ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Shivamogga News: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌

Madhu Bangarappa: ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ,‌ ರೋಗಿಗಳೊಂದಿಗೆ, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ, ಕುಂದು ಕೊರತೆ ಆಲಿಸಿದರು.

Self Harming: ಕಾಲೇಜಿನಲ್ಲಿ ರ‍್ಯಾಗಿಂಗ್‌ಗೆ ಹೆದರಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿ

ರ‍್ಯಾಗಿಂಗ್‌ಗೆ ಹೆದರಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿ

Self Harming: ನೆಲಮಂಗಲದ ನಂದರಾಮಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಸೆಲ್ಫಿ ವಿಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ ವಿದ್ಯಾರ್ಥಿ, ನನ್ನ ಬೆನ್ನ ಹಿಂದೆ ಕೆಟ್ಟ ಕೆಟ್ಟದಾಗಿ ಮಾತನಾಡುತ್ತಾರೆ ಹೇಳಿದ್ದ. ಬಳಿಕ ಆ ವಿಡಿಯೋವನ್ನು ಕಾಲೇಜು ಗ್ರೂಪ್‌ಗೆ ಹಾಕಿ, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

Assault Case: ರಾಜೀನಾಮೆಗೆ ಒತ್ತಾಯಿಸಿ ಅರೆಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ

ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಹಲ್ಲೆ

Assault Case: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಗ್ರಾಪಂ ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.

Bengaluru Power Cut: ಜು.22, 23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜು.22, 23ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.22ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Self Harming: ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Self Harming: ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಥಮ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದ ಕೊಪ್ಪಳ ಮೂಲದ ನೇಣಿಗೆ ಶರಣಾಗಿದ್ದು, ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Laxmi Hebbalkar: ಬಿಜೆಪಿಯವರು ಇನ್ನಾದರೂ ಕೆಟ್ಟ ರಾಜಕೀಯ ಬಿಡಲಿ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಬಿಜೆಪಿಯವರು ಇನ್ನಾದರೂ ಕೆಟ್ಟ ರಾಜಕೀಯ ಬಿಡಲಿ ಎಂದ ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಬಿಜೆಪಿಯವರು ಇಡಿ, ಐಟಿ ಮುಂತಾದ ಸಂಸ್ಥೆಗಳನ್ನು ವಿರೋಧ ಪಕ್ಷದವರ ಮೇಲೆ ಸೇಡು ತೀರಿಸಿಕೊಳ್ಳಲು ರಾಜಕೀಯ ದಾಳವಾಗಿ ಬಳಸುತ್ತಿರುವ ಕುರಿತು ನಾವು ಮೊದಲಿನಿಂದಲೂ ಹೇಳುತ್ತ ಬಂದಿದ್ದೇವೆ. ಈಗ ಈ ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯವೇ ನಮ್ಮ ಅಭಿಪ್ರಾಯಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನ- ಡಿ.ಕೆ. ಶಿವಕುಮಾರ್

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಯತ್ನ- ಡಿಕೆಶಿ

DK Shivakumar: ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Karnataka High Court: ಗ್ರೇಟರ್‌ ಬೆಂಗಳೂರು ಕಾಯಿದೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌; ಸರ್ಕಾರ, ಬಿಬಿಎಂಪಿಗೆ ನೋಟಿಸ್

ಗ್ರೇಟರ್‌ ಬೆಂಗಳೂರು ಕಾಯಿದೆ ಪ್ರಶ್ನಿಸಿ ಪಿಐಎಲ್‌; ಹೈಕೋರ್ಟ್ ನೋಟಿಸ್

Karnataka High Court: ಬಿಬಿಎಂಪಿಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ರಾಜ್ಯ ಸರ್ಕಾರದ ಹೊಸ ಕಾಯಿದೆಯಿಂದ ಚುನಾವಣೆ ಮತ್ತಷ್ಟು ವಿಳಂಬವಾಗಿದೆ. ಹಾಗಾಗಿ ಇದರಲ್ಲಿ ಸಂವಿಧಾನದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ವಾದಿಸಿದ್ದಾರೆ.

Muda Case: ಮುಡಾ ಪ್ರಕರಣ; ಸುಪ್ರೀಂ ಕೋರ್ಟ್ ಆದೇಶ ಕೇಂದ್ರದ ಕಪಾಳಕ್ಕೆ ಬಾರಿಸಿದ ತಪರಾಕಿ ಎಂದ ಸಿಎಂ

ಮುಡಾ ಪ್ರಕರಣದಲ್ಲಿ ಸುಪ್ರೀಂನಿಂದ ಕೇಂದ್ರದ ಕಪಾಳಕ್ಕೆ ತಪರಾಕಿ: ಸಿಎಂ

Muda Case: ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Rachita Ram: ಬಿಕ್ಲು ಶಿವ ಕೊಲೆ ಕೇಸ್‌;  ಡಿಂಪಲ್‌ ಕ್ವೀನ್‌ ರಚಿತಾಗೆ ಚಿನ್ನಾಭರಣ ಗಿಫ್ಟ್‌ ನೀಡಿದ್ದ ಆರೋಪಿ ಜಗ್ಗ!

ರಚಿತಾ ರಾಮ್‌ ಗಿಫ್ಟ್‌ ಕೊಟ್ಟ ಆರೋಪಿ; ಕೊಲೆ ಕೇಸ್‌ನಲ್ಲಿ ಟ್ವಿಸ್ಟ್‌ !

ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರ ಎದುರು ಹೊಸ ಸಂಗತಿಗಳು ಬಯಲಾಗುತ್ತಿವೆ. ಬಿಕ್ಲು ಶಿವ ಕೊಲೆ ಆರೋಪಿಗೆ ಈಗ ಸಿನಿಮಾ ನಂಟಿರುವುದು ಗೊತ್ತಾಗಿದೆ. ಆರೋಪಿ ಜಗ್ಗ ನಟಿ ರಚಿತಾ ರಾಮ್‌ ಅವರಿಗೆ ಆಭರಣ ನೀಡಿದ್ದಾನೆ ಎಂದು ತಿಳಿದು ಬಂದಿದೆ.

MUDA Case: ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌; ಇಡಿಗೆ ಸುಪ್ರೀಂ ಕೋರ್ಟ್‌ನಿಂದ ಕ್ಲಾಸ್‌

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ( Mysore Urban Development Authority- MUDA) ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

Dharamsthala: ಸತ್ಯವೇ ಸಮಾಜದ ನೈತಿಕತೆ-ಶ್ರದ್ಧೆಗೆ ಆಧಾರ: ಎಸ್ಐಟಿ ತನಿಖೆ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

ತನಿಖೆಗೆ ಎಸ್‌ಐಟಿ ರಚಿಸಿದಕ್ಕೆ ಧರ್ಮಸ್ಥಳ ನೀಡಿದ ಪ್ರತಿಕ್ರಿಯೆ ಇದು..!

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಮತ್ತು ಅತ್ಯಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿರುವುದನ್ನು ಧರ್ಮಸ್ಥಳ ಕ್ಷೇತ್ರ ಸ್ವಾಗತಿಸಿದೆ. ನಿಷ್ಪಕ್ಷ ತನಿಖೆಯಿಂದ ಸತ್ಯ ಬಯಲಾಗಬೇಕು ಎಂದು ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್ ಹೇಳಿದ್ದಾರೆ. “ಸತ್ಯವೇ ಸಮಾಜದ ನೈತಿಕತೆ ಮತ್ತು ಶ್ರದ್ಧೆಗೆ ಆಧಾರ. ಎಸ್‌ಐಟಿಯಿಂದ ಪ್ರಾಮಾಣಿಕ ತನಿಖೆಯಾಗಿ, ಊಹಾಪೋಹಗಳು ನಿವಾರಣೆಯಾಗಲಿ” ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Gold Price Today: ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 21st July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆ ಕಂಡು ಬಂದಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,180 ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 11 ರೂ. ಏರಿಕೆ ಕಂಡು, 10,015 ರೂ.ಗೆ ಬಂದು ಮುಟ್ಟಿದೆ.

Veerashaiva Lingayat: ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ; ಒಂದಾದ ಶ್ರೀಗಳಿಂದ ಶಕ್ತಿ ಪ್ರದರ್ಶನ

ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ

ವೀರಶೈವ ಸಮುದಾಯದ ಪಂಚಪೀಠಗಳಾದ ವೀರಶೈವ ಸಮಾಜದ ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶೈಲ ಮತ್ತು ಶ್ರೀ ಕಾಶಿ ಪಂಚ ಪೀಠಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಒಂದಾಗಲಿವೆ. ಶೃಂಗ ಸಮ್ಮೇಳನದಲ್ಲಿ ಜಾತಿ ಜನಗಣತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Self Harming: ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು

ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು

Self Harming: ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ.

Tibbadevi Tent House: ತಿಬ್ಬಾದೇವಿ ಟೆಂಟ್‌ ಹೌಸ್ ರಜತ ಮಹೋತ್ಸವ ಸಂಪನ್ನ

ತಿಬ್ಬಾದೇವಿ ಟೆಂಟ್‌ ಹೌಸ್ ರಜತ ಮಹೋತ್ಸವ ಸಂಪನ್ನ

Tibbadevi Tent House: ಕಾರ್ಯಕ್ರಮದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಉಪಸ್ಥಿತರಿದ್ದರು.

Bomb Threat: ಬೀದರ್‌ ಗುರುದ್ವಾರಕ್ಕೆ ಎರಡನೇ ಬಾರಿಗೆ ಬಾಂಬ್‌ ಬೆದರಿಕೆ, ಸಿಎಂ ಕಾರ್ಯಾಲಯಕ್ಕೂ ಸ್ಪೋಟದ ಸಂದೇಶ

ಬೀದರ್‌ ಗುರುದ್ವಾರ, ಸಿಎಂ ಕಾರ್ಯಾಲಯಕ್ಕೆ ಬಾಂಬ್‌ ಬೆದರಿಕೆ

Bomb Threat: ಬೆದರಿಕೆ ಸಂದೇಶದಲ್ಲಿ, ಗುರುದ್ವಾರದ ಬಳಿಯಲ್ಲಿ ಎರಡು ಆರ್‌ಡಿಎಕ್ಸ್ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಿಸಲಾಗಿದ್ದು, ಸಾರ್ವಜನಿಕರನ್ನು ತಕ್ಷಣವೇ ಸ್ಥಳಾಂತರಿಸುವಂತೆ ಎಚ್ಚರಿಕೆ ನೀಡಲಾಗಿದೆ. ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿದ 37 ನಿಮಿಷಗಳ ನಂತರ ಮುಖ್ಯಮಂತ್ರಿ ಕಚೇರಿಯೂ ಬಾಂಬ್ ಸ್ಫೋಟದಿಂದ ಧ್ವಂಸಗೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Self Harming: ರಾಜ್ಯದಲ್ಲಿ ಮತ್ತೊಬ್ಬ ಪಿಎಸ್‌ಐ ಬಂಟ್ವಾಳದಲ್ಲಿ ನೇಣಿಗೆ ಶರಣು

ರಾಜ್ಯದಲ್ಲಿ ಮತ್ತೊಬ್ಬ ಪಿಎಸ್‌ಐ ಬಂಟ್ವಾಳದಲ್ಲಿ ನೇಣಿಗೆ ಶರಣು

Self Harming: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಿವಾಸಿಯಾಗಿದ್ದ 54 ವರ್ಷದ ಕೀರಪ್ಪ ಗಟಕಂಬಳಿ ಶಿರಸಿ ಪೊಲೀಸ್ ಠಾಣೆಯಿಂದ ಕಳೆದ 5 ತಿಂಗಳ ಹಿಂದಷ್ಟೇ ವರ್ಗಾವಣೆಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದರು. ಬಂಟ್ವಾಳದ ತನಿಖಾ ವಿಭಾಗದ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Road Accident: ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು

ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು

Road Accident: ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಿಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ.

Karnataka weather: ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

ಎನ್‌ಎಂಡಿಸಿ ಸಿಎಸ್‌ಆರ್ ಹೆಜ್ಜೆ – ಬೆಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು

ಬೆಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು

ಕಡಿಮೆ ಹಾದಿ ಹಾಗೂ ಗುಡ್ಡಭೂಮಿ ಇರುವ ಗ್ರಾಮಗಳಲ್ಲಿ ಈ ಹೊಸ ಬೈಕ್‌ಗಳು ಈಗಾಗಲೇ ಉಲ್ಲೇಖ ನೀಯ ಬದಲಾವಣೆಯನ್ನು ತಂದಿವೆ. ಪೊಲೀಸರು ಈಗ ಶೀಘ್ರವಾಗಿ ತಲುಪಲಾಗದ ಪ್ರದೇಶಗಳಿಗೆ ನಿರಂತರವಾಗಿ ಪ್ಯಾಟ್ರೋಲಿಂಗ್ ನಡೆಸಬಹುದು ಹಾಗೂ ಮಹಿಳೆಯರು, ಮಕ್ಕಳ ಜೊತೆಗೆ ಹಿರಿಯ ನಾಗರಿಕರ ತುರ್ತು ಕರೆಗಳಿಗೆ ವೇಗವಾಗಿ ಪ್ರತಿಕ್ರಿಯಿಸಬಹುದು.

ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ: ಡಾ.ಮೇತ್ರಿ

ಸ್ಪಂದನಾ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಹಾಕಿದೆ

ಕೇವಲ ಸಾರ್ವಜನಿಕರ ತಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿಯೇ ಒಳ್ಳೆಯ ಸೇವೆ ಸಿಗುತ್ತದೆ ಎಂಬ ಮನೋಧೋರಣೆ ತಗೆದು ಹಾಕಿ ನಮ್ಮಲ್ಲಿಯೂ ಕೂಡಾ ಸುಸಜ್ಜಿತ ಆಸ್ಪತ್ರೆ ಇದೆ ಎಂಬ ನಂಬಿಕೆಯಿಂದ ಬನ್ನಿ. ನಮ್ಮ ಆಸ್ಪತ್ರೆಯಲ್ಲಿ ೨೪*೦೭ ನಿರತಂತರ ವೈದ್ಯರು ಲಭ್ಯವಿರುತ್ತಾರೆ. ಅಂಬುಲೇನ್ಸ್, ತುರ್ತು ಚಿಕಿತ್ಸಾ ವಿಭಾಗ, ಇಸಿಜಿ, ಆಪರೇಶನ್ ಥಿಯೇಟರ್, ಎಕ್ಸರೇ, ಮೇಡಿಕಲ್, ವೇಂಟಿಲಿಟರ್, ಐಸಿಯು, ಒಳರೋಗಿಗಳ ವಿಭಾಗ, ಲ್ಯಾಬ್ ಇನ್ನು ಇತರೆ ಸೇವೆಗಳು ಲಭ್ಯವಿದ್ದು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ

Street Light Facility: ರಾತ್ರಿ ವೇಳೆ ಕಾಡುತ್ತಿದ್ದ ಕತ್ತಲಿಗೆ ದಾನಿಗಳ ನೆರವಿನಿಂದ ಮುಕ್ತಿ

ರಾತ್ರಿ ವೇಳೆ ಕಾಡುತ್ತಿದ್ದ ಕತ್ತಲಿಗೆ ದಾನಿಗಳ ನೆರವಿನಿಂದ ಮುಕ್ತಿ

ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆಯ ಬಲಭಾಗದಲ್ಲಿ ಕೆರೆಕಟ್ಟೆ, ಎಡ ಭಾಗದಲ್ಲಿ ಖಾಲಿಯಾದ ಜನಸಂದಣಿಯಿಲ್ಲದ ಲೇಔಟ್ ಇದೆ. ಇಲ್ಲಿನ ರಸ್ತೆಯಲ್ಲಿ ಬಿಜಿಎಸ್ ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಾರ್ಡಿನ ನಾಗರೀಕರು ಸಂಚರಿಸುತ್ತಾರೆ. ಆದರೆ ಸದರಿ ರಸ್ತೆಗೆ ಇದುವರೆಗೂ ಬೀದಿ ದೀಪಗಳನ್ನು ನಗರಸಭೆಯವರು ಅಳವಡಿಸದ ಕಾರಣ ರಾತ್ರಿ ವೇಳೆಯಲ್ಲಿ ಈ ರಸ್ತೆಯಲ್ಲಿ ಜನರು ಸಂಚರಿಸಲು ಭಯದಿಂದ ಹಿಂದೇಟು ಹಾಕುತ್ತಿದ್ದರು.

Chikkaballapur News: ಕಸಾಪದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕನ್ನಡದಲ್ಲಿ 125ಕ್ಕೆ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ಘಟಕದ ವತಿಯಿಂದ ನಗರದ ಎನ್ ಆರ್ ಬಡಾವಣೆಯ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2024 -25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Loading...