ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: 4ನೇ ಅಖಿಲ ಭಾರತ ಸಾಹಿತ್ಯ ಪರಿಷದ್ ಸಮ್ಮೇಳನದಲ್ಲಿ ಬಿ.ಆರ್.ಕೃಷ್ಣರಿಗೆ ಸನ್ಮಾನ

ಪರಿಷದ್ ಸಮ್ಮೇಳನದಲ್ಲಿ ಬಿ.ಆರ್.ಕೃಷ್ಣರಿಗೆ ಸನ್ಮಾನ

ಬಾಗಲಕೋಟೆಯ ಸಾಹಿತಿ ಎಸ್.ಜಿ. ಕೋಟಿ ಅಧಿವೇಶನದ ಅವರು ಅಧ್ಯಕ್ಷತೆ ವಹಿಸಿದ್ದರು. ಸತತ ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಕವಿ, ಸಾಮಾಜಿ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

Bakrid: ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ಮುಸ್ಲಿಂ ಧರ್ಮದಲ್ಲಿ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ನಮಾಜ್, ಹಜ್, ರೋಜಾ, ಜಕಾತ, ಸಿತ್ರಾ ಈ ಪಂಚ ಸೂತ್ರಗಳನ್ನು ಪಾಲಿಸಿದಾಗ ಮಾತ್ರ ಅಲ್ಲಾಹನ ಕೃಪೆಗೆ ಪಾತ್ರರಾಗಿ ಮೋಕ್ಷ ಪಡೆಯಲು ಸಾಧ್ಯ. ಅನಿವಾರ್ಯ ಸಂದರ್ಭದಲ್ಲಿ ದೇಶ, ಧರ್ಮ ಹಾಗೂ ಮಾನವ ಕುಲಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಲು ಸನ್ನದ್ಧಗೊಳಿಸುವುದು ಈ ಹಬ್ಬದ ಆಚರಣೆಯ ಉದ್ದೇಶವಾಗಿದೆ

Chikkaballapur News: ಪರಿಸರ ಸ್ನೇಹಿ ಕೃಷಿ ತಾಂತ್ರಿಕತೆಯಿಂದ ಸುಸ್ಥಿರ ಕೃಷಿ ಸಾಧನೆ

ಪರಿಸರ ಸ್ನೇಹಿ ಕೃಷಿ ತಾಂತ್ರಿಕತೆಯಿಂದ ಸುಸ್ಥಿರ ಕೃಷಿ ಸಾಧನೆ

ಪ್ರಕೃತಿ ವಿಕೋಪಗಳು ಈಗ ನಮ್ಮ ಕಣ್ಮುಂದೆ ಕಾಣು ತ್ತಿವೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಮರಗಳನ್ನು ಕಡಿದು ವಾಣಿಜ್ಯ ಮಟ್ಟದಲ್ಲಿ ಹೆಚ್ಚು ರಾಸಾಯ ನಿಕಗಳನ್ನು ಬಳಸಿ ಕೃಷಿ ಮಾಡಿ ಹಣಗಳಿಸುತ್ತಿರುವು ದರಿಂದ, ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿ ಕೊಂಡು ಆಸ್ಪತ್ರೆಗಳಿಗೆ ಖರ್ಚು ಮಾಡಲಾಗುತ್ತಿದೆಂದು ಸದ್ಯದ ಪರಿಸರದ ಪರಿಸ್ಥಿತಿಯ ಬಗ್ಗೆ ಸಂಕ್ಷಿಪ್ತವಾಗಿ ರೈತರಿಗೆ ಮನದಟ್ಟು ಮಾಡಿಕೊಟ್ಟರು.

Bakrid at Chikkaballapur: ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಣೆ

ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಣೆ

ಹಬ್ಬದ ಪ್ರಯುಕ್ತ ನಗರದಲ್ಲಿ ಮುಸ್ಲಿಂ ಬಾಂಧವರು ನಗರದ ಮಸ್ಜಿದೆ ಖುರ್ದ್ ಬಳಿ ಜಮಾಯಿಸಿ, ದೇವರ ನಾಮ ಸ್ಮರಣೆ ಮಾಡಿ, ಬಳಿಕ ಮೆರವಣಿಗೆ ಸಾಗಿದ ನೂರಾರು ಮುಸ್ಲಿಂ ಬಾಂಧವರು ಬಜಾರ್ ರಸ್ತೆ, ಭುವನೇಶ್ವರಿ ವೃತ್ತ,ಗಂಗಮ್ಮ ಗುಡಿ ರಸ್ತೆ ಹಾಗೂ ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ ನಗರದಲ್ಲಿರುವ ಈದ್ಗಾ ಮೈದಾನದ ಬಳಿ ಸೇರಿದರು.

Pralhad Joshi: ಕೇಂದ್ರದ ಪುರಸ್ಕಾರಗಳು ನೈಜ ಸಾಧಕರಿಗೆ ಸಲ್ಲುತ್ತಿವೆ: ಪ್ರಲ್ಹಾದ್‌ ಜೋಶಿ

ಕೇಂದ್ರದ ಪುರಸ್ಕಾರಗಳು ನೈಜ ಸಾಧಕರಿಗೆ ಸಲ್ಲುತ್ತಿವೆ: ಜೋಶಿ

ಸ್ಥಳೀಯ ಆಡಳಿತ, ಅಧಿಕಾರಿಗಳಿಗೇ ನೈಜ ಸಾಧಕರ ಬಗ್ಗೆ ಮಾಹಿತಿ ಇರುವುದಿಲ್ಲ. ಅಂಥ ಸಮಾಜ ಸೇವಕರನ್ನು, ಸಾಧಕರನ್ನು ಪ್ರಧಾನಿ ನರೇಂದ್ರ ಮೋದಿ ಗುರುತಿಸಿ ಪದ್ಮಶ್ರೀಯಂತಹ ಅತ್ಯುನ್ನತ ಪ್ರಶಸ್ತಿ ನೀಡಿ ಪುರಸ್ಕರಿಸುತ್ತಿದ್ದಾರೆ. ಈ ಮೂಲಕ ಅವರ ಸೇವಾ ಕೈಂಕರ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುತ್ತ ಬೆಂಬಲವಾಗಿ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Chowkidar Movie: ಅಪ್ಪ-ಮಗನ ಬಾಂಧವ್ಯದ ಮನ ಮುಟ್ಟುವ ʼಚೌಕಿದಾರ್ʼ ಚಿತ್ರದ ಹಾಡಿಗೆ ಭರಪೂರ ಮೆಚ್ಚುಗೆ: 1 ಮಿಲಿಯನ್ಸ್‌ ವೀಕ್ಷಣೆ

ಅಪ್ಪ-ಮಗನ ಬಾಂಧವ್ಯದ ಮನ ಮುಟ್ಟುವ ʼಚೌಕಿದಾರ್ʼ ಚಿತ್ರದ ಹಾಡಿಗೆ ಮೆಚ್ಚುಗೆ

ʼಚೌಕಿದಾರ್‌ʼ ಸಿನಿಮಾದ ಅಪ್ಪ-ಮಗನ ಬಾಂಧವ್ಯ ಗೀತೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಅಪ್ಪನ ಆಂಥೆಮ್‌ ಗೀತೆಗೆ ಬರೋಬ್ಬರಿ ಒಂದು ಮಿಲಿಯನ್ಸ್‌ ವೀಕ್ಷಣೆ ಕಂಡಿದೆ. ʼಚೌಕಿದಾರ್ʼ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸಿದ್ದಾರೆ. ಧನ್ಯಾ ರಾಮ್‌ಕುಮಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru stampede: ಇಂಥ ಪರಿಸ್ಥಿತಿ ಯಾರಿಗೂ ಬೇಡ; ಭೂಮಿಕ್‌ ಸಮಾಧಿ ಮೇಲೆ ಬಿದ್ದು ತಂದೆ ಗೋಳಾಟ

ಇಂಥ ಪರಿಸ್ಥಿತಿ ಯಾರಿಗೂ ಬೇಡ; ಭೂಮಿಕ್‌ ಸಮಾಧಿ ಮೇಲೆ ಬಿದ್ದು ತಂದೆ ಆಕ್ರಂದನ

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮೃತಪಟ್ಟಿದ್ದ ಯುವಕ ಭೂಮಿಕ್‌ ಮೃತದೇಹದ ಶವಪರೀಕ್ಷೆಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಲಾಗಿತ್ತು. ಅದೇ ದಿನ, ಬೇಲೂರಿನ ಕುಪ್ಪಗೋಡಿನಲ್ಲಿರುವ ಲಕ್ಷ್ಮಣ್ ಅವರು ಖರೀದಿಸಿದ್ದ ಜಮೀನಿನಲ್ಲೇ ಅವರ ಅಂತ್ಯಕ್ರಿಯೆ ನಡೆಸಲಾಗಿತ್ತು. ಸಮಾಧಿ ಪೂಜೆಗೆ ತೆರಳಿದಾಗ ತಂದೆ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Bengaluru stampede: ಕಾಲ್ತುಳಿತ ದುರಂತ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

SS Mallikarjun: ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಉಪ ಖನಿಜಕ್ಕೆ ಶುಲ್ಕ ಪಾವತಿ ಕಡ್ಡಾಯ: ಎಸ್.ಎಸ್.ಮಲ್ಲಿಕಾರ್ಜುನ್

ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಉಪ ಖನಿಜಕ್ಕೆ ಶುಲ್ಕ ಕಡ್ಡಾಯ

SS Mallikarjun: ಕೆಎಸ್‌ಆರ್‌ಎಸ್‌ಎಸಿ (KSRSAC) ಸಂಸ್ಥೆಯವರಿಂದ ತ್ರೈಮಾಸಿಕವಾಗಿ ಆಯ್ಕೆ ಕ್ಲಸ್ಟರ್ ಕಲ್ಲುಗಣಿ ಗುತ್ತಿಗೆ ಪ್ರದೇಶಗಳನ್ನು ಡ್ರೋನ್‌ ಉಪಕರಣದ ಮೂಲಕ ಸಮೀಕ್ಷೆ ನಡೆಸಿ ಕಲ್ಲುಗಣಿ ಗುತ್ತಿಗೆ ಪ್ರದೇಶಗಳಲ್ಲಿ ಗುತ್ತಿಗೆದಾರರು ಉತ್ಪಾದಿಸಿ ಸಾಗಾಣಿಕೆ ಮಾಡಿದ ಉಪ ಖನಿಜದ ಪ್ರಮಾಣಕ್ಕೆ ಅನುಗುಣವಾಗಿ ರಾಜಧನ ಮತ್ತು ಇತರೆ ಅನ್ವಯಿಕ ಶುಲ್ಕಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

DK Shivakumar: ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ ಎಂದ ಡಿಕೆಶಿ

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ ಎಂದ ಡಿಕೆಶಿ

DK Shivakumar: ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ, ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ ಸುಧಾರಣೆಯಾಗುವುದು ನನಗೆ ಮುಖ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Book Release: ಮಾಧ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವವರ ಕೊರತೆ ಸಾಕಷ್ಟಿದೆ: ಡಾ. ನಿರಂಜನ ವಾನಳ್ಳಿ

ಮಾಧ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವವರ ಕೊರತೆ ಸಾಕಷ್ಟಿದೆ

Book Release: ಶಿರಸಿ ನಗರದ ಪಂಚವಟಿ ಸಭಾಂಗಣದಲ್ಲಿ ಮನು ವಿಕಾಸ ಸಂಸ್ಥೆ ಹಾಗೂ ಸಾಹಿತ್ಯ ಪ್ರಕಾಶನ ವತಿಯಿಂದ ಹಿರಿಯ ಪತ್ರಕರ್ತ ರಾಜು ಅಡಕಳ್ಳಿ ಅವರ 'ಸ್ಫೂರ್ತಿವಂತರು' ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿದ್ದಾರೆ.

Mangalore News: ಸೋಶಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದಕ ಸಂದೇಶ; 6 ಕಿಡಿಗೇಡಿಗಳ ಬಂಧನ

ಕೋಮು ಪ್ರಚೋದಕ ಸಂದೇಶ; ಮಂಗಳೂರಲ್ಲಿ 6 ಮಂದಿ ಅರೆಸ್ಟ್‌

Mangalore News: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಿದ ಆರೋಪದಲ್ಲಿ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿವಿಧ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಮುಂದುವರಿದಿದೆ.

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಜೂ.11ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ; ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

HD Kumaraswamy: ಕಾವೇರಿ ಆರತಿಗೆ 100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ: ಎಚ್.ಡಿ.ಕುಮಾರಸ್ವಾಮಿ

ಕಾವೇರಿ ಆರತಿಗೆ 100 ಕೋಟಿ ಖರ್ಚು ಮಾಡಲು ವಿರೋಧವಿದೆ: ಎಚ್‌ಡಿಕೆ

HD Kumaraswamy: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು, ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು, ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

DK Suresh: ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಜೆಡಿಎಸ್ ಟ್ವೀಟ್‌ಗಳನ್ನು ಜನರಿಗೆ ತೋರಿಸಬೇಕು‌: ಡಿ.ಕೆ.ಸುರೇಶ್‌

ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಆರೋಗ್ಯ ಸರಿಯಿಲ್ಲ: ಡಿ.ಕೆ.ಸುರೇಶ್‌

DK Suresh: ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೆ. ಅವರು ಒತ್ತಡದಲ್ಲಿ ಇದ್ದಾರೆ, ಆರೋಗ್ಯ ಸರಿಯಿಲ್ಲ ಎನಿಸುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಈ ರಾಷ್ಟ್ರದ ಸೇವೆ ಮಾಡಲಿʼ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಟೀಕಿಸಿದ್ದಾರೆ‌.

Basavaraj Bommai: ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

Basavaraj Bommai: ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಅತ್ಯುತ್ತಮ ಪುಸ್ತಕಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Language row: ತಮಿಳಿನಿಂದಲೇ ಕನ್ನಡ ಸೇರಿ 3 ಭಾಷೆಗಳ ಉಗಮ; ತಮಿಳುನಾಡಿನ 7ನೇ ಕ್ಲಾಸ್‌ ಪುಸ್ತಕದಲ್ಲಿ ವಿವಾದಾತ್ಮಕ ಪಠ್ಯ!

ತಮಿಳಿನಿಂದಲೇ ಕನ್ನಡ ಉಗಮ; ತಮಿಳುನಾಡಿನಲ್ಲಿ ವಿವಾದಾತ್ಮಕ ಪಠ್ಯ!

Language row: ತಮಿಳುನಾಡಿನ ಪಠ್ಯ ಪುಸ್ತಕದಲ್ಲಿ ಕನ್ನಡ, ತೆಲುಗು, ಮಲಯಾಳಂಗಳ ತಾಯಿ ತಮಿಳು ಎಂದು ಉಲ್ಲೇಖಿಸಿರುವುದನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ತಮಿಳು ಪಠ್ಯದಲ್ಲಿ ಇರುವ ಈ ಅಂಶವು ಭಾರಿ ವಿವಾದಕ್ಕೆ ಕಾರಣವಾಗಿದೆ.

Actor Madenuru Manu: ಪರಪ್ಪನ ಅಗ್ರಹಾರ ಜೈಲಿನಿಂದ ನಟ ಮಡೆನೂರು ಮನು ರಿಲೀಸ್‌; ಆಡಿಯೋ ಬಗ್ಗೆ ಹೇಳಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಿಂದ ನಟ ಮಡೆನೂರು ಮನು ರಿಲೀಸ್‌

Actor Madenuru Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ಮಡೆನೂರು ಮನು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Mysuru News: ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ ಯಶಸ್ವಿ

ಮೈಸೂರಿನಲ್ಲಿ ವಿದ್ವಾನ್ ಸತ್ಯನಾರಾಯಣ ರಾಜು ನೇತೃತ್ವದಲ್ಲಿ ವರ್ಣಂ ಕಾರ್ಯಾಗಾರ

Mysuru News: ಮೈಸೂರಿನ ವಿಜಯನಗರದ ತ್ರಿಪುರ ಪಾಠಶಾಲೆಯಲ್ಲಿ ಭೈರವಿ ನಾಟ್ಯಶಾಲೆಯ ವತಿಯಿಂದ ಆಯೋಜಿಸಿದ್ದ ವರ್ಣ ಕಾರ್ಯಾಗಾರ ಯಶಸ್ವಿಯಾಗಿ ಪೂರ್ಣಗೊಂಡಿತು. ಕಾರ್ಯಾಗಾರದಲ್ಲಿ ವಿಶ್ವಖ್ಯಾತಿಯ ಭರತನಾಟ್ಯ ವಿದ್ವಾಂಸ, ಬೆಂಗಳೂರಿನ ಸಂಸ್ಕೃತಿ-ಟೆಂಪಲ್ ಆಫ್ ಆರ್ಟ್ಸ್ ನೃತ್ಯ ಸಂಸ್ಥೆಯ ಗುರು ಸತ್ಯನಾರಾಯಣ ರಾಜು ಅವರು ಅಷ್ಟರಾಗಮಾಲಿಕ ವರ್ಣವನ್ನು ಸೂಕ್ಷ್ಮವಾಗಿ ವಿವರಿಸಿದರು. ಈ ಕುರಿತ ವಿವರ ಇಲ್ಲಿದೆ.

Bengaluru Stampede: ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್‌ಸಿಬಿ!

ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್‌ಸಿಬಿ!

Bengaluru Stampede: ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದ ಸಂಪೂರ್ಣ ಹೊಣೆಯನ್ನು ಸಿಎಂ, ಡಿಸಿಎಂ, ಗೃಹ ಸಚಿವರೇ ತೆಗೆದುಕೊಳ್ಳಬೇಕು. ಈ ಮೂವರದು ಕೂಡ ತಪ್ಪಿದೆ. ಪಂದ್ಯ ಗೆದ್ದ 24 ಗಂಟೆ ಒಳಗೆ ಆತುರಾತುರವಾಗಿ ಸನ್ಮಾನ ಮಾಡೋದು ಏನಿತ್ತು? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Bengaluru stampede: ಕಾಲ್ತುಳಿತ ಪ್ರಕರಣ; 2 ಸುಮೋಟೋ ಕೇಸ್‌ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

ಕಾಲ್ತುಳಿತ ಪ್ರಕರಣ; ಸುಮೋಟೋ ಕೇಸ್‌ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

Bengaluru stampede: ಮಾನವ ಹಕ್ಕುಗಳ ಆಯೋಗದಿಂದ 2 ಕೇಸ್ ದಾಖಲಿಸಿಕೊಂಡಿದ್ದೇವೆ. ಬೆಂಗಳೂರು ಪೊಲೀಸ್ ಕಮಿಷನರ್​, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಕ್ರೀಡಾಂಗಣದವರ ಮೇಲೆ ಸುಮೋಟೋ ಕೇಸ್ ದಾಖಲು ಮಾಡಿದ್ದೇವೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂಭಟ್ ತಿಳಿಸಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತ ತನಿಖೆ ಹೊಣೆ ಹೊತ್ತ ನ್ಯಾ. ಡಿʼಕುನ್ಹಾ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು ಕಾಲ್ತುಳಿತ ತನಿಖೆ ಹೊಣೆ, ನ್ಯಾ.ಡಿʼಕುನ್ಹಾ ಆಯೋಗದ ಅವಧಿ ವಿಸ್ತರಣೆ

ಕಾಲ್ತುಳಿತ (Bengaluru Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್​ಐಆರ್ ದಾಖಲಾಗಿ ನಾಲ್ವರನ್ನು ಬಂಧಿಸಲಾಗಿದೆ. ಈ ಮಧ್ಯೆ ಜ. ಡಿʼಕುನ್ಹಾ ಆಯೋಗಕ್ಕೆ ಪ್ರಕರಣದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಹೊಣೆ ನೀಡಲಾಗಿದೆ. ಸದ್ಯ ಜಸ್ಟೀಸ್ ಮೈಕೆಲ್‌ ಡಿʼಕುನ್ಹಾ ಆಯೋಗವು ಚಾಮರಾಜನಗರದ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ವಿಚಾರಣೆ ಮಾಡುತ್ತಿದೆ.

Bengaluru Stampede: ಬೆಂಗಳೂರು ಕಾಲ್ತುಳಿತ; ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು ಕಾಲ್ತುಳಿತ; ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

Bengaluru Stampede: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಕಾರ್ಯದರ್ಶಿ ಶಂಕರ್ ಹಾಗೂ ಕೆಎಸ್​​ಸಿಎ ಖಜಾಂಚಿ ಜೈರಾಮ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜಿನಾಮೆ (Resignation) ನೀಡಿದ್ದಾರೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 7th June 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ ಇಳಿಕೆ ಕಂಡು ಬಂದಿದ್ದು, 9,129 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 1 ರೂ. ಇಳಿಕೆಯಾಗಿ 9,959 ರೂ ಇತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,032 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,290 ರೂ. ಮತ್ತು 100 ಗ್ರಾಂಗೆ 9,12,900 ರೂ. ನೀಡಬೇಕಾಗುತ್ತದೆ.