ಅರ್ಹ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯಲಿ
ಇಂದು ದೇಶದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಕಾರ್ಮಿಕರು. ವಿವಿಧ ರಂಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ದೊರೆಯಬೇಕಿದೆ. ಈಗಾಗಲೇ ಸರ್ಕಾರ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಅವು ಸರಿಯಾಗಿ ದೊರೆಯುತ್ತಿಲ್ಲ. ಕೆಲವರು ಕಾರ್ಮಿಕರಲ್ಲದೇ ಇದ್ದರೂ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಂಡು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ.