ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sadhana Samavesha: ನಾಳೆ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಹೊಸಪೇಟೆ ಸಜ್ಜು

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ಬಿಂಬಿಸುವ 'ಸಮರ್ಪಣೆ ಸಂಕಲ್ಪ ಸಮಾವೇಶʼಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ನಿರ್ಮಾಣ ಪೂರ್ಣಗೊಂಡಿದ್ದು ಐತಿಹಾಸಿ ಸಮಾವೇಶದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕುರಿತ ವಿವರ ಇಲ್ಲಿದೆ.

Bengaluru Rains: ಬೆಂಗಳೂರಿನಲ್ಲಿ ಗೋಡೆ ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಗೋಡೆ ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ

Bengaluru Rains: ರಾಜಧಾನಿ ಬೆಂಗಳೂರಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಿಟಿ ರೌಂಡ್ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್‌ಗೆ ತೆರಳಿ, ಮಳೆ ಹಾನಿ ಬಗ್ಗೆಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

Bengaluru Rains: ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ; ಬೋಟ್‌ಗಳಲ್ಲಿ ಜನರ ಸ್ಥಳಾಂತರ

ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ

Bengaluru Rains: ಬೆಂಗಳೂರಿನ ವಸಂತ ನಗರ, ವಿಧಾನ ಸೌಧ, ಶಿವಾಜಿನಗರ, ರಾಜಭವನ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಬಿಟಿಎಂ ಲೇಔಟ್, ಚಿಕ್ಕಪೇಟೆ, ಟೌನ್​​ಹಾಲ್​ ಸೇರಿ ವಿವಿಧೆಡೆ ಭಾರಿ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

Magadi News: ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು, ನಾಲ್ವರ ರಕ್ಷಣೆ

ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು

Magadi News: ಮಾಗಡಿಯ ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು 7 ಯುವತಿಯರು ತೆರಳಿದ್ದರು. ಈ ವೇಳೆ ಒಬ್ಬ ಯುವತಿ ನೀರಿಗೆ ಬಿದ್ದಿದ್ದು, ಆಕೆಯ ರಕ್ಷಣೆಗೆ ಉಳಿದ ಸ್ನೇಹಿತೆಯರು ತೆರಳಿದ್ದಾರೆ. ಕೂಡಲೇ ಸ್ಥಳೀಯ ಯುವಕ ನಾಲ್ವರು ಯುವತಿಯರನ್ನು ರಕ್ಷಿಸಿದ್ದು, ಇನ್ನುಳಿದ ಮೂವರು ನೀರುಪಾಲಾಗಿದ್ದಾರೆ.

Car Accident: ಆಂಧ್ರದಲ್ಲಿ ಭೀಕರ ಕಾರು ಅಪಘಾತ; ಚಿ.ನಾ.ಹಳ್ಳಿ ತಾಪಂ ಮಾಜಿ ಅಧ್ಯಕ್ಷ ಸೇರಿ ಮೂವರ ದುರ್ಮರಣ

ಶ್ರೀಶೈಲದಿಂದ ಬರುವಾಗ ಕಾರು ಪಲ್ಟಿ; ತುಮಕೂರು ಮೂಲದ ಮೂವರ ಸಾವು

Car Accident: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರವಪಲ್ಲಿ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಆಂಧ್ರದಲ್ಲಿ ಮತ್ತೊಂದು ಅಪಘಾತ ಸಂಭವಿಸಿ, ತುಮಕೂರು ಮೂಲದ ಮೂವರು ಕೊನೆಯುಸಿರೆಳೆದಿದ್ದಾರೆ.

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

Murder Case: ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

Murder Case: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ಘಟನೆ ನಡೆದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಆರೋಪದಲ್ಲಿ ಪತಿ, ಮಾವ ಹಾಗೂ ಅತ್ತೆಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

Bengaluru Rain: ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು

ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು

Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ರಭಸದಿಂದಾಗಿ ಗೋಡೆ ಕುಸಿದು ಮಹಿಳೆ ಮೇಲೆ ಬಿದ್ದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಸರಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಮಹಿಳೆಯ ಸಂಬಂಧಿಕರು ಆಗ್ರಹಿಸಿದ್ದಾರೆ.

Bengaluru Rain: ಬ್ರ್ಯಾಂಡ್ ಬೆಂಗಳೂರು ಬದಲಾಗಿ ಬೀಚ್‌ ಬೆಂಗಳೂರು ಆಗಿದೆ: ಡಿಸಿಎಂ ಡಿಕೆಶಿ ವಿರುದ್ಧ ಆರ್‌.ಅಶೋಕ್ ಕಿಡಿ

ಬ್ರ್ಯಾಂಡ್ ಬೆಂಗಳೂರು ಬದಲಾಗಿ ಬೀಚ್‌ ಬೆಂಗಳೂರು ಆಗಿದೆ: ಆರ್‌.ಅಶೋಕ್ ಕಿಡಿ

Bengaluru Rain: ಭಾನುವಾರ ರಾತ್ರಿ ಸುರಿದ ನಿರಂತರ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿರುವುದರಿಂದ ಅನೇಕ ಕಡೆ ಭಾರಿ ಸಂಚಾರ ದಟ್ಟಣೆ ಉಂಟಾಗಿ, ಸಂಚಾರಕ್ಕೆ ಅಡಚಣೆಯಾಗಿದೆ.

Vishwavani Global Achievers Award Function at Georgia: ಜಾರ್ಜಿಯಾದ ಟಿಬಿಲಿಸಿಯಲ್ಲಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಸಮಾರಂಭ ಇಂದು

ಜಾರ್ಜಿಯಾದ ಟಿಬಿಲಿಸಿಯಲ್ಲಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಸಮಾರಂಭ ಇಂದು

ಕನ್ನಡ ಪತ್ರಿಕೋದ್ಯಮದಲ್ಲಿ ಮೊದಲ ಬಾರಿಗೆ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಈ ಬಾರಿ ಜಾರ್ಜಿಯಾದಲ್ಲಿ ಆಯೋಜಿಸಲಾಗಿದ್ದು, ಸೋಮವಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯ ಲಿದೆ. ವಿಶ್ವವಾಣಿ ಗ್ಲೋಬಲ್ ಫಾರಂ ಜಾರ್ಜಿಯಾದ ರಾಜಧಾನಿ ಟಿಬಿಲಿಸಿಯ ಪುಲ್‌ಮ್ಯಾನ್ ಟಿಬಿಲಿಸಿ ಆಕ್ಸಿಸ್ ಟವರ್‌ನಲ್ಲಿ ಕರ್ನಾಟಕದ ಅಪರೂಪದ ಸಾಧಕರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ನೀಡಿ ಗೌರವಿಸಲಾಗುತ್ತಿದೆ

ಸ್ವೆಟ್ ಅಂಡ್ ಕಾಂಕ್ರೀಟ್ 2025: ಬಿಸಿಯ ಒತ್ತಡಕ್ಕೆ ಸಮುದಾಯ-ಕೇಂದ್ರಿತ ಪ್ರತಿಕ್ರಿಯೆ ನೀಡಲು ಗಮನ ಸೆಳೆಯಲಿರುವ ಪ್ರದರ್ಶನ

ಸಮುದಾಯ-ಕೇಂದ್ರಿತ ಪ್ರತಿಕ್ರಿಯೆ ನೀಡಲು ಗಮನ ಸೆಳೆಯಲಿರುವ ಪ್ರದರ್ಶನ

ಬಾಧಿತ ಸಮುದಾಯಗಳನ್ನು ಸಂವಹನಕ್ಕೆ ತರುವ ಮೂಲಕ ಸ್ಥಳೀಯ ಮತ್ತು ರಾಷ್ಟ್ರೀಯ ಗಮನ ಸೆಳೆಯುವುದಾಗಿದೆ. ಎರಡು ದಿನಗಳು ನಡೆಯುವ ಈ ಕಾರ್ಯ ಕ್ರಮವು ಪ್ರಶಸ್ತಿ-ಪುರಸ್ಕೃತ ಹೀಟ್ ಶೆಲ್ಟರ್ ಸಂಹವನೀಯ ಪ್ರವಾಸಗಳು, ಧ್ವನಿ-ದೃಶ್ಯ ಪ್ರದರ್ಶನ, ತಜ್ಞರ ಚರ್ಚೆಗಳು, ಕಲಾಕೃತಿಗಳು ಮತ್ತು ಸಮುದಾಯ ಸಕ್ರಿಯತೆ ಮೂಲಕ ಹಲವು ವಲಯಗಳ ನಡುವೆ ಸಂವಹನ ಮತ್ತು ನಗರದ ಭವಿಷ್ಯತ್ತಿಗೆ ಸಮುದಾಯವನ್ನು ತೊಡಗಿಸಿಕೊಳ್ಳುವ ಕ್ರಿಯಾತ್ಮಕ ಪರಿಹಾರಗಳಿಗೆ ವೇಗ ವರ್ಧನೆ ನೀಡುವ ಉದ್ದೇಶ ಹೊಂದಿದೆ

Techie Self Harming: ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ಮೃತ ಟೆಕ್ಕಿ ನಿಖಿಲ್ ಸೋಮವಂಶಿ ಅವರಿಗೆ ಅಮೆರಿಕದಲ್ಲಿರುವ ಮ್ಯಾನೇಜರ್ ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಹಲವು ಕೆಲಸಗಾರರು ಕೆಲಸ ಬಿಟ್ಟಿದ್ದರು. ನಂತರ ಕೆಲಸ ಬಿಟ್ಟ ನೌಕರರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು. ಈ ಒತ್ತಡ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sirsi News: ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ

ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ

ಕೆಡಿಪಿ ಸಭೆಗೂ ಕಬಡ್ಡಿ ಮ್ಯಾಚಿಗೂ ವ್ಯತ್ಯಾಸ ಗೊತ್ತಿಲ್ಲದ ಶಾಸಕರು ಭೀಮಣ್ಣ ನಾಯ್ಕ ಎಂದು ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ಲೇವಡಿ ಮಾಡಿದರು. ಸರಿಯಾದ ತಹಸೀಲ್ದಾರ್, ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ. ಸರಿಯಾದ ಆಡಳಿತ ನೀಡಲು ಸಾಧ್ಯವಾಗದ ಸರಕಾರ. ಸಾರ್ವಜನಿಕರಿಗೆ ಉತ್ತಮ ಆಡಳಿತವನ್ನು ನೀಡಲು ಸಾಧ್ಯವಿಲ್ಲ ಎಂದ ಅವರು, ನಂತರ ಹಲವರೊಂದಿಗೆ ಕಚೇರಿಯಲ್ಲಿಂದು ಮನವಿ ನೀಡಿದರು.

Young Woman Death: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿದ್ದಾನೆ ಇನ್ನೊಬ್ಬ ವ್ಯಕ್ತಿ

ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿ ಇನ್ನೊಬ್ಬ ವ್ಯಕ್ತಿ

Young Woman Death:‌ ಆಕಾಂಕ್ಷ ನಾಯರ್ ಅವರು ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಮಗಳು. ಮೇ 18ರ ಶುಕ್ರವಾರ ಪಂಜಾಬ್​ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.

Karnataka Rain: ಈ ಮಳೆ ಟ್ರೇಲರ್‌ ಮಾತ್ರ, ಇನ್ನೂ 5 ದಿನ ಸುರಿಯಲಿದೆ ಸೈಕ್ಲೋನ್‌ ಮಳೆ!

ಈ ಮಳೆ ಟ್ರೇಲರ್‌ ಮಾತ್ರ, ಇನ್ನೂ 5 ದಿನ ಸುರಿಯಲಿದೆ ಸೈಕ್ಲೋನ್‌ ಮಳೆ!

Karnataka Rain News: ಚಂಡಮಾರುತ ವೈಪರೀತ್ಯದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಬಹುತೇಕ ಒಳನಾಡು ಜಿಲ್ಲೆಗಳ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪೂರ್ವ ಮಳೆಯ ಆರ್ಭಟ ಕೂಡ ಮುಂದುವರಿಯಲಿದೆ. ಮುಂದಿನ 5 ದಿನ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಲಿದೆ

Arvind Bellad: ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮೇ 17ರಂದು ಪೊಲೀಸ್ ಆಯುಕ್ತರಿಗೆ ಅರವಿಂದ್ ಬೆಲ್ಲದ (Arvind Bellad) ಪತ್ರ ಬರೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವಿದೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ ಅಂತ ವಿವರಿಸಿದ್ದಾರೆ.

Drowned: ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಈಜಲು ನೀರಿಗೆ ಇಳಿದ ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಈಜಲಾಗದೆ (Drowned) ಮುಳುಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Rain: ರಾತ್ರಿಯಿಡೀ ಧಾರಾಕಾರ ಮಳೆ, ತತ್ತರಿಸಿದ ಬೆಂಗಳೂರು, ಕೆರೆಗಳಾದ ರಸ್ತೆಗಳು

ರಾತ್ರಿಯಿಡೀ ಧಾರಾಕಾರ ಮಳೆ, ತತ್ತರಿಸಿದ ಬೆಂಗಳೂರು, ಕೆರೆಗಳಾದ ರಸ್ತೆಗಳು

ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿ ಪಾಳ್ಯ, ಆರ್ ಆರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ವೀಕೆಂಡ್‌ ಹಾಯಾಗಿ ಮಲಗಿದ್ದ ಜನ (Bengaluru rain) ರಾತ್ರಿ ಸುರಿದ ಭಾರಿ ಮಳೆ, ಗುಡುಗು ಸಿಡಿಲಿಗೆ ನಿದ್ದೆ ಕೆಡಿಸಿಕೊಂಡರು.

Karnataka weather: ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ; ಆರೆಂಜ್ ಅಲರ್ಟ್‌ ಘೋಷಣೆ

ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಅಥವಾ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಧಿಕ ರಕ್ತದೊತ್ತಡವು ಗಂಭೀರವಾದ ವೈದ್ಯಕೀಯ ಸ್ಥಿತಿಯಾಗಿದ್ದು, ಹೃದಯ, ಮೆದುಳು ನಿಷ್ಕ್ರಿಯಗೊಳ್ಳಬಹುದು

ಅಧಿಕ ರಕ್ತದೊತ್ತಡವು ಗಂಭೀರವಾದ ವೈದ್ಯಕೀಯ ಸ್ಥಿತಿ

ಅತಿಯಾದ ಉಪ್ಪು ಸೇವನೆ, ಹಣ್ಣುಗಳು ಮತ್ತು ತರಕಾರಿಗಳ ಕಡಿಮೆ ಸೇವನೆ, ದೈಹಿಕ ಅಭ್ಯಾಸದ ಕೊರತೆ, ತಂಬಾಕು ಮತ್ತು ಮದ್ಯ ಸೇವನೆ, ಅಧಿಕ ತೂಕ ಅಥವಾ ಬೊಜ್ಜುತನ, ಕರೀದಾ ಪದಾರ್ಥ ಮತ್ತು ಬೇಕರಿ ಪದಾರ್ಥಗಳ ಅಧಿಕ ಸೇವನೆ, ವಾಯು ಮಾಲಿನ್ಯದಿಂದ ಸಹ ಅಧಿಕ ರಕ್ತದೊತ್ತಡ ಹೆಚ್ಚಾಗಲು ಕಾರಣವಾಗುವ ಅಂಶಗಳಾಗಿವೆ.

MLA Pradeep Eshwar : ನೂತನ ಹವಾ ನಿಯಂತ್ರಿತ 5 ಉಚಿತ ಆಂಬ್ಯುಲೆನ್ಸ್ ಗಳ ಕೊಡುಗೆ ನೀಡಿದ ಶಾಸಕ ಪ್ರದೀಪ್ ಈಶ್ವರ್

ಶಾಸಕರಿಂದ ನೂತನ ಹವಾ ನಿಯಂತ್ರಿತ 5 ಉಚಿತ ಆಂಬ್ಯುಲೆನ್ಸ್ ಗಳ ಕೊಡುಗೆ

ನಾನು ಗೆಲುವು ಸಾಧಿಸಿದ ತಕ್ಷಣ ಸಂಕಲ್ಪ ಮಾಡಿದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ  ಸರ್ಕಾರಿ ಶಾಲೆಗಳ  ಶೈಕ್ಷಣಿಕ ಪರಿಸರದ ಸುಧಾರಣೆ, ನಾಗರೀಕರ ಆರೋಗ್ಯ ಮತ್ತು ಮೂಲಭೂತ ಸೌಕರ್ಯ ಸುಧಾರಣೆಗೆ ಒತ್ತು ನೀಡಲಾಗಿದೆ. ನಾನು ನನ್ನ ಸ್ವಂತ ಪರಿಶ್ರಮದಿಂದ ಗಳಿಸಿದ ಹಣದಲ್ಲಿ ಕ್ಷೇತ್ರಕ್ಕೆ 5 ಉಚಿತ ಅಂಬುಲೆನ್ಸ್ ಗಳ ಸೇವೆಯನ್ನು 2023 ಸೆಪ್ಟಂಬರ್ 12 ರಂದು ನಂದಿಯ ಭೋಗ ನಂದೀಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ  ಲೋಕಾರ್ಪಣೆ ಮಾಡಿದೆ.

Chikkaballapur News: 15ನೇ ವಾರ್ಷಿಕೋತ್ಸವ: ಶ್ರೀ ವರಸಿದ್ದಿ ವಿನಾಯಕನಿಗೆ ಬೆಳ್ಳಿ ರಥೋತ್ಸವ

15ನೇ ವಾರ್ಷಿಕೋತ್ಸವ ಅಂಗವಾಗಿ ಶ್ರೀ ವರಸಿದ್ದಿ ವಿನಾಯಕನಿಗೆ ಬೆಳ್ಳಿ ರಥೋತ್ಸವ

ಪಟ್ಟಣದ 9 ನೇ ವಾರ್ಡಿನ ವರಸಿದ್ದಿ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ ಗಣೇಶ ಮೂರ್ತಿ ಯನ್ನು ಶ್ರೀ ವರಸಿದ್ದಿ ವಿನಾಯಕ ಸೇವಾ ಟ್ರಸ್ಟ್ ಸದಸ್ಯರು ದೇವಾಲಯದಿಂದ ಹೊರ ತಂದು ಸರ್ವಾ ಲಂಕೃತ ಬೆಳ್ಳಿ ರಥದಲ್ಲಿ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿ ಹಸಿರು ಪಟಾಕಿ ಸಿಡಿ ಮದ್ದಿನ ಸುರಿಮಳೆಗೈಯ್ಯಲಾಯಿತು

S.R. Nayak: ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್. ನಾಯಕ್ ನಿಧನ

ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್. ನಾಯಕ್ ನಿಧನ

S.R. Nayak: ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್. ನಾಯಕ್ ಅವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್ ನಾಯಕ್ ಸೇವೆಯನ್ನು ಪರಿಗಣಿಸಿ, ಹಂಪಿಯ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

Fire Accident: ಆಳಂದದಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ಪಠ್ಯ ಪುಸ್ತಕಗಳು ಸುಟ್ಟು ಭಸ್ಮ

ಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿ

Fire Accident: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಗ್ನಿ ಅವಘಡ ನಡೆದಿದೆ. ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.