ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸಿಗರೇಟ್ ಖರೀದಿಸಲು 500 ರೂ. ಖೋಟಾ ನೋಟು ಕೊಟ್ಟು ಸಿಕ್ಕಿಬಿದ್ದ MBA ಪದವೀಧರ; ರಾಜ್ಯದಲ್ಲಿ ಬೃಹತ್ ಖೋಟಾ ನೋಟು ದಂಧೆ ಬೆಳಕಿಗೆ!

ರಾಜ್ಯದಲ್ಲಿ ಖೋಟಾ ನೋಟು ದಂಧೆ ಬೆಳಕಿಗೆ; 6 ಮಂದಿ ಅರೆಸ್ಟ್‌

Fake currency racket: ಅಂಗಡಿಯೊಂದರಲ್ಲಿ ಚಲಾವಣೆಯಾದ ಕೇವಲ ಒಂದು ನಕಲಿ ನೋಟಿನ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರು, ಸದ್ಯ ಪ್ರಕರಣಕ್ಕೆ ಸಂಬಂಧಿಸಿ ದಂಧೆಯ ಕಿಂಗ್‌ಪಿನ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 500 ರೂ. ಮುಖಬೆಲೆಯ 60ಕ್ಕೂ ಹೆಚ್ಚು ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ ಅಕ್ರಮ ವಲಸಿಗರ ರಕ್ಷಣೆಗೆ ಹುನ್ನಾರ; ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

Shobha Karandlaje: ದೇಶದ ನಾಗರಿಕರಿಗೆ ಪೌರತ್ವ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ವಿದೇಶಿಗ ಯಾರು ಎಂಬ ಪ್ರಮಾಣ ಪತ್ರ ಕೊಡುವ, ವಲಸೆ ಪ್ರಮಾಣಪತ್ರ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಆದರೆ ರಾಜ್ಯ ಸರ್ಕಾರ ಈಗ ನಿವಾಸಿ ಪ್ರಮಾಣ ಪತ್ರ ನೀಡುತ್ತಿರುವುದು ಏಕೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

C.N. Muktha: ಕನ್ನಡದ ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಕಳ್ಳಂಬೆಳ್ಳ ನರಸಿಂಹಮೂರ್ತಿ ಮುಕ್ತಾ ಅವರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಹೆಚ್ಚು ಕಾಲ ವಿವಿಧೆಡೆ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಇವರ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ.

Udupi News: ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿಗರೇ ಎಚ್ಚರ: ರಸ್ತೆ ಬದಿ ವಾಹನ ನಿಲ್ಲಿಸಿ ಹೋದರೆ ಮರಳಿ ಸಿಗದೇ ಇರಬಹುದು! ಜಿಬಿಎಯಿಂದ ಬೃಹತ್ ತೆರವು ಕಾರ್ಯಾಚರಣೆ

ರಸ್ತೆ ಬದಿ ವಾಹನ ತೆರವು ಕಾರ್ಯಾಚರಣೆ ಆರಂಭಿಸಿದ ಜಿಬಿಎ

ತುಂಬಾ ದಿನಗಳಿಂದ ಬೆಂಗಳೂರಿನ ರಸ್ತೆ ಬದಿ ವಾಹನ ನಿಲ್ಲಿಸಿ ಹೋಗಿದ್ದರೆ ನಿಮ್ಮ ವಾಹನ ಇದೆಯೇ ಎಂಬುದನ್ನು ಒಮ್ಮೆ ಖಾತ್ರಿ ಪಡಿಸಿಕೊಳ್ಳಿ. ಇಲ್ಲವಾದರೆ ಮುಂದೆ ವಾಹನಕ್ಕಾಗಿ ಬೀದಿ ಬೀದಿ ಅಲೆದಾಡಬೇಕಾಗಬಹುದು. ಯಾಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ಸಂಚಾರಿ ಪೊಲೀಸರು ಜಂಟಿಯಾಗಿ ಬೀದಿ ಬದಿಯ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಸಕಲ ನರಸಿಂಹಲು ಚೆಟ್ಟಿ ಜನ್ಮ ಶತಮಾನೋತ್ಸವ; ಪ್ರಭಾತ ಕಲಾವಿದರಿಂದ ಸಂಗೀತ-ನೃತ್ಯ ರೂಪಕ "ರಾಮ ಪ್ರತೀಕ್ಷೆ" ಹಾಗೂ "ರಾಮ ಭಕ್ತಿಸುಧಾ" ಪ್ರದರ್ಶನ

ಸಕಲ ನರಸಿಂಹಲು ಚೆಟ್ಟಿ ಜನ್ಮ ಶತಮಾನೋತ್ಸವ; ಕಲಾವಿದರಿಂದ ಪ್ರದರ್ಶನ

ಪ್ರಿಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಭಾಂಗಣದಲ್ಲಿ ಶತಮಾನೋತ್ಸವದ ಪ್ರಮುಖ ಆಕರ್ಷಣೆಯಾಗಿ ಪ್ರಭಾತ ಕಲಾವಿದರು ಅಭಿನಯಿಸಿದ ಅದ್ಭುತ ಸಂಗೀತ-ನೃತ್ಯ ರೂಪಕ "ರಾಮ ಪ್ರತೀಕ್ಷೆ" ಹಾಗೂ "ರಾಮ ಭಕ್ತಿಸುಧಾ". ಸಂಗೀತ, ವಾಚನ, ನೃತ್ಯ ಮತ್ತು ನಾಟಕದ ಮನೋಜ್ಞ ಸಂಯೋ ಜನೆಯ ಮೂಲಕ ಸಂಪೂರ್ಣ ರಾಮಾಯಣವನ್ನು ಒಂದೇ ನಿರಂತರ ಪ್ರದರ್ಶನದಲ್ಲಿ ಮನಮೋಹಕ ವಾಗಿ ಅನಾವರಣಗೊಳಿಸಿದರು.

ಶಿಶು ಮಂದಿರ- ಆನ್ ಸಹಯೋಗ: ಪರಿಸರಸ್ನೇಹಿ ಸಾರಿಗೆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ಬಲ

ಪರಿಸರಸ್ನೇಹಿ ಸಾರಿಗೆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ಬಲ

ಕೆ.ಆರ್.ಪುರಂ ಹಾಗೂ ಪೂರ್ವ ಬೆಂಗಳೂರಿನ ವಿವಿಧ ಪ್ರದೇಶಗಳಿಂದ ಆಯ್ಕೆಯಾದ 12 ಮಹಿಳಾ ಫಲಾನುಭವಿಗಳಲ್ಲಿ ಹೆಚ್ಚಿನವರು ಒಂಟಿ ತಾಯಂದಿರು ಮತ್ತು ವಿಧವೆಯರಾಗಿದ್ದಾರೆ. ವಾಹನ ಹಸ್ತಾಂ ತರಕ್ಕೂ ಮುನ್ನ ಅವರು ಚಾಲನಾ ಕೌಶಲ್ಯ, ರಸ್ತೆ ಸುರಕ್ಷತೆ ಹಾಗೂ ವಾಹನ ನಿರ್ವಹಣೆಗೆ ಸಂಬಂಧಿಸಿದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚಿಕ್ಕಬಳ್ಳಾಪುರವಿನ್ನು ವಿಶ್ವಬಳ್ಳಾಪುರ: ಮಧುಸೂದನ ಸಾಯಿ

ಚಿಕ್ಕಬಳ್ಳಾಪುರವಿನ್ನು ವಿಶ್ವಬಳ್ಳಾಪುರ: ಮಧುಸೂದನ ಸಾಯಿ

ಚಿಕ್ಕಬಳ್ಳಾಪುರ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವರ್ಷಗಳ ಹಿಂದೆ ಉದ್ಘಾಟಿಸಿದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯು ಬಿಲ್ಲಿಂಗ್ ಕೌಂಟರ್‌ಗಳಿಲ್ಲದೆ ಎಲ್ಲ ರೋಗಿಗಳಿಗೆ ಉಚಿತ ಚಿಕಿತ್ಸೆ ಮತ್ತು ಆರೈಕೆ ನೀಡುತ್ತಿದ್ದು ಇಂತಹ ಸೌಲಭ್ಯ ನೀಡುವ ವಿಶ್ವದ ಏಕೈಕ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಾಗಿ ಗುರುತಿಸಿಕೊಂಡಿದೆ.

ಇಚ್ಛಾಶಕ್ತಿ ಕೊರತೆ: ಕಾರಂಜಾ ಸಂತ್ರಸ್ಥರಿಗಿನ್ನೂ ಸಿಕ್ಕಿಲ್ಲ ನ್ಯಾಯ

ಇಚ್ಛಾಶಕ್ತಿ ಕೊರತೆ: ಕಾರಂಜಾ ಸಂತ್ರಸ್ಥರಿಗಿನ್ನೂ ಸಿಕ್ಕಿಲ್ಲ ನ್ಯಾಯ

ಕಾರಂಜಾ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಸದಸ್ಯರ ಸಾಮೂಹಿಕ ಆತ್ಮಹತ್ಯೆಯತ್ನಕ್ಕೂ ಸರಕಾರ ಮಣಿದಿಲ್ಲ. ಇಲ್ಲಿನ ಸಂತ್ರಸ್ತರ ಪಾಲಿಗೆ ಪರಿಹಾರ ಗಗನಕುಸುಮವಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಇದುವರೆಗೂ ಸೂಕ್ತ ಪರಿಹಾರ ಬಂದಿಲ್ಲ. ಈ ವಿಚಾರದಲ್ಲಿ ಕಾಲಕ್ಕೆ ತಕ್ಕಂತೆ ರಾಜಕಾರಣ ಮಾಡಲಾಗುತ್ತಿದೆ ಎಂಬುದು ರೈತರ ಅಳಲು. ಯಾವುದೇ ಷರತ್ತು ಇಲ್ಲದೆ 4 ದಶಕಗಳ ಹಿಂದೆ ಭೂಮಿ ನೀಡಿದ ರೈತರ ಬದುಕು ದುಸ್ತರ ಆಗಿದೆ.

ಎಸ್‌ʼಐಆರ್‌ ನಮೂನೆ ಭರ್ತಿ ಮಾಡಲಾಗದೇ ಜನ ಹೈರಾಣ !

ಎಸ್‌ʼಐಆರ್‌ ನಮೂನೆ ಭರ್ತಿ ಮಾಡಲಾಗದೇ ಜನ ಹೈರಾಣ !

ಕಳೆದ ಜೂ.30ರಿಂದ ಬಿಎಲ್ಒಗಳು ಮತ ದಾರರ ಮನೆಗಳಿಗೆ ತೆರಳಿ ನಮೂನೆ ವಿತರಿಸಲು ಆರಂಭಿಸಿ ದ್ದಾರೆ. ಈ ಪ್ರಕ್ರಿಯೆ ಜುಲೈ ಅಂತ್ಯದವ ರೆಗೂ ಮುಂದುವರಿಯಲಿದ್ದು, ಭರ್ತಿ ಮಾಡಿದ ಫಾರ್ಮ್‌ಗಳನ್ನು ಸಂಗ್ರಹಿಸುವ ಕಾರ್ಯ ಜು.5 ರಿಂದ ಆರಂಭವಾಗಿದೆ. ಕೆಲವರು ಈಗಾಗಲೇ ನಮೂನೆ ಹಿಂದಿರುಗಿಸಿದ್ದು, ಬಹಳಷ್ಟು ಮಂದಿ 2002ರ ಅವಧಿಯ ಮತಪಟ್ಟಿಯಲ್ಲಿನ ಅಂಕಿ- ಅಂಶ ತುಂಬಲು ಪರದಾಡು ವಂತಾಗಿದೆ

Lokadhwani Award presentation:‌ ಮೇಘಾಲಯದಲ್ಲಿ ನಾಳೆ ಲೋಕಧ್ವನಿ ಪ್ರಶಸ್ತಿ ಪ್ರಧಾನ

ಮೇಘಾಲಯದಲ್ಲಿ ನಾಳೆ ಲೋಕಧ್ವನಿ ಪ್ರಶಸ್ತಿ ಪ್ರಧಾನ

ಈ ಬಾರಿ ಲೋಕಧ್ವನಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅಲ್ಲದೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಶಿಲ್ಲಾಂಗ್‌ನ ಲೋಕಭವನ ದಲ್ಲಿ ಪ್ರಶಸಿ ಪ್ರದಾನ ಮಾಡಲಾಗುತ್ತಿದೆ. ‘ನಮ್ಮ ಹೆಮ್ಮೆಯ ಸಾಧಕರು’ ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 11ರಂದು ಶನಿವಾರ ಸಾಯಂಕಾಲ 5 ಗಂಟೆಗೆ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭದ ಉಪಸ್ಥಿತಿಯನ್ನು ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರು ವಹಿಸಿ, ಸಾಧಕರಿಗೆ ಪ್ರಶಸ್ತಿ ವಿತರಿಸಲಿದ್ದಾರೆ.

Karnataka Weather: ರಾಜ್ಯದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ ಸಹಿತ ವಿವಿಧ ಜಿಲ್ಲೆಗಳಿಗಳಿಗೆ ಯೆಲ್ಲೋ ಅಲರ್ಟ್‌

ಇಂದು ಕರಾವಳಿ ಸಹಿತ ವಿವಿಧ ಜಿಲ್ಲೆಗಳಿಗಳಿಗೆ ಯೆಲ್ಲೋ ಅಲರ್ಟ್‌

Weather Report: ನಿಧಾನವಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ 24 ಗಂಟೆಯವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಗಾಳಿ ಸಹಿತ ಮಳೆ ಸುರಿಯಲಿದೆ.

'ಮಾನವ ಸೇವೆಯೇ ಮಾಧವ ಸೇವೆ'; ಆರೋಗ್ಯ, ಶಿಕ್ಷಣ ವ್ಯಾಪಾರವಾಗಬಾರದು: ಸತ್ಯಸಾಯಿ ಗ್ರಾಮದಲ್ಲಿ ಮಾಧ್ಯಮ ಸಂವಾದ

ಶಕ್ತಿ–ಸಾಮರ್ಥ್ಯ ಇದ್ದಾಗ ಸಮಾಜಕ್ಕೆ ನೆರವಾಗಬೇಕು

ತಾಲೂಕಿನ ಮುದ್ದೇನಹಳ್ಳಿ ಸಮೀಪದ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ನಡೆದ ಮಾಧ್ಯಮ ಮಿತ್ರರೊಂದಿಗೆ ಸೌಹಾರ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ ಸೇವೆಯೇ ಮಾಧವ ಸೇವೆ ಎಂಬ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಪರಿವರ್ತನೆ ಸಾಧ್ಯ

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು

Vedavyas Kamath: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ. ವೇದವ್ಯಾಸ್ ಕಾಮತ್ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

Chinthamani News: ಜು.11ರಂದು ಬೆಂಗಳೂರಿಗೆ ಚಿಂತಾಮಣಿಯಿಂದ ಬಸ್ ವ್ಯವಸ್ಥೆ; ಸರ್ಕಾರಿ ನೌಕರರಿಗೆ ಆರ್. ಅಶೋಕ್ ಕುಮಾರ್ ಕರೆ

'ನಮ್ಮ ಅಭಿಮಾನದ ಅಭಿನಂದನೆ' ಕಾರ್ಯಕ್ರಮ ಯಶಸ್ವಿಗೊಳಿಸಿ

ಜು.11ರಂದು ಬೆಳಗ್ಗೆ 7 ಗಂಟೆಗೆ ಚಿಂತಾಮಣಿ ನಗರದ ಸರ್ಕಾರಿ ಭವನದ ಮುಂಭಾಗದಿಂದ ಬೆಂಗಳೂರಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಸೌಲಭ್ಯವನ್ನು ಬಳಸಿ ಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗುಡಿಬಂಡೆಯಲ್ಲಿ ವಿಶೇಷ ಮೊಹರಂ ಆಚರಣೆ: ಭಾವೈಕ್ಯದ ಸಂದೇಶ ಸಾರಿದ ಮೆರವಣಿಗೆ

ಗುಡಿಬಂಡೆಯಲ್ಲಿ ವಿಶೇಷ ಮೊಹರಂ ಆಚರಣೆ

ಮೆರವಣಿಗೆಗೆ ಮುನ್ನ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಮೌಲಾನಾಗಳು ಹಸನ್-ಹುಸೇನ್ ಅವರ ತ್ಯಾಗ, ಮಹತ್ವ ಹಾಗೂ ಮೊಹರಂ ಆಚರಣೆಯ ಧಾರ್ಮಿಕ ಹಿನ್ನೆಲೆಯ ಕುರಿತು ಉಪನ್ಯಾಸ ನೀಡಿದರು. ಬಳಿಕ ಜಾಮಿಯಾ ಮಸೀದಿ ಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಹಿಂದೂ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ನವಾಜ್‌

Love Jihad: ಬೆಂಗಳೂರಿನಲ್ಲಿ ಲವ್‌ ಜಿಹಾದ್‌ ಹೋಲುವ ಪ್ರಕರಣವೊಂದು ನಡೆದಿದೆ. ಬೆಂಗಳೂರಿನ ವರ್ತೂರು ಮುಖ್ಯ ರಸ್ತೆ ಬಳಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

SIR: ಎಸ್‌ಐಆರ್ ಚುನಾವಣಾ ಆಯೋಗದ ನಿಯಮಿತ ಪ್ರಕ್ರಿಯೆ; ಸಹಕಾರ ನೀಡಬೇಕು: ದತ್ತಾತ್ರಿ

ಇದು ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಸಂಚು ಅಲ್ಲ

ಮತದಾರರ ಪಟ್ಟಿಯನ್ನು ಶುದ್ಧೀ ಕರಿಸಿ, ಅನರ್ಹ ಹಾಗೂ ನಕಲಿ ಮತದಾರರ ಹೆಸರನ್ನು ತೆಗೆದುಹಾಕಿ ಅರ್ಹ ಮತದಾರರ ಹೆಸರನ್ನು ಖಚಿತಪಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಕಾಲಕಾಲಕ್ಕೆ ಈ ಪ್ರಕ್ರಿಯೆಯನ್ನು ಕೈಗೊಳ್ಳುತ್ತದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಬೇಕು

Protest: ಮಾರುಕಟ್ಟೆಯಲ್ಲಿ ಗಲಾಟೆ: ಹಮಾಲಿ ಕಾರ್ಮಿಕರ ಮೇಲೆ ಟೊಮೆಟೊ ಲಾರಿ ಡ್ರೈವರ್ ದೌರ್ಜನ್ಯ, ವ್ಯಾಪಾರಿಗಳ ಆಕ್ರೋಶ.

ಹಮಾಲಿ ಕಾರ್ಮಿಕರ ಮೇಲೆ ಟೊಮೆಟೊ ಲಾರಿ ಡ್ರೈವರ್ ದೌರ್ಜನ್ಯ

ಗೇಟ್ ನಂ 1 ಮತ್ತು 2 ರಲ್ಲಿ ಅಕ್ಕಿ ಮತ್ತಿತರ ಧವಸಧಾನ್ಯಗಳು ವ್ಯಾಪಾರಿಗಳೇ ಹೆಚ್ಚಾಗಿದ್ದಾರೆ.ಅಕ್ಕಿ ತರುವ ಲಾರಿಗಳು 2-3 ದಿನ ರಸ್ತೆಯಲ್ಲೇ ನಿಲ್ಲಬೇಕಾಗಿರುವುದು ಸಮಸ್ಯೆ ಆಗಿದೆ. ರಸ್ತೆಯಲ್ಲೇ ವಾಹನಗಳು ನಿಂತಿರುತ್ತವೆ,ಬಾಕ್ಸ್ ಗಳನ್ನು ರಸ್ತೆಯಲ್ಲೇ ಇಟ್ಟುಕೊಂಡಿರುತ್ತಾರೆ.ಕೇಳಿದರೆ ಗಲಾಟೆ ಮಾಡಲು ಬರುತ್ತಾರೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಎಂ ಜಿ ರಮೇಶಬಾಬು ದೂರಿದರು.

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಈ ಉಪಕ್ರಮವು ರೋಗಿಗಳಿಗೆ ಆರೋಗ್ಯ ವ್ಯವಸ್ಥೆಯಲ್ಲಿ ಸೂಕ್ತ ಮಾರ್ಗದರ್ಶನ ಒದಗಿಸುವುದು, ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ನೆರವು ನೀಡುವುದು, ಸಮಾಲೋ ಚನಾ ಸೇವೆಗಳನ್ನು ಒದಗಿಸುವುದು ಹಾಗೂ ಚಿಕಿತ್ಸೆಯ ಸಂಪೂರ್ಣ ಅವಧಿಯಲ್ಲಿ ಅವರಿಗೆ ಅಗತ್ಯ ಬೆಂಬಲ ಸೇವೆಗಳ ಸಂಪರ್ಕ ಕಲ್ಪಿಸುವ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡುವತ್ತ ಗಮನಹರಿಸುತ್ತದೆ.

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಐದು ವರ್ಷದ ಮಗುವಿನ ಲಿವರ್ ದಾನದಿಂದ ಬಾಲಕಿಗೆ ಹೊಸ ಬದುಕು

ಶಿಶುವಾಗಿದ್ದಾಗಲೇ ಕಾಯಿಲೆ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ 2012ರಲ್ಲಿ ಕಸಾಯಿ ಪೋರ್ಟೋ ಎಂಟೆರೋಸ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ ಕಾಲಕ್ರಮೇಣ ಲಿವರ್‌ಗೆ ತೀವ್ರ ಹಾನಿ ಯಾಗಿದ್ದು, ಕಾಮಾಲೆ, ದೈಹಿಕ ಬೆಳವಣಿಗೆ ಕುಂಠಿತ, ಪದೇಪದೆ ಆಸ್ಪತ್ರೆಗೆ ದಾಖಲಾಗುವುದು ಹಾಗೂ ಪೋರ್ಟಲ್ ಹೈಪರ್‌ಟೆನ್ಷನ್‌ನಿಂದ ಜೀರ್ಣಾಂಗದ ರಕ್ತಸ್ರಾವದ ಅಪಾಯ ಎದುರಿಸುತ್ತಿದ್ದರು.

Gudibande News: ನೈಜ ಚುನಾವಣೆಯ ಅನುಭವ ಪಡೆದ ವಿದ್ಯಾರ್ಥಿಗಳು; ಪ್ರಜಾಪ್ರಭುತ್ವ ಮೌಲ್ಯಗಳ ಅರಿವು

ಹಬ್ಬದ ಸಂಭ್ರಮದಲ್ಲಿ ಮಾಚಹಳ್ಳಿ ಶಾಲಾ ಸಂಸತ್ ಚುನಾವಣೆ

ಅಭ್ಯರ್ಥಿಗಳ ಪ್ರಚಾರ, ಪರ–ವಿರೋಧ ಪಕ್ಷಗಳ ಆರೋಪ–ಪ್ರತ್ಯಾರೋಪ, ಮತದಾರರ ಓಲೈಕೆ, ಮತಗಟ್ಟೆ ಮುಂದೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಕ್ಕಾಗಿ ಕಾತರದಿಂದ ಕಾಯುತ್ತಿದ್ದ ಅಭ್ಯರ್ಥಿಗಳ ಸಂಭ್ರಮ ಸಾಮಾನ್ಯ ಚುನಾವಣೆಯನ್ನೇ ನೆನಪಿಸು ವಂತಿತ್ತು. ಮತದಾನಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞೆ ಸ್ವೀಕರಿಸಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದರು.

ಎಚ್ಎಂಟಿ ಜಾಗದ ವಿಚಾರದಲ್ಲಿ ಈಶ್ವರ ಖಂಡ್ರೆ-ಎಚ್.ಡಿ. ಕುಮಾರಸ್ವಾಮಿ ವಾಕ್ಸಮರ; ರಾಜ್ಯ ಸರ್ಕಾರಕ್ಕೆ ಹಕ್ಕಿಲ್ಲ ಎಂದ ಎಚ್‌ಡಿಕೆ

ಎಚ್ಎಂಟಿ ಜಾಗದ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿಲ್ಲ: ಎಚ್.ಡಿ. ಕುಮಾರಸ್ವಾಮಿ

HD Kumaraswamy vs Eshwara Khandre: ಎಚ್ಎಂಟಿ ಜಾಗದ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ನಮ್ಮ ಬಳಿ ಇವೆ. ಯಾವುದೇ ಕಾರಣಕ್ಕೂ ಎಚ್‌ಎಂಟಿ ಭೂಮಿಯನ್ನು ಮುಟ್ಟಲು ಆಗುವುದಿಲ್ಲ. ನ್ಯಾಯಾಲಯದ ತಡೆಯಾಜ್ಞೆ ಕೂಡ ನೀಡಿದೆ. ಇಷ್ಟೆಲ್ಲ ಮಾತನಾಡುವ ಈಶ್ವರ್ ಖಂಡ್ರೆ ಅರಣ್ಯ ಸಚಿವರಾಗಿದ್ದಾಗ ಎರಡು ವರ್ಷಗಳಿಂದ ಎಲ್ಲೆಲ್ಲಿ ಭೂಮಿ ಉಳಿಸಿದ್ದಾರೆ? ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Loading...