ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಮನವಿ
Vijayanagara News: ಹೊಸಪೇಟೆಗೆ ನೂತನ ಇಎಸ್ಐ (ESI) ಆಸ್ಪತ್ರೆ ಸ್ಥಾಪಿಸಲು ಸಂಸದ ಈ. ತುಕಾರಾಂ ಅವರಿಗೆ ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Vijayanagara News: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಕೊತ್ವಾಲ್ ಮಹಮ್ಮದ್ ಸೇರಿದಂತೆ ಇತರೆ ಮುಖಂಡರು, ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Vijayanagara News: ಹೊಸಪೇಟೆ ತಾಲೂಕು ವಿಶ್ವಕರ್ಮ ಸಮಾಜದಿಂದ ಏ.30 ರಿಂದ ಮೇ 5 ರವರೆಗೆ ಹೊಸಪೇಟೆ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕಂಚುಗಾರಪೇಟೆಯಲ್ಲಿರುವ ನೂತನ ಗರ್ಭಗುಡಿ ಆಲಯ ಸಮರ್ಪಣೆ ಹಾಗೂ ಶ್ರೀ ಕಾಳಿಕಾದೇವಿ ಕಮಟೇಶ್ವರ ದೇವರ ಹಾಗೂ ಪರಿವಾರ ದೇವರ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ ಹಾಗೂ ನವಚಂಡಿಕಾ ಯಾಗ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಜಿಲ್ಲಾಧ್ಯಕ್ಷ ಕೆ.ವಿ. ಪತ್ತಾರ್ ಹಾಗೂ ವಿ. ಶಂಕರಾಚಾರ್ಯ ತಿಳಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಕಿತ್ನೂರು ಗ್ರಾಮದ ಕೊಟ್ರೇಶ್ಗೆ ಮದ್ವೆ ಮಾಡೋದಕ್ಕೆ ಮನೆಯವರು ಮುಂದಾಗಿದ್ದರು. ಕನ್ಯೆ ನೋಡುವ ಶಾಸ್ತ್ರವನ್ನೂ ಏರ್ಪಡಿಸಿದ್ದರು. ಕೊಟ್ರೇಶ್ ಬೈಕ್ನಲ್ಲಿ ತಂದೆ ತಾಯಿಯನ್ನು ಕೂರಿಸಿಕೊಂಡು ಹೆಣ್ಣಿನ ಮನೆಗೆ ತೆರಳುತ್ತಿದ್ದರು. ಇನ್ನೇನು ಸ್ವಲ್ಪವೇ ದೂರ ಹೋದರೆ ಹೆಣ್ಣಿನ ಮನೆ ಎಂಬಷ್ಟರಲ್ಲಿ ಜವರಾಯ ಬಂದೆರಗಿದ್ದಾನೆ.
ಈ ಬಾರಿ ಬೆಂಗಳೂರಿನ ವಿದ್ವಾಂಸ ಮತ್ತು ಲೇಖಕ ಡಾ. ಜಿ.ರಾಮಕೃಷ್ಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ಮಹಾದೇವಪ್ಪ, ವಿಶ್ರಾಂತ ಆಡಳಿತಾಧಿಕಾರಿ ಡಾ.ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆಯಾಗಿದ್ದಾರೆ. ಇನ್ನು 107 ಮಂದಿಗೆ ಘಟಿಕೋತ್ಸವದಲ್ಲಿ ಪಿಎಚ್ಡಿ ಪ್ರದಾನ ಮಾಡಲಾಗುತ್ತದೆ.
Pralhad Joshi: ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡುವ ಮೂಲಕ ರಾಜ್ಯ ಪ್ರವಾಸೋದ್ಯಮಕ್ಕೆ ಮಹತ್ತರ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಶನಿವಾರ, ಈ ಯೋಜನೆಗೆ ಅಸ್ತು ಎಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
Hampi Utsav 2026: 'ಹಂಪಿ ಉತ್ಸವ - 2026' ರ ಅಂಗವಾಗಿ ಹೊಸಪೇಟೆ ನಗರದ ವಿಜಯನಗರ ಕಾಲೇಜು ಮೈದಾನದಲ್ಲಿ ಶನಿವಾರ ಗಾಳಿಪಟ ಉತ್ಸವಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಆಡಳಿತದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನೋಡುಗರ ಕಣ್ಮನ ಸೆಳೆಯುತ್ತಿದೆ.
Hampi utsav 2026: ಹಂಪಿ ಉತ್ಸವದ ಅಂಗವಾಗಿ ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಜಮಾಯಿಸಿದ್ದರು. ಈ ವೇಳೇ ಅಲ್ಲಿಗೆ ಬಂದ ಸಚಿವ ಜಮೀರ್ ಅಹ್ಮದ್ ಅವರು, ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ನಲ್ಲಿ ಹಾರಾಡಲು ವ್ಯವಸ್ಥೆ ಮಾಡಿದ್ದಾರೆ.
Hampi utsav fire accident: ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಉತ್ಸವದಲ್ಲಿ ಭಾಗಿಯಾಗಲು ಸಿಎಂ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿದ್ದು, ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
Kottur Triple Murder Case: ಕೊಟ್ಟೂರಿನಲ್ಲಿ ಮೂವರನ್ನು ಕೊಲೆ ಮಾಡಿದ್ದ ಯುವಕ, ಬಳಿಕ ಬೆಂಗಳೂರಿನ ತಿಲಕ್ನಗರ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಯುವಕ ಅಕ್ಷಯ್ ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರು, ಮತ್ತಷ್ಟು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಆದರೆ, ಮೂವರನ್ನು ಆತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
Vijayanagara News: ಹಿರಿಯ ಪತ್ರಕರ್ತ ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿರುವ ಕಾನಿಪ 95 ವರ್ಷಗಳನ್ನು ಪೂರೈಸುತ್ತದೆ. ದೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಏಕೈಕ ಪತ್ರಕರ್ತರ ಸಂಘ ನಮ್ಮದು ಎಂಬುದು ಹೆಮ್ಮೆಯ ಸಂಗತಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.