ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಗೇಟ್‌ಗೆ ಡಿಕ್ಕಿ ಹೊಡೆದು ಅಪಾರ್ಟ್‌ಮೆಂಟ್‌ಗೆ ನುಗ್ಗಿದ ವೇಗದ ಕಾರ್‌; ಬೆಂಗಳೂರಿನಲ್ಲಿ ಕೂದಲೆಳೆ ಅಂತರದಲ್ಲಿ ಸೆಕ್ಯೂರಿಟಿ ಗಾರ್ಡ್ ಪಾರು

ಅಪಾರ್ಟ್‌ಮೆಂಟ್ ಗೇಟ್‌ಗೆ ಕಾರ್‌ ಡಿಕ್ಕಿ: ಭಯಾನಕ ವಿಡಿಯೊ ನೋಡಿ

Viral Video: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಅಪಾರ್ಟ್‌ಮೆಂಟ್‌ ಒಂದರ ಗೇಟ್‌ಗೆ ಕಾರೊಂದು ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಪ್ರವೇಶ ದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕಾರಿನ ವೇಗಕ್ಕೆ ಕಬ್ಬಿಣದ ಗೇಟ್ ಪುಡಿ ಪುಡಿಯಾಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Gelatin Blast at Kalaburagi: ಪತ್ನಿ ನಡತೆ ಬಗ್ಗೆ ಸಂಶಯ ಪಟ್ಟು ಮನೆಯಲ್ಲೇ ಜಿಲೆಟಿನ್ ಸ್ಫೋಟ; ತಂದೆ–ಮಗಳು ಬಲಿ, ನಾಲ್ವರಿಗೆ ಗಂಭೀರ ಗಾಯ!

ಪತ್ನಿ ನಡತೆ ಬಗ್ಗೆ ಸಂಶಯ; ಜಿಲೆಟಿನ್ ಸ್ಫೋಟಕ್ಕೆ ತಂದೆ–ಮಗಳು ಬಲಿ

Kalaburagi News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ನಡತೆ ಬಗ್ಗೆ ಸಂಶಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ 15 ವರ್ಷದ ಪುತ್ರಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಂಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

Cauvery Water Dispute: ಕರ್ನಾಟಕಕ್ಕೆ ಮತ್ತೆ ಶಾಕ್‌ ನೀಡಿದ CWRC; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್​ ನೀರು ಹರಿಸಲು ಆದೇಶ!

ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್​ ನೀರು ಹರಿಸಲು CWRC ಆದೇಶ

ಕರ್ನಾಟಕವು ಮಳೆ ಕೊರತೆ ಮತ್ತು ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿತದ ಬಗ್ಗೆ ವಿವರಿಸಿದ್ದು, ಸದ್ಯ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್‌​ನಷ್ಟು ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕ ಇಲ್ಲ ಎನ್ನುವುದನ್ನು ಸಿಡಬ್ಲ್ಯುಆರ್​ಸಿಗೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮನದಟ್ಟು ಮಾಡಿದ್ದಾರೆ. ಆದರೂ, ನೀರು ಹರಿಸುವಂತೆ ಸಿಡಬ್ಲ್ಯುಆರ್ ಸೂಚನೆ ನೀಡಿದೆ.

ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ಗೋವಾದಲ್ಲಿ ಅದ್ಧೂರಿಯಾಗಿ ನಡೆದ ಪ್ರಪ್ರಥಮ ಪ್ರತಿಬಿಂಬ ಕಾರ್ಯಕ್ರಮ

ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ಗೋವಾದಲ್ಲಿ ಪ್ರಪ್ರಥಮ ಪ್ರತಿಬಿಂಬ ಕಾರ್ಯಕ್ರಮ

ಪ್ರತಿಬಿಂಬ ಕಾರ್ಯಕ್ರಮ ಪ್ರತಿಭೆಗಳಿಗೆ ಸ್ಫೂರ್ತಿ ನೀಡುತ್ತದೆ, ಪ್ರೇರಣೆ ನೀಡುತ್ತದೆ ಹಾಗೂ ಕಳೆದ ಮೂರು ದಶಕಗಳಿಂದ ಹವ್ಯಕ ಮಹಾಸಭೆ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿರುವುದೇ ಇದರ ಪ್ರಾಮುಖ್ಯತೆಯನ್ನು ದೃಢೀಕರಿಸುತ್ತಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ ತಿಳಿಸಿದ್ದಾರೆ.

Bengaluru Tragedy: ಬೆಂಗಳೂರಿನಲ್ಲಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು, ಮೂವರ ರಕ್ಷಣೆ

ಬೆಂಗಳೂರಿನಲ್ಲಿ ಅಂಡರ್‌ ಪಾಸ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ಸಾವು

Soil Wall Collapse in Bengaluru: ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಂಡರ್‌ ಪಾಸ್‌ ಕಾಮಗಾರಿ ಸ್ಥಳದಲ್ಲಿ ಸುಮಾರು 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ, ಸಚಿವ ಡಾ.ಎಂ.ಬಿ.ಪಾಟೀಲ್ ಲೋಕಾರ್ಪಣೆ

ಸೌಂದರ್ಯಿಕರಣಗೊಂಡ ಮಮದಾಪುರ ಸರೋವರ

ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ್ ಅವರು ಜಿಲ್ಲೆಯ ಬಬಲೇಶ್ವರ ತಾಲ್ಲೂಕಿ ನಲ್ಲಿರುವ ಐತಿಹಾಸಿಕ, ಸಮುದಾಯ ಮೂಲಸೌಕರ್ಯಗಳಿಂದ ಸೌಂದರ್ಯಿಕರಣ ಗೊಂಡ ಮಮದಾಪುರ ಸರೋವರವನ್ನು ಲೋಕಾರ್ಪಣೆ ಮಾಡಿದರು.

Bandh: ಬೆಳೆ ವಿಮೆ ತಾರತಮ್ಯ ಖಂಡಿಸಿ ಕಾಳಗಿ ಸಂಪೂರ್ಣ ಬಂದ್: ರೈತರ ಹೋರಾಟಕ್ಕೆ ವ್ಯಾಪಾರಸ್ಥರು, ಸಾರ್ವಜನಿಕರ ಬೆಂಬಲ; ನ್ಯಾಯಯುತ ಪರಿಹಾರಕ್ಕೆ ಆಗ್ರಹ

ಬೆಳೆ ವಿಮೆ ತಾರತಮ್ಯ ಖಂಡಿಸಿ ಕಾಳಗಿ ಸಂಪೂರ್ಣ ಬಂದ್

ಬೆಳೆ ವಿಮೆ ಪಾವತಿಯಲ್ಲಿ ಅರ್ಹ ರೈತರಿಗೆ ಅನ್ಯಾಯವಾಗಿದ್ದು, ವಿಮೆ ಪಾವತಿಗೆ ಸಂಬಂಧಿಸಿದ ತಾರತಮ್ಯವನ್ನು ಸರಿಪಡಿಸಿ ನಷ್ಟಕ್ಕೊಳಗಾದ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಕೈಜೋಡಿಸಿದರು

ವಾಹನ ಮಾಲೀಕರಿಗೆ ಕನಿಷ್ಠ ಒಂದು ಲಕ್ಷ ರೂ ವಿಶೇಷ ಪ್ಯಾಕೇಜ್ ಘೋಷಿಸಿ: ಡಾ. ಆನಂದ ಕುಮಾರ್

ವಾಹನ ಮಾಲೀಕರಿಗೆ ಕನಿಷ್ಠ ಒಂದು ಲಕ್ಷ ರೂ ವಿಶೇಷ ಪ್ಯಾಕೇಜ್ ಘೋಷಿಸಿ

ಎಥೆನಾಲ್ ಮಿಶ್ರಣದ ಪೆಟ್ರೋಲ್ ಮಾರಾಟ ಅಳಿಸಲಾಗದ ಹಾನಿಯುಂಟು ಮಾಡಲಿದೆ. ಹೆಚ್ಚು ಉದ್ಯೋಗ ನೀಡಿರುವ ಸಾಗಾಣೆ ವಲಯಕ್ಕೆ ಇದು ಪ್ರತಿಕೂಲ ಪರಿಣಾಮ ಬೀರುತ್ತಿದೆ. ಎಥೆನಾಲ್ ಮಿಶ್ರಣದ ನಂತರವೂ ಪೆಟ್ರೋಲ್ ದರ ಕಡಿಮೆಯಾಗಿಲ್ಲ. "ಅದೇ ಬೆಲೆ, ಆದರೆ ದೂರ ಕಡಿಮೆ" ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ದೇಶದ ಜನರ ಸಾವಿರಾರು ಕೋಟಿ ರೂ ತೈಲ ಕಂಪೆನಿಗಳ ಜೇಬಿಗೆ ಸೇರುತ್ತಿದೆ.

K S Basavantappa: ಸಂವಿಧಾನದ ಶಕ್ತಿ ಎಂದರೇ ಇದೇ: ಡಾ. ಆನಂದ ಕುಮಾರ್

ರಸ್ತೆ ಗುಡಿಸಿದ ಕೈಗಳಿಗೆ ಆಡಳಿತ: ಸಚಿವ ಕೆ.ಎಸ್.ಬಸವಂತಪ್ಪ

ಸಮಾಜದ ತಳಮಟ್ಟದಿಂದ ಮೇಲಕ್ಕೆ ಬರುವುದು ಸುಲಭವಲ್ಲ. ಬಡತನ, ಸಾಮಾಜಿಕ ಅಸಮಾ ನತೆ, ಅವಕಾಶಗಳ ಕೊರತೆ ಮತ್ತು ಜೀವನದ ಅನೇಕ ಸಂಕಷ್ಟಗಳನ್ನು ಎದುರಿಸುತ್ತಾ, ಕೆ.ಎಸ್. ಬಸವಂತಪ್ಪ ಅವರು ಯಾವುದೇ ಕೆಲಸವನ್ನು ಕೀಳಾಗಿ ಕಾಣದೆ ದುಡಿದರು. ಶ್ರಮವನ್ನೇ ತಮ್ಮ ಆತ್ಮಗೌರವವನ್ನಾಗಿ ಮಾಡಿಕೊಂಡ ಅವರು, ಜನರ ನೋವನ್ನು ತಮ್ಮ ನೋವನ್ನಾಗಿ ಕಂಡರು. ಇದೇ ಬದುಕಿನ ಅನುಭವ ಅವರನ್ನು ಜನಸೇವೆಯತ್ತ ಕೊಂಡೊಯ್ದಿತು

Chithamani News: 60 ಅಡಿ ಆಳದ ಪಾಳುಬಾವಿಗೆ ಬಿದ್ದಿದ್ದ ಎರಡು ಜಿಂಕೆಗಳ ಪ್ರಾಣರಕ್ಷಣೆ:ಅರಣ್ಯ ಮತ್ತು ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಾಚರಣೆ!

ಪಾಳುಬಾವಿಯಲ್ಲಿದ್ದ ಜಿಂಕೆಗಳಿಗೆ ಜೀವದಾನ: ಗ್ರಾಮಸ್ಥರ ಮೆಚ್ಚುಗೆ

ಜಗತನಹಳ್ಳಿ ಗ್ರಾಮದ ನಿವಾಸಿ ಬೊಮ್ಮರೆಡ್ಡಿ ಎಂಬುವರಿಗೆ ಸೇರಿದ ಕೃಷಿ ಜಮೀನಿನಲ್ಲಿ ಸುಮಾರು 60 ರಿಂದ 70 ಅಡಿ ಆಳದ ಕಲ್ಲು ಕಟ್ಟಡದ ಪಾಳುಬಾವಿ ಇದೆ. ಬೆಳಗಿನ ಜಾವ ಜಮೀನಿನ ಬಳಿ ಬಂದ ಮಾಲೀಕರಿಗೆ ಬಾವಿಯೊಳಗಿನಿಂದ ಶಬ್ದ ಕೇಳಿಬಂದಿದೆ. ಪರಿಶೀಲಿಸಿದಾಗ ಎರಡು ಜಿಂಕೆಗಳು ಬಾವಿ ಯೊಳಗೆ ಬಿದ್ದು ಚಡಪಡಿಸುತ್ತಿರುವುದು ಕಂಡುಬಂದಿದೆ.

Gauribidanur News: ತೀರ್ಥ ಶಾಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ

ತೀರ್ಥ ಶಾಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಕರೆಯಂತೆ ಆ.9ರಿಂದ 17ರವರೆಗೆ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಇದರ ಅಂಗವಾಗಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ತ್ರಿವರ್ಣ ಧ್ವಜದ ವೈಭವ ವನ್ನು ಎತ್ತಿ ಹಿಡಿಯುವುದರ ಜತೆಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿ ಹೆಚ್ಚಿಸುವುದು ಉದ್ದೇಶವಾಗಿದೆ

Shidlaghatta News: ಕನಸು ನನಸಾಗಿಸಲು ಪರಿಶ್ರಮವೇ ಮೆಟ್ಟಿಲು: ಪುಟ್ಟು ಅಂಜಿನಪ್ಪ

ಕನಸು ನನಸಾಗಿಸಲು ಪರಿಶ್ರಮವೇ ಮೆಟ್ಟಿಲು: ಪುಟ್ಟು ಅಂಜಿನಪ್ಪ

ತಂದೆ-ತಾಯಿ ಸದಾ ಮಕ್ಕಳ ಬೆಂಬಲಕ್ಕೆ ನಿಲ್ಲುತ್ತಾರೆ. ಆದರೆ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ವಿದ್ಯಾರ್ಥಿಗಳ ಸ್ವಂತ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಪ್ರಮುಖವಾಗಿದೆ. ಯಾರು ಬೆಂಬಲಿಸುತ್ತಾರೆ, ಯಾರು ಬೆಂಬಲಿಸುವುದಿಲ್ಲ ಎಂಬುದನ್ನು ಚಿಂತಿಸದೆ ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಬೇಕು. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಅಂಕ ಗಳಿಸಿ ಶಿಡ್ಲಘಟ್ಟ ಕ್ಷೇತ್ರಕ್ಕೆ ಕೀರ್ತಿ ತಂದು, ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು

ಕರ್ನಾಟಕ ಬಂದ್‌ ಆದರೆ ಯಾವೆಲ್ಲ ಸೇವೆ ಲಭ್ಯವಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಂದ್‌ ಆದರೆ ಯಾವೆಲ್ಲ ಸೇವೆ ಲಭ್ಯವಿರುತ್ತದೆ?

Karnataka Bandh: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ ಈ ಬಂದ್‌ಗೆ ಕೆಲವು ಸಂಘಟನೆಗಳು ಬೆಂಬಲ ನೀಡಿದ್ದು, ಇನ್ನೂ ಕೆಲ ಕನ್ನಡ ಪರ ಹೋರಾಟಗಾರರು ಬಂದ್‌ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಇಂದಾದರೂ ಆಗುತ್ತಾ ಖಾತೆ ಹಂಚಿಕೆ; ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು?

ಇಂದಾದರೂ ಆಗುತ್ತಾ ಖಾತೆ ಹಂಚಿಕೆ; ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದರೂ ಸಚಿವರಿಗೆ ಖಾತೆ ಹಂಚಿಕೆ ಮಾತ್ರ ಇನ್ನೂ ಅಂತಿಮವಾಗಿಲ್ಲ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಇನ್ನೆರಡು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ, ಅಧಿವೇಶನದೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ಕನ್ನಡ ಪರ ಹೋರಾಟಗಾರರ ನಡುವೆ ಬಿರುಕು? ಆ.13ರಂದು ಕರ್ನಾಟಕ ಬಂದ್‌ ಆಗುತ್ತಾ?

ಆ.13ರಂದು ಕರ್ನಾಟಕ ಬಂದ್‌ ಆಗುತ್ತಾ?

Karnataka Bandh: ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ, ಆಗಸ್ಟ್‌ 13ರಂದು ಕರ್ನಾಟಕ ಬಂದ್‌ ನಡೆಸಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ. ಹಲವು ಸಂಘಟನೆಗಳು ಈಗಾಗಲೇ ಬೆಂಬಲವನ್ನೂ ಘೋಷಿಸಿವೆ. ಆದರೆ ಇದೀಗ ಬಂದ್‌ ನಡೆಯುತ್ತದೆಯೇ? ಇಲ್ಲವೇ? ಎಂಬ ಪ್ರಶ್ನೆ ಮೂಡಿದೆ.

Bidadi Township: ಕಣಿಮಿಣಿಕೆ ಬಳಿ ಪಾದಯಾತ್ರೆಗೆ ಅಡಿ ರೈತರು-ಪೊಲೀಸರ ನಡುವೆ ತಳ್ಳಾಟ: ಬಿಡದಿ ಟೌನ್‌ʼಶಿಪ್‌ ಹೋರಾಟ ಹೋರಾಟ ಸ್ಥಗಿತ

ಬಿಡದಿ ಟೌನ್‌ʼಶಿಪ್‌ ಹೋರಾಟ ಹೋರಾಟ ಸ್ಥಗಿತ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಬೆಂಗಳೂರು ದಕ್ಷಿಣ ಜಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಣಿಮಿಣಿಕೆ ಟೋಲ್ ಬಳಿ ಪೊಲೀಸರು ತಡೆದರು. ಈ ವೇಳೆ, ಪಾದ ಯಾತ್ರೆ ನಿರತ ಕಾರ್ಯ ಕರ್ತರು, ರೈತರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ ನಡೆಯಿತು.

2027ರೊಳಗೆ ಸಿಕೆ ವ್ಯಾಲಿಗೆ ಎತ್ತಿನಹೊಳೆ ನೀರು: ಡಿಕೆಶಿ

2027ರೊಳಗೆ ಸಿಕೆ ವ್ಯಾಲಿಗೆ ಎತ್ತಿನಹೊಳೆ ನೀರು: ಡಿಕೆಶಿ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆ ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಲೇವಡಿ ಮಾಡುತ್ತಿದ್ದಾರೆ. ಯಾವುದೂ ಸುಲಭವಾಗಿ ಸಿಗುವುದಿಲ್ಲ. ಈ ಯೋಜನೆ ಕಷ್ಟ ವಾಗಿದೆ. ಆದರೆ ಪ್ರಯತ್ನ ಮಾಡಬೇಕಲ್ಲವೇ? ಪಶ್ಚಿಮ ಘಟ್ಟದಿಂದ ಹಾಸನದ ಮೂಲಕ ಕೋಲಾರ, ಚಿಕ್ಕಬಳ್ಳಾ ಪುರ ಕೆರೆಗಳನ್ನು ತುಂಬಿಸಲಾಗುವುದು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ; ಕರಾವಳಿಯಲ್ಲಿಯೂ ಮುಂಗಾರು ದುರ್ಬಲ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ

Karnataka weather: ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಪ್ರತಿವರ್ಷಕ್ಕಿಂತ ಈ ವರ್ಷ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆ ಎದರುರಾಗಿದೆ. ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.

Gubbi News: ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..! : ಎಸ್.ಡಿ.ದಿಲೀಪ್ ಕುಮಾರ್

ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..!

ತಾಲ್ಲೂಕಿನ ರೈತರ ಅಳಲು ಅಜ್ಜಯ್ಯ ಅವರಿಗೆ ತಲುಪಿ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿ ಸಚಿವ ಸ್ಥಾನ ಸಿಕ್ಕಿಲ್ಲ. ನೀರಿನ ಶಾಪ ತಟ್ಟುವ ಮೊದಲು ರೈತರ ಹೋರಾಟಕ್ಕೆ ಧುಮುಕಬೇಕಿತ್ತು. ಅಂದು ಚಾನಲ್ ಮೇಲೆ ಮಲಗಿ ನೀರು ಬಿಡಿಸಿದ್ದೆ ಎನ್ನುವ ಶಾಸಕರು ಇಂದು ಡಿಕೆಶಿ ಮನೆ ಮುಂದೆ ಮಲಗಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಿ ನೋಡೋಣ ಎಂದು ಸವಾಲೆಸೆದರು

ಕೊಡಗಿನಲ್ಲಿ ದಾರುಣ ಘಟನೆ; ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಗದ್ದೆಯಲ್ಲಿ ಶುಂಠಿ ತೆಗೆದುಕೊಂಡು ಬರಲು ಮಹಿಳೆಯು ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದ ಪರಿಣಾಮ ಅದರೊಳಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಮುಂದಾದ ವ್ಯಕ್ತಿಯೂ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

MLA K H Puttaswamy Gowda: ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು, ಚರಂಡಿ ಅಭಿವೃದ್ಧಿ, ಹೈಮಾಸ್ಟ್ ದೀಪಗಳ ಅಳವಡಿಕೆ, ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ಡ್ಯಾಂಗಳ ನಿರ್ಮಾಣ, ಅಗತ್ಯವಿರುವ ಕಡೆ ಶಾಲಾ ಕೊಠಡಿಗಳು ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಬಸ್ ಪ್ರಯಾಣಿಕರ ತಂಗುದಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ

Chikkaballapur News: ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಚೇತನ್

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ವೈಯಕ್ತಿಕ ನೈರ್ಮಲ್ಯದ ಕೊರತೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರದಿಂದ ಜಂತುಹುಳು ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಮಕ್ಕಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಮಾತ್ರೆ ವಿತರಿಸುವುದರೊಂದಿಗೆ ಜಂತುಹುಳು ಸೋಂಕಿನ ಕುರಿತು ಅರಿವು ಮೂಡಿಸಲಾಗುತ್ತಿದೆ

Pro-tem Speaker: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

MLC Puttanna: ಕರ್ನಾಟಕ ವಿಧಾನ ಪರಿಷತ್‌ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ನೇಮಿಸಲಾಗಿದೆ. ನೂತನ ಸಭಾಪತಿಯನ್ನು ಚುನಾಯಿಸುವವರೆಗೆ ಸಭಾಪತಿ ಸ್ಥಾನದಲ್ಲಿಇವರು ಮುಂದುವರಿಯಲಿದ್ದಾರೆ.

Bengaluru News: ಬೆಂಗಳೂರಿನ ತಾಜ್‌ ಹೋಟೆಲ್‌ನಲ್ಲಿ ಘೋರ ಘಟನೆ; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರು ವಿಮಾನ ನಿಲ್ದಾಣ ಬಳಿಯ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್‌ ಆಗಿರುವ ವ್ಯಕ್ತಿ, ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Loading...