ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ತುಮಕೂರು
Koratagere Accident: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ

ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಇಬ್ಬರ ದುರ್ಮರಣ

Koratagere News: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲದ ಬಸ್‌ ನಿಲ್ದಾಣದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತ ನಡೆದಿದೆ. ಗೊಬ್ಬರ ತುಂಬಿದ ಲಾರಿ ಬ್ರೇಕ್ ಫೇಲ್ಯೂರ್ ಆಗಿ, ಬೇಕರಿಗೆ ನುಗ್ಗಿದ ಪರಿಣಾಮ, ಬೇಕರಿ ಮುಂಭಾಗ ಎಲೆ ಹಾಗೂ ಬಳೆ ಮಾರುತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Chikkanayakanahalli News: ಹೆತ್ತ ತಂದೆತಾಯಿಗಳಿಗೆ ಗುರುಹಿರಿಯರಿಗೆ ವಿಧೇಯರಾಗಿ ಸಂಸ್ಕೃತಿ, ಸಂಸ್ಕಾರವಂತರಾಗಿ ಶಿಕ್ಷಣದಲ್ಲಿ ಸಾಧನೆ ಮಾಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

ತಂದೆ-ತಾಯಿ, ಗುರುಹಿರಿಯರಿಗೆ ವಿಧೇಯರಾಗಿ ಶಿಕ್ಷಣದಲ್ಲಿ ಸಾಧನೆ ಮಾಡಿ

ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ವಿಷಯವಾರು ೪೦ಜನ ಶಿಕ್ಷಕರ ತಂಡವನ್ನು ಮಾಡಿದ್ದು ಈ ಶಿಕ್ಷಕರು ಪ್ರತಿಶಾಲೆಗಳಿಗೆ ಭೇಟಿ ನೀಡುವುದು ಈ ಪ್ರೇರಣ ಶಿಬಿರದಲ್ಲಿ ಪಾಲ್ಗೊಳ್ಳುವುದು, ಗೂಗಲ್ ಮೀಟ್ ಈ ಮೂಲಕ ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಹಾಗೂ ವಿಷಯಗಳಲ್ಲಿ ಇರುವಂತಹ ಸಂದೇಹಗಳನ್ನು ಬಗೆಹರಿಸುವಂತಹ ಕೆಲಸವನ್ನು ಮಾಡುತ್ತಾರೆ

Chikkanayakanahalli News: ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅನುದಾನ ಮಂಜೂರು

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅನುದಾನ ಮಂಜೂರು

ಹಂದನಕೆರೆ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ವತಿಯಿಂದ 1.5 ಲಕ್ಷ  ಅನುದಾನ ಮಂಜೂರು ಗೊಂಡಿದೆ. ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಅವರು ಸಹಕಾರ ಸಂಘದ ಅಧ್ಯಕ್ಷರಾದ ಬಸವರಾಜ ರವರಿಗೆ ನೀಡಿದರು

MR.TIPTUR-2025: ದೇಹದಾರ್ಢ್ಯ ಸ್ಪರ್ಧೆ; ಪ್ರಜ್ವಲ್‌ಗೆ ʼಮಿಸ್ಟರ್ ತಿಪಟೂರುʼ ಗರಿ

ದೇಹದಾರ್ಢ್ಯ ಸ್ಪರ್ಧೆ; ಪ್ರಜ್ವಲ್‌ಗೆ ʼಮಿಸ್ಟರ್ ತಿಪಟೂರುʼ ಗರಿ

Tiptur News: ತಿಪಟೂರು ನಗರದ ಜಿ.ಕೆ.ಎಂ. ನಗರದಲ್ಲಿ ಟೀಮ್ ಹಲ್ಕ್ ವತಿಯಿಂದ ‘ಮಿಸ್ಟರ್ ತಿಪಟೂರು’ ದೇಹದಾರ್ಢ್ಯ ಸ್ಪರ್ಧೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಗೃಹ ಮಂಡಳಿ ಅಧ್ಯಕ್ಷ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

Tiptur News: ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಆ.15 ಕೊನೆಯ ದಿನಾಂಕ

ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Pratibha Puraskara: ತಿಪಟೂರು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ತಾಲೂಕಿನ ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಘದ ಅಧ್ಯಕ್ಷ ಚಿದಾನಂದ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Tumkur News: ಕಿಪ್ಪಿ ಕೀರ್ತಿಗಾಗಿ ಚಾಕು ಹಿಡಿದು ರೀಲ್ಸ್ ಮಾಡಿದ್ದ ಯುವಕನಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಚಾಕು ಹಿಡಿದು ರೀಲ್ಸ್ ಮಾಡಿದ್ದ ಯುವಕನಿಗೆ ಬಿಸಿ ಮುಟ್ಟಿಸಿದ ಪೊಲೀಸರು

Tumkur News: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಕಿಪ್ಪಿ ಕೀರ್ತಿಗಾಗಿ ಬಿಲ್ಡಪ್‌ ಕೊಟ್ಟು ಚಾಕು ಹಿಡಿದು ರೀಲ್ಸ್ ಮಾಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೊಬಳಿಯ ಹೊಸಕೆರೆ ಮೂಲದ ಮುತ್ತು ಅಲಿಯಾಸ್ ಬ್ಲಾಕ್ ಕೋಬ್ರಾ ಎಂಬಾತನಿಗೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Russian woman rescued: ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

Russian woman rescued: ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳು ಸದ್ಯ ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿದ್ದಾರೆ. ಪತ್ನಿ ನೀನಾ ಕುಟೀನಾ ಹಾಗೂ ಮಕ್ಕಳನ್ನು ಭೇಟಿಯಾಗಲು ಪತಿ ಡ್ರೋರ್ ಗೋಲ್ಡ್‌ಸ್ಟೆನ್‌ಗೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Tumkur (Gubbi) News: ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್ ನಡೆಸಿಕೊಟ್ಟರು. ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಎಂ.ಎಸ್. ವರಲಕ್ಷ್ಮೀ ರಮೇಶ್ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾ ವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಮ್ಮ ಅವರನ್ನು ಅಧ್ಯಕ್ಷ ರಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಅಭಿವೃದ್ಧಿ ಕಾಮಗಾರಿಗಳ ಜೊತೆ ಶಾಲೆಗಳ ಭೇಟಿ ನಮ್ಮ ಜವಾಬ್ದಾರಿ: ಶಾಸಕ ಸಿ.ಬಿ. ಸುರೇಶ್‌ಬಾಬು

ಅಭಿವೃದ್ಧಿ ಕಾಮಗಾರಿಗಳ ಜೊತೆ ಶಾಲೆಗಳ ಭೇಟಿ ನಮ್ಮ ಜವಾಬ್ದಾರಿ

ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಇದಕ್ಕೆ ಇಲ್ಲಿನ ಶಿಕ್ಷಕರು ಹಾಗೂ ಮಕ್ಕಳೇ ಕಾರಣ. ಈ ವರ್ಷವೂ ರಾಜ್ಯ ಮಟ್ಟದಲ್ಲಿ ನಮ್ಮ ತಾಲ್ಲೂಕಿನ ಹೆಸರು ಫಲಿತಾಂಶದಲ್ಲಿ ಬರಬೇಕು ಎಂಬ ಉದ್ದೇಶದಿಂದ ಪ್ರತಿ ಭಾನುವಾರ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗಿದೆ.

ಪಾವಗಡ: ಮುಂದುವರಿದ ಖದೀಮರ ಕೈಚಳಕ; ಪುರಸಭೆ ಮಾಜಿ ಅಧ್ಯಕ್ಷರ ಮನೆಯಲ್ಲಿ ಹಾಡಹಗಲೇ ಕಳವು

ಪಾವಗಡ: ಪುರಸಭೆ ಮಾಜಿ ಅಧ್ಯಕ್ಷರ ಮನೆಯಿಂದ ಹಾಡಹಗಲೇ ಕಳವು

Theft Case: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀನಿವಾಸ ನಗರದಲ್ಲಿರುವ ಪುರಸಭೆ ಮಾಜಿ ಅಧ್ಯಕ್ಷರ ಮನೆಯಿಂದ ಕಳ್ಳರು ಹಾಡಹಗಲೇ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ 7ನೇ ಕಳವು ಪ್ರಕರಣ ಇದಾಗಿದೆ.

ಬಗರ್‌ಹುಕುಂ ಸಾಗುವಳಿ ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ಸೋಮವಾರ ಸಭೆ - ಶಾಸಕ ಸಿ.ಬಿ.ಸುರೇಶ್‌ಬಾಬು

ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ಸೋಮವಾರ ಸಭೆ

ನಮ್ಮ ತಾಲ್ಲೂಕಿನ ಸಾರ್ವಜನಿಕರಿಗಾಗಿ ಒಂದು ವಿಶೇಷ ಯೋಜನೆಯನ್ನು ರೂಪಿಸಿದ್ದು ಅದರಂತೆ ತಾಲ್ಲೂಕಿನ ಎಲ್ಲಾ ಭಾಗದ ಜನರು ತಮ್ಮ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳಿಗೆ ಹಾಗೂ ಸಾಗುವಳಿ ಚೀಟಿ, ಬಗರ್‌ಹುಕುಂ, ಖಾತೆಗಳಿಗೆ ಸಂಬಂಧಿಸಿದಂತೆ ತಮ್ಮ ಸಮಸ್ಯೆಗಳಿಗಾಗಿ ಎಲ್ಲಾ ಕಂದಾಯ ಇಲಾಖೆಯ ಅಧಿಕಾರಿಗಳು ಮುಂದಿನ ಸೋಮವಾರದಿಂದ ಪ್ರತಿ ಸೋಮವಾರ ಮಧ್ಯಾಹ್ನ ೨.೩೦ರಿಂದ ಮದ್ಯಾಹ್ನ ೪ ಗಂಟೆಯವರೆಗೆ ತಾಲ್ಲೂಕು ಆಡಳಿತ ಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಅವಕಾಶವಿದ್ದು ಇದನ್ನು ಸಾರ್ವಜನಿಕರು ಉಪ ಯೋಗಿಸಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ

SIRA (Tumkur) News: ಎಲ್ಲಾ ಚೆಕ್ ಡ್ಯಾಮ್ ಹಾಗೂ ಕೆರೆಗಳು ತುಂಬುವ ವಿಶ್ವಾಸವಿದೆ

ಎಲ್ಲಾ ಚೆಕ್ ಡ್ಯಾಮ್ ಹಾಗೂ ಕೆರೆಗಳು ತುಂಬುವ ವಿಶ್ವಾಸವಿದೆ

ಮಾರಮ್ಮನ ಗುಡಿಯ ಪಕ್ಕದಲ್ಲಿರುವ ಜಾಗದಲ್ಲಿ ಎರಡು ಕೋಟಿ ರೂಪಾಯಿ ವೆಚ್ಚ ಮಾಡಿ ಸಮುದಾಯ ಭವನವನ್ನು ನಗರಸಭೆ ವತಿಯಿಂದ ನಿರ್ಮಿಸಲಾಗುತ್ತಿದೆ, ಈ ಭಾಗದಲ್ಲಿ ಬಡವರ ಸಂಖ್ಯೆಹೆಚ್ಚಾಗಿರುವ ಕಾರಣ ಶುಭ ಕಾರ್ಯಗಳಿಗೆ ಅನುಕೂಲವಾಗಲಿ ಎಂದು ಈ ನಿರ್ಧಾರ ಸರ್ಕಾರ ಕೈಗೊಂಡಿದೆ

Nandini Ghee: ತಿರುಪತಿಗೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ; ಟ್ಯಾಂಕರ್‌ಗೆ ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಚಾಲನೆ

ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ

Nandini Ghee: ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಆರಂಭಿಸಿದೆ.

Tumkur News: ಜೂಜು ಅಡ್ಡೆ ಮಾಹಿತಿ ನೀಡಿದ ವ್ಯಕ್ತಿಯ ಕಾಲು ಮುರಿದ ಪೊಲೀಸರು!

ಜೂಜು ಅಡ್ಡೆ ಮಾಹಿತಿ ನೀಡಿದ ವ್ಯಕ್ತಿಯ ಕಾಲು ಮುರಿದ ಪೊಲೀಸರು!

Tumkur News: ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿಯ ತಾಯಿ, ಎಸ್ಪಿ ಕಚೇರಿಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸುರ್ಜೇವಾಲ ಜತೆ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

ಸುರ್ಜೇವಾಲ ಜತೆ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಪರಮೇಶ್ವರ್

G Parameshwar: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

J.C. Madhuswamy: ಸಂತೆಯಲ್ಲಿ ತಪ್ಪಿಸಿಕೊಂಡ ಮಗ ನಾನು, ಯಾರು ಕೈ ಹಿಡಿತಾರೋ ಗೊತ್ತಿಲ್ಲ ಎಂದ ಜೆ.ಸಿ.ಮಾಧುಸ್ವಾಮಿ

ಸಂತೆಯಲ್ಲಿ ತಪ್ಪಿಸಿಕೊಂಡ ಮಗ ನಾನು ಎಂದ ಜೆ.ಸಿ.ಮಾಧುಸ್ವಾಮಿ

J.C. Madhuswamy: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ರಾಜಕೀಯ ಬಣ್ಣ ಬೇಡ. ಬೆಂಗಳೂರಿನಲ್ಲಿ ಹಾಸ್ಟೆಲ್‌ಗೆ ಮತ್ತೊಂದಿಷ್ಟು ಜಾಗದ ಅಗತ್ಯವಿತ್ತು. ಅದರ ಬಗ್ಗೆ ಮಾತನಾಡಲು ಸಿದ್ದರಾಮಯ್ಯರನ್ನು ಭೇಟಿಯಾಗಿದ್ದೆ ಎಂದು ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

Gubbi (Tumkur) News: ಅಂಗನವಾಡಿ ಮಕ್ಕಳಿಗೆ ಹಾಲು ಬ್ರೆಡ್ ವಿತರಿಸಿ ಶಾಸಕ ವಾಸಣ್ಣ ಹುಟ್ಟುಹಬ್ಬ ಆಚರಣೆ

ಅಂಗನವಾಡಿ ಮಕ್ಕಳಿಗೆ ಹಾಲು ಬ್ರೆಡ್ ವಿತರಿಸಿ ಹುಟ್ಟುಹಬ್ಬ ಆಚರಣೆ

ಗುಬ್ಬಿ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿ ತಾಲ್ಲೂಕಿನ ಜನಮಾನಸದಲ್ಲಿ ನಿಂತ ಶಾಸಕ ವಾಸಣ್ಣ ಅವರ 63 ನೇ ಹುಟ್ಟುಹಬ್ಬ ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಬಡ ಹಾಗೂ ದಲಿತ ಮಕ್ಕಳು ಓದುವ ಅಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಹಾಲು ಬಿಸ್ಕತ್ ಬ್ರೆಡ್ ವಿತರಣೆ ಮಾಡಿದ್ದೇವೆ. ಶಾಸಕರಾಗಿ ಗೆದ್ದ ದಿನದಿಂದ ದಲಿತ ಪರ ಕೆಲಸ ನಿರಂತರ ಮಾಡುತ್ತಿದ್ದಾರೆ.

Pavagada News: ಕಾಂಗ್ರೆಸ್‌ನವರು ಏನ್ ದಬಾಕಿದ್ದಾರೆ; ಸಿಎಂ, ಗ್ಯಾರಂಟಿಗಳ ಬಗ್ಗೆ ಮಹಿಳಾ ಅಧಿಕಾರಿ ಟೀಕಿಸಿದ ವಿಡಿಯೋ ವೈರಲ್‌!

ಸಿಎಂ, ಗ್ಯಾರಂಟಿಗಳ ಬಗ್ಗೆ ಮಹಿಳಾ ಅಧಿಕಾರಿ ಟೀಕಿಸಿದ ವಿಡಿಯೋ ವೈರಲ್‌!

Pavagada News: ಪಾವಗಡ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ನೋಂದಣಿಗೆ ಬಂದವರ ಬಳಿ ಮಹಿಳಾ ಅಧಿಕಾರಿ ಸಿದ್ದರಾಮಯ್ಯರನ್ನು ತೆಗಳಿ, ಮೋದಿಯನ್ನು ಹೊಗಳಿದ್ದಾರೆ. ಕೆಲಸದ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಕೀಳಾಗಿ ಮಾತನಾಡಿರುವ ಅಧಿಕಾರಿಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದರಿಂದ, ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

Gubbi (Tumkur) News: ನಿಮ್ಮೊಂದಿಗೆ ನಾವಿದ್ದೇವೆ ಎಂದ ಗುಬ್ಬಿ ಕಂದಾಯ ನೌಕರರು : ಜಿಲ್ಲಾಧಿಕಾರಿಗಳ ಅಪಮಾನಕ್ಕೆ ಪ್ರತಿಕ್ರಿಯೆ

ನಿಮ್ಮೊಂದಿಗೆ ನಾವಿದ್ದೇವೆ ಎಂದ ಗುಬ್ಬಿ ಕಂದಾಯ ನೌಕರರು

ಯಾವುದೇ ಸಾಕ್ಷ್ಯಾಧಾರ ಇಲ್ಲದ ಆರೋಪ ಮಾಡಿದ್ದಲ್ಲದೆ ಉನ್ನತ ಅಧಿಕಾರಿಗಳಿಗೆ ಶಾಲು ಪೇಟೆ ರೇಷ್ಮೆ ಸೀರೆ ನೀಡಿ ನಾಗರೀಕ ಸನ್ಮಾನ ಮಾಡುವುದಾಗಿ ಹೇಳಿರುವ ಪಕ್ಷ ಸಣ್ಣ ನೌಕರರನ್ನು ಬಿಡುವುದಿಲ್ಲ. ಮಾನಸಿಕ ಹಿಂಸೆ ನೀಡಲು ಎಲ್ಲಾ ರೀತಿಯಲ್ಲಿ ಮುಂದಾಗುತ್ತಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ತೀವ್ರ ಹಿಂಸೆ ಇತ್ತೀಚಿಗೆ ಹೆಚ್ಚಾಗಿದೆ. ಆರ್ ಟಿಐ ಕಾರ್ಯಕರ್ತರ ಹೆಸರಿನಲ್ಲಿ ಸಹ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಸರ್ಕಾರಿ ನೌಕರರನ್ನು ಉಳಿಸಿ ಕೆಲಸ ಮಾಡಲು ಅನುವು ಮಾಡಬೇಕು

Tumkur news: ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರ ಸರಕಾರಿ ನೌಕರರ ಅಭಿಯಾನ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರ ಸರಕಾರಿ ನೌಕರರ ಅಭಿಯಾನ

Tumkur news: ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಭೂಹಗರಣಕ್ಕೆ ಸಂಬಂಧಿಸಿ ʼಭ್ರಷ್ಟಾಚಾರ ಹೆಚ್ಚಾಗಲು ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮʼವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇಂದು (ಜು.11) ಹಮ್ಮಿಕೊಂಡಿತ್ತು. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಪರವಾಗಿ ಸರಕಾರಿ ನೌಕರರು ಅಭಿಯಾನ ಆರಂಭಿಸಿದ್ದಾರೆ. ʼನಾಗರಿಕ ಸನ್ಮಾನʼವನ್ನು ತಡೆಯಲು ಮುಂದಾಗಿದ್ದಾರೆ.

Gubbi (Tumkur) News: ಅರ್ಥ ಪಡೆದ ಜೆಡಿಎಸ್ ಮುಖಂಡ ನಾಗರಾಜು ಹುಟ್ಟುಹಬ್ಬ: ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಯಶಸ್ವಿ

ಅರ್ಥ ಪಡೆದ ಜೆಡಿಎಸ್ ಮುಖಂಡ ನಾಗರಾಜು ಹುಟ್ಟುಹಬ್ಬ

ಕೇವಲ ಚುನಾವಣೆಗೆ ನಾನು ಬಂದಿಲ್ಲ. ತಾಲ್ಲೂಕಿನ ರೈತನ ಮಗನಾಗಿ ಈ ಜನರಿಗಾಗಿ ದುಡಿಯಲು ಬಂದಿದ್ದೇನೆ. ಹೇಮಾವತಿ ಹೋರಾಟ ನಮ್ಮ ಮೊದಲ ಯಶಸ್ವಿ ಹೋರಾಟ. ಎನ್ ಡಿಎ ಮೈತ್ರಿ ಇಲ್ಲಿ ವಿರೋಧ ಪಕ್ಷವಾಗಿ ಜವಾಬ್ದಾರಿ ಕೆಲಸ ನಡೆಸಿದೆ. ನೀರಿಗಾಗಿ ನಿರಂತರ ಹೋರಾಟ ನಡೆಸುತ್ತೇನೆ. ಯಾವುದೇ ಕಾರಣಕ್ಕೂ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ

Madhugiri News: ಕಂದಾಯ ಅದಾಲತ್; ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಕೆ.ಎನ್. ರಾಜಣ್ಣ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ಕಂದಾಯ ಅದಾಲತ್‌, ಇ- ಪೌತಿ ಖಾತೆ, ದರಕಾಸ್ತು ಪೋಡಿ ಉಚಿತ ಪಹಣಿ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಇ-ಆಫೀಸ್ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

Chikkanayakanahalli News: ಸ್ನೇಹಿತೆಯನ್ನು ಕರೆಸಿ ಗೆಳೆಯರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ ಧೂರ್ತ!

ಸ್ನೇಹಿತೆಯನ್ನು ಕರೆಸಿ ಸಾಮೂಹಿಕ ಅತ್ಯಾಚಾರ; ಮೂವರು ಅರೆಸ್ಟ್‌

Chikkanayakanahalli News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಹೋಬಳಿಯ ಆಶ್ರೀಹಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಲವತ್ತ ಗ್ರಾಪಂ ಉಪಾಧ್ಯಕ್ಷರಾಗಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆ

ಉಪಾಧ್ಯಕ್ಷರಾಗಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆ

ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಸಂಸದ ವಿ.ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

Loading...