ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ, ನಾಯಕಿಯಾಗಿ ನಟಿಸಿರುವ ʼಜಾವ ಕಾಫಿʼ

ತೆರೆಗೆ ಬರಲು ಸಿದ್ಧವಾಗಿದೆ ʼಜಾವ ಕಾಫಿʼ ಚಿತ್ರ

Kannada New Movie: ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ʼಜಾವ ಕಾಫಿʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao: ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಸೂಚನೆ

ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ‌ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

CM Siddaramaiah: ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು- ಸಿದ್ದರಾಮಯ್ಯ

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು: ಸಿದ್ದರಾಮಯ್ಯ

CM Siddaramaiah: ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

Road Accident: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Operation Sindoor: 'ಸಿಂದೂರʼದ ಸಂದೇಶ ದೇಶದ ಮುಂದಿಟ್ಟ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

'ಸಿಂದೂರʼದ ಸಂದೇಶ ತಂದ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

ಐತಿಹಾಸಿಕ ಆಪರೇಶನ್ ಸಿಂದೂರ್‌ ‌ (Operation Sindoor) ಕುರಿತು ವಿವರಣೆ ನೀಡಿದ್ದ ಮಹಿಳಾ ಅಧಿಕಾರಿಗಳಲ್ಲಿ ಒಬ್ಬರಾದ ಸೋಫಿಯಾ ಖುರೇಷಿ (Colonel Sofia Khureshi) ಅವರಿಗೆ ಕರ್ನಾಟಕ ನಂಟು ಇದೆ. ಇವರ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ಪತಿ ತಾಜುದ್ದೀನ್ ಬಾಗೇವಾಡಿ ಅವರೂ ಕೂಡಾ ಸೈನ್ಯದಲ್ಲಿದ್ದು ಪತ್ನಿಯಂತೆ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.

Sirsi News: ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ: ಎನ್.ಎಸ್.ಹೆಗಡೆ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ. ಈಗಾಗಲೇ ನಮ್ಮ ಸೇನೆ ಸಮಗ್ರವಾಗಿ ಉಗ್ರರ ಸದೆ ಬಡಿಯಲು ಕಾರ್ಯನಿರ್ವಹಿಸಿದ್ದು, ದೇಶದ ವಿಷಯದಲ್ಲಿ ಪ್ರಧಾನಿ ಯವರ ದಿಟ್ಟ ನಡೆ ಶ್ಲಾಘನೀಯ.‌ ಅಲ್ಲದೇ ಕಾಂಗ್ರೆಸ್ ನಾಯಕರೂ ಸಹ ಇದನ್ನು ಬೆಂಬಲಿಸಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಹೇಳಿದರು

ಸದ್ಗುರು ಸನ್ನಿಧಿ ಮತ್ತು ಈಶ ಫೌಂಡೇಶನ್ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ : ಸ್ವಾಮಿ ವಿಮೋಹ ಸ್ಪಷ್ಟನೆ

ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ

ಈಶ ಫೌಂಡೇಶನ್ ಅಥವಾ ಸದ್ಗುರು ಸನ್ನಿಧಿಯು ಕರ್ನಾಟಕದ ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ಸರ್ಕಾರದಿಂದ (ಹಿಂದಿನ ಅಥವಾ ಪ್ರಸ್ತುತ) ಯಾವುದೇ ಭೂಮಿ ಅಥವಾ ಹಣವನ್ನು ಪಡೆದಿಲ್ಲ.ಎಲ್ಲಾ ಭೂಮಿಯನ್ನು ಗ್ರಾಮಸ್ಥರಿಂದ (ಭೂಮಾಲೀಕ ರಿಂದ) ನೇರವಾಗಿ ಹಣ ಪಾವತಿಸಿ ಖರೀದಿಸಲಾಗಿದೆ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಇಷ್ಟಿದೆ

Gold Price Today on 8th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 55 ರೂ. ಏರಿಕೆ ಕಂಡಿದ್ದು, 9,130 ರೂ.ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 60 ರೂ. ಹೆಚ್ಚಾಗಿದ್ದು, ನೀವು 9,960 ರೂ. ಪಾವತಿಸಬೇಕು.

Murder Case: ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ, ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ

ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ

ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ ಈ ಹೇಯ ಕೃತ್ಯ ನಡೆದಿದೆ. ಬಾಲಕ ರಮಾನಂದನ ಕುಟುಂಬ ಮತ್ತು ಮತ್ತೂರು ಕುಟುಂಬದ ನಡುವೆ ಗಲಾಟೆ ಆಗಿತ್ತು. ಗಲಾಟೆ ಹಿನ್ನೆಲೆಯಲ್ಲಿ ಬಾಲಕ ರಮಾನಂದನನ್ನು ಅಪಹರಿಸಿ (Murder Case) ಕೊಲೆಗಯ್ಯಲಾಗಿದೆ. ಕೊಲೆಯ ಬಳಿಕ ಆರೋಪಿ ಮತ್ತೂರು ಬಾಲಕನ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕೆರೆಯಲ್ಲಿ ಬಿಸಾಕಿದ್ದಾನೆ.

Murder Case: ಮಗಳ ಹತ್ಯೆಗೆ ಪ್ರತೀಕಾರ; ಆರೋಪಿಯ ಅಪ್ಪನನ್ನು ಇರಿದು ಕೊಂದ ಶಿಕ್ಷಕಿಯ ತಂದೆ

ಮಗಳ ಹತ್ಯೆಗೆ ಪ್ರತೀಕಾರ; ಆರೋಪಿಯ ಅಪ್ಪನನ್ನು ಇರಿದು ಕೊಂದ ಶಿಕ್ಷಕಿಯ ತಂದೆ

ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು (Melukote Murder Case) ಅದೇ ಗ್ರಾಮದ ನಿತೀಶ್ ಎಂಬಾತ 2024ರ ಜನವರಿ 22 ರಂದು ಬರ್ಬರವಾಗಿ ಕೊಲೆ ಮಾಡಿದ್ದ. ಇದಕ್ಕೆ ಪ್ರತೀಕಾರವಾಗಿ ದೀಪಳ ತಂದೆ ವೆಂಕಟೇಶ್, ತನ್ನ ಮಗಳ ಹಂತಕನ ತಂದೆ ನರಸಿಂಹೇಗೌಡನ ಹತ್ಯೆ ಮಾಡಿದ್ದಾನೆ. ʼನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದೀಯಾʼ ಎನುತ್ತ ಇರಿದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ.

Operation Sindoor: "ಭಾರತವನ್ನು ಪ್ರೀತಿಸದಿದ್ರೆ..." ಪಾಕ್‌ ಪ್ರೇಮಿಗಳಿಗೆ ಧ್ರುವ ಸರ್ಜಾ ಖಡಕ್‌ ಎಚ್ಚರಿಕೆ

ಪಾಕ್‌ ಪ್ರೇಮಿಗಳಿಗೆ ಧ್ರುವ ಸರ್ಜಾ ಖಡಕ್‌ ಎಚ್ಚರಿಕೆ ಪೋಸ್ಟ್‌ ವೈರಲ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಆಪರೇಷನ್ ಸಿಂಧೂರ'ಕ್ಕೆ (Operatio Sindoor) ಮೆಚ್ಚುಗೆ ಸೂಚಿಸಿದ್ದಾರೆ. ಭಾರತೀಯ ಸೇನೆಯ ಈ ಕಾರ್ಯಾಚರಣೆಯ ಬಳಿಕ ಧ್ರುವ ಸರ್ಜಾ ತಮ್ಮ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಭಾರತದೊಳಗಿದ್ದು ಪಾಕಿಸ್ತಾನವನ್ನು ಬೆಂಬಲಿಸುವವರಿಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ. ಅವರ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Operation Sindoor: ರಾಜ್ಯದಲ್ಲಿ ಅಲರ್ಟ್‌, ಕೆಆರ್‌ಎಸ್‌, ಲಿಂಗನಮಕ್ಕಿ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

ರಾಜ್ಯ ಅಲರ್ಟ್‌, ಕೆಆರ್‌ಎಸ್‌ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

Operation Sindoor: ಕೆಆರ್‌ಎಸ್‌, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ರಾಜ್ಯದ ಒಟ್ಟು 17 ಜಲಾಶಯಗಳಿಗೆ ಬಿಗಿ ಭದ್ರತೆಯ ಸೂಚನೆ ನೀಡಲಾಗಿದೆ. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದೆ.

Pahalgam Terror Attack: ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

2022ರ ಏಪ್ರಿಲ್‌ನಲ್ಲಿ ಈತನನ್ನು ಭಯೋತ್ಪಾದಕ ಎಂದು ಘೋಷಿಸಿದ ಎನ್‌ಐಎ, ಈತನ ತಲೆಗೆ 710 ಲಕ್ಷ ಬಹುಮಾನ ಘೋಷಿಸಿತು. ಪಹಲ್ಗಾಮ್ ದಾಳಿಯ ನಂತರ ನಡೆದ ತನಿಖೆಯಲ್ಲಿ ಗುಲ್‌ನ ಕೈವಾಡ ಇರುವುದನ್ನು ಪತ್ತೆ ಮಾಡಿರುವುದಾಗಿ ಎನ್‌ಐಎ ಹೇಳಿದೆ. ಗುಲ್‌ನ ನಿರ್ದೇಶನದಂತೆ ಭಯೋತ್ಪಾದಕರ ತಂಡ ದಾಳಿ ನಡೆಸಿತ್ತು.

Chikkaballapur News: ವಾಸವಿ ಅಮ್ಮನವರ ಜಯಂತೋತ್ಸವದ ಅಂಗವಾಗಿ ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ವಾಸವಿ ಜಯಂತೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ನಗರದ ಶ್ರೀ ಪೇಟೆ ಆಂಜನೇಯ ಸ್ವಾಮಿ ಹಾಗೂ ಶ್ರೀ ವಾಸವಿ ಅಮ್ಮನವರ ದೇವಾಲಯದಲ್ಲಿ  ಶ್ರೀ ವಾಸವಿ ಜಯಂತಿ ಸೇವಾ ಸಮಿತಿಯಿಂದ ಬುಧವಾರ ಬೆಳಗ್ಗೆಯಿಂದಲೂ ಶ್ರೀ ಪೇಟೆಆಂಜನೇಯ ಹಾಗೂ ಶ್ರೀ ವಾಸವಿ ಅಮ್ಮನವರಿಗೆ  ವಿವಿಧ ಪೂಜಾಧಿಗಳು ನಡೆದವಲ್ಲದೆ ಆಸ್ಪತ್ರೆಯ ಒಳರೋಗಿಗಳಿಗೆ ಸೇವಾ ಕಾರ್ಯ ಕ್ರಮಗಳು  ಅತ್ಯಂತ ವ್ಯವಸ್ಥಿತವಾಗಿ ನಡೆದವು

Indi (Vijayapura) News: ತುಟ್ಟಿ ಭತ್ತೆ ಆದೇಶ : ಸ್ವಾಗತ

ತುಟ್ಟಿ ಭತ್ತೆ ಆದೇಶ : ಸ್ವಾಗತ

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು ಗಳಿಗೆ 1ನೇ ಜನೇವರಿ 2025ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25ಗೆ ಪರಿಷ್ಕೃರಿಸಿ ಆದೇಶ ಹೊರಡಿಸಿದೆ.

Bengaluru News: ಜಯನಗರದ ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ದಕ್ಷಿಣ ಭಾರತದ ಮೂಲೆ ಮೂಲೆಯಲ್ಲಿರುವ ಬಡ ಮತ್ತು ಕೆಳ ಮಧ್ಯಮ ವರ್ಗದ ಜನರ ಶ್ರೇಯೋ ಭಿವೃದ್ಧಿಗೆ ಶ್ರಮಿಸುವುದು ಟ್ರಸ್ಟ್ನ ಉದ್ದೇಶವಾಗಿದೆ. ಪ್ರತಿಭಾವಂತರನ್ನು ಕರೆತಂದು ಸನಾತನ ಧರ್ಮದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಎತ್ತಿಹಿಡಿಯಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

Mock drill: ಆಪರೇಷನ್‌ ಸಿಂದೂರ್‌ ನಡುವೆಯೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾಕ್‌ ಡ್ರಿಲ್‌

ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಾಕ್‌ ಡ್ರಿಲ್‌

Nationwide mock drill: ಯುದ್ಧದಂತಹ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ನಾಗರಿಕರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಬಗ್ಗೆ ಅರಿವು ಮೂಡಿಸುವ ನೀಡುವ ಉದ್ದೇಶದಿಂದ ದೇಶದಾದ್ಯಂತ 259 ಜಿಲ್ಲೆಗಳಲ್ಲಿ ಈ ಕವಾಯತು ನಡೆಸಲಾಗಿದೆ. ಕರ್ನಾಟಕದ ಮೂರು ನಗರಗಳೂ ಸೇರಿದಂತೆ ದೆಹಲಿ, ಮುಂಬೈ, ಚೆನ್ನೈ ಮತ್ತು ಅಯೋಧ್ಯೆ ಸೇರಿದಂತೆ ದೇಶದ ಇತರ ಸ್ಥಳಗಳಲ್ಲಿಯೂ ಅಣಕು ಕವಾಯತುಗಳು ನಡೆದವು. ಕರ್ನಾಟಕದ ಬೆಂಗಳೂರು ನಗರ, ಮಲ್ಲೇಶ್ವರಂ ಮತ್ತು ರಾಯಚೂರಿನಲ್ಲಿ ಕವಾಯತು ನಡೆಸಲಾಗಿದೆ.

Operation Abhyaas: ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

Mock Drill: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 2 ದೇಶಗಳ ನಡುವೆ ಯುದ್ಧದ ವಾತಾವರಣ ಮೂಡಿದೆ. ಹೀಗಾಗಿ ಯುದ್ಧದಂತಹ ತುರ್ತು ಸಂದರ್ಭದಲ್ಲಿ ನಾಗರಿಕರನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದನ್ನು ತಿಳಿಸಲು ಅಣಕು ಕಾರ್ಯಾಚರಣೆ ನಡೆಸಲಾಯಿತು.

Pralhad Joshi: ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ್‌ ಜೋಶಿ ಮಾಹಿತಿ

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

Pralhad Joshi: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

DK Shivakumar: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂದೂರ ಉತ್ತಮ ಪ್ರತ್ಯುತ್ತರ: ಡಿ.ಕೆ.ಶಿವಕುಮಾರ್‌

ಕೇಂದ್ರ ಸರ್ಕಾರ, ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ: ಡಿ.ಕೆ.ಶಿವಕುಮಾರ್‌

DK Shivakumar: ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Operation Sindoor: ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಮೇ 8ರಂದು ರಾಜ್ಯಾದ್ಯಂತ ವಿಶೇಷ ಪೂಜೆ

ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಪೂಜೆ

ಮೇ 7ರಂದು ಮುಂಜಾನೆ ಭಾರತವು ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಈ ಹಿನ್ನೆಲೆಯಲ್ಲಿ ಮೇ 8ರಂದು ರಾಜ್ಯದ ದೇವಾಲಯಗಳಲ್ಲಿ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ವಿಶೇಷ ಪೂಜೆ ನಡೆಯಲಿದೆ.

Chikkaballapur News: ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಾಡುವ ಉದ್ದೇಶದಿಂದ ಸರಕಾರ ೨೮೨೩ ಎಕರೆ ಭೂಸ್ವಾಧೀನ ಮಾಡಲು ಅಧಿಸೂಚನೆ ಹೊರಡಿಸಿದೆ. ಕೆಐಎಡಿಬಿ ರೈತರಿಗೆ ನೋಟಿಸು ಜಾರಿ ಮಾಡಿ ಸುಮ್ಮನಾಗದೆ ಅವರಿಂದ ಅಭಿಪ್ರಾಯ ಸಂಗ್ರಹಣೆ ಮಾಡಿ ಒಂದು ವರ್ಷ ಕಳೆದಿದೆ.ಈ ನಡುವೆ ಕೆಲ ರೈತಸಂಘಟನೆಗಳ ಮುಖಂಡರು ಇದು ಸರಿಯಿಲ್ಲ, ರೈತರ ಒಪ್ಪಿಗೆ ಯಿಲ್ಲ, ರೈತರ ಸಹಿ ನಕಲು ಮಾಡಲಾಗಿದೆ

Chikkaballapur News: ಫಲಿತಾಂಶ ಕಡಿಮೆ ಬರಲು ಕಾರಣರಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಜಿಲ್ಲಾ ಶಿಕ್ಷಣ ಇಲಾಖೆ ವಿರುದ್ಧ ಕೆಆರ್‌ಎಸ್ ಪಕ್ಷದ ಮುಖಂಡರ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆ ವರ್ಷ ವರ್ಷಕ್ಕೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಬದಲು ಪ್ರತಿ ವರ್ಷದ ಫಲಿತಾಂಶ ಪಾತಾಳಕ್ಕೆ ಕುಸಿಯುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಕಳೆದ ವರ್ಷ ಫಲಿತಾಂಶ ದಲ್ಲಿ 18ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ೨೨ನೇ ಸ್ಥಾನಕ್ಕೆ ಕುಸಿದಿದೆ. ಮುಂದಿನ ವರ್ಷಕ್ಕೆ ಕೊನೆಯ ಸ್ಥಾನ ಪಡೆಯಲು ಪೈಪೋಟಿ ನಡೆಸಿದಂತಿದೆ ಎಂದು ಲೇವಡಿ ಮಾಡಿದರು

Kannada New Movie: ವಿನಯ್ ವಾಸುದೇವ್ ನಿರ್ದೇಶಿಸಿ, ನಟಿಸಿರುವ ʼದಿʼ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಅಸ್ತು

ವಿನಯ್ ವಾಸುದೇವ್ ನಿರ್ದೇಶಿಸಿ, ನಟಿಸಿರುವ ʼದಿʼ ಚಿತ್ರಕ್ಕೆ ಸೆನ್ಸಾರ್ ಅಸ್ತು

Kannada New Movie: ವಿನಯ್ ವಾಸುದೇವ್ ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿರುವ ʼದಿʼ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಹೊಸತಂಡದ ಹೊಸಪ್ರಯತ್ನವಾಗಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.