ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಗೋಡೆ ಕೊರೆದು ಮೊಬೈಲ್‍ ಅಂಗಡಿಗೆ ಕನ್ನ ಹಾಕಿದ ಕಿಲಾಡಿ ಕಳ್ಳ- ವಿಡಿಯೊ ಇಲ್ಲಿದೆ ನೋಡಿ

ಹೈದರಾಬಾದ್‌ನ ದಿಲ್‌ಸುಖ್‌ನಗರ-ಕೋಟಿ ಮುಖ್ಯ ರಸ್ತೆಯಲ್ಲಿರುವ ಬಿಗ್ ಸಿ ಮೊಬೈಲ್ ಶೋ ರೂಂನಲ್ಲಿ ಇತ್ತೀಚೆಗೆ ತಡರಾತ್ರಿ ಕಳ್ಳನೊಬ್ಬ ಗೋಡೆಯಲ್ಲಿ ರಂಧ್ರ ಕೊರೆದು ಒಳಗೆ ನುಗ್ಗಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ದೋಚಿದ್ದಾನೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ ಈಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ಆಗಿದೆ.

ಮೊಬೈಲ್‌ ಅಂಗಡಿಗೆ ಕನ್ನ ಹಾಕಿದ ಕಿಲಾಡಿ ಕಳ್ಳ; ವಿಡಿಯೊ ವೈರಲ್

Profile pavithra Jul 1, 2025 4:54 PM

ಹೈದರಾಬಾದ್: ಹೈದರಾಬಾದ್‌ನಲ್ಲಿ ಕಳ್ಳನೊಬ್ಬ ಮೊಬೈಲ್ ಅಂಗಡಿಯೊಂದಕ್ಕೆ ನುಗ್ಗಿ 5 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್‌ಗಳನ್ನು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ಅಂಗಡಿಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಇಡೀ ಕೃತ್ಯ ಸೆರೆಯಾಗಿದ್ದು, ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಹೈದರಾಬಾದ್‌ನ ಜನನಿಬಿಡ ದಿಲ್‌ಸುಖ್‌ನಗರ-ಕೋಟಿ ಮುಖ್ಯ ರಸ್ತೆಯಲ್ಲಿರುವ ಬಿಗ್ ಸಿ ಮೊಬೈಲ್ ಶೋ ರೂಂನಲ್ಲಿ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

ಇಡೀ ಘಟನೆಯು ಶೋ ರೂಂನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ವೈರಲ್‌ ವಿಡಿಯೊದಲ್ಲಿ, ಕಳ್ಳ ಅಂಗಡಿಯ ಗೋಡೆಯಲ್ಲಿ ರಂಧ್ರ ಕೊರೆದು ಒಳಗೆ ಹೋಗಿ ಅಲ್ಲಿದ್ದ ಮೊಬೈಲ್ ಫೋನ್‌ಗಳನ್ನು ಕದ್ದೊಯ್ಯುತ್ತಿರುವ ದೃಶ್ಯ ಸೆರೆಹಿಡಿಯಲಾಗಿದೆ. ಈ ಘಟನೆ ಮಲಕ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಡಿಯೊ ಇಲ್ಲಿದೆ ನೋಡಿ...



ಮಲಕ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳತನದ ಬಗ್ಗೆ ತನಿಖೆ ನಡೆಸಿದ್ದಾರೆ.ಆದರೆ ಶಂಕಿತನ ಗುರುತು ಇನ್ನೂ ಪತ್ತೆಯಾಗಿಲ್ಲ. ವಿಶೇಷ ತಂಡಗಳು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿವೆ ಮತ್ತು ಶಂಕಿತನ ಚಲನವಲನಗಳನ್ನು ಪತ್ತೆಹಚ್ಚಲು ಹತ್ತಿರದ ಸಿಸಿಟಿವಿ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿವೆ ಎನ್ನಲಾಗಿದೆ. ರಾತ್ರಿ ವೇಳೆ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲು ಮತ್ತು ವಾಣಿಜ್ಯ ಸಂಸ್ಥೆಗಳಿಗೆ, ವಿಶೇಷವಾಗಿ ಜನನಿಬಿಡ ಮಾರುಕಟ್ಟೆ ವಲಯಗಳಲ್ಲಿ ಭದ್ರತಾ ಕ್ರಮಗಳನ್ನು ಸುಧಾರಿಸಲು ಅನೇಕರು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಇತ್ತೀಚೆಗಷ್ಟೇ ಹಾಡಹಗಲೇ ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿಯುವುದಾಗಿ ಹೇಳಿ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರಿನ ವಿದ್ಯಾರಣ್ಯಪುರಂನ ಎಂಎಸ್ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, USDTಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದಾಗ ಖದೀಮರು ಎರಡು ಕೋಟಿ ರೂಪಾಯಿ ದೋಚಿದ್ದರು. ಕೆಂಗೇರಿ ನಿವಾಸಿ ಶ್ರೀಹರ್ಷ ಎಂಬವರು ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಶ್ರೀಹರ್ಷ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಠಾಣೆಯಲ್ಲೇ ಮಹಿಳಾ ಕಾನ್‌ಸ್ಟೇಬಲ್‌ನ ರೀಲ್ಸ್‌ ಹುಚ್ಚು! ಈಕೆ ಮಾಡಿರೋ ವಿಡಿಯೊ ಆದ್ರು ಏನು ಗೊತ್ತಾ?

ಕದ್ದ ಹಣದಿಂದ ಏರಿಯಾ ಮಕ್ಕಳ ಸ್ಕೂಲ್‌ ಫೀಸ್‌ ಕಟ್ಟಿದ ಕಳ್ಳ!

ಕಳ್ಳನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ತನ್ನ ಏರಿಯಾದಲ್ಲಿ ಸ್ನೇಹಿತರ ಮಕ್ಕಳು ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಇದರಿಂದ ಮನಸ್ಸು ಬದಲಿಸಿಕೊಂಡ ಕಳ್ಳ, ಹಲವೆಡೆ ಮನೆಗಳಿಗೆ ಕನ್ನ ಹಾಕಿ, ಕದ್ದ ಚಿನ್ನಾಭರಣವನ್ನು ಮಾರಿ ಮಕ್ಕಳ ಫೀಸ್‌ ಕಟ್ಟಲು ಹಾಗೂ ಸ್ನೇಹಿತರಿಗೆ ಆಟೋ ಖರೀದಿಸಲು ನೀಡಿದ್ದಾನೆ.