ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಆರ್‌ಸಿಬಿ 11 ಜನರ ಸಾವಿಗೆ ಕಾರಣರಾದ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಯಾವುದೇ ಸಿದ್ಧತೆ ಮಾಡಿಕೊಳ್ಳದೆ ತರಾತುರಿಯಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸ ಲಾಗಿದೆ. ಕಾರ್ಯಕ್ರಮ ಆಯೋಜಿಸಬಾರದು ಎಂದು ಪೊಲೀಸ್ ಇಲಾಖೆ ಪತ್ರ ಬರೆದಿದ್ದರೂ ನಿರ್ಲಕ್ಷಿಸಿ ಸರ್ಕಾರ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅವಕಾಶ ಕಲ್ಪಿಸಿ ೧೧ ಅಭಿಮಾನಿಗಳ ಬಲಿ ಪಡೆದಿದೆ.

Bus Staff Humanity: ಬಸ್ ನಲ್ಲಿ ಮರೆತಿದ್ದ ಲ್ಯಾಪ್ ಟಾಪ್ ಮತ್ತು ನಗದನ್ನು ಪ್ರಯಾಣಿಕನಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ

ಮಾನವೀಯತೆ ಮೆರೆದ ಬಸ್ ಸಿಬ್ಬಂದಿ

ಡಿಪೋ ಘಟಕಕ್ಕೆ ಸೇರಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿಗೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಸೋಮವಾರ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕ ನರಸಿಂಹಯ್ಯ ಎಂಬುವರು ತಮ್ಮ ಲ್ಯಾಪ್ಟಾಪ್ ಮತ್ತು 27 ಸಾವಿರ ನಗದನ್ನು ಬಸ್ಸಿನಲ್ಲಿಯೇ ಮರೆತು ಹೋಗಿರುತ್ತಾರೆ.

Child Labour: ಬಾಲ ಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ: ನ್ಯಾ ಗಣೇಶ್

ಬಾಲ ಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ: ನ್ಯಾ ಗಣೇಶ್

ಸಂವಿಧಾನದಲ್ಲಿ  ಅನುಚ್ಚೇಧ ಕಲಂ  ೨೩,೨೪ ಮತ್ತು ೩೦ ಅಡಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಅದೇಶ ಮಾಡಿದ್ದಾರೆ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು, ಅವರಿಗೆ ಉಚಿತ ಶಿಕ್ಷಣ ನೀಡಲು ಸಂವಿಧಾನದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಮಕ್ಕಳು ಶಿಕ್ಷಣ ಪಡೆದು ದೇಶದ ಸಮಗ್ರ ಅಭಿವೃದ್ದಿಗೆ ಕೈಜೋಡಿಸಬೇಕಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಬಿಜೆಪಿಯಿಂದ ದೂರು

ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

CM Siddaramaiah: ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ ಸವಾಲು

ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ ಸವಾಲು

ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. 56 ಇಂಚಿನ ಎದೆಯ ಪ್ರಧಾನಿ ಮೋದಿ ಯೂಸ್‌ಲೆಸ್‌ ಆಗಿದ್ದಾರೆ ಎಂದೂ ವಾಗ್ದಾಳಿ ನಡೆಸಿದ್ದಾರೆ.

CM Siddaramaiah: ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ,ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು: ಸಿಎಂ

CM Siddaramaiah: ಕೇಂದ್ರ ಸರ್ಕಾರ ಜನಗಣತಿಯನ್ನು 27ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜತೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ; ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ನಿಖಿಲ್ ಕುಮಾರಸ್ವಾಮಿ

ಹೇಮಾವತಿ ಲಿಂಕ್ ಕೆನಾಲ್ ಹೋರಾಟ-ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ: ನಿಖಿಲ್

Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ ರೈತರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರೋದೆ ರಾಜ್ಯ ಸರ್ಕಾರ, ರಾಜ್ಯದ ಸಿಎಂ ಹಾಗೂ ಡಿಸಿಎಂ ಅವರು, ಇವತ್ತು ಡಿಸಿಎಂ ಜಲ ಸಂಪನ್ಮೂಲ ಸಚಿವರಾಗಿದ್ದಾರೆ. ಇಷ್ಟೆಲ್ಲಾ ರಾದ್ಧಾಂತವಾಗಿದೆ ಇನ್ನೂ ಕೂಡ ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‌Viral Video: ಯಾಕಪ್ಪಾ ಇಷ್ಟೊಂದು ಸ್ಪೀಡ್‌ ಅಂದಿದ್ದೇ ತಪ್ಪಾಯ್ತಾ? ಮಹಿಳೆ ಕಪಾಳಕ್ಕೆ ಬಾರಿಸಿದ ರ‍್ಯಾಪಿಡೊ ಚಾಲಕ

ರ‍್ಯಾಪಿಡೊ ಬೈಕ್ ಚಾಲಕನಿಂದ ಮಹಿಳೆಗೆ ಕಪಾಳಮೋಕ್ಷ; ಅಷ್ಟಕ್ಕೂ ಆಗಿದ್ದೇನು?

ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸ್ಪೀಡಾಗಿ ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪ್ರಯಾಣಿಕಳೊಬ್ಬಳಿಗೆ ಸಾರ್ವಜನಿಕರ ಮುಂದೆಯೇ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಆಕೆ ಹೋಗಿ ರಸ್ತೆಯಲ್ಲಿ ಬಿದ್ದಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

Citizens Report Cards: ಬೆಂಗಳೂರು ಶಾಸಕ, ಸಂಸದರ ರಿಪೋರ್ಟ್‌ ಕಾರ್ಡ್‌ ಔಟ್‌; ನಂ. 1 ಶ್ರೀಮಂತ ಶಾಸಕ ಗೋಪಾಲಯ್ಯ ಆಸ್ತಿ ಶೇ.1,399ರಷ್ಟು ಹೆಚ್ಚಳ

ಬೆಂಗಳೂರಿನ ನಂ. 1 ಶ್ರೀಮಂತ ಶಾಸಕ ಗೋಪಾಲಯ್ಯ ಆಸ್ತಿ ಶೇ.1,399ರಷ್ಟು ಹೆಚ್ಚಳ

K.Gopalaiah: ಬೆಂಗಳೂರಿನಿಂದ ಆಯ್ಕೆಯಾಗಿರುವ ಶಾಸಕರು ಹಾಗೂ ಸಂಸದರ ಸಾಧನೆ ಕುರಿತು ಸಿವಿಕ್‌ ಸಂಸ್ಥೆಯು ನಾಗರಿಕ ವರದಿಯನ್ನು ಬಿಡುಗಡೆ ಮಾಡಿದೆ. ಕಾರ್ಯಕ್ಷಮತೆಯ ಮೌಲ್ಯಮಾಪನ, ಕ್ರಿಮಿನಲ್ ಪ್ರಕರಣಗಳು ಹಾಗೂ ಶಾಸಕರ ಆದಾಯವನ್ನು ವರದಿಯಲ್ಲಿ ತಿಳಿಸಲಾಗಿದ್ದು, ಬೆಂಗಳೂರಿನ ಶಾಸಕರ ಪೈಕಿ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಆದಾಯವು ಶೇ.1,399ರಷ್ಟು ಹೆಚ್ಚಳವಾಗಿದ್ದು, ನಂಬರ್ 1 ಶ್ರೀಮಂತ ಶಾಸಕರೆನಿಸಿಕೊಂಡಿದ್ದಾರೆ.

Viral Video: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ; ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ ಯುವತಿಗೆ ಹೊಡೆದ ರ‍್ಯಾಪಿಡೋ ಬೈಕ್ ಚಾಲಕ

ರ‍್ಯಾಪಿಡೋ ಬೈಕ್ ಚಾಲಕನಿಂದ ಯುವತಿ ಮೇಲೆ ಹಲ್ಲೆ

Rapido Bike Driver: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿರುವ ವಿಡಿಯೊವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ರ‍್ಯಾಶ್‌ ಡ್ರೈವಿಂಗ್‌ ಬಗ್ಗೆ ಯುವತಿ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಚಾಲಕ ಆಕೆಯ ಕೆನ್ನೆ ಮೇಲೆ ಹೊಡೆದಿದ್ದಾನೆ ಎನ್ನಲಾಗಿದೆ.

ಕಾಟನ್ ಕ್ಯಾಂಡಿಯಿಂದ ಕಲುಷಿತ ಚಹಾದವರೆಗೆ: ಆರೋಗ್ಯ ಸಚಿವರಿಂದ ಕರ್ನಾಟಕದ ಆಹಾರ ಸುರಕ್ಷತಾ ಅಭಿಯಾನದ ನಕ್ಷೆಗಳು

ಕಾಟನ್ ಕ್ಯಾಂಡಿಯಿಂದ ಕಲುಷಿತ ಚಹಾದವರೆಗೆ

‘ಗುಡ್ ಫುಡ್ ಟಾಕ್ಸ್’ ಆಹಾರ ಮತ್ತು ಸ್ವಾಸ್ಥ್ಯದ ಬದಲಾಗುತ್ತಿರುವ ಪ್ರಪಂಚದ ಬಗ್ಗೆ ಚಿಂತಕರು, ಉದ್ಯಮ ತಜ್ಞರು ಮತ್ತು ಆರೋಗ್ಯ ಜಾಗೃತ ವ್ಯಕ್ತಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸ ಬಹುದಾದ ಪಾಡ್ಕ್ಯಾಸ್ಟ್ ಸರಣಿಯಾಗಿದೆ. ಪ್ರತಿ ಸಂಚಿಕೆಯು ಪ್ರೇಕ್ಷಕರನ್ನು ಎಚ್ಚರಿಕೆಯಿಂದ ಆಹಾರ ಸೇವಿಸುವುದು, ಸ್ಥಳೀಯ ಉತ್ಪನ್ನಗಳು ಮತ್ತು ಪಾರದರ್ಶಕ ಆಹಾರ ವ್ಯವಸ್ಥೆಗಳು ಹಾಗು ಆರೋಗ್ಯಕರ ಭವಿಷ್ಯವನ್ನು ಹೇಗೆ ರೂಪಿಸಬಹುದು ಎಂಬುದನ್ನು ಅರ್ಥಮಾಡಿಸಿಕೊಳ್ಳುತ್ತದೆ.

DK Shivakumar: ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿ.ಕೆ.ಶಿವಕುಮಾರ್

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿ.ಕೆ.ಶಿವಕುಮಾರ್

DK Shivakumar: ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟು ಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ATM Robbery: ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ; ಕೋಲಾರದಲ್ಲಿ 27 ಲಕ್ಷ ರೂ. ದೋಚಿದ ಕಳ್ಳರು

ಕೋಲಾರದಲ್ಲಿ ಎಸ್‌ಬಿಐ ಎಟಿಎಂನಿಂದ 27 ಲಕ್ಷ ರೂ. ದೋಚಿದ ಕಳ್ಳರು

Kolar News: ಕೋಲಾರದ ಗಲ್ ಪೇಟೆ ಪೋಲೀಸ್ ಠಾಣೆ ಸಮೀಪದ ಸಹಕಾರ ನಗರದಲ್ಲಿರುವ ಎಸ್​​ಬಿಐ ಎಟಿಎಂನಿಂದ ಕಳ್ಳಲು ಸೋಮವಾರ ಮುಂಜಾನೆ ಸುಮಾರು 27 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮಂದುವರಿದಿದೆ.

PM Narendra Modi: ಪ್ರಧಾನಿ ಮೋದಿಯನ್ನು ಅವಹೇಳನ ಮಾಡಿ ಪೋಸ್ಟ್ ಮಾಡಿದ ಕಿಡಿಗೇಡಿ, ದೂರು

ಪ್ರಧಾನಿ ಮೋದಿಯನ್ನು ಅವಹೇಳನ ಮಾಡಿ ಪೋಸ್ಟ್ ಮಾಡಿದ ಕಿಡಿಗೇಡಿ, ದೂರು

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿರುವ ಎಐ ಇಮೇಜ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಿಡಿಗೇಡಿ ಕಲಾವಿದ ಟಿಎಪ್‌ ಹಾದಿಮನಿ ಎಂಬಾತನ ಮೇಲೆ ಬಿಜೆಪಿ ಸೈಬರ್‌ ಕ್ರೈಂ ದೂರು ನೀಡಿದೆ. ಇಂಥ ಹಲವು ಪೋಸ್ಟ್‌ಗಳನ್ನು ಈತ ಮಾಡಿದ್ದಾನೆ ಎನ್ನಲಾಗಿದೆ.

Bomb Threat: ಹಾಸನದ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ

ಹಾಸನದ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ

ಹೈದರಾಬಾದ್​ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ (Bomb threat) ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು (Bangalore Police) ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Road Accident: ಬೆಂಗಳೂರು, ಬೆಳಗಾವಿಯಲ್ಲಿ ಭೀಕರ ಅಪಘಾತ; ನಾಲ್ವರು ಸಾವು

ಬೆಂಗಳೂರು, ಬೆಳಗಾವಿಯಲ್ಲಿ ಭೀಕರ ಅಪಘಾತ; ನಾಲ್ವರು ಸಾವು

Road Accident: ಬೆಂಗಳೂರು ಹಾಗೂ ಬೆಳಗಾವಿಗಳಲ್ಲಿ ಸಂಭವಿಸಿರುವ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಎರಡೂ ಕಡೆಗಳಲ್ಲೂ ಬೈಕ್‌ಗಳಿಗೆ ಲಾರಿಗಳು ಗುದ್ದಿದ್ದು, ಬೈಕ್‌ ಸವಾರಿ ಮಾಡುತ್ತಿದ್ದವರು ಸಾವಿಗೀಡಾಗಿದ್ದಾರೆ. ಲಾರಿ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Bike Taxi : ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲ

ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲ

Bike Taxi : ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆಯಾಗದ ಹಿನ್ನೆಲೆಯಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್‌, ಓಲಾ, ಬೈಕ್‌ ಟ್ಯಾಕ್ಸಿಗಳ ಮಾಲೀಕರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

Bomb Threat: ಹಾಸನದಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ, ʼ1 ಗಂಟೆಗೆ ಸ್ಫೋಟʼ ಎಂದು ಎಚ್ಚರಿಕೆ

ಹಾಸನದಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ, 1 ಗಂಟೆಗೆ ಸ್ಫೋಟಿಸುವ ಎಚ್ಚರಿಕೆ

Bomb Threat: 1 ಗಂಟೆಗೆ ಕಟ್ಟಡ ಸ್ಫೋಟಿಸುವುದಾಗಿ ದುಷ್ಕರ್ಮಿ ಸಂದೇಶ ಕಳುಹಿಸಿದ್ದಾನೆ. ಮಾಹಿತಿ ದೊರೆತ ಬೆನ್ನಲ್ಲೇ ಶಾಲೆಗೆ ಪೊಲೀಸರು ಧಾವಿಸಿದ್ದಾರೆ. ಬಾಂಬ್ ಪತ್ತೆ ದಳವೂ ಕಾರ್ಯಾಚರಣೆ ನಡೆಸಿದೆ. ಆದರೆ, ಸ್ಫೋಟಕಗಳು ಪತ್ತೆಯಾದ ಬಗ್ಗೆ ಈವರೆಗೆ ಪೊಲೀಸರು ದೃಢಪಡಿಸಿಲ್ಲ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15 ರೂ. ಇಳಿಕೆಯಾಗಿ 9,305ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 17 ರೂ. ಇಳಿಕಯಾಗಿದ್ದು, 10,151 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,440 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 93,050 ರೂ. ಮತ್ತು 100 ಗ್ರಾಂಗೆ 9,30,500 ರೂ. ನೀಡಬೇಕಾಗುತ್ತದೆ.

Rain News: ತಂದೆಯ ಬರ್ತ್‌ಡೇಗೆ ಮಟನ್‌ ತರಲು ಹೋದವನ ತಲೆ ಮೇಲೆ ಬಿದ್ದ ಮರದ ಕೊಂಬೆ, ಯುವಕ ಚಿಂತಾಜನಕ

ತಂದೆಯ ಬರ್ತ್‌ಡೇ ಖುಷಿಯಲ್ಲಿದ್ದವನ ತಲೆ ಮೇಲೆ ಬಿದ್ದ ಮರದ ಕೊಂಬೆ, ತೀವ್ರ ಗಾಯ

Rain News: ತಂದೆಯ ಬರ್ತ್‌ಡೇ ಖುಷಿಯಲ್ಲಿದ್ದ ಯುವಕ ಮರದ ಕೊಂಬೆ ಬಿದ್ದು ಗಾಯಗೊಂಡು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸ್ ಠಾಣೆಯಿಂದ ತನಿಖೆ ಆರಂಭವಾಗಿದೆ.

Harassment: ಮಾಟ- ಮಂತ್ರದ ಬೆದರಿಕೆ ಹಾಕಿ ಮಹಿಳೆಯ ನಗ್ನ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ಅರ್ಚಕ ಸೆರೆ

ಮಾಟ- ಮಂತ್ರ ಎಂದು ಮಹಿಳೆ ನಗ್ನ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌, ಅರ್ಚಕ ಸೆರೆ

Harassment: ಮಾಟ ಮಂತ್ರ ತೆಗೆಯಬೇಕು ಅಂದರೆ ಬೆತ್ತಲಾಗಬೇಕು ಅಂತ ಅರ್ಚಕ ಹೇಳಿದ್ದ. ಮಹಿಳೆ ಒಪ್ಪದಿದ್ದಕ್ಕೆ ಮಕ್ಕಳು ಸಾಯುವ ಹಾಗೆ ಪೂಜೆ ಮಾಡುವ ಬೆದರಿಕೆ ಹಾಕಿದ್ದಾನೆ. ಅರ್ಚಕ ಅರುಣ್ ಬೆದರಿಕೆಯಿಂದ ಮಹಿಳೆ ಬೆತ್ತಲೆಯಾಗಿದ್ದಾಳೆ. ಬಳಿಕ ಬೆತ್ತಲೆ ವಿಡಿಯೋವನ್ನು ಅರ್ಚಕ ರೆಕಾರ್ಡ್ ಮಾಡಿಕೊಂಡಿದ್ದಾನೆ.

Fake Doctor: ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಅಂಥ ಒಬ್ಬ ನಕಲಿ ಡಾಕ್ಟರ್‌ (Fake Doctor) ನೀಡಿದ ಚಿಕಿತ್ಸೆಯ ಪರಿಣಾಮ ಆರು ತಿಂಗಳ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Murder Case: ಯುವಕನ ಕೊಂದು ಅವಿತುಕೊಂಡಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ಯುವಕನ ಕೊಂದು ಅವಿತುಕೊಂಡಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ನಿನ್ನೆಯಷ್ಟೇ ಜೈಲಿನಿಂದ ಹೊರಬಂದಿದ್ದ ವಿಜಯ್ ಎಂಬಾತನನ್ನು ಮಾತುಕತೆಗೆಂದು ಕರೆದೊಯ್ದು ಇವರು ಅಟ್ಟಾಡಿಸಿ ಬರ್ಬರವಾಗಿ (murder case) ಹತ್ಯೆಗೈದಿದ್ದಾರೆ. ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದರು. ಆರ್ ಆರ್ ನಗರದ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಅಡಗಿಕೊಂಡಿದ್ದರು.

Nandi Hills: ನವವಧುವಿನಂತೆ ಸಜ್ಜಾದ ನಂದಿಬೆಟ್ಟ ಮತ್ತು ಸುತ್ತ ಮುತ್ತಲ ಪರಿಸರ ; ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ಎಲ್ಲವೂ ಸಜ್ಜು

ನಂದಿಬೆಟ್ಟದ ಸಂಪುಟ ಸಭೆಗೆ ದಿನಗಣನೆ ಆರಂಭ

೧೩ನೇ ವಿಶೇಷ ಸಚಿವ ಸಂಪುಟಸಭೆ ನಡೆಯುವ ಕಾರಣವಾಗಿ ನಂದಿಬೆಟ್ಟ ಮತ್ತು ಅದರ ಪರಿಸರವನ್ನು ನವವಧುವಿನಂತೆ ಸಿಂಗರಿಸಲಾಗಿದೆ.ಸಭೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಜೂನ್ ೧೬ರ ಸಂಜೆ ೫ ಗಂಟೆಯಿಂದ ೨೦ರ ಸಂಜೆ ೫ರ ತನಕ ಮೂರುದಿನಗಳ ಕಾಲ ಸಂಪೂರ್ಣವಾಗಿ ನಿಷೇಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.