ಹೈಕಮಾಂಡ್ ಕರೆ: ಒಂದೇ ವಿಮಾನದಲ್ಲಿ ದಿಲ್ಲಿಗೆ ದೌಡಾಯಿಸಿದ ಸಿಎಂ, ಡಿಸಿಎಂ
Bengaluru Stampede: ಬೆಂಗಳೂರು ಕಾಲ್ತುಳಿತ ಘಟನೆ ರಾಜ್ಯದ ಇಮೇಜ್ ಜೊತೆಗೆ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೂ ಹಾನಿಯುಂಟುಮಾಡಿದ್ದು, ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ. ವರಿಷ್ಠರು ಘಟನೆ ನಡೆದ ದಿನ ಪ್ರಾಥಮಿಕ ಮಾಹಿತಿ ಪಡೆದಿದ್ದರೂ, ಇದೀಗ ಸಂಪೂರ್ಣ ವರದಿ ಪಡೆಯಲಿದ್ದಾರೆ.