ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉತ್ತರ ಕನ್ನಡ

ಶ್ರೀ ಕ್ಷೇತ್ರ ಉಳವಿಯಲ್ಲಿ ಸಂಭ್ರಮ, ಸಡಗರದಿಂದ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

ಶ್ರೀ ಕ್ಷೇತ್ರ ಉಳವಿಯಲ್ಲಿ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

Ulavi Channabasaveshwara Swamy Rathotsava : ಉಳವಿ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಸಂಜಯ ಕಿತ್ತೂರು ಅವರು ಚನ್ನಬಸವೇಶ್ವರ ರಥಕ್ಕೆ ಪೂಜೆ ಸಲ್ಲಿಸಿ ಭಕ್ತಾರೊಂದಿಗೆ ರಥ ಎಳೆಯುವುದರ ಮೂಲಕ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ವಿವಿಧೆಡೆಯಿಂದ ಸಾವಿರಾರು ಭಕ್ತರು ಭಾಗಿಯಾಗಿದ್ದರು.

ಅನೈತಿಕ ಸಂಬಂಧ ವಿಚಾರಕ್ಕೆ ವ್ಯಕ್ತಿಯ ಕೊಲೆ; ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿ 7 ಮಂದಿ ಬಂಧನ

ಸಿದ್ದಾಪುರದಲ್ಲಿ ವ್ಯಕ್ತಿಯ ಕೊಲೆ; ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಬಂಧನ

Siddapura Murder Case: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ ಭಟ್‌ ಗುರೂಜಿ ಜತೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳು. ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದೆ.

Kagodu Thimmappa: ಸಾಗರ ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ.

Uttara Kannada News: ಕುಮಟಾದಲ್ಲಿ  ಹಿಂದೂ ಮನೆಗೆ ಮುಸ್ಲಿಂ ವ್ಯಕ್ತಿಯಿಂದ ಬೆಂಕಿ, ಪ್ರದೇಶ ಉದ್ವಿಗ್ನ

ಕುಮಟಾದಲ್ಲಿ ಹಿಂದೂ ಮನೆಗೆ ಮುಸ್ಲಿಂ ವ್ಯಕ್ತಿಯಿಂದ ಬೆಂಕಿ, ಪ್ರದೇಶ ಉದ್ವಿಗ್ನ

ಸಾರ್ವಜನಿಕರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಘಟನೆಯಿಂದಾಗಿ ದೇವರ ಹಕ್ಕಲದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

77th Republic Day: ದೇಶವು ಪ್ರಜಾಸತ್ತಾತ್ಮಕ ಗಣರಾಜ್ಯ

ದೇಶವು ಪ್ರಜಾಸತ್ತಾತ್ಮಕ ಗಣರಾಜ್ಯ

ಭಾರತವು ಇಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ದೇಶಭಕ್ತಿ ಯಿಂದ ಆಚರಿಸುತ್ತಿದೆ. 1950 ಜ.26ರಂದು ಭಾರತದ ಸಂವಿಧಾನವು ಜಾರಿಗೆ ಬಂದು, ನಮ್ಮ ದೇಶವು ಸಾರ್ವಭೌಮ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ದಿನದ ನೆನಪಿನಲ್ಲಿ ನಾಡಿನಾದ್ಯಂತ ಸಂಭ್ರಮ ಮನೆ ಮಾಡಿದೆ.

Mahakutumba: ಗೋಳಿಕೈ ಗಣಪತಿ ಹೆಗಡೆಯವರಿಗೆ ಕನಕಾಭಿಷೇಕ

ಗೋಳಿಕೈ ಗಣಪತಿ ಹೆಗಡೆಯವರಿಗೆ ಕನಕಾಭಿಷೇಕ

ಒಬ್ಬ ವ್ಯಕ್ತಿಗೆ ಮರಿ ಮಗ ಹುಟ್ಟಿ, ಆ ಮಗುವಿಗೆ ನಾಮಕರಣವಾದ ನಂತರ ಈ ಆಚರಣೆ ನಡೆಯುತ್ತದೆ. ಅಂದರೆ, ಒಬ್ಬ ವ್ಯಕ್ತಿ ತನ್ನ ಮಗನ ಮಗನನ್ನು ನೋಡಿದಾಗ ಇದು ನಡೆಯುತ್ತದೆ. ಸಾಮಾನ್ಯವಾಗಿ 90 ರಿಂದ 100 ವರ್ಷಗಳ ಸುದೀರ್ಘ ಆಯುಷ್ಯವನ್ನು ಹೊಂದಿದವರಿಗೆ ಈ ಗೌರವ ಸಲ್ಲಿಕೆಯಾಗುತ್ತದೆ.

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು. ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ವಿಶ್ವೇಶ್ವರ ಭಟ್ಟರು ಉತ್ತರ ಕನ್ನಡದ ಪ್ರಮುಖ ಪತ್ರಿಕೆಯಾಗಿರುವ ಲೋಕಧ್ವನಿಯ ಸಾರಥ್ಯ ವಹಿಸಿಕೊಂಡ ಬಳಿಕ ಈ ಪತ್ರಿಕೆಯನ್ನು ಕೊಪ್ಪಳಕ್ಕೂ ವಿಸ್ತರಿಸಿದ್ದಾರೆ. ಶೀಘ್ರದಲ್ಲಿಯೇ ಮೈಸೂರಿನಲ್ಲಿಯೂ ಆರಂಭಿಸುವುದಾಗಿ ಹೇಳಿದ್ದಾರೆ. ಆದ್ದರಿಂದ ಲೋಕಧ್ವನಿ ಜಿಲ್ಲಾಮಟ್ಟದ ಪತ್ರಿಕೆಯಾಗಿ ಉಳಿದಿಲ್ಲ. ಬದಲಿಗೆ ಅದೂ ಸಹ ರಾಜ್ಯಮಟ್ಟದ ಪತ್ರಿಕೆ ಯಾಗುವತ್ತ ಸಾಗುತ್ತದೆ.

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

ವಿಭಿನ್ನ ಸುದ್ದಿಯ ಮೂಲಕವೇ ಜನಜನಿತವಾಗಿರುವ ಲೋಕಧ್ವನಿ, ತೆರೆಮರೆಯ ಸಾಧಕ ರನ್ನು ಗುರುತಿಸುವ ನಿಟ್ಟಿನಲ್ಲಿ ‘ಲೋಕಧ್ವನಿ ಹೆಮ್ಮೆಯ ಸಾಧಕ -2026’ ನೀಡಲಾಯಿತು. ಎಲೆಮರೆಯ ಕಾಯಿಗಳಂತೆ ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಮಾಡಿರುವ ಕರುನಾಡಿನ ಸಾಧಕರನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿತ್ತು.

Voice of Uttara Kannada, 'Lokadhvani': ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಲೋಕಧ್ವನಿ ಪತ್ರಿಕೆಯ 42ನೇ ವರ್ಷದ ವಾರ್ಷಿಕೋತ್ಸವ ಹಾಗೂ ಲೋಕಧ್ವನಿ ನಮ್ಮ ಹೆಮ್ಮೆಯ ಸಾಧಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕ ಧ್ವನಿ ಪತ್ರಿಕೆಯು ಉತ್ತರ ಕನ್ನಡ ಜಿಲ್ಲೆಯ ಮೊದಲ ದೈನಿಕವಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಜನಜೀವನದ ಅವಿಭಾಜ್ಯ ಅಂಗವಾಗಿ ಬೆಳೆದು ಬಂದಿದೆ.

National Girl Child Day: ಹೆಣ್ಣು ಮಗು, ನಾಳೆಯ ಭರವಸೆಯ ಬೆಳಗು

ಹೆಣ್ಣು ಮಗು, ನಾಳೆಯ ಭರವಸೆಯ ಬೆಳಗು

‘ಒಂದು ಗಂಡು ಮಗುವಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತೆ, ಆದರೆ ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೇ ಶಿಕ್ಷಣ ನೀಡಿದಂತೆ.‘ ಈ ಮಾತು ಹೆಣ್ಣು ಮಗುವಿನ ಮಹತ್ವವನ್ನು ಸಾರುತ್ತದೆ. ಪ್ರತಿ ವರ್ಷ ಜ.24ರಂದು ಭಾರತದಾದ್ಯಂತ "ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ" ವನ್ನು ಆಚರಿಸಲಾಗುತ್ತದೆ.

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ಆತ್ಮಹತ್ಯೆ; ವೈರಲ್‌ ವಿಡಿಯೋದಿಂದ ಮನನೊಂದು ಸಾವಿಗೆ ಶರಣು

ಅಂಕೋಲಾದಲ್ಲಿ ಗುಂಡು ಹಾರಿಸಿಕೊಂಡು ಫಾರ್ಮಾಸಿಸ್ಟ್ ರಾಜೀವ ಪಿಕಳೆ ಆತ್ಮಹತ್ಯೆ

Ankola News: ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿದ್ದ ರಾಜೀವ ಪಿಕಳೆ ಅವರು ಕೆಲ ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಈ ಘಟನೆಯಿಂದ ನೊಂದಿದ್ದ ರಾಜೀವ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉಗ್ರ ಸಂಘಟನೆಗೆ ಯುವಕರನ್ನು ಭರ್ತಿ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ 10 ವರ್ಷ ಜೈಲು

ಉಗ್ರ ಸಂಘಟನೆಯೊಂದಿಗೆ ಲಿಂಕ್‌ ಹೊಂದಿದ್ದ ವ್ಯಕ್ತಿಗೆ 10 ವರ್ಷ ಜೈಲು

ಭಯೋತ್ಪಾದಕ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ 10 ವರ್ಷ ಕಠಿಣ ಜೈಲು ವಿಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಶಿರಸಿ ಮೂಲದ ಸಯ್ಯದ್ ಎಂ. ಇದ್ರಿಸ್ ಎಂಬಾತನಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

Wrestling: ಹಳಿಯಾಳದ ಮಣ್ಣಿನಲ್ಲಿ ಹಬ್ಬಿದ ಕುಸ್ತಿ ಸಂಭ್ರಮ

ಹಳಿಯಾಳದ ಮಣ್ಣಿನಲ್ಲಿ ಹಬ್ಬಿದ ಕುಸ್ತಿ ಸಂಭ್ರಮ

ಉತ್ತರ ಕನ್ನಡ ಜಿಲ್ಲೆಯ ಕುಸ್ತಿ ಕಾಶಿ ಎಂದೇ ಕರೆಯಲ್ಪಡುವ ಹಳಿಯಾಳದಲ್ಲಿ ಇತ್ತೀಚೆಗೆ ನಡೆದ ‘ರಾಷ್ಟ್ರೀಯ ಮಟ್ಟದ ಬೃಹತ್ ಕುಸ್ತಿ ದಂಗಲ್‘ ಇಡೀ ರಾಜ್ಯದ ಗಮನ ಸೆಳೆದಿದೆ. ಕಳೆದ ಭಾನುವಾರ ನಡೆದ ಈ ಪಂದ್ಯಾವಳಿಯು ವೀಕ್ಷಕರ ಜನಸಾಗರದಿಂದಾಗಿ ಹೊಸ ಇತಿಹಾಸ ಬರೆದಿದ್ದು, ಕುಸ್ತಿ ಕ್ರೀಡೆಯ ಬಗೆಗಿನ ಜನರ ಅಭಿಮಾನವನ್ನು ಸಾಬೀತುಪಡಿಸಿದೆ.

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕೇವಲ ಧಾರ್ಮಿಕ ತಾಣವಾಗಿ ಉಳಿದಿಲ್ಲ. ಇಲ್ಲಿಯ ಬೀಚ್ಗಳಿಂದಾಗಿ ಸಾಕಷ್ಟು ಪ್ರವಾಸೋ ದ್ಯಮ ಬೆಳೆದಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದರೆ, ಗೋಕರ್ಣ ಕೂಡ ಪ್ರವಾಸಿಗರ ನೆಚ್ಚಿನ ತಾಣ ಎನಿಸಿಕೊಳ್ಳುವುದರಲ್ಲಿ ಯಾವುದೇ ಶಂಕೆಯಿಲ್ಲ. ಆದರೆ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೋಕರ್ಣದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಭಟ್ಕಳದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ಸಾವು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೆಂಕಟಾಪುರದ ಬಳಿ ಭೀಕರ ಅಪಘಾತ ನಡೆದಿದೆ. ಚಾಲಕನ ನಿಯತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದರಿಂದ ದುರಂತ ಸಂಭವಿಸಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttara Kannada News: ಕಾರವಾರದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ನಡೆದಿತ್ತಾ ದೌರ್ಜನ್ಯ?

ಕಾರವಾರ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌, ಆರೋಪಿಯಿಂದ ದೌರ್ಜನ್ಯ?

ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣ ಎನ್ನಲಾಗಿದ್ದರೂ, ಈಗ ಪೋಷಕರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಮೃತ ರಿಶೆಲ್ ತಾಯಿ ರೀನಾ ಕ್ರಿಸ್ತೋದ್ ಡಿಸೋಜಾ ಅವರು ಪೊಲೀಸರಿಗೆ ನೀಡಿರುವ ಮನವಿ ಪತ್ರದಲ್ಲಿ, 'ಮಗಳ ಮೃತದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ಆಕೆಯ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆದಿರುವ ಬಲವಾದ ಸಂಶಯ ನಮಗಿದೆ' ಎಂದು ಉಲ್ಲೇಖಿಸಿದ್ದಾರೆ.

ಜ.31ರಿಂದ ಮೂರು ದಿನ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳ

ಜ.31ರಿಂದ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳ

Sirsi Fruit and flower Show: ಜ.31ರಿಂದ ಮೂರು ದಿನಗಳ ಕಾಲ 2025-26ನೇ ಸಾಲಿನ ಫಲಪುಷ್ಪ ಪ್ರದರ್ಶನ, ಸಾವಯವ ಸಿರಿಧಾನ್ಯ ಮೇಳವನ್ನು ಶಿರಸಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಪಿ. ಸತೀಶ ಅವರು ಮಾಹಿತಿ ನೀಡಿದ್ದಾರೆ.

Sirsi News: ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್‌ ಜನ ಸಮಾವೇಶವು ಶಿರಸಿಯಲ್ಲಿ ಭಾನುವಾರ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀಗಳು, ಸೋಂದೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾಕಳಂಕ ಭಟ್ಟಾಚಾರ್ಯ ಸ್ವಾಮೀಜಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಂಕಾಳ ವೈದ್ಯ ಮೊದಲಾದವರು ಯೋಜನೆಗಳನ್ನು ವಿರೋಧಿಸಿ ಮಾತನಾಡಿದರು.

ನದಿ ಉಳಿವಿಗಾಗಿ ಸಮಾವೇಶ ಇಂದು

ನದಿ ಉಳಿವಿಗಾಗಿ ಸಮಾವೇಶ ಇಂದು

ಪಶ್ಚಿಮ ಘಟ್ಟಗಳು ಜಗತ್ತಿನ ಎಂಟು ಅತೀ ಸೂಕ್ಷ್ಮ ಪರಿಸರ ತಾಣಗಳಲ್ಲಿ ಒಂದು. ಇಲ್ಲಿನ ನದಿಗಳನ್ನು ತಡೆಯುವುದು ಎಂದರೆ ನಮ-- ಕೈಯಾರೆ ನಾವು ವಿನಾಶವನ್ನು ಆಮಂತ್ರಿಸಿದಂತೆ. ಅಭಿವೃದ್ಧಿಯು ಪರಿಸರ ಪೂರಕವಾಗಿರಬೇಕೇ ಹೊರತು ಪರಿಸರ ಮಾರಕವಾಗಬಾರದು.‘ ಎಂದು ಪರಿ ಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Karwar News: ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಬೇಡ್ತಿ - ಅಘನಾಶಿನಿ ನದಿ ತಿರುವು ಯೋಜನೆಗೆ ಹವ್ಯಕ ಮಹಾಸಭೆ ವಿರೋಧ; ಜ.11ರ ಶಿರಸಿ ಸಮಾವೇಶಕ್ಕೆ ಬೆಂಬಲ

ಬೇಡ್ತಿ - ಅಘನಾಶಿನಿ ನದಿ ತಿರುವು ಯೋಜನೆಗೆ ಹವ್ಯಕ ಮಹಾಸಭೆ ವಿರೋಧ

Sri Akhila Havyaka Mahasabha: ಬೇಡ್ತಿ - ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಆಯೋಜನೆಯಲ್ಲಿ ಹಾಗೂ ನಾಡಿನ ವಿವಿಧ ಸಂತರ ನೇತೃತ್ವ ಹಾಗೂ ಬೆಂಬಲದೊಂದಿಗೆ ಜನವರಿ 11ರಂದು ಶಿರಸಿಯಲ್ಲಿ ನಡೆಯಲಿರುವ ಬೃಹತ್ ಜನ ಸಮಾವೇಶವನ್ನು ಶ್ರೀ ಅಖಿಲ ಹವ್ಯಕ ಮಹಾಸಭೆಯು ಬೆಂಬಲಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ.ಗಿರಿಧರ ಕಜೆ ತಿಳಿಸಿದ್ದಾರೆ.

School Bag: ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು ಭಾರದ ಪುಸ್ತಕಗಳನ್ನು ತುಂಬಿಕೊಂಡು ಭಾರವಾದ ಬ್ಯಾಗ್ ಹೊತ್ತು ಶಾಲೆಗೆ ತೆರಳಿದ್ದ. ಶಾಲೆಯಿಂದ ಮರಳಿ ಮನೆಗೆ ಬಂದಾಗ ವಿದ್ಯಾರ್ಥಿಯ ಬಲಗೈ ಭುಜ ಭಾಗದಲ್ಲಿ ತೀವ್ರ ಊತ ಕಂಡುಬಂದಿದೆ.

Car Fire Accident: ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

Loading...