ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ;  ಕಾಂಗ್ರೆಸ್‌ನಿಂದ ಅಧಿಕೃತ ಟಿಕೆಟ್‌ ಘೋಷಣೆ

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಅನುಕಂಪದ ಅಲೆಯಲ್ಲಿಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್‌ ಕುಟುಂಬ ರಾಜಕಾರಣಕ್ಕೆ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ ಹಾಗೂ ಬಾಗಲಕೋಟೆಯಲ್ಲಿ ಎಚ್‌.ವೈ.ಮೇಟಿ ಕಿರಿಯ ಪುತ್ರ ಉಮೇಶ್‌ ಮೇಟಿಗೆ ಪಕ್ಷದ ವತಿಯಿಂದ ಇದೀಗ ಅಧಿಕೃತವಾಗಿ ಟಿಕೆಟ್‌ ಘೋಷಣೆಯಾಗಿದೆ.

ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು; ಎಲ್‌ಪಿಜಿ ಕೊರತೆ ನೀಗುತ್ತಾ?

ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಗತ್ತಿನಾದ್ಯಂತ ಇಂಧನದ ಕೊರತೆ ಉಂಟಾಗಿದೆ. ಇದೀಗ ಕರ್ನಾಟಕಕ್ಕೆ, ಅಮೆರಿಕದಿಂದ ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಕಾರ್ಗೋ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಬಂದು ತಲುಪಿದೆ. ಕೇಂದ್ರ ಸರ್ಕಾರವು ಹೋಟೆಲ್‌ಗಳೇ ಹೆಚ್ಚಾಗಿ ಬಳಸುವ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಈಗಿನ ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ತನಿಖೆ ಶುರು

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ ಬೆನ್ನಲ್ಲೇ ಇದೀಗ ಸಂದೇಶ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.

ಮೈಸೂರು ಜಿಲ್ಲೆ ಜಾನುವಾರುಗಳಿಗೆ ಮೇವು, ನೀರಿಗೆ ಬರ ಇಲ್ಲ

ಮೈಸೂರು ಜಿಲ್ಲೆ ಜಾನುವಾರುಗಳಿಗೆ ಮೇವು, ನೀರಿಗೆ ಬರ ಇಲ್ಲ

ಪ್ರಸ್ತುತ ಜಿಲ್ಲೆಯಲ್ಲಿ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದು ಪಶುಪಾ ಲನಾ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಮುಂಗಾರು ಮಳೆ ಸಕಾಲದಲ್ಲಿ ಬಾರದೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

No 'subsidy' : ಅಂತರ್ಜಾತಿ ವಿವಾಹಿತರಿಗೆ ʼಸಹಾಯಧನʼ ದೂರ

No 'subsidy' : ಅಂತರ್ಜಾತಿ ವಿವಾಹಿತರಿಗೆ ʼಸಹಾಯಧನʼ ದೂರ

ಸಮಾಜ ಕಲ್ಯಾಣ ಇಲಾಖೆಯಿಂದ ಆರಂಭವಾಗಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಗೆ ಕಳೆದ ಮೂರು ವರ್ಷದ ಅವಧಿಯಲ್ಲಿ ಬರೋಬ್ಬರಿ 15 ಸಾವಿರ ಅರ್ಜಿಗಳು ರಾಜ್ಯಾ ದ್ಯಂತ ಸಲ್ಲಿಕೆಯಾಗಿದ್ದು, ಅದರಲ್ಲಿ 140 ಅರ್ಜಿಗಳು ತಿರಸ್ಕೃತಗೊಂಡಿದ್ದರೆ, ಇನ್ನುಳಿದ 15225 ಅರ್ಜಿಗಳ ಪೈಕಿ 3725 ಮಂದಿಗೆ ಹಣ ಸಿಕ್ಕಿದೆ. ಇನ್ನು 5450 ಮಂದಿಗೆ ಹಣ ಬರಬೇಕಿದೆ. ಇನ್ನುಳಿದ ಅರ್ಜಿಗಳಿಗೆ ಹೆಚ್ಚಿನ ಮಾಹಿತಿ ಕೇಳಲಾಗಿದೆ.

World Water Day Special: 'ನಮ್ಮೂರು ನಮ್ಮ ಕೆರೆ’ ಯೋಜನೆ ಮೂಲಕ ಬತ್ತಿದ ಕೆರೆಗಳಲ್ಲಿ ಜೀವ ಸೆಲೆ – ಡಾ. ಡಿ. ವೀರೇಂದ್ರ ಹೆಗ್ಗಡೆ ನಮ್ಮ ನಾಡಿನ ರಿಯಲ್ ಲೇಕ್ ಮ್ಯಾನ್!

ಹೆಗ್ಗಡೆಯವರು ಕರ್ನಾಟಕದ ರಿಯಲ್ ಲೇಕ್ ಮ್ಯಾನ್

ಹಸಿದವರಿಗೆ ಅನ್ನ ಮತ್ತು ಬಾಯಾರಿದವರಿಗೆ ನೀರುಣಿಸಿದರೆ ಅದರಿಂದ ಲಭಿಸುವ ಪುಣ್ಯ ನೂರು ಯಾಗಗಳ ಫಲಕ್ಕೆ ಸಮ ಎಂಬ ಮಾತೊಂದಿದೆ. ಆದರೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಈ ನಮ್ಮೂರು ನಮ್ಮ ಕೆರೆ ಅಭಿಯಾನದಿಂದ ಇದುವರೆಗೆ ರಾಜ್ಯದಲ್ಲಿ ಒಟ್ಟು 950 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

Gudibande News: ಗುಡಿಬಂಡೆಯಲ್ಲಿ ಸಡಗರದ ರಂಜಾನ್ ಆಚರಣೆ, ಸಸಿ ನೆಟ್ಟು ರಂಜಾನ್ ಆಚರಿಸಿದ ಪರಿಸರ ಪ್ರೇಮಿಗಳು

ಸಸಿ ನೆಟ್ಟು ರಂಜಾನ್ ಆಚರಿಸಿದ ಪರಿಸರ ಪ್ರೇಮಿಗಳು

ತಿಂಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು, ಇಂದು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ನಮಾಜ್ ಬಂಡೆಯ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಬೃಹತ್ ಮೆರವಣಿಗೆಯ ಮೂಲಕ ತೆರಳಿದರು. ನಂತರ ಜಾಮಿಯಾ ಮಸೀದಿಯ ಮೌಲ್ವಿಗಳು ಹಬ್ಬದ ಮಹತ್ವದ ಬಗ್ಗೆ ಧಾರ್ಮಿಕ ಉಪದೇಶ ನೀಡಿದರು.

MLA S.R.Srinivas: ಸದನದಲ್ಲಿ ಚುಕ್ಕಿ ಪ್ರಶ್ನೆಗೆ ಶೀಘ್ರ ಉತ್ತರ ಬಯಸಿದ್ದು ಒಳ್ಳೆ ಬೆಳವಣಿಗೆ : ಎಸ್.ಆರ್.ಶ್ರೀನಿವಾಸ್

ಸದನದಲ್ಲಿ ಚುಕ್ಕಿ ಪ್ರಶ್ನೆಗೆ ಶೀಘ್ರ ಉತ್ತರ ಬಯಸಿದ್ದು ಒಳ್ಳೆ ಬೆಳವಣಿಗೆ

ತಾಲ್ಲೂಕಿನ ಕಸಬ ಹೋಬಳಿ ನಡುವಲಪಾಳ್ಯ, ಬ್ಯಾಡಿಗೆರೆ ಹಾಗೂ ಜವರೇಗೌಡನಪಾಳ್ಯ ಗ್ರಾಮ ದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ರಸ್ತೆ ಅಭಿವೃದ್ಧಿಯ ಅಂದಾಜು 5 ಕೋಟಿ ರೂಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾ, ಸಭಾಪತಿಗಳು ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರಿಗೆ ಸೂಚನೆ ನೀಡಿದ್ದು ಮುಂದಿನ ದಿನದಲ್ಲಿ ಸದನದ ಶಾಸಕರ ಪ್ರಶ್ನೆಗೆ ಶೀಘ್ರ ಉತ್ತರ ಕೊಡುವ ಕೆಲಸ ಆಗಲಿದೆ

Gauribidanur News: ಕಾಚಮಾಚೇನಹಳ್ಳಿ ಸಹಕಾರ ಸಂಘದ ಅಧ್ಯಕ್ಷರಾಗಿ ಬೊಮ್ಮಣ್ಣ, ಉಪಾಧ್ಯಕ್ಷರಾಗಿ ನಂಜುಂಡಪ್ಪ ಆಯ್ಕೆ

ಅಧ್ಯಕ್ಷರಾಗಿ ಬೊಮ್ಮಣ್ಣ, ಉಪಾಧ್ಯಕ್ಷರಾಗಿ ನಂಜುಂಡಪ್ಪ ಆಯ್ಕೆ

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೊಮ್ಮಣ್ಣ ಮಾತನಾಡಿ, ಶಾಸಕರು ಹಾಗೂ ನಮ್ಮ ಮುಖಂಡರಾದ ಕೆಎಚ್ ಪುಟ್ಟಸ್ವಾಮಿಗೌಡರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಸೊಸೈಟಿಯಲ್ಲಿ ಉತ್ತಮ ಆಡಳಿತ ನೀಡುವ ಮೂಲಕ ಜನರ ಋಣ ತೀರಿಸುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿ ಆತಂಕ ಮೂಡಿಸಿದ ಲ್ಯಾಂಬೋರ್ಗಿನಿ ಸ್ಟಂಟ್: ವಿಡಿಯೊ ವೈರಲ್

ಅಪಾಯಕಾರಿ ಸ್ಟಂಟ್: ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಎಂ.ಜಿ. ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಸಾರ್ವಜನಿಕರ ಸಂಚಾರ ಮಧ್ಯೆಯೇ ಅಪಾಯಕಾರಿ ಡ್ರಿಫ್ಟಿಂಗ್ ನಡೆಸಿದ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿಡಿಯೊ ವೈರಲ್ ಆದ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ರಸ್ತೆ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಹೆಚ್ಚಾಗಿದೆ.

MLA S.N. Subbareddy: ಮುಸ್ಲಿಮರ ಪವಿತ್ರ ರಂಜಾನ್ ಪ್ರಾರ್ಥನೆಯಲ್ಲಿ ಶಾಸಕ ಸುಬ್ಬಾರೆಡ್ಡಿ ಭಾಗಿ

ಮುಸ್ಲಿಮರ ಪವಿತ್ರ ರಂಜಾನ್ ಪ್ರಾರ್ಥನೆಯಲ್ಲಿ ಶಾಸಕ ಸುಬ್ಬಾರೆಡ್ಡಿ ಭಾಗಿ

ಒಂದು ತಿಂಗಳ ಕಾಲ ಉಪವಾಸ ಆಚರಿಸಿದ ಮುಸ್ಲಿಂ ಸಮಾಜದವರು ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆದ ಈದ್ ಆಚರಣೆಯ ಸಾಮೂಹಿಕ ಪ್ರಾರ್ಥನೆಯಲ್ಲಿ ನಮಾಜ್ ಮಾಡಿ ರಂಜಾನ್ ಹಬ್ಬಕ್ಕೆ ತೆರೆ ಎಳೆದರು. ಮೌಲ್ವಿಗಳು ಕುರಾನ್ ಪಠಣ ಮಾಡಿದರು. ಸಾಮೂಹಿಕ ಪ್ರಾರ್ಥನೆ ನಂತರ ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

Bus fare hike: ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಸಾರಿಗೆ ಬಸ್‌ ಟಿಕೆಟ್‌ ದರ ಹೆಚ್ಚಳವಾಗುತ್ತಾ?; ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಸಾರಿಗೆ ಬಸ್‌ ಟಿಕೆಟ್‌ ದರ ಹೆಚ್ಚಳವಾಗುತ್ತಾ?

ಇಸ್ರೇಲ್‌-ಇರಾನ್‌ ಯುದ್ಧದ ಹಿನ್ನೆಲೆಯಲ್ಲಿ ತೈಲ ದರ ಭಾರಿ ಏರಿಕೆಯಾಗಿದೆ. ಇದರಿಂದ ದೇಶದಲ್ಲಿ ಪ್ರೀಮಿಯಂ ಪೆಟ್ರೋಲ್‌ ಮತ್ತು ಬಲ್ಕ್‌ ಡೀಸೆಲ್‌ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಹೀಗಾಗಿ ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ಏರಿಕೆಯಾಗುತ್ತಾ? ಎಂಬ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಏನು ಹೇಳಿದರು ಎಂಬ ಮಾಹಿತಿ ಇಲ್ಲಿದೆ.

Zameer Ahmed Khan: ಬುರ್ಖಾ ಧರಿಸಿ ಬಸ್​ ಹತ್ತಿದ್ದ ಸಚಿವ ಜಮೀರ್ ಅಹ್ಮದ್; ಅಪ್ಪನ ಹಾಸ್ಯ ಪ್ರಸಂಗ ನೆನೆದ ಮಗ ಝೈದ್‌ ಖಾನ್‌

ಬುರ್ಖಾ ಧರಿಸಿ ಬಸ್​ ಹತ್ತಿದ್ದ ಸಚಿವ ಜಮೀರ್ ಅಹ್ಮದ್; ಯಾಕೆ ಗೊತ್ತಾ?

ಟ್ರಾವೆಲ್​ ಬಿಜಿನೆಸ್‌ನಲ್ಲಿ ನಡೆಯುತ್ತಿದ್ದ ಮೋಸವನ್ನು ಪತ್ತೆಹಚ್ಚಲು ಸಚಿವ ಜಮೀರ್‌ ಅಹ್ಮದ್‌ ಬುರ್ಖಾ ಹಾಕಿಕೊಂಡು ಬಸ್‌ ಏರಿದ್ದರಂತೆ. ಆಗ ಏನು ಮಾಡಿದ್ದರು ಎಂಬ ಬಗ್ಗೆ ಸಂದರ್ಶನವೊಂದರಲ್ಲಿ ಜಮೀರ್‌ ಅಹ್ಮದ್‌ ಅವರ ಪುತ್ರ ಝೈದ್‌ ಖಾನ್‌ ಮಾತನಾಡಿದ್ದಾರೆ.

New Shaadi Mahal: ಶಾಸಕ ಪ್ರದೀಪ್ ಈಶ್ವರ್ ವಾಗ್ದಾನ ರಂಜಾನ್ ಹಬ್ಬದ ಉಡುಗೊರೆಯಾಗಿ ಹುಟ್ಟೂರಿಗೆ ಒಂದು ಕೋಟಿ ವೆಚ್ಚದ ಶಾದಿ ಮಹಲ್ ನಿರ್ಮಾಣ

ಒಂದು ಕೋಟಿ ವೆಚ್ಚದ ಶಾದಿ ಮಹಲ್ ನಿರ್ಮಾಣ

ಶಾಸಕರ ಭರವಸೆಯಿಂದ ಸಂತೋಷಗೊಂಡ ಮುಸಲ್ಮಾನ್ ಬಂಧುಗಳು, ಮತ್ತು ಕಾಲೋನಿಯ ಜನತೆ ನಿಮ್ಮಂತಹ ಸರಳ ಸಜ್ಜನಿಕೆಯ ಶಾಸಕರನ್ನು ಪಡೆದಿರುವುದು ನಮ್ಮ ಪುಣ್ಯ. ಕಾಂಗ್ರೆಸ್ ಪಕ್ಷದ ವರಿಷ್ಠರು ನಿಮಗೆ ಇನ್ನೂ ಹೆಚ್ಚಿನ ರಾಜಕೀಯ ಶಕ್ತಿ ಕೊಟ್ಟು ಜನಸೇವೆ ಮಾಡುವ ಅವಕಾಶವನ್ನು ಒದಗಿಸಲಿ

ಗ್ಯಾಸ್ ಗೋಡೌನ್ ಮುಂದೆ ಜನರ ಪರದಾಟ: ಪೂರೈಕೆ ತಡಕ್ಕೆ ಏಜೆನ್ಸಿ ಸ್ಪಷ್ಟನೆ !

ಸಿಲಿಂಡರ್ ಸಿಗದೆ ಸಾಲಿನಲ್ಲಿ ನಿಂತ ಜನರು: ಗೋಡೌನ್ ಮುಂದೆ ಗೊಂದಲ

ಹಲವಾರು ದಿನಗಳಿಂದ ಬುಕ್ಕಿಂಗ್ ಮಾಡಿದ್ದರೂ ಗ್ಯಾಸ್ ಸಿಗದ ಕಾರಣ ಮಹಿಳೆಯರು ಹಾಗೂ ಹಿರಿಯರು ಗೋಡೌನ್ ಮುಂದೆ ಸಾಲಿನಲ್ಲಿ ನಿಂತು ಕಾದು ಕುಳಿತಿರುವ ದೃಶ್ಯ ಕಂಡುಬಂದಿದೆ. “ಬುಕ್ ಮಾಡಿದರೂ ಗ್ಯಾಸ್ ಸಿಗುತ್ತಿಲ್ಲ. ದಿನಗಳಿಂದ ಕಾದರೂ ಸಿಲಿಂಡರ್ ಮನೆಗೆ ತಲುಪಿಲ್ಲ” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

Hotel Raid: ಚಿಕ್ಕಬಳ್ಳಾಪುರ ತಹಸಿಲ್ದಾರ್ ನೇತೃತ್ವದಲ್ಲಿ ಮಿಂಚಿನ ದಾಳಿ 22 ವಾಣಿಜ್ಯ 13 ಗೃಹ ಬಳಕೆ ಸಿಲಿಂಡರ್ ವಶ

ಚಿಕ್ಕಬಳ್ಳಾಪುರ ತಹಸಿಲ್ದಾರ್ ನೇತೃತ್ವದಲ್ಲಿ ಮಿಂಚಿನ ದಾಳಿ

ಇರಾನ್ ಮತ್ತು ಇಸ್ರೇಲ್ ಅಮೆರಿಕ ನಡುವಿನ ಯುದ್ಧದ ಕಾರ್ಮೋಡ ವಿಶ್ವವನ್ನು ಕಾಡಿರು ವಂತೆ ಭಾರತವನ್ನು ತೀವ್ರವಾಗಿ ಬಾಧಿಸಿದೆ. ಪರಿಣಾಮ ಪೆಟ್ರೋಲಿಯಂ ಉತ್ಪನ್ನಗಳ ಆಮದಿ ನಲ್ಲಿ ಭಾರೀ ಏರುಪೇರಾಗಿದೆ. ಇದನ್ನು ಸರಿ ದೂಗಿಸಲು ಭಾರತ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ.

ದಾವಣಗೆರೆಯಲ್ಲಿ ರಂಜಾನ್‌ ನಮಾಜ್‌ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಮಂದಿಗೆ ಗಾಯ

ರಂಜಾನ್ ನಮಾಜ್‌ ವೇಳೆ ಹೆಜ್ಜೇನು ದಾಳಿ; 25 ಮಂದಿಗೆ ಗಾಯ

Davangere Honey bee attack: ದಾವಣಗೆರೆ ತಾಲೂಕಿನ ಆನಗೋಡು ಬಳಿ ಘಟನೆ ನಡೆದಿದೆ. ರಂಜಾನ್‌ ಹಿನ್ನೆಲೆಯಲ್ಲಿ ರಂಜಾನ್ ಪ್ರಯುಕ್ತ 800ಕ್ಕೂ ಅಧಿಕ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ವೇಳೆ ಹೆಜ್ಜೇನು ದಾಳಿ ನಡೆಸಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸದ್ಗುರು ಸನ್ನಿಧಿಯಲ್ಲಿ ‘ಸಪ್ತಋಷಿ ಆವಾಹನಂ’ ಪ್ರಕ್ರಿಯೆ ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ ಅರ್ಚಕರು

ಸದ್ಗುರು ಸನ್ನಿಧಿಯಲ್ಲಿ ನೆರವೇರಿದ ‘ಸಪ್ತಋಷಿ ಆವಾಹನಂ’ ಪ್ರಕ್ರಿಯೆ

Saptarishi Avahanam ritual: ಕಾಶಿ ವಿಶ್ವನಾಥ ದೇವಾಲಯದಲ್ಲಿ ನಡೆಯುವ ಮಾದರಿಯಲ್ಲಿ ವಸಂತಕಾಲದ ವಿಷುವತ್ ಸಂಕ್ರಾಂತಿಯ ಸುಸಂದರ್ಭದಲ್ಲಿ ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿರುವ ಯೋಗೇಶ್ವರ ಲಿಂಗದ ಸಾನ್ನಿಧ್ಯದಲ್ಲಿ 'ಸಪ್ತಋಷಿ ಆವಾಹನಂ' ಪ್ರಕ್ರಿಯೆಯನ್ನು ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕರು ಶುಕ್ರವಾರ ನಡೆಸಿಕೊಟ್ಟಿದ್ದಾರೆ.

Karnataka bypolls: ಉಪಚುನಾವಣೆ ಟಿಕೆಟ್‌; ಮುಸಲ್ಮಾನ ಬಂಧುಗಳ ಬೇಡಿಕೆಗೆ ಕಾಂಗ್ರೆಸ್‌ ಸೊಪ್ಪು ಹಾಕಿಲ್ಲ ಎಂದ ಛಲವಾದಿ ನಾರಾಯಣಸ್ವಾಮಿ

ಮುಸಲ್ಮಾನರ ಬೇಡಿಕೆಗೆ ಕಾಂಗ್ರೆಸ್‌ ಸೊಪ್ಪು ಹಾಕಿಲ್ಲ: ಛಲವಾದಿ

Chalavadi Narayanaswamy: ಹಿಂದೆ ಕಾಂಗ್ರೆಸ್ಸಿನಲ್ಲಿ ಮಂಡ್ಯ ಹೊರತುಪಡಿಸಿ ಇತರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡುತ್ತಿದ್ದರು. ಈಗ ಎಲ್ಲ ಕಡೆಯಲ್ಲಿ ಅವರಿಗೆ ಕಾಂಗ್ರೆಸ್ ಕೊಕ್ ಕೊಡುತ್ತ ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

Madhugiri News: ರಂಜಾನ್‌ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗಿ; ಪರಸ್ಪರ ಗೌರವ, ಐಕ್ಯತೆಯಿಂದ ಬಾಳಲು ಕರೆ

ರಂಜಾನ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗಿ

Madhugiri News: ಮಧುಗಿರಿ ಪಟ್ಟಣದ ಶಿರಾ ಗೇಟ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಅವರು ಶನಿವಾರ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಈದ್ಗಾ ಮೈದಾನದಲ್ಲಿ ಶಾಶ್ವತವಾಗಿ ಶೆಡ್ ನಿರ್ಮಾಣ ಮಾಡಿಸಲಾಗುವುದು. ಇದರಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

Bengaluru Water Bill Relief: ಬೆಂಗಳೂರು ಜಲಮಂಡಳಿಯಿಂದ ಗುಡ್‌ನ್ಯೂಸ್‌; ನೀರಿನ ಬಿಲ್ ಬಾಕಿ ಪಾವತಿಗೆ OTS ಯೋಜನೆ ಜಾರಿ, ಶೇ.100 ಬಡ್ಡಿ ಮನ್ನಾ

ಬಿಡಬ್ಲ್ಯುಎಸ್‌ಎಸ್‌ಬಿ ನೀರಿನ ಬಿಲ್ ಬಾಕಿ ಪಾವತಿಗೆ ಶೇ.100 ಬಡ್ಡಿ ಮನ್ನಾ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿರುವ ಸುಮಾರು 11 ಲಕ್ಷ ನೀರಿನ ಸಂಪರ್ಕಗಳ ಪೈಕಿ, 5.11 ಲಕ್ಷ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. 2026ರ ಫೆಬ್ರವರಿ ಅಂತ್ಯದ ಮಾಹಿತಿಯಂತೆ, ಒಟ್ಟು ಬಾಕಿ ಮೊತ್ತ ರೂ. 851.33 ಕೋಟಿಗಳಾಗಿದ್ದು, ಇದರಲ್ಲಿ ಅಸಲು ಮೊತ್ತ ರೂ. 539.43 ಕೋಟಿ ಹಾಗೂ ಬಡ್ಡಿ ರೂ. 311.90 ಕೋಟಿ ಸೇರಿದೆ. ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು 3 ತಿಂಗಳ ಅವಧಿಯ 𝗢𝗧𝗦 ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

ಕಬ್ಬಿಣಾಂಶದ ಕೊರತೆ ಎದುರಿಸುತ್ತಿರುವ ಮಕ್ಕಳಿಗಾಗಿ “ಐರನ್‌ ಶಕ್ತಿ ಸಾಲ್ಟ್‌” ಬಿಡುಗಡೆ ಮಾಡಿದ ಐಟಿಸಿ

“ಐರನ್‌ ಶಕ್ತಿ ಸಾಲ್ಟ್‌” ಬಿಡುಗಡೆ ಮಾಡಿದ ಐಟಿಸಿ

ಮಕ್ಕಳು ಮತ್ತು ವಯಸ್ಕರಿಗೆ ದೈನಂದಿನ ಕಬ್ಬಿಣದ ಅವಶ್ಯಕತೆ 11 ರಿಂದ 32 ಮಿಗ್ರಾಂ ವರೆಗೆ ಇರಲಿದೆ. ಇದು 2 ರಿಂದ 7 ಬಟ್ಟಲು ಪಾಲಕ್ ಅಥವಾ 7 ರಿಂದ 21 ಬೀಟ್‌ರೂಟ್‌ ತಿನ್ನುವುದಕ್ಕೆ ಸಮಾನ. ಆದರೆ, ಇಷ್ಟು ಪ್ರಮಾಣದಲ್ಲಿ ತಿನ್ನಲು ಸಾಧ್ಯವಿಲ್ಲ. ಪ್ರಸ್ತುತ ಐಟಿಸಿ ಪರಿಚಯಿಸಿರುವ ಐರನ್‌ ಶಕ್ತಿ ಸಾಲ್ಟ್‌ ನ ಒಂದು ಟೀ ಚಮಚದಲ್ಲಿ ಶೇ. 25ರಷ್ಟು ಕಬ್ಬಿಣಾಂಶ ಒದಗಿಸಲಿದೆ

ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಭಾರತದ ಮೊದಲ DCGI-ಅನುಮೋದಿತ ಸೆಮಾಗ್ಲುಟೈಡ್ ಇಂಜೆಕ್ಷನ್ 'ಒಬೆಡಾ®' ಅನ್ನು ಟೈಪ್ 2 ಮಧುಮೇಹಕ್ಕೆ ಬಿಡುಗಡೆ

ಭಾರತದ ಮೊದಲ DCGI-ಅನುಮೋದಿತ ಟೈಪ್ 2 ಮಧುಮೇಹಕ್ಕೆ ಬಿಡುಗಡೆ

ಡಾ.ರೆಡ್ಡೀಸ್ ಜೆನೆರಿಕ್ ಸೆಮಾಗ್ಲುಟೈಡ್‌ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅನುಮೋದನೆಯನ್ನು ಪಡೆದ ಮೊದಲ ಭಾರತೀಯ ಕಂಪನಿಯಾಗಿದೆ. ಈ ಬಿಡುಗಡೆ ಯು ಕಂಪನಿಯು ಪೇಟೆಂಟ್ ಅವಧಿ ಮುಗಿದ ನಂತರ ಈ ವಿಭಾಗಕ್ಕೆ ಮೊದಲ ದಿನ ಪ್ರವೇಶ ವನ್ನು ಒತ್ತಿ ಹೇಳುತ್ತದೆ, ಭಾರತದಲ್ಲಿ ಪೂರೈಸದ ರೋಗಿಗಳ ಅಗತ್ಯಗಳನ್ನು ಪೂರೈಸಲು ಅದರ ಸಿದ್ಧತೆಯನ್ನು ಪ್ರದರ್ಶಿಸುತ್ತದೆ.

ಭಾರತೀಯರ ಸುರಕ್ಷತೆಗೆ ಕತಾರ್‌ ಸರ್ಕಾರದಿಂದ ಸಂಪೂರ್ಣ ಸಹಕಾರ

ಕತಾರ್‌ನಲ್ಲಿ ಭಾರತೀಯರು ಸುರಕ್ಷಿತ

ಯುಎಸ್, ಇಸ್ರೇಲ್ ಸೇನಾಪಡೆಯು ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಇದಕ್ಕೆ ಪ್ರತೀಕಾರವಾಗಿ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ನಡೆಸುತ್ತಿದೆ. ಕತಾರ್ ನ ಹಲವು ಭಾಗಗಳ ಮೇಲೂ ದಾಳಿ ನಡೆಸಲಾಗಿತ್ತು. ಆದರೆ ಕತಾರ್ ಸರ್ಕಾರ ಜನತೆಯ ಸುರಕ್ಷತೆಗೆ ಸಂಪೂರ್ಣ ಒತ್ತು ನೀಡಿದ್ದು, ಭಾರತೀಯರು ಇಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಕನ್ನಡಿಗರಾದ ಕತಾರ್ ಭಾರತೀಯ ಕ್ರೀಡಾ ಕೇಂದ್ರದ ಸಲಹಾ ಮಂಡಳಿ ಸದಸ್ಯರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ತಿಳಿಸಿದ್ದಾರೆ.

Loading...