ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮೂರುವರೆ ವರ್ಷದ ಬಾಲಕಿಗೆ ಹೊಸ ಜನ್ಮ ನೀಡಿದ ವೈದ್ಯರು

ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಅಪರೂಪದ ಉಚಿತ ಶಸ್ತ್ರಚಿಕಿತ್ಸೆ

ಛತ್ತೀಸ್‌ಗಢ ಮೂಲದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ದ್ದಳು. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ತೊಂದರೆಗಳಿAದಾಗಿ ಆಕೆಗೆ ದೀರ್ಘಕಾಲ ಉಸಿರಾಟದ ಟ್ಯೂಬ್ ಅಳವಡಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಉಸಿರಾಟದ ನಾಳ ಕಿರಿದಾಗಿ ಬಹುತೇಕ ಮುಚ್ಚಿ ಹೋಗುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಕಾಣಿಸಿಕೊಂಡು, ಉಸಿರಾಟದ ನಾಳ ಕಿರಿದಾಗಿ ಸಂಪೂರ್ಣ ಮುಚ್ಚಿಕೊಂಡಿತ್ತು. ಪರಿಣಾಮ, ಬಾಲಕಿಗೆ ಸಹಜವಾಗಿ ಉಸಿರಾಡುವುದೇ ಕಷ್ಟಕರವಾಗಿತ್ತು.

MLA K.H. Puttaswamy Gowda: ಬಡವರು ಯಾವುದೇ ಪಕ್ಷದಲ್ಲಿರಲಿ ನಿವೇಶನ ನೀಡುವುದು ನನ್ನ ಧರ್ಮ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಬಡವರು ಯಾವುದೇ ಪಕ್ಷದಲ್ಲಿರಲಿ ನಿವೇಶನ ನೀಡುವುದು ನನ್ನ ಧರ್ಮ

ಪ್ರತಿಯೊಬ್ಬ ಬಡವನಿಗೂ ತನ್ನದೇ ಆದ ಒಂದು ಸೂರು ಮಾಡಿಕೊಳ್ಳಬೇಕು, ಮಕ್ಕಳನ್ನು ಚೆನ್ನಾಗಿ ಓದಿಸಬೇಕು. ಸಂಸಾರವನ್ನು ಚೆನ್ನಾಗಿ ನಡೆಸಬೇಕು ಎಂಬ ಕನಸುಗಳಿರುತ್ತವೆ. ಅವರಿಗೆ ರಾಜಕೀಯ ಮಾಡುವಷ್ಟು ಸಮಯವಿರುವುದಿಲ್ಲ. ಅವರಿಗೆ ಯಾವ ಪಕ್ಷವಾದರೇನು? ಆದರೆ ದಶಕಗಳಿಂದ ಕ್ಷೇತ್ರದ ಬಡವರು ನಿವೇಶನಗಳಿಗೆ ಅಲೆಯುತ್ತಿದ್ದರೂ ಕಲ್ಪಿಸದಿರುವುದು ವಿಪರ್ಯಾಸ. ಈಗ ಆ ಕೆಲಸವನ್ನು ನಾನು ಕೈಗೆತ್ತಿಕೊಂಡಿದ್ದೇನೆ,

ದೇಶಾದ್ಯಂತ ಇ-ಬಸ್‌, ಇ-ಟ್ರಕ್‌ ಬಳಕೆಗೆ ವೇಗ; ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ

ಪಿಎಂ ಇ-ಡ್ರೈವ್‌ ಯೋಜನೆ ಮೂಲಕ ಇ-ಟ್ರಕ್‌, ಇ-ಬಸ್‌ʼಗಳಿಗೆ ಉತ್ತೇಜನ

HD Kumaraswamy: ಭಾರತದಲ್ಲಿ ಪ್ರಯಾಣಿಕ ಸಾರಿಗೆ ವಲಯದ ಭವಿಷ್ಯದ ಬೆನ್ನೆಲುಬಾಗಲು ಎಲೆಕ್ಟ್ರಿಕ್ ಬಸ್‌ಗಳು ಸಜ್ಜಾಗಿವೆ. ಆದರೆ, ಸುಸ್ಥಿರ ಸಾಗಣೆ ಮತ್ತು ಸರಕು ಸಾಗಣೆಯ ಭವಿಷ್ಯವನ್ನು ರೂಪಿಸುವಲ್ಲಿ ಎಲೆಕ್ಟ್ರಿಕ್ ಟ್ರಕ್‌ಗಳು ಪರಿವರ್ತನಾತ್ಮಕ ಪಾತ್ರವನ್ನು ವಹಿಸುತ್ತವೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಉತ್ತೇಜನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Bidadi Township Project: ಕುಮಾರಸ್ವಾಮಿ, ದೇವೇಗೌಡರ ಜತೆ ಚರ್ಚೆಗೆ ಸಿದ್ಧ; ದಿನಾಂಕ, ಸ್ಥಳ ನಿಗದಿ ಮಾಡಲಿ ಎಂದ ಡಿಕೆಶಿ

ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಡದಿ ಟೌನ್‌ಶಿಪ್ ವಿಚಾರವಾಗಿ ಅಲ್ಲಿನ ಶೇ.80 ರಷ್ಟು ರೈತರು ಒಪ್ಪಿಗೆ ನೀಡಿದ್ದು. ಆದಷ್ಟು ಬೇಗ ಪರಿಹಾರ ವಿತರಿಸಿ ಎಂದು ಒತ್ತಾಯ ಮಾಡಿದ್ದಾರೆ. ಜಮೀನು ನೀಡಿರುವ ರೈತರಿಗೆ ಜೂನ್ ಮೊದಲನೇ ವಾರದಿಂದ ಪರಿಹಾರದ ಹಣ ಬಿಡುಗಡೆಗೆ ಕ್ರಮವಹಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬಿಲ್ಲವಾಸ್ ಕತಾರ್‌ನಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬಿಲ್ಲವಾಸ್ ಕತಾರ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾರ್ಥಿಗಳಲ್ಲಿ ತಮ್ಮ ಸಾಮರ್ಥ್ಯದ ಮೇಲೆ ಭರವಸೆ, ಪ್ರೋತ್ಸಾಹ ಮತ್ತು ನಂಬಿಕೆಯನ್ನು ಹೆಚ್ಚಿಸುವ ಸಲುವಾಗಿ ಬಿಲ್ಲವಾಸ್ ಕತಾರ್ ವತಿಯಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಇತ್ತೀಚೆಗೆ ವಿತರಿಸಲಾಯಿತು. ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಕುದ್ರೋಳಿಯ ಶ್ರೀ ವಿಶ್ವನಾಥ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮೇ 19ರಿಂದ - 25ರವರೆಗೆ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಮತ್ತು ಜನಜಾತೀಯ ಗರಿಮಾ ಉತ್ಸವ-2026

ಮೇ 19ರಿಂದ - 25ರವರೆಗೆ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್ ಅವರು ಮಾತನಾಡಿ, ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒಟ್ಟು 79,156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 549 ಜಿಲ್ಲೆಗಳ, 2911-ಬ್ಲಾಕ್ ಗಳಲ್ಲಿ 63000 ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಯೋಜನೆ ರೂಪಿಸಿದೆ

Chikkaballapur News: ಅಂಗಡಿಗಳ ಮೇಲೆ ದಾಳಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ 3100 ರೂ.ಗಳ ದಂಡ ಸಂಗ್ರಹ : ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್

ಕೋಟ್ಪಾ ಕಾಯ್ದೆ ಉಲ್ಲಂಘನೆಗೆ 3100 ರೂ.ಗಳ ದಂಡ ಸಂಗ್ರಹ

ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಗಡಿ ಮಾಲೀಕರು/ ನಿರ್ವಾ ಹಕರು ಕಡ್ಡಾಯವಾಗಿ ಸೆಕ್ಷನ್-4 ರ ನಾಮಫಲಕ ಅಳವಡಿಸಿರಬೇಕು ಮತ್ತು ಅಂಗಡಿ ಸುತ್ತಮುತ್ತ ಧೂಮಪಾನ ಮಾಡದಂತೆ ನೋಡಿಕೊಳ್ಳಬೇಕು. ಲೈಟರ್, ಆಶ್ ಟ್ರೇ, ಬೆಂಕಿಪೊಟ್ಟಣ ಇತ್ಯಾದಿ ಪ್ರಚೋದನಕಾರಿ ವಸ್ತುಗಳನ್ನು ಪ್ರದರ್ಶಿಸಬಾರದು ಎಂದು ಅಂಗಡಿ ಮಾಲೀಕರಿಗೆ ಸೂಚಿಸಿದರು.

Chikkaballapur News: ಶಿಥಿಲಾವಸ್ಥೆಯಲ್ಲಿರುವ ಸಾರ್ವಜನಿಕ ಕಟ್ಟಡಗಳನ್ನು ಗುರುತಿಸಿ ಸ್ಥಳಾಂತರಗೊಳಿಸಲು ಜಿಲ್ಲಾಧಿಕಾರಿ ಜಿ ಪ್ರಭು ಸೂಚನೆ

ಶಿಥಿಲಾವಸ್ಥೆಯಲ್ಲಿರುವ ಸಾರ್ವಜನಿಕ ಕಟ್ಟಡಗಳನ್ನು ಗುರುತಿಸಿ ಸ್ಥಳಾಂತರಗೊಳಿಸಿ

ನಗರ ಪ್ರದೇಶಗಳಲ್ಲಿನ ಕಟ್ಟಡಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಇಂಜಿನಿಯರ್ ಗಳಿಂದ ಪರಿಶೀಲನೆ ಮಾಡಿಸಿ ಸಂಬಂಧಪಟ್ಟ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸುವುದು ಹಾಗೂ ಅದರ ಪ್ರತಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು ಕಡ್ಡಾಯ.

Shopping Trend 2026: ಶಾಪಿಂಗ್ ಪ್ರಿಯರ ಫ್ಲೀ ಮಾರ್ಕೆಟ್ ಎಂಬ ಹೈ ಟೆಕ್ ಸಂತೆ!

ಶಾಪಿಂಗ್ ಪ್ರಿಯರ ಫ್ಲೀ ಮಾರ್ಕೆಟ್ ಎಂಬ ಹೈ ಟೆಕ್ ಸಂತೆ!

Flea Market: ಇತ್ತೀಚೆಗೆ ಮಾಲ್‌ಗಳು ಹಾಗೂ ಅಪಾರ್ಟ್‌ಮೆಂಟ್‌ಗಳ ಕ್ಯಾಂಪಸ್‌ನಲ್ಲಿ ಫ್ಲೀ ಮಾರ್ಕೆಟ್ ಕಾನ್ಸೆಪ್ಟ್ ಲಗ್ಗೆ ಇಟ್ಟಿದೆ. ದೇಸಿ ಫ್ಯಾಷನ್‌ವೇರ್ಸ್, ಆಕ್ಸೆಸರೀಸ್ ಮತ್ತು ಸ್ಥಳೀಯ ಲೋಕಲ್ ಉತ್ಪನ್ನಗಳನ್ನು ಖರೀದಿಸಲು ಇವು ಸಾಥ್ ನೀಡುತ್ತಿವೆ. ಏನೆನೆಲ್ಲಾ ಲಭ್ಯ? ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

Open safari vehicles: ವನ್ಯಜೀವಿ ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ವಾಹನ ಬಳಸುವಂತಿಲ್ಲ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಸಫಾರಿಗಳಲ್ಲಿ ತೆರೆದ ವಾಹನ ಬಳಸುವಂತಿಲ್ಲ: ಸಚಿವ ಈಶ್ವರ್‌ ಖಂಡ್ರೆ

ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಸೇರಿ ರಾಜ್ಯದ ವಿವಿಧ ವನ್ಯಜೀವಿ ಅಭಯಾರಣ್ಯಗಳಲ್ಲಿ ಸಫಾರಿ ನಡೆಯುತ್ತಿದ್ದು, ಸಾವಿರಾರು ಪ್ರವಾಸಿಗಳು ಆಗಮಿಸುತ್ತಾರೆ. ಸಫಾರಿ ವೇಳೆ ವನ್ಯಪ್ರಾಣಿಗಳ ದಾಳಿ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತೆರದ ವಾಹನಗಳನ್ನು ಬಳಸದಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕಾತಿ; ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ

ಉಗ್ರ ಸಂಘಟನೆಗೆ ನೇಮಕಾತಿ; ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು

ಮಹಾರಾಷ್ಟ್ರದ ಹಮ್ರಾಜ್ ವರ್ಶಿದ್ ಶೇಖ್ ಆನ್‌ಲೈನ್ ಮೂಲಕ ಯುವಕರನ್ನು ಸೆಳೆದು ಭಯೋತ್ಪಾದಕ ಸಂಘಟನೆಗೆ ನೇಮಕ ಮಾಡುತ್ತಿದ್ದ. ನಿಷೇಧಿತ ತಾಲಿಬಾನ್ ಮತ್ತು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ ಭಯೋತ್ಪಾದಕ ಸಂಘಟನೆಗೆ ಯುವಕರನ್ನು ನೇಮಿಸಲು ಯತ್ನಿಸಿರುವುದು ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಈತನಿಗೆ ಶಿಕ್ಷೆ ಪ್ರಕಟಿಸಿದೆ.

Karnataka Sangha Qatar:‌ ಕರ್ನಾಟಕ ಸಂಘ ಕತಾರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ಕರ್ನಾಟಕ ಸಂಘ ಕತಾರ್‌ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ

Subramanya Hebbagelu: ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ ಹಿತಚಿಂತಕ ವೇದಿಕೆಯ (ICBF) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಕರ್ನಾಟಕ ಸಂಘ ಕತಾರ್‌ ಸಂಘದ 15ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದ ವ್ಯಕ್ತಿ ಅರೆಸ್ಟ್‌

ಅಮೆರಿಕದಿಂದ 7 ಜೀವಂತ ಗುಂಡುಗಳ ಪಿಸ್ತೂಲ್‌ ಮ್ಯಾಗ್‌ಜೈನ್‌ ತಂದವನ ಬಂಧನ

ಪರವಾನಗಿ ಇಲ್ಲದೆ ಅಕ್ರಮವಾಗಿ ಏಳು ಜೀವಂತ ಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಅಮೆರಿಕ ಮೂಲದ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರಿನ ಜೆ.ಸಿ. ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅರ್ಮಾನ್ ಮುತಾಹರ್ (34) ಎಂದು ಗುರುತಿಸಲಾಗಿದೆ.

ಮೂರು ದಿನಗಳ ಸಾಹಿತ್ಯ,  ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಡಲ್ಲಾಸ್

ಡಲ್ಲಾಸಿನಲ್ಲಿ ಕನ್ನಡ ಸಾಹಿತ್ಯ ರಂಗದ ಸಮ್ಮೇಳನ

ಎರಡು ವರ್ಷಗಳಿಗೊಮ್ಮೆ ನಡೆಯುವ ಕನ್ನಡ ಸಾಹಿತ್ಯ ರಂಗದ ಸಮ್ಮೇಳನವನ್ನು ಈ ಬಾರಿ ಡಲ್ಲಾಸ್ ನಲ್ಲಿ ಆಯೋಜಿಸಲಾಗಿತ್ತು. ಮೂರು ದಿನಗಳ ಸಾಹಿತ್ಯ, ಸಾಂಸ್ಕೃತಿಕ ವೈಭವದಲ್ಲಿ ನೂರಾರು ಮಂದಿ ಪಾಲ್ಗೊಂಡು ಸಂಭ್ರಮಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ಹಾಗೂ ಚಿಂತಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತುಂಬಿದರು.

MLA S.N.Subbareddy: 10 ಕೋಟಿ ವೆಚ್ಚದಲ್ಲಿ ಗುಡಿಬಂಡೆ-ರಾಮಪಟ್ಟಣ ರಸ್ತೆ ಅಭಿವೃದ್ದಿ: ಶಾಸಕ ಸುಬ್ಬಾರೆಡ್ಡಿ

10 ಕೋಟಿ ವೆಚ್ಚದಲ್ಲಿ ಗುಡಿಬಂಡೆ-ರಾಮಪಟ್ಟಣ ರಸ್ತೆ ಅಭಿವೃದ್ದಿ

ಆದಷ್ಟು ಶೀಘ್ರವಾಗಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆ ದಾರರಿಗೆ ಸೂಚನೆ ನೀಡಿದ್ದೇನೆ. ಇನ್ನೂ ಈ ರಸ್ತೆ ಕಾಮಗಾರಿ ತುಂಬಾ ತಡವಾಗುತ್ತಿದೆ ಎಂಬ ದೂರಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಇರಾನ್ – ಇಸ್ರೇಲ್ ಯುದ್ದದ ಕಾರಣದಿಂದ ಡಾಂಬರು ಸೇರಿದಂತೆ ಹಲವು ವಸ್ತುಗಳ ಬೆಲೆ ಜಾಸ್ತಿಯಾಗಿದೆ. ಆದ್ದರಿಂದ ತಡವಾಗುತ್ತಿದೆ. ಆದಷ್ಟು ಶೀಘ್ರವಾಗಿ ಕೆಲಸ ಮುಗಿಸಲು ತಿಳಿಸುತ್ತೇನೆ

ಮಾನವನ ಉನ್ನತಿಗೆ ಶಿಕ್ಷಣವೇ ಪ್ರಮುಖ ಶಕ್ತಿ: ಸಿದ್ದರಾಜು ಸ್ವಾಮೀಜಿಗಳು

ಮಾನವನ ಉನ್ನತಿಗೆ ಶಿಕ್ಷಣವೇ ಪ್ರಮುಖ ಶಕ್ತಿ: ಸಿದ್ದರಾಜು ಸ್ವಾಮೀಜಿಗಳು

ನಮ್ಮ ಬದುಕಿನಲ್ಲಿ ಜ್ಞಾನ ಮತ್ತು ವಿದ್ಯೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ರಾಮಾಯಣ, ಮಹಾಭಾರತ ಗಳಂತಹ ಮಹಾಕಾವ್ಯಗಳು ನಮಗೆ ಜೀವನದ ಮೌಲ್ಯಗಳನ್ನು ಕಲಿಸಿಕೊಟ್ಟಿವೆ. ಅಂತಹ ಮಹಾನ್ ಗ್ರಂಥಗಳ ಆಶಯ ಮತ್ತು ಶಕ್ತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಜ್ಞಾನ ವೆಂಬ ಅಂಧಕಾರವನ್ನು ದೂರವಾಗಿಸಿ ಜ್ಞಾನದ ಬೆಳಕನ್ನು ಪಸರಿಸುವ ಶಕ್ತಿ ಕೇವಲ ಶಿಕ್ಷಣಕ್ಕೆ ಮಾತ್ರ ಇದೆ

ಸಾಲದ ಹಣ ವಾಪಸ್‌ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್‌ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆನ್‌ಲೈನ್‌ ಮೆಡಿಸಿನ್‌ಗೆ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್‌ ಶಾಪ್‌ ಬಂದ್‌, ಕರ್ನಾಟಕದಲ್ಲಿ ಔಷಧ ಸಿಗುತ್ತಾ?

ಆನ್‌ಲೈನ್‌ ಮೆಡಿಸಿನ್‌ಗೆ ವಿರೋಧಿಸಿ ದೇಶಾದ್ಯಂತ ಮೆಡಿಕಲ್‌ ಶಾಪ್‌ ಬಂದ್‌

ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ಮಾರ್ತಾಂಡನನ್ನು ಕೊಂದ ಕಂಜನ್ ಆನೆಗೆ ದಸರಾದಿಂದ ಶಾಶ್ವತ ನಿಷೇಧ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ಕಂಜನ್ ಆನೆಯನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಿಂದ ಶಾಶ್ವತವಾಗಿ ನಿಷೇಧಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಕಟ್ಟುನಿಟ್ಟಿನ ಆದೇಶದ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಮಳೆ ಅನಾಹುತ; ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Heavy Rain: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ.

Shidlaghatta News: ದೇವೇಗೌಡರ 94ನೇ ಜನ್ಮದಿನದಲ್ಲಿ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ಬಹುಮಾನ ನೀಡಿದ ಜನಪರ ಶಾಸಕ

ದೇವೇಗೌಡರ ಮಾರ್ಗದರ್ಶನ ದೇಶಕ್ಕೆ ಅಗತ್ಯ : ರಾಜ್ಯಸಭೆಗೆ ಮತ್ತೆ ಆಯ್ಕೆ ಮಾಡಿ

ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (Former Prime Minister HD Deve Gowda) ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ (MLA B.N.Ravikumar) ಅಭಿಪ್ರಾಯಪಟ್ಟರು.

ಟ್ರಾನ್ಸ್‌ಫಾರ್ಮರ್ ವಿದ್ಯುತ್ ಸ್ಪರ್ಶ: ಹಸು ಸಾವು, ಗೌರಮ್ಮ ಅಪಾಯದಿಂದ ಪಾರು

ಟ್ರಾನ್ಸ್‌ಫಾರ್ಮರ್ ವಿದ್ಯುತ್ ಸ್ಪರ್ಶ: ಹಸು ಸಾವು, ಗೌರಮ್ಮ ಅಪಾಯದಿಂದ ಪಾರು

ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್‌ನ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಹಸು ಸಾವಿ ಗೀಡಾದ ದುರ್ಘಟನೆ ನಡೆದಿದೆ. ಗ್ರಾಮದ ಗೌರಮ್ಮ ಹಾಗೂ ಮುನಿರಾಜು ಅವರಿಗೆ ಸೇರಿದ ಹಸುವನ್ನು ಬೆಳಗಿನ ಜಾವ ಎಂದಿನಂತೆ ಡೇರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

Shidlaghatta News: ರಸ್ತೆ ಗುಂಡಿಗಳ ನಡುವೆ ಸಂಚಾರ – ರಾಜೀವ್ ಗಾಂಧಿ ಲೇಔಟ್ ನಿವಾಸಿಗಳ ಸಂಕಷ್ಟ

ರಸ್ತೆ ಗುಂಡಿಗಳ ನಡುವೆ ಸಂಚಾರ – ರಾಜೀವ್ ಗಾಂಧಿ ಲೇಔಟ್ ನಿವಾಸಿಗಳ ಸಂಕಷ್ಟ

ಕಳೆದ 20 ರಿಂದ 25 ದಿನಗಳಿಂದ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದರೂ ರಸ್ತೆ ದುರಸ್ತಿ ಕಾರ್ಯ ಮಾತ್ರ ಪೂರ್ಣಗೊಂಡಿಲ್ಲ. ಪರಿಣಾಮ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ದೊಡ್ಡ ತೊಂದರೆಯಾಗಿದೆ. ಕೆಲವೆಡೆ ವಾಹನಗಳು ಗುಂಡಿಗಳಲ್ಲಿ ಸಿಲುಕಿ ಕೊಳ್ಳುತ್ತಿರುವ ಘಟನೆಗಳು ಕೂಡ ನಡೆಯುತ್ತಿವೆ.

Application Invited: ಗುಡಿಬಂಡೆ: 2026-27ನೇ ಸಾಲಿನ ಸರ್ಕಾರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸರ್ಕಾರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಹಾಗೂ ದೂರದ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಶಾಲೆಯಿಂದ 5 ಕಿ.ಮೀ ಗಿಂತ ಹೆಚ್ಚು ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಶೇಕಡಾ 90 ರಷ್ಟು ಸೀಟು ಗಳನ್ನು ಹಾಗೂ 5 ಕಿ.ಮೀ ಗಿಂತ ಕಡಿಮೆ ದೂರವಿರುವ ವಿದ್ಯಾರ್ಥಿಗಳಿಗೆ ಶೇಕಡಾ 10 ರಷ್ಟು ಸೀಟು ಗಳನ್ನು ನೀಡಲಾಗುತ್ತದೆ.

Loading...