ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಇದೇ ತಿಂಗಳ 27 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವ ಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು.