Viral Video: ಫೋನ್ ಲೈಟ್ನಲ್ಲಿ ರೋಗಿಗೆ ಚಿಕಿತ್ಸೆ- ಈತ ನಿಜಕ್ಕೂ ಯಮರಾಜನ ಏಜೆಂಟ್!
ಜಹೀರಾಬಾದ್ ಪ್ರದೇಶ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡಾಗ ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ತೆಲಂಗಾಣದ ಆಸ್ಪತ್ರೆಯ ಸೂಪರಿಂಟೆಂಡೆಂಟ್ ವಿ. ಶ್ರೀಧರ್ ಕುಮಾರ್ ಅವರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ.


ತೆಲಂಗಾಣ: ವಿದ್ಯುತ್ ಕಡಿತಗೊಂಡ ವೇಳೆ ಫೋನ್ ಲೈಟ್ (Phone light) ಬಳಸಿ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಆಸ್ಪತ್ರೆ ಮುಖ್ಯಸ್ಥರನ್ನು ( hospital superintendent ) ಅಮಾನತುಗೊಳಿಸಿರುವ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಜಹೀರಾಬಾದ್ ಪ್ರದೇಶ ಆಸ್ಪತ್ರೆಯ (Zaheerabad Area Hospital) ಸೂಪರಿಂಟೆಂಡೆಂಟ್ ವಿ. ಶ್ರೀಧರ್ ಕುಮಾರ್ ಅವರನ್ನು ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ವಿದ್ಯುತ್ ಕಡಿತದ ಸಮಯದಲ್ಲಿ ಜಹೀರಾಬಾದ್ ಪ್ರದೇಶ ಆಸ್ಪತ್ರೆಯ ವೈದ್ಯರು ಮೊಬೈಲ್ ಫೋನ್ ಟಾರ್ಚ್ಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಜಹೀರಾಬಾದ್ ಪ್ರದೇಶ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡಾಗ ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ತೆಲಂಗಾಣದಲ್ಲಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ರನ್ನು ಅಮಾನತುಗೊಳಿಸಿದೆ. ಜಹೀರಾಬಾದ್ ಪ್ರದೇಶ ಆಸ್ಪತ್ರೆಯ ಸೂಪರಿಂಟೆಂಡೆಂಟ್ ವಿ. ಶ್ರೀಧರ್ ಕುಮಾರ್ ಅವರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ.
ವೈರಲ್ ಆಗಿರುವ ವಿಡಿಯೊದಲ್ಲಿ ಆಸ್ಪತ್ರೆಯ ಕತ್ತಲ ವಾರ್ಡ್ನಲ್ಲಿ ವೈದ್ಯರು ತಮ್ಮ ಫೋನ್ ದೀಪಗಳನ್ನು ಬಳಸಿ ರೋಗಿಗಳನ್ನು ಪರೀಕ್ಷಿಸುತ್ತಿರುವುದು ಕಂಡುಬಂದಿದೆ. ರೋಗಿಗಳು ಹಾಸಿಗೆಗಳ ಮೇಲೆ ಮಲಗಿರುವಾಗ ಅವರನ್ನು ಪರೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ಆಸ್ಪತ್ರೆ ನಿರ್ವಹಣೆಯ ಬಗ್ಗೆ ಸಾರ್ವಜನಿಕ ಕಳವಳವನ್ನು ಹುಟ್ಟುಹಾಕಿತು.
ಕೂಡಲೇ ಎಚ್ಚೆತ್ತುಕೊಂಡ ತೆಲಂಗಾಣ ಆರೋಗ್ಯ ಸಚಿವ ಸಿ. ದಾಮೋದರ್ ರಾಜ ನರಸಿಂಹ ಅವರು ಘಟನೆಯ ಬಗ್ಗೆ ತನಿಖೆಗೆ ರಾಜ್ಯ ಆರೋಗ್ಯ ಇಲಾಖೆಗೆ ಆದೇಶಿಸಿದರು. ವೈದ್ಯರು ತುರ್ತು ವಾರ್ಡ್ ನಲ್ಲಿದ್ದಾಗ ಹಠಾತ್ ವಿದ್ಯುತ್ ಕಡಿತವಾಗಿದೆ. ಇದರಿಂದ ಸಮಸ್ಯೆ ಉಂಟಾಗಿತ್ತು. ಆಸ್ಪತ್ರೆಯಲ್ಲಿ ಬ್ಯಾಕಪ್ ಜನರೇಟರ್ ಇದ್ದರೂ ಅದನ್ನು ಆನ್ ಮಾಡುವಲ್ಲಿ ವಿಳಂಬವಾಯಿತು. ಇದು ರೋಗಿಗಳು ಮತ್ತು ಸಿಬ್ಬಂದಿ ಇಬ್ಬರಿಗೂ ಆತಂಕ ಉಂಟು ಮಾಡಿತ್ತು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ವೈರಲ್ ವಿಡಿಯೊ ಇಲ್ಲಿದೆ
ఒకవైపు కరెంట్ కోతలు, మరోవైపు ఆసుపత్రిలో ఉన్న జనరేటర్ పని చేయదు. చివరకు సెల్ ఫోన్ లైట్ వెలుతురులో చికిత్స చేయాల్సిన దుస్థితి.
— Harish Rao Thanneeru (@BRSHarish) May 31, 2025
300 పైగా పేషెంట్లు వచ్చే జహీరాబాద్ ప్రభుత్వ ఏరియా ఆసుపత్రి పరిస్థితి ఇలా ఉంటే, గ్రామీణ ప్రాంతాల్లో ఉండే ఇతర ఆసుపత్రుల పరిస్థితి ఎలా ఉన్నట్లు.
ఏడాదిన్నరగా… pic.twitter.com/rm1o4SKaXS
ಜನರೇಟರ್ ಲಭ್ಯವಿದ್ದರೂ ಅದರ ಕಾರ್ಯಾಚರಣೆ ವಿಳಂಬವಾಗಿದೆ. ಇದು ತುರ್ತು ಸೇವೆಗಳಲ್ಲಿ ಗಂಭೀರ ಅಡಚಣೆಗೆ ಕಾರಣವಾಯಿತು ಎಂದು ಜಿಲ್ಲಾಧಿಕಾರಿ ಸಂಗರೆಡ್ಡಿ ಕಲೆಕ್ಟರ್ ಮತ್ತು ತೆಲಂಗಾಣ ವೈದ್ಯ ವಿಧಾನ ಪರಿಷತ್ ಆಯುಕ್ತರು ನಡೆಸಿದ ತನಿಖೆ ವೇಳೆ ತಿಳಿದು ಬಂದಿದೆ. ಬಳಿಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಬ್ಯಾಕಪ್ ಜನರೇಟರ್ಗಳು ಎಲ್ಲಾ ಸಮಯದಲ್ಲೂ ಸಿದ್ಧವಾಗಿ ಮತ್ತು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಸೂಪರಿಂಟೆಂಡೆಂಟ್ಗಳಿಗೆ ನಿರ್ದೇಶನ ನೀಡಿದೆ.
ಈ ಘಟನೆಯ ಬಗ್ಗೆ ವಿರೋಧ ಪಕ್ಷದ ನಾಯಕ ಮತ್ತು ಬಿಆರ್ಎಸ್ ಸದಸ್ಯ ಹರೀಶ್ ರಾವ್ ತಣ್ಣೀರು ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಬರೆದಿರುವ ಹರೀಶ್ ರಾವ್, 300ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುವ ಜಹೀರಾಬಾದ್ ಸರ್ಕಾರಿ ಆಸ್ಪತ್ರೆಯ ಪರಿಸ್ಥಿತಿ ಹೀಗಿದ್ದರೆ ಗ್ರಾಮೀಣ ಪ್ರದೇಶದ ಇತರ ಆಸ್ಪತ್ರೆಗಳ ಗತಿ ಏನು ಎಂದು ಪ್ರಶ್ನಿಸಿದ್ದಾರೆ.