಚ್‌ಡಿಕೆ ಕಿಡಿ

HD Kumaraswamy: ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಡಿ.ಕೆ. ಶಿವಕುಮಾರ್‌ ನಡೆಸಿದ ಪ್ರಗತಿ ಪರಿಶೀಲನೆ ಕೇವಲ ಜಾಲಿಟ್ರಿಪ್ ಮಾತ್ರ. ಹಾಗೆಯೇ ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಮುಖ್ಯಮಂತ್ರಿ ವರ್ತನೆ ಅತ್ಯಂತ ಹೊಣೆಗೇಡಿತನದಿಂದ ಕೂಡಿದೆ. ರಾಜ್ಯದ ನೀರಾವರಿಯ ಸಂಕಷ್ಟಗಳ ಬಗ್ಗೆ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

SIR: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ: ನಾಗಮಣಿ ಎಂ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ

ಜೂನ್ 30ರಿಂದ ಆರಂಭಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯು ಜು.29ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಕೈಬಿಡುವಿಕೆ ಸೇರಿದಂತೆ ವಿವಿಧ ಸೇವೆಗಳಿಗೆ ಮತದಾರರು ಬಿಎಲ್ಒಗಳ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದು

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಬೆಳಗಾವಿಯಲ್ಲಿ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಬೇಕಾಗುತ್ತದೆ. ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

Vijayapura Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ಅಪಘಾತ ನಡೆದಿದೆ. ದುರ್ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಶುಕ್ರವಾರದಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿದೆ ಎಂದು ಮಹಾರಾಷ್ಟ್ರ ದ ಜಲ ಸಂಪನ್ಮೂಲ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಕೃಷ್ಣಾ ನದಿಯ ಮುಖ್ಯ ಹರವಿನಲ್ಲಿ ಒಳಬರುವ ನೀರಿನ ಪ್ರಮಾಣದಲ್ಲಿ ಯಾವದೆ ಕ್ಷಣದಲ್ಲಿ ಕಡಿಮೆಯಾಗಲಿದೆ ಎಂಬ ಆತಂಕ ಮೂಡಿದೆ.

Mysuru Dasara 2026: ಈ ಬಾರಿ 11 ದಿನಗಳ ವಿಜೃಂಭಣೆಯ ಮೈಸೂರು ದಸರಾ; ಅ.11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಸಿಎಂ

CM DK Shivakumar: ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Chikkaballapur News: ವಿದ್ಯಾರ್ಥಿಗಳಿಗೆ ವಿವಿಧ ಕಾನೂನುಗಳ ಕುರಿತು ಅರಿವು ಮೂಡಿಸಿದ ಕಾನೂನು ಅಭಿರಕ್ಷಕರು

ವಿದ್ಯಾರ್ಥಿಗಳಿಗೆ ವಿವಿಧ ಕಾನೂನುಗಳ ಕುರಿತು ಅರಿವು

ಯಾರಾದರೂ ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದರೆ, ಬೆದರಿಕೆ ಹಾಕಿದರೆ ಅಥವಾ ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿದರೆ ಅದನ್ನು ಮರೆಮಾಚದೆ ಪೋಷಕರು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯರು, ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು

ಬೆಂಗಳೂರಲ್ಲಿ ಈವರೆಗೂ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು; ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಸಿಎಂ

ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ: ಡಿ.ಕೆ. ಶಿವಕುಮಾರ್

CM DK Shivakumar: ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಶುಕ್ರವಾರ ಸಿಎಂ ಡಿ.ಕೆ. ಶಿವಕುಮಾರ್ ನಗರ ಪ್ರದಕ್ಷಿಣೆ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ, ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಸ್ಯಾಟ್ಸ್ ಸರ್ವರ್‌ ಸಮಸ್ಯೆ: ಪಾಲಕರ ಪರದಾಟ

ಸ್ಯಾಟ್ಸ್ ಸರ್ವರ್‌ ಸಮಸ್ಯೆ: ಪಾಲಕರ ಪರದಾಟ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡು ತಿಂಗಳು ಕಳೆದಿದ್ದು, ಸಕಾಲದಲ್ಲಿ ಪ್ರವೇಶಾತಿ ಸಿಗದೆ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲದಂತಾಗಿದೆ. ಈಗಾಗಲೇ ಶಾಲಾ, ಕಾಲೇಜು ಪ್ರವೇಶಾತಿ ಭರದಿಂದ ಸಾಗಬೇಕಿತ್ತು. ಆದರೆ ರಾಯಚೂರು ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆಯ ಶಾಲಾ ದಾಖಲಾತಿಗೆ ಬಳಸುವ ಸ್ಯಾಟ್ಸ್ ವೆಬ್ಸೈಟ್ನಲ್ಲಿ ಉಂಟಾಗಿರುವ ಸರ್ವರ್‌ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಜಲಪಾತದ ಸೊಬಗು, ಮನಸೋತ ಪ್ರವಾಸಿಗ

ಜಲಪಾತದ ಸೊಬಗು, ಮನಸೋತ ಪ್ರವಾಸಿಗ

ರಸ್ತೆಯ ಬದಿಯಲ್ಲೇ ಚಿಮ್ಮುವ ಜಲಪಾತಗಳು: ನಮ್ಮ ಚಿತ್ರದಲ್ಲಿ ಕಾಣುವ ದೃಶ್ಯವೇ ಇದಕ್ಕೆ ಸಾಕ್ಷಿ. ಇಲ್ಲಿ ಹೆದ್ದಾರಿಯ ಪಕ್ಕದಲ್ಲಿರುವ ಬೃಹತ್ ಬಂಡೆಗಲ್ಲುಗಳ ನಡುವಿನಿಂದ ಸೋರುವ ನೀರು ಸಣ್ಣ ಪುಟ್ಟ ಜಲಪಾತಗಳಂತೆ ಮೈದಳೆಯುತ್ತದೆ. ಮಳೆಗಾಲದ ಮಂಜು ಮತ್ತು ಹಸಿರಿನ ಹೊದಿಕೆಯನ್ನು ಹೊದ್ದು ಕೊಂಡಿರುವ ಈ ಕಲ್ಲುಬಂಡೆಗಳು, ಮಳೆನೀರಿನ ಸ್ಪರ್ಶದಿಂದ ಜೀವಂತಿಕೆ ಪಡೆದುಕೊಂಡಿವೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿ.ವೈ. ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿವೈವಿ

BY Vijayendra: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚಿಸಿದ್ದಾರೆ.

CITU: ಸಾವಿರಾರು ನೌಕರರ ಪ್ರತಿಭಟನೆ; ಸಮಾನ ವೇತನ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಮನವಿ

ಕರಾಳ ದಿನಾಚರಣೆಯಲ್ಲಿ ಸ್ಕೀಂ ನೌಕರರ ಆಕ್ರೋಶ

ಸಮಾನ ಕೆಲಸಕ್ಕೆ ಸಮಾನ ವೇತನ, ಗೌರವಧನ ಹೆಚ್ಚಳ, ಅಂಗನವಾಡಿ ಮತ್ತು ಅಕ್ಷರ ದಾಸೋಹ ಯೋಜನೆಗಳಿಗೆ ಸಮರ್ಪಕ ಅನುದಾನ, ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಪ್ರಸ್ತಾವ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾ ಕಾರರು, ಜಿಲ್ಲಾಡಳಿತದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.

Chinthamani News: ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ: ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು

ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ

ಸಂಜೆಯಾದರೂ ಮನೆಗೆ ಬಾರದೇ ಇರುವ ಕಾರಣಕ್ಕೆ ಅವರ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಸುಳಿವು ಸಿಗದೇ ಇರುವ ಕಾರಣಕ್ಕೆ ಇಂದು ಅವರ ಅಣ್ಣ ಹಿದಾಯತ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

Chinthamani News: ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಕೂಡ ಉತ್ತಮ ಕಾರ್ಯ: ಆರ್.ನರಸಿಂಹಮೂರ್ತಿ

ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಕೂಡ ಉತ್ತಮ ಕಾರ್ಯ

ಗ್ರಾ ಪಂ. ಮಾಜಿ ಅಧ್ಯಕ್ಷ ಎಸ್.ಅಂಜನಪ್ಪನವರು ಮಾತನಾಡಿ, ಶ್ರೀಯುತ ನರಸಿಂಹಮೂರ್ತಿ ರವರು ಇದೇ ಗ್ರಾಮದಲ್ಲಿ ಹುಟ್ಟಿದವರಾಗಿದ್ದು, ತನ್ನ ಹುಟ್ಟೂರಿನ ಬಗ್ಗೆ ಹೆಚ್ಚಿನ ಅಭಿಮಾನ ಹೊಂದಿದ್ದಾರೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ,ದೇಗುಲಗಳಿಗೆ, ಶಾಲೆಗಳಿಗೆ, ಬಡ ಬಗ್ಗರಿಗೆ ಹಾಗೂ ಇತರೆ ಸೇವಾ ಕಾರ್ಯಗಳಿಗೆ ವಿಶೇಷ ಕೊಡುಗೆ ನೀಡಿದ್ದಾರೆಂದು ತಿಳಿಸಿ ಅವರ ಸೇವಾ ಭಾವನೆಗಳ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.

Gubbi News: ಧರ್ಮಸ್ಥಳ ಸಂಸ್ಥೆಯಿಂದ ಒಂದು ಕೋಟಿ ಅರವತ್ತು ಲಕ್ಷ ಮಾಶಾಸನ ವಿತರಣೆ

ಧರ್ಮಸ್ಥಳ ಸಂಸ್ಥೆಯಿಂದ ಒಂದು ಕೋಟಿ ಅರವತ್ತು ಲಕ್ಷ ಮಾಶಾಸನ ವಿತರಣೆ

ಚತುರ್ಥನಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರದಿಂದ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಬಾರದೆಂದು ಮಾತೃಶ್ರೀ ಹೇಮಾವತಿ ಹೆಗಡೆ ಯವರ ಮಾರ್ಗದರ್ಶನದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡು ತ್ತಿರುವ ಒಟ್ಟು ನಾಲ್ಕು ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾದ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ

Gubbi News: ಪಂಚವಟಿ, ನವಗ್ರಹ ಮತ್ತು ಶಿವಲಿಂಗ ದೇವಾಲಯಕ್ಕೆ ಗುದ್ದಲಿಪೂಜೆ

ಪಂಚವಟಿ, ನವಗ್ರಹ ಮತ್ತು ಶಿವಲಿಂಗ ದೇವಾಲಯಕ್ಕೆ ಗುದ್ದಲಿಪೂಜೆ

ಭೂಮಿಪೂಜೆ ನೆರವೇರಿಸಿ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಯುವಕರ ತಂಡ ಗಣಪತಿ ಪ್ರತಿಷ್ಠಾಪನೆ ಮಾಡಿ ತಿಂಗಳು ಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಅದ್ದೂರಿಯಾಗಿ ಗಣಪತಿ ಹಬ್ಬ ಮಾಡುತ್ತಿದ್ದ ಟ್ರಸ್ಟ್ ಈಗ ಆಸ್ತಿಕರ ಭಾವನೆಗೆ ತಕ್ಕಂತೆ ಹೊಸ ಯೋಜನೆ ರೂಪಿಸಿಕೊಂಡು ನೂತನ ದೇವಾಲಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಅವರ ಈ ಸತ್ಕಾರ್ಯಕ್ಕೆ ಶುಭ ಹಾರೈಸುವುದಾಗಿ ತಿಳಿಸಿದರು

Loading...