ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ
ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.