ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Physical Abuse Case: ಜಾಮೀನು ಸಿಗುತ್ತಿದ್ದಂತೆ  ಮೆರವಣಿಗೆ , ರೋಡ್‌ ಶೋ....... ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅಂದರ್

ಜಾಮೀನು ಸಿಗುತ್ತಿದ್ದಂತೆ ರೋಡ್‌ ಶೋ;ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅಂದರ್

ಕಳೆದ ವರ್ಷ ಹಾವೇರಿಯ (Haveri) ಹಾನಗಲ್‌ನಲ್ಲಿ ಮಹಿಳೆಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಕಾರುಗಳಲ್ಲಿ ರೋಡ್ ಶೋ ಮಾಡಿ ವಿಜಯೋತ್ಸವ ಮಾಡಿದ್ದ ಏಳು ಆರೋಪಿಗಳನ್ನು ಪೊಲೀಸರು ಮತ್ತೆ ಜೈಲಿಗಟ್ಟಿದ್ದಾರೆ.

Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌  ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 25th May 2025: ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 50 ರೂ. ಏರಿಕೆ ಕಂಡಿದ್ದು, 8,990 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಏರಿಕೆಯಾಗಿ 9,808 ರೂ.ಗೆ ಬಂದು ನಿಂತಿತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,900 ರೂ. ಮತ್ತು 100 ಗ್ರಾಂಗೆ 9,99,000 ರೂ. ನೀಡಬೇಕಾಗುತ್ತದೆ.

Corona Virus: ರಾಜ್ಯಕ್ಕೆ ಕೋವಿಡ್‌ ಕಂಟಕ; ಮತ್ತೆ ಇಬ್ಬರಿಗೆ ಸೋಂಕು ದೃಢ, 40 ಕ್ಕೇರಿದ ಪ್ರಕರಣ

ರಾಜ್ಯಕ್ಕೆ ಕೋವಿಡ್‌ ಕಂಟಕ; ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ದೃಢ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಭಾನುವಾರದಿಂದಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೋನ ಟೆಸ್ಟ್ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಕಟ್ಟು ನಿಟ್ಟಿನ ಕ್ರಮವನ್ನು ಜಾರಿಗೊಳಿಸಿದೆ.

DK Shivakumar: ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿ.ಕೆ.ಶಿವಕುಮಾರ್

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಕೆಶಿ

ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. 120 ದಿನಗಳಲ್ಲಿ ನಾವು ಪಾಲಿಕೆಗಳನ್ನು ರಚನೆ ಮಾಡಲೇಬೇಕು. ಹೀಗಾಗಿ ಎಷ್ಟು ಪಾಲಿಕೆ ಮಾಡಬೇಕು ಎಂದು ಬೆಂಗಳೂರಿನ ಎಲ್ಲ ಶಾಸಕರ ಬಳಿ ಸಲಹೆಗಳನ್ನು ಕೇಳಿದ್ದೇನೆ. ನಂತರ ಮುಂದೆ ಎಲ್ಲೆಲ್ಲಿ ವಿಸ್ತರಣೆ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಸೆಪ್ಟೆಂಬರ್ 15ರ ಒಳಗಾಗಿ ಈ ಪಾಲಿಕೆಗಳು ರಚನೆಯಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Covid in Karnataka: ಕರ್ನಾಟಕದಲ್ಲಿ ಮತ್ತೆ  ಕೋವಿಡ್ ಹಾವಳಿ; ಸೋಂಕಿಗೆ ಬೆಂಗಳೂರಿನಲ್ಲಿ ಮೊದಲ ಬಲಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

ರಾಜ್ಯದಲ್ಲಿಯೂ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಶನಿವಾರ (ಮೇ 24) ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಬೆಂಗಳೂರಿನ 85 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

Street Dog Attack: 6 ವರ್ಷದ ಬಾಲಕಿಯ ಕರಳು ಕಿತ್ತು ಬರುವಂತೆ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು; ತಿಪಟೂರಿನಲ್ಲೊಂದು ಶಾಕಿಂಗ್‌ ಘಟನೆ

ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕಿ ಬಲಿ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಎನ್.ಎಚ್. 206 ರಸ್ತೆಯಲ್ಲಿರುವ ಅಯ್ಯನಬಾವಿ ಗ್ರಾಮದ 6 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿ ನಾಯಿಗಳ ಗುಂಪು ಆಕೆಯನ್ನು ಸಾಯಿಸಿದ ಆಘಾತಕಾರಿ ಘಟನೆ ನಡೆದಿದೆ. ಮಹಲಿಂಗಯ್ಯ ಅವರ ಪುತ್ರಿ 1ನೇ ತರಗತಿಯ ನವ್ಯಾ ಮೃತ ಬಾಲಕಿ. ನವ್ಯಾ ಮನೆ ಮುಂದಿನ ಬೀದಿಯಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ನಾಯಿಗಳು ಹಠಾತ್ ದಾಳಿ ನಡೆಸಿವೆ.

Laxmi Hebbalkar: ಕಾಂಗ್ರೆಸ್‌ ಯೋಜನೆಯನ್ನು ಕಾಪಿ ಹೊಡೆಯುತ್ತಿದೆ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ

ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್

ರಾಜಕೀಯವಾಗಿ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು ಜಿಲ್ಲೆ, ಐವತ್ತು ವರ್ಷಗಳ ಹಿಂದೆ ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಇದೇ ವರ್ಷದ ಅಕ್ಟೋಬರ್‌ನಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

CM Siddaramaiah: 600 ಕೋಟಿ ರೂ.ಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ: ಸಿದ್ದರಾಮಯ್ಯ

600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ

ಜಾತಿ ವ್ಯವಸ್ಥೆ ವಿರುದ್ಧ ಬಸವಾದಿ ಶರಣರಿಂದ ಆದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Actress Ramya: ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ರಾಯಭಾರಿ; ತೆರಿಗೆದಾರರ ಹಣ ಪೋಲು ಎಂದ ರಮ್ಯಾ

ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ರಾಯಭಾರಿ; ರಮ್ಯಾ ಕಿಡಿ

Mysore Sandal Soap: ಬರೋಬ್ಬರಿ 6 ಕೋಟಿ ರೂ. ನೀಡಿ ಮೈಸೂರು ಸ್ಯಾಂಡಲ್‌ ಸೋಪಿಗೆ ರಾಯಭಾರಿಯನ್ನಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಳ್ಳಲಾಗಿದೆ. ಸರ್ಕಾರದ ಈ ನಡೆಯನ್ನು ನಟಿ ರಮ್ಯಾ ಟೀಕಿಸಿದ್ದು, ತೆರಿಗೆದಾರರ ಹಣ ಪೋಲಾಗುತ್ತದೆ ಎಂದಿದ್ದಾರೆ.

Yadgiri News: ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಕರಕಲಾಯ್ತು ಪೀಠೋಪಕರಣ

ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Crime News: ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸೋಫಾ, ಎಸಿ ಸುಟ್ಟು ಭಸ್ಮವಾಗಿದ್ದು, ಪೊಲೀಸರು, ಬೆರಳಚ್ಚು ತಜ್ಞರು ಸ್ಥಳಕ್ಕೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

Kodishri Bhavishya: ಜಲ, ವಾಯು ಗಂಡಾಂತರ; ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯದಲ್ಲಿ ಏನೇನಿದೆ?

ಮತ್ತೆ ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿಯಲ್ಲಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ್ದಾರೆ. ಮತ್ತೆ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ. 5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಹೇಳಿದ್ದಾರೆ.

CM Siddaramaiah: ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೈನ ಮಹಿಳಾ ಮಂಡಳದಿಂದ ರೈಲ್ವೆ ನಿಲ್ದಾಣದಲ್ಲಿ ಬೆಂಚುಗಳು ಮತ್ತು ವಾಟರ್ ಕೂಲರ್ ಅಳವಡಿಕೆ

ರೈಲ್ವೆ ನಿಲ್ದಾಣದಲ್ಲಿ ಬೆಂಚುಗಳು ಮತ್ತು ವಾಟರ್ ಕೂಲರ್ ಅಳವಡಿಕೆ

ಅಖಿಲ ಭಾರತ ಥೇರಾಪಂತ್ ಮಹಿಳಾ ಮಂಡಲ್ ನಡಿ ದೇಶದ ಎಲ್ಲಾ ಶಾಖೆಗಳ ಮೂಲಕ ಕೇಂದ್ರ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯನ್ನು ಸರ್ಮಪಿಸುವ ಕಾರ್ಯಕ್ರಮ ನಡೆಸುತ್ತಿದೆ.

ಮಾನನಷ್ಟ ಮೊಕದ್ದಮೆ: ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ನ್ಯಾಯಾಲಯಕ್ಕೆ ಹಾಜರು

ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ನ್ಯಾಯಾಲಯಕ್ಕೆ ಹಾಜರು

ಕನ್ನಡ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಡಾ.ಪ್ರೇಮಾಕುಮಾರಿ ದಾಖಲಿ ಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ದಂತೆ, ಏಷ್ಯಾನೆಟ್-ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಚಿಕ್ಕನಾಯಕನಹಳ್ಳಿ ಇಲ್ಲಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದ ಮುಂದೆ ಹಾಜರಾದರು

ಫೋಟೋ ಗ್ಯಾಲರಿ: ಕರುನಾಡಿನ ಸಾಧಕರಿಗೆ ಜಾರ್ಜಿಯಾದಲ್ಲಿ ವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿ

ಸಾಧಕರಿಗೆ ಜಾರ್ಜಿಯಾದಲ್ಲಿ ವಿಶ್ವವಾಣಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿ

ಜಾರ್ಜಿಯಾದ ರಾಜಧಾನಿ, ಸುಂದರ ಗಿರಿಧಾಮ ಟಿಬಿಲಿಸಿಯಲ್ಲಿ ವಿಶ್ವವಾಣಿ ಮಾಧ್ಯಮಸಂಸ್ಥೆ ಏರ್ಪಡಿಸಿದ ಗ್ಲೋಬಲ್ ಅಚೀವರ್ಸ್ ಸಮ್ಮೇಳನದ ಸುಂದರ ಕಾರ್ಯಕ್ರಮದಲ್ಲಿ 17 ಮಂದಿ ಕನ್ನಡ ನಾಡಿನ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಾರ್ಜಿಯಾದ ಜನಪ್ರತಿನಿಧಿಗಳು, ರಾಯಭಾರ ಕಚೇರಿಯ ಅಧಿಕಾರಿಗಳು, ಅನಿವಾಸಿ ಭಾರತೀಯರು ಮತ್ತು ಬೆಂಗಳೂರಿನಿಂದ ತೆರಳಿದ್ದ ವಿಶೇಷ ನಿಯೋಗದ ಸದಸ್ಯರ ಸಮ್ಮುಖದಲ್ಲಿ ಜಾರ್ಜಿಯಾ ಕಲಾವಿದರ ಆಕರ್ಷಕ ಸಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕನ್ನಡ ನಾಡಿನಲ್ಲಿ ಕಲೆ, ಶಿಕ್ಷಣ, ಸಮಾಜ ಸೇವೆ, ಕೃಷಿ, ಕೈಗಾರಿಕೋದ್ಯಮ, ರಾಜಕಾರಣ, ಹೋಟೆಲ್ ಉದ್ಯಮ, ಸಂಗೀತ ಮುಂತಾದ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಸಾಧನೆ ಕೈಗೊಂಡ ಸ್ಫೂರ್ತಿವಂತರಿಗೆ ಮತ್ತು ಅನಿವಾಸಿ ಕನ್ನಡಿಗರಿಗೆ ವಿಶ್ವವಾಣಿಯ ಅಂತಾರಾಷ್ಟ್ರೀಯ ಪ್ರಶಸ್ತಿಯ ಕಿರೀಟ ತೊಡಿಸಲಾಯಿತು. ಈ ಸಮಾರಂಭದ ಫೋಟೋಗಳು ಇಲ್ಲಿವೆ.

CET Results: ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್‌ ಇಲ್ಲಿ ಚೆಕ್‌ ಮಾಡಿ

ಸಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್‌ ಇಲ್ಲಿ ಚೆಕ್‌ ಮಾಡಿ

CET Results announced: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ.

ಶೀಘ್ರವೇ ಉದ್ದೇಶಿತ ನೂತನ ಜೈವಿಕ ಇಂಧನ ನೀತಿ 2025-30 ಅನುಷ್ಠಾನಕ್ಕೆ ಕ್ರಮ: ಎಸ್‌.ಈ. ಸುಧೀಂದ್ರ

ಶೀಘ್ರವೇ ಉದ್ದೇಶಿತ ನೂತನ ಜೈವಿಕ ಇಂಧನ ನೀತಿ 2025-30 ಅನುಷ್ಠಾನಕ್ಕೆ ಕ್ರಮ

ಮಂಡಳಿಯ 42ನೇ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಉದ್ದೇಶಿತ ಜೈವಿಕ ಇಂಧನ ನೀತಿ ಕುರಿತು ಸುಧೀರ್ಘವಾಗಿ ಚರ್ಚೆ ನಡೆಸಿದರು. ರಾಜ್ಯದಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಜೈವಿಕ ಇಂಧನ ಬಳಕೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ನೂತನ ಜೈವಿಕ ಇಂಧನ ನೀತಿಯನ್ನೂ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧವಾಗುತ್ತಿದೆ.

Dengue Case: ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ- ಪೋಷಕರೇ ಎಚ್ಚರ !

ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ- ಪೋಷಕರೇ ಎಚ್ಚರ !

ಡೆಂಗ್ಯೂ ಜ್ವರ ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ವೈರಲ್ ಕಾಯಿಲೆ. ಮಲೇರಿಯಾಗೆ ಕಾರಣವಾದ ಸೊಳ್ಳೆಗಿಂತ ಇದು ಭಿನ್ನವಾಗಿರುತ್ತದೆ. ಈಡಿಸ್ ಈಜಿಪ್ಟಿ ಸೊಳ್ಳೆ ಹಗಲಿನಲ್ಲಿ ಆಹಾರವನ್ನು ತಿನ್ನುತ್ತದೆ. ಹೀಗಾಗಿ ಹಗಲಿನ ಹೊತ್ತು ಅಗತ್ಯ ರಕ್ಷಣಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold Price Today on 24th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 50 ರೂ. ಏರಿಕೆ ಕಂಡಿದ್ದು, 8,990 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಏರಿಕೆಯಾಗಿ 9,808 ರೂ.ಗೆ ಬಂದು ನಿಂತಿದೆ.

Lokeshwara Swamiji: ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಬಂಧನ; ಮಠದಲ್ಲಿ ಮಾರಕಾಸ್ತ್ರ ಪತ್ತೆ

ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಬಂಧನ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ‌ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ಪ-ಮಗಳು ಈ ಮಠಕ್ಕೆ ಆಗಾಗ ಭೇಟಿ ನೀಡುತ್ತಿದ್ದರು. ಪರಿಚಯ ಆದ ಬಳಿಕ ಸ್ವಾಮೀಜಿ ಆಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್‌ಗಳಿ​ಗೆ ಕರೆದೊಯ್ದು 2 ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ ಎನ್ನುವ ಆರೋಪ ದಾಖಲಾಗಿದೆ.

Rain News: ಮಳೆ ಅಬ್ಬರಕ್ಕೆ ಕೊಚ್ಚಿಹೋದ ಹೆದ್ದಾರಿ, ಕುಮಟಾ- ಶಿರಸಿ ಸಂಪರ್ಕ ಬಂದ್

ಮಳೆ ಅಬ್ಬರಕ್ಕೆ ಕೊಚ್ಚಿಹೋದ ಹೆದ್ದಾರಿ, ಕುಮಟಾ- ಶಿರಸಿ ಸಂಪರ್ಕ ಬಂದ್

ಅಬ್ಬರದ ಮಳೆಯಿಂದ (Rain News) ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ. ಇದರಿಂದ ಲಕ್ಷಾಂತರ ರೂಪಾಯ ನಷ್ಟವಾಗಿದೆ. ಹೆದ್ದಾರಿಯಲ್ಲಿ ಇದರಿಂದಾಗಿ ‌ಭಾರಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಶಿರಸಿ- ಕುಮಟಾ ನಡುವಿನ ವಾಹನ ಸಂಚಾರ ಅಸ್ತವ್ಯಸ್ತ ಆಗಿದೆ.

Road Accident: ಹೆಬ್ಬಾಳ ಫ್ಲೈಓವರ್‌ ಮೇಲೆ ಭೀಕರ ಸರಣಿ ಅಪಘಾತ, ಲಾರಿ ಚಾಲಕ ಸಾವು

ಹೆಬ್ಬಾಳ ಫ್ಲೈಓವರ್‌ ಮೇಲೆ ಭೀಕರ ಸರಣಿ ಅಪಘಾತ, ಲಾರಿ ಚಾಲಕ ಸಾವು

ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. 10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಈ ಪರಿಣಾಮ ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಟ್ರಕ್ ಪಲ್ಟಿ ಹೊಡೆದಿದೆ.

heart Failure: ಹೆಂಡತಿಯ ಸೀಮಂತ ಸಂಭ್ರಮ ಕಾರ್ಯಕ್ರಮದಲ್ಲಿಯೇ ಅಸು ನೀಗಿದ ಗಂಡ

ಹೆಂಡತಿಯ ಸೀಮಂತ ಸಂಭ್ರಮ ಕಾರ್ಯಕ್ರಮದಲ್ಲಿಯೇ ಅಸು ನೀಗಿದ ಗಂಡ

Heart Failure: ತಮ್ಮ ಪತ್ನಿಯ ಸೀಮಂತ ಸಂಭ್ರಮದಲ್ಲಿ ನಗುಮೊಗದಿಂದ ‌ಓಡಾಡುತ್ತಿದ್ದ ಸತೀಶ್​ಗೆ ಏಕಾಏಕಿ ಹೃದಯಾಘಾತವಾಗಿದ್ದು, ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ಕೊನೆಯುಸಿರೆಳೆದಿದ್ದಾರೆ.

Hassan News: ಕರಿಮಣಿ ಮಾಲಿಕ ನೀನಲ್ಲ ಎಂದು ಹೊರನಡೆದ ವಧು ನಲ್ಲನ ಜೊತೆ ವಿವಾಹ

ಕರಿಮಣಿ ಮಾಲಿಕ ನೀನಲ್ಲ ಎಂದು ಹೊರನಡೆದ ವಧು ನಲ್ಲನ ಜೊತೆ ವಿವಾಹ

ರಘು ಎಂಬಾತನನ್ನು ಪಲ್ಲವಿ ಪ್ರೀತಿಸುತ್ತಿರುವ ವಿಚಾರ ಗೊತ್ತಾಗಿತ್ತು. ಇದೀಗ, ಪಲ್ಲವಿ ತಾನು ಇಷ್ಟಪಟ್ಟ ಹುಡುಗನ ಜೊತೆಗೆನೇ ವಿವಾಹವಾಗಿದ್ದಾರೆ. ಮದುವೆ ಅರ್ಧದಲ್ಲೇ ನಿಂತುಹೋಗಿದ್ದ ಕಲ್ಯಾಣ ಮಂಟಪದ ಆವರಣದಲ್ಲೇ ಈ ದೇವಾಲಯ ಇದ್ದು, ಗಣಪತಿ ದೇವಾಲಯದ ಆವರಣದಲ್ಲಿ ಸರಳ ವಿವಾಹ ನಡೆದಿದೆ.