ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ
ನಟ ದಿ.ವಿಷ್ಣುವರ್ಧನ್ ಮತ್ತು ನಟಿ ದಿ. ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಕಲಾವಿದರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
S Narayan: ‘ಪವಿತ್ರಾ ಮನೆ ಬಿಟ್ಟು ಹೋಗಿ 10 ತಿಂಗಳಾಗಿದೆ. ಮನೆ ಬಿಟ್ಟು ಹೋಗಿದ್ದು ಯಾಕೆ ಎಂದು ಹೇಳಿದರೆ ನಾನು ಅವರ ಹೆಸರಿಗೆ ಮಸಿ ಬಳಿದಂತೆ ಆಗುತ್ತದೆ. ಮದುವೆ ಆಗಿ ಒಂದು ತಿಂಗಳ ಬಳಿಕ ಮಾತುಕತೆಯೇ ನಿಂತು ಹೋಯಿತು. ವಯಸ್ಸು, ವ್ಯಕ್ತಿತ್ವಕ್ಕೂ ಎರಡಕ್ಕೂ ಪವಿತ್ರಾ ಬೆಲೆ ಕೊಡುತ್ತಿರಲಿಲ್ಲ’ ಎಂದಿದ್ದಾರೆ ಎಸ್ ನಾರಾಯಣ್.
ಸರಕಾರಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಸೇರಿದಂತೆ ಶಾಲಾ ಬ್ಯಾಗ್ ಮತ್ತು ಇತರ ಸಾಮಗ್ರಿ ಕೊಡುವುದಕ್ಕಿಂತಲೂ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆರಳತುದಿಗಳಲ್ಲೇ ಪ್ರಪಂಚದ ಹಾಗೂ ಹೋಗುಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳನ್ನ ನೀಡಲಾಗುತ್ತಿದೆ ಇದರಿಂದ ಬಹಳ ಸಂತಸ ತಂದಿದೆ.
ನಗರದ ನಾರಸಿಂಹಪೇಟೆಯ ನಿವಾಸಿ ಅರ್ಬಾಜ್(23) ವರ್ಷ ಮೃತಪಟ್ಟಿರುವ ಯುವಕ. ವೆಂಕಟಗಿರಿ ಕೋಟೆಯ ನಿವಾಸಿ ಫಹಾದ್ ಕೊಲೆ ಮಾಡಿರುವ ಆರೋಪಿ. ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ವಾಸೀಮ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಅರ್ಬಾಜ್ ಕೆಲಸ ಮಾಡುತ್ತಿದ್ದ. ಅದರ ಪಕ್ಕದಲ್ಲೇ ಇರುವ ಸಾಧಿಕ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಫಹಾದ್ ಕೆಲಸ ಮಾಡುತ್ತಿದ್ದನು.
Shivamogga: ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಜೋಡಿ ಬೈಕ್ನಲ್ಲಿ ಪ್ರಯಾಣಿಸುತ್ತಿತ್ತು. ಸದ್ಯದಲ್ಲೇ ಇವರ ಮದುವೆ ನಿಶ್ಚಯವಾಗಿದ್ದು, ಇಬ್ಬರೂ ಹಸೆಮಣೆ ಏರುವ ಕನಸು ಕಾಣುತ್ತಿದ್ದರು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.
Harassment: ಸಂತ್ರಸ್ತ ವಿದ್ಯಾರ್ಥಿ ಹೊಸದಾಗಿ ಶಾಲಾ ಹಾಸ್ಟೆಲ್ಗೆ ಸೇರಿಕೊಂಡಿದ್ದ. ರ್ಯಾಗಿಂಗ್ ಬಗ್ಗೆ ಹಾಸ್ಟೆಲ್ ವಾರ್ಡನ್ ಮತ್ತು ಪ್ರಿನ್ಸಿಪಾಲ್ಗೆ ಆತ ದೂರು ನೀಡಿದ್ದಾನೆ. ಅವರಿಗೆ ದೂರು ನೀಡಿದ್ದಾನೆ ಎಂದು ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
Mysuru Dasara: ಹಿಂದೂ ಅಲ್ಲದ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು ಎಂದು ಕೋರಲಾಗಿದೆ.
Spa Trend 2025: ಸಮೀಕ್ಷೆಯೊಂದರ ಪ್ರಕಾರ, ಉದ್ಯಾನನಗರಿಯಲ್ಲಿ ಯೂನಿಸೆಕ್ಸ್ ಸ್ಪಾಗಳು ಮೊದಲಿಗಿಂತ ಹೆಚ್ಚಾಗಿವೆ. ಹುಡುಗ-ಹುಡುಗಿಯರು ಮಾತ್ರವಲ್ಲ, ಫ್ಯಾಮಿಲಿ ಸೇರಿದಂತೆ, ಬಹುತೇಕರು ಬ್ಯೂಟಿ ಪಾರ್ಲರ್ ಇಲ್ಲವೇ ಸಲೂನ್ ಬದಲು ಇವುಗಳ ಸರ್ವೀಸ್ ಪಡೆಯಲಾರಂಭಿಸಿರುವುದು ಸ್ಪಾಗಳ ವ್ಯಾಪ್ತಿ ವಿಸ್ತರಿಸಲು ಕಾರಣವಾಗಿದೆ ಎನ್ನುತ್ತಾರೆ ಬ್ಯೂಟಿ ಎಕ್ಸ್ಪರ್ಟ್ಸ್.
Rain News: ಇಂದು (ಸೆ.11) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರಿದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಗುರುವಾರ ಹಾಗೂ ಮುಂದಿನ ಮೂರು ದಿನಗಳ ಹವಾಮಾನ ವರದಿ ಇಲ್ಲಿದೆ.
Organ donation: ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಮೂಲಕ ಅಂಗ ಮತ್ತು ಅಂಗಾಂಶಗಳನ್ನು ಪ್ರಿಯಾ ದಾನ ಮಾಡಿದ್ದು, ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅಂಗಾಂಗ ದಾನ ಪ್ರಕ್ರಿಯೆ ಬಹಳ ಸುಲಭವಾಗಿದೆ. ನಿಮ್ಮ ಸಣ್ಣ ನಿರ್ಧಾರದಿಂದ ಒಂದು ಜೀವ ಉಳಿಯುತ್ತದೆ ಎಂದರೆ ಅದಕ್ಕಿಂತ ದೊಡ್ಡ ಕೆಲಸ ಬೇರೊಂದಿಲ್ಲ ಎಂದು ಪ್ರಿಯಾ ಸುದೀಪ್ ತಿಳಿಸಿದ್ದಾರೆ.
CM Siddaramaiah: ವಿಧಾನಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
Actor Pratham: ಆರೋಪಿಗಳಿಗೆ ಕೋರ್ಟ್ನಿಂದ ಕಳೆದ ತಿಂಗಳು ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಷರತ್ತಿನಂತೆ ಪ್ರತಿ ಭಾನುವಾರ ಠಾಣೆಗೆ ಬಂದು ರಘು ಸಹಿ ಹಾಕಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಷರತ್ತು ಉಲ್ಲಂಘನೆ ಮಾಡಿದ್ದರಿಂದ ರಘು ಹಾಗೂ ಪ್ರಕರಣದ ಮತ್ತೊಬ್ಬ ಆರೋಪಿ ಯಶಸ್ವಿನಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.