ಒಣಗುತ್ತಿರುವ ಬೆಳೆ, ಅನ್ನದಾತ ಕಂಗಾಲು
ಭೂಮಿಯನ್ನು ಹಸನುಗೊಳಿಸಿ, ಸಾಲ-ಸೋಲ ಮಾಡಿ ಬೀಜ-ಗೊಬ್ಬರ ಹಾಕಿ ಬಿತ್ತನೆ ಮಾಡಿದ ಕೃಷಿಕರು ಈಗ ಕೈಚೆಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೂನ್ ಆರಂಭದಲ್ಲಿ ಬಿದ್ದ ಅಲ್ಪ-ಸ್ವಲ್ಪ ಮಳೆಯನ್ನು ನಂಬಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತೊಗರಿ, ಹತ್ತಿ ಇತ್ಯಾದಿ ಬೀಜ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದರು.