ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸಚಿವ ಸಂಪುಟದಲ್ಲಿ ಹೊಸಬರಿಗೂ ಅವಕಾಶ ನೀಡುವ ಆಲೋಚನೆ ಇದೆ: ಸಿಎಂ ಡಿ.ಕೆ. ಶಿವಕುಮಾರ್

ಸಚಿವ ಸಂಪುಟದಲ್ಲಿ ಹೊಸಬರಿಗೂ ಅವಕಾಶ: ಸಿಎಂ ಡಿ.ಕೆ. ಶಿವಕುಮಾರ್

Cabinet expansion: ನಾನು, ಜಾರ್ಜ್, ಅಪ್ಪಾಜಿ ನಾಡಗೌಡ, ನಜೀರ್ ಸೇರಿ ಅನೇಕ ನಾಯಕರು ಬಂಗಾರಪ್ಪ ಅವರ ಕಾಲದಲ್ಲಿ ಮೊದಲ ಬಾರಿ ಶಾಸಕರಾದಾಗಲೇ ಮಂತ್ರಿ ಆದೆವು. ಈಗ ಆ ಪರಿಸ್ಥಿತಿ ಇಲ್ಲ. ಹೊಸಬರಿಗೆ ಅವಕಾಶ ನೀಡಬೇಕು ಎಂದು ನಾನು ಹೇಳಿದ್ದೇನೆ. ದೆಹಲಿಯವರು ಆಲೋಚನೆ ಮಾಡುತ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Adichunchanagiri Sri: ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ : ಮಂಗಳನಾಥಸ್ವಾಮೀಜಿ ಅಭಿಮತ

ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಶಿಸ್ತು, ಶ್ರದ್ಧೆ ಹಾಗೂ ಉತ್ತಮ ಸಂಸ್ಕಾರಗಳನ್ನು ರೂಢಿಸಿ ಕೊಳ್ಳಬೇಕು. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಲ್ಲ, ಉತ್ತಮ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡುವುದಕ್ಕೂ ಸಹಕಾರಿಯಾಗಬೇಕು ಎಂದ ಅವರು ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹಾರೈಸಿದರು.

ದೋಹಾದಲ್ಲಿ ಅದ್ಧೂರಿಯಾಗಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ದೋಹಾದಲ್ಲಿ ಅದ್ಧೂರಿಯಾಗಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

International Yoga Day: ಕತಾರ್‌ನ ಯುಡಿಎಸ್‌ಟಿ ಕ್ರಿಕೆಟ್ ಮೈದಾನದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಮತ್ತು ಭವ್ಯತೆಯಿಂದ ಆಚರಿಸಲಾಯಿತು. "ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ" ಎಂಬ ಜಾಗತಿಕ ಧ್ಯೇಯವಾಕ್ಯದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮವು ದೀರ್ಘಾಯುಷ್ಯ, ಚೈತನ್ಯ ಮತ್ತು ಒಟ್ಟಾರೆ ಆರೋಗ್ಯವನ್ನು ವೃದ್ಧಿಸುವಲ್ಲಿ ಯೋಗದ ಪಾತ್ರವನ್ನು ಯಶಸ್ವಿಯಾಗಿ ಎತ್ತಿ ತೋರಿಸಿತು.

MLA K H Puttaswamy Gowda: ಗ್ಯಾರಂಟಿ ಯೋಜನೆಯ ಸೌಲಭ್ಯ ಎಲ್ಲರಿಗೂ ತಲುಪಲಿ: ಶಾಸಕ ಪುಟ್ಟಸ್ವಾಮಿಗೌಡ ಕರೆ

ಗ್ಯಾರಂಟಿ ಯೋಜನೆಯ ಸೌಲಭ್ಯ ಎಲ್ಲರಿಗೂ ತಲುಪಲಿ

ನೆರೆಯ ಆಂಧ್ರ ಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲೂಕಿನಲ್ಲಿ ಅನಕ್ಷರಸ್ಥರು ಮತ್ತು ಬಡವರ ಸಂಖ್ಯೆ ಹೆಚ್ಚಿದ್ದು, ಪಂಚ ಗ್ಯಾರಂಟಿ ಯೋಜನೆ(5 Guarantee Scheme)ಗಳ ಅನುಷ್ಠಾನ ದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನಿಗಾ ವಹಿಸ ಬೇಕು

50% Discount on fine: ಎಆರ್‌ಟಿಒ ಕಚೇರಿಯಿಂದ ವಾಹನ ಸವಾರರಿಗೆ ಬಂಪರ್ ಕೊಡುಗೆ: ಇಲಾಖಾ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ!

ಎಆರ್‌ಟಿಒ ಕಚೇರಿಯಿಂದ ವಾಹನ ಸವಾರರಿಗೆ ಬಂಪರ್ ಕೊಡುಗೆ

1991ರಿಂದ 2022 ರವರೆಗೆ ದಾಖಲಾಗಿ ರುವ ಇಲಾಖಾ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯ ವಾಗುತ್ತದೆ. ಈ ಅವಧಿಯಲ್ಲಿ ಬಾಕಿ ಇರುವ ದಂಡದ ಮೊತ್ತದಲ್ಲಿ ನೇರ ಶೇ.50ರಷ್ಟು ಕಡಿತ ಇರಲಿದೆ. ಸಾರ್ವಜನಿಕರು ಈ ಸೌಲಭ್ಯ ವನ್ನು 21-06-2026 ರಿಂದ 10-07-2026 ರವರೆಗೆ ಪಡೆದುಕೊಳ್ಳಲು ಕಾಲಾವಕಾಶ ನೀಡಲಾಗಿದೆ.

Aryabhata National Award: ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಗೆ ಗುಂಪು ಮರದ ಆನಂದ್ ಭಾಜನ

ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಗೆ ಗುಂಪು ಮರದ ಆನಂದ್ ಭಾಜನ

ಗುಂಪು ಮರದ ಆನಂದ್ ಅವರು ಕಳೆದ 30 ವರ್ಷಗಳಿಂದ ಪಂಚಗಿರಿ ಬೋಧನಾ ಪ್ರೌಢಶಾಲೆ ಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶ್ರಮಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಜೊತೆಗೆ ಪರಿಸರ ಸಂರಕ್ಷಣೆ ಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಜಿಲ್ಲಾದ್ಯಂತ ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ

Bidadi Township: 2007ರಲ್ಲಿ ಬಿಡದಿ ಟೌನ್‌ಶಿಪ್‌ಗೆ ಡಿಕೆಶಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದರು: ಎಚ್.ಡಿ.ಕುಮಾರಸ್ವಾಮಿ

2007ರಲ್ಲಿ ಕಾಂಗ್ರೆಸ್‌ ನಾಯಕರು ಬಿಡದಿ ಟೌನ್‌ ಶಿಪ್ ವಿರೋಧಿಸಿದ್ದರು

ರಿಯಲ್ ಎಸ್ಟೇಟ್ ದುರಾಸೆಯಿಂದ ಮುಗ್ಧ ರೈತರಿಂದ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ದಂಧೆಕೋರರಿಗೆ ನೀಡಲು ಬ್ರೋಕರ್ ಕೆಲಸ ಮಾಡುತ್ತಿರುವ ಈ ಸರ್ಕಾರದ ನೇತೃತ್ವ ವಹಿಸಿರುವ ನಾಯಕರು ಇದೇ ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಈ ಹಿಂದೆ ವಿಧಾನ ಕಲಾಪದಲ್ಲಿಯೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಬಿಡದಿ ಟೌನ್‌ಶಿಪ್ ವಿವಾದ; ವಿಧಾನಸೌಧಕ್ಕಿಂತ ಭೈರಮಂಗಲದಲ್ಲೇ ಸಭೆ ಮಾಡುವಂತೆ ಸಿಎಂಗೆ ಎಚ್‌ಡಿಕೆ ಪತ್ರ

ಭೈರಮಂಗಲದಲ್ಲೇ ಸಭೆ ಮಾಡಿ: ಸಿಎಂಗೆ ಎಚ್‌ಡಿಕೆ ಪತ್ರ

Bidadi Township: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಸಭೆಗೆ ನನ್ನನ್ನು ಮತ್ತು ನನ್ನ ತಂಡದ ಐವರು ಪ್ರತಿನಿಧಿಗಳೊಂದಿಗೆ ಚರ್ಚೆಗೆ ಆಹ್ವಾನಿಸಿರುವ ತಮ್ಮ ಪತ್ರ ನನ್ನ ಕೈ ಸೇರಿದೆ. ತಮ್ಮ ಆಹ್ವಾನಕ್ಕೆ ಧನ್ಯವಾದಗಳು. ಆದರೆ, ಬಿಡದಿ ಟೌನ್‌ಶಿಪ್ ಯೋಜನೆ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ಉಪಯೋಗವಿಲ್ಲ, ಬಾಧಿತ ರೈತರ ಭಾಗದಲ್ಲಿಯೇ ಚರ್ಚೆ ನಡೆಯಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಕೆಎಸ್ಐಐಡಿಸಿಯಿಂದ 143 ಕೋಟಿ ಲಾಭಾಂಶ ಹಸ್ತಾಂತರ: ಎಂ.ಬಿ. ಪಾಟೀಲ್

ಸರ್ಕಾರಕ್ಕೆ ಕೆಎಸ್ಐಐಡಿಸಿಯಿಂದ 143 ಕೋಟಿ ಲಾಭಾಂಶ ಹಸ್ತಾಂತರ

2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂಪಾಯಿಗಳ ಲಾಭಾಂಶವನ್ನು (ಡಿವಿಡೆಂಡ್) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೋಮವಾರ ಹಸ್ತಾಂತರಿಸಿದರು.

ರಾಹುಲ್ ಗಾಂಧಿ ಜನರಿಂದ ಆಯ್ಕೆಯಾದ ನಾಯಕರಲ್ಲ: ಸಿ.ಟಿ. ರವಿ

ರಾಹುಲ್ ಗಾಂಧಿ ಜನರಿಂದ ಆಯ್ಕೆಯಾದ ನಾಯಕರಲ್ಲ: ಸಿ.ಟಿ. ರವಿ

CT Ravi: ಸಂವಿಧಾನಕ್ಕೆ ಇದುವರೆಗೆ 106 ತಿದ್ದುಪಡಿಗಳನ್ನು ಮಾಡಲಾಗಿದೆ. ಇದರಲ್ಲಿ 76 ತಿದ್ದುಪಡಿಗಳನ್ನು ಕಾಂಗ್ರೆಸ್ ಮಾಡಿದೆ. ಈ ಎಲ್ಲ ತಿದ್ದುಪಡಿಗಳನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಮತ್ತು ಅಧಿಕಾರ ದುರುಪಯೋಗಕ್ಕಾಗಿ ಮಾಡಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಪದಾಧಿಕಾರಿಗಳ ನೇಮಕ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘಕ್ಕೆ ಪದಾಧಿಕಾರಿಗಳ ನೇಮಕ

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕವು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಬ್ರಾಹ್ಮಣ ಸಮಾಜದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಅಧಿಕೃತವಾಗಿ ನೇಮಕ ಮಾಡಿದೆ.

Nadaprabhu Kempegowda Jayanti: ಜೂ.27ರಂದು ನಾಡಪ್ರಭು ಕೆಂಪೇಗೌಡರ ಅದ್ದೂರಿ ಜಯಂತಿ ಆಚರಣೆಗೆ ನಿರ್ಧಾರ: ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ

ಜೂ.27ರಂದು ನಾಡಪ್ರಭು ಕೆಂಪೇಗೌಡರ ಅದ್ದೂರಿ ಜಯಂತಿ ಆಚರಣೆಗೆ ನಿರ್ಧಾರ

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಇತಿಹಾಸದಲ್ಲಿ ಅಚ್ಚಳಿಯದ ಸಾಧನೆ ಮಾಡಿರುವ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ತಾಲೂಕಿನಲ್ಲಿಯೂ ಕೂಡ ಆದರ್ಶಪ್ರಾಯವಾಗಿ ಮಾಡಲು ಸಿದ್ಧತೆಗಳು ನಡೆದಿವೆ.ಅವರಿವರೆನ್ನದೆ, ಆಪಕ್ಷ ಈ ಪಕ್ಷ ಎನ್ನದೆ ಹೆಣ್ಣು ಗಂಡು ಎನ್ನದೆ ಸಕಲರೂ ಭಾಗಿಯಾಗುವ ಮೂಲಕ ಜಯಂತಿಯನ್ನು ಸ್ಮರಣೀಯವಾಗಿಸೋಣ

ರಾಜ್ಯದ ಕಟ್ಟಡ ಮಾಲೀಕರಿಗೆ ಗುಡ್‌ನ್ಯೂಸ್‌; ವಿದ್ಯುತ್ ಸಂಪರ್ಕಕ್ಕೆ ಒಸಿಯಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ

ವಿದ್ಯುತ್ ಸಂಪರ್ಕಕ್ಕೆ ಒಸಿಯಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ

occupancy certificate: ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆಯುವುದರಿಂದ ಒಂದು ಬಾರಿ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಾರಾಮ ಅವರು ಆದೇಶ ಹೊರಡಿಸಿದ್ದಾರೆ.

B K Hariprasad: ಹರಿಪ್ರಸಾದ್ ಪದಗ್ರಹಣಕ್ಕೆ ಶಿಡ್ಲಘಟ್ಟದಿಂದ ಕಾಂಗ್ರೆಸ್ ಶಕ್ತಿ ಪ್ರದರ್ಶನ; ರಾಜೀವ್ ಗೌಡ ಪರ ಘೋಷಣೆಗಳು

ಹರಿಪ್ರಸಾದ್ ಪದಗ್ರಹಣಕ್ಕೆ ಶಿಡ್ಲಘಟ್ಟದಿಂದ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮೇಲೆ ಅಪಾರ ನಿಷ್ಠೆ ಮತ್ತು ಬದ್ಧತೆ ಹೊಂದಿದ್ದು, ಸಾವಿರಾರು ಸಂಖ್ಯೆಯಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡಿರುವುದು ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಸಂಘಟನೆ ಬಲವರ್ಧನೆಗಾಗಿ ಮುಂದೆಯೂ ಜನರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುವುದಾಗಿ ಹೇಳಿದರು

Vishweshwar Bhat: ನೂತನ ಸಿಎಂ ಡಿ.ಕೆ. ಶಿವಕುಮಾರ್‌‌ ಭೇಟಿಯಾಗಿ ಶುಭ ಕೋರಿದ ವಿಶ್ವೇಶ್ವರ ಭಟ್

ಸಿಎಂ ಡಿ.ಕೆ. ಶಿವಕುಮಾರ್‌‌ ಭೇಟಿಯಾಗಿ ಶುಭ ಕೋರಿದ ವಿಶ್ವೇಶ್ವರ ಭಟ್

CM D.K. Shivakumar: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಬೆಂಗಳೂರಿನ ನಿವಾಸದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ (Vishweshwar Bhat) ಅವರು ಸೋಮವಾರ ಭೇಟಿಯಾಗಿ, ಅಭಿನಂದಿಸಿ, ಶುಭಕೋರಿದರು.

'Shakti' smart card: ʻಶಕ್ತಿʼ ಸ್ಮಾರ್ಟ್ ಕಾರ್ಡ್ ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್

ʻಶಕ್ತಿʼ ಸ್ಮಾರ್ಟ್ ಕಾರ್ಡ್ ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್

ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ

Bidadi Township: ಬಿಡದಿ ಟೌನ್‌ಶಿಪ್ ಕುರಿತು ಚರ್ಚೆಗೆ ಸಿದ್ಧ; ಜೂ.26ಕ್ಕೆ ವಿಧಾನಸೌಧಕ್ಕೆ ಬರುವಂತೆ ಕುಮಾರಸ್ವಾಮಿಗೆ ಸಿಎಂ ಡಿಕೆಶಿ ಆಹ್ವಾನ

ಬಿಡದಿ ಟೌನ್‌ಶಿಪ್ ಬಗ್ಗೆ ಚರ್ಚೆಗೆ ಸಿದ್ಧ; ಕುಮಾರಸ್ವಾಮಿಗೆ ಸಿಎಂ ಆಹ್ವಾನ

CM DK Shivakumar: ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಡದಿ ಟೌನ್‌ಶಿಪ್ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್‌ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದು ತಿಳಿಸಿದ್ದಾರೆ.

Mysuru Tragedy: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಘೋರ ದುರಂತ; ಡೆತ್‌ ನೋಟ್‌ ಬರೆದು ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರಿನಲ್ಲಿ ಘೋರ ದುರಂತ; ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ. ಯುವತಿಯೊಬ್ಬಳ ವಿವಾಹಕ್ಕೆ ಕೇವಲ ಎರಡು ದಿನ ಬಾಕಿ ಇತ್ತು. ಆದರೆ, ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಕುಟುಂಬವೇ ದುರಂತ ಅಂತ್ಯ ಕಂಡಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಎನ್‌ಜಿಒಗಳಿಗೆ ಬರೋಬ್ಬರಿ 24 ಕೋಟಿ ರೂ. ಅನುದಾನ; ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

HCL Foundation: ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಬೆನ್ನೆಲುಬಾಗಿ ನಿಲ್ಲಲು 'ಎಚ್‌ಸಿಎಲ್ ಫೌಂಡೇಶನ್' ತೀರ್ಮಾನಿಸಿದೆ. ಸಂಸ್ಥೆಯು ತನ್ನ ಪ್ರತಿಷ್ಠಿತ 'ಎಚ್‌ಸಿಎಲ್ ಟೆಕ್ ಗ್ರಾಂಟ್'ನ 12ನೇ ಆವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಎನ್‌ಜಿಒಗಳಿಂದ ಅರ್ಜಿ ಆಹ್ವಾನಿಸಿದೆ.

HCL Foundation: ಎನ್‌ಜಿಒಗಳಿಗೆ ಬರೋಬ್ಬರಿ ₹24 ಕೋಟಿ ಅನುದಾನ, ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ ಫೌಂಡೇಶನ್

ಎನ್‌ಜಿಒಗಳಿಗೆ ₹24 ಕೋಟಿ ಅನುದಾನ, ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸಮಾಜವನ್ನು ಬದಲಾಯಿಸುವಂತಹ ಅದ್ಭುತ ಪರಿಹಾರಗಳು, ಜನರೊಂದಿಗೆ ನೇರ ಸಂಪರ್ಕ ಹೊಂದಿ ರುವ ತಳಮಟ್ಟದ ಸಂಸ್ಥೆಗಳಿಂದಲೇ (ಎನ್‌ಜಿಒ) ಹೊರಹೊಮ್ಮುತ್ತವೆ ಎಂಬುದು ನಮ್ಮ ನಂಬಿಕೆ. ಎಚ್‌ಸಿಎಲ್ ಟೆಕ್ ಗ್ರಾಂಟ್ ಮೂಲಕ, ಈ ಎನ್‌ಜಿಒಗಳ ವಿನೂತನ ಐಡಿಯಾಗಳಿಗೆ ಬಲ ತುಂಬಿ, ದೇಶದ ಅಭಿವೃದ್ಧಿಯಲ್ಲಿ ಪಾಲುದಾರ ರಾಗುವಂತೆ ಮಾಡುವುದು ನಮ್ಮ ಗುರಿಯಾಗಿದೆ

ಉದ್ಯೋಗಿಯಾಗುವ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಸಿಎಂ ಡಿ.ಕೆ. ಶಿವಕುಮಾರ್

ಉದ್ಯೋಗಿ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಡಿಕೆಶಿ

CM DK Shivakumar: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಅತ್ಯುತ್ತಮ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ SCOUT-2.0 ಕಾರ್ಯಕ್ರಮಕ್ಕೆ ಸೋಮವಾರ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.

ಪದ್ಮಶ್ರೀ ಪುರಸ್ಕೃತ ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸಿಎಂ ಸೂಚನೆ

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆ: ಸಿಎಂ

Ankegowda M: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಸೋಮವಾರ ಭೇಟಿ ಮಾಡಿದ ಅಂಕೇಗೌಡ ಅವರು ಪುಸ್ತಕಗಳಿಗೆ ಸೂಕ್ತ ವ್ಯವಸ್ಥೆಗೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಂಕೇಗೌಡರ ಪುಸ್ತಕ ಮನೆಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Bengaluru Power Cut: ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

ನಾಳೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ, ಮತ್ತು ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 23ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Mango growers Protest: ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ಕೋಲಾರ ಬಂದ್; ರಸ್ತೆಗೆ ಮಾವು ಸುರಿದು ರೈತರ ಪ್ರತಿಭಟನೆ

ಕೋಲಾರದಲ್ಲಿ ರಸ್ತೆಗೆ ಮಾವಿನ ಕಾಯಿ ಸುರಿದು ರೈತರ ಪ್ರತಿಭಟನೆ

ಮಾವಿನ ದರ ತೀವ್ರ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ರಕ್ಷಣೆಗೆ ಸರ್ಕಾರ ಧಾವಿಸಬೇಕು ಎಂದು ಮಾವು ಬೆಳೆಗಾರರು ಹಾಗೂ ರೈತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ರಸ್ತೆಗೆ ಮಾವಿನ ಹಣ್ಣಿ ಸುರಿದು ರೈತರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

Loading...