ಮೇ 4ರ ನಂತರ ಸಿದ್ದರಾಮಯ್ಯ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ: ಬೊಮ್ಮಾಯಿ
Basavaraj Bommai: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೂ ಸಿಎಂ ಆಗುವ ಆಸೆ ಇದೆ. ಹಲವರಿಗೂ ಆಸೆ ಇದೆ ಎಂದು ಹೇಳಿದ್ದಾರೆ. ಆದರೆ ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.