ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಕೆಲಸ ಘೋಷಣೆ
Chamarajanagar oxygen tragedy: ಗಡಿ ಜಿಲ್ಲೆ ಚಾಮರಾಜನಗರದಲ್ಲಿ 2021ರ ಮೇ 2ರಂದು ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಅಂದಿನಿಂದಲೂ ಆಗ್ರಹ ಕೇಳಿಬಂದಿತ್ತು. ಇದೀಗ ಸಂತ್ರಸ್ತ್ರ ಕುಟುಂಬಗಳ ಮನವಿಗೆ ಸರ್ಕಾರ ಸ್ಪಂದಿಸಿದೆ.