ಮನುಷ್ಯತ್ವದ ಚಿಕಿತ್ಸೆ ನೀಡುವ ಎಚ್..ಎಸ್.ವಿ ಕಾವ್ಯ
ಕನ್ನಡಿಗರ ಹೃದಯದಲ್ಲಿ ಪ್ರೀತಿ, ಪ್ರಣಯ, ಕರುಣೆ, ಅಂತಃಕರಣ, ಭಾವದೀಪ್ತಿಯನ್ನು ಬೆಳಗಿಸಿದ ಅಪೂರ್ವ ಕವಿ ಎಚೆಸ್ವಿಯವರು, ನಮ್ಮಂತಹ ಸಹೃದಯರ ಎದೆಯ ಕಡಲಿನಲ್ಲಿ ಕೇವಲ ಕಾವ್ಯದ ಹಾಯಿದೋಣಿಯಾಗಿ ತೇಲದೇ, ಅದರ ಜಗದಗಲದ ಮುಗಿಲಗಲ ಮಿಗೆಯಗಲದ ಆಳವನ್ನರಿತು ಮಾನವೀಯ ಸಂಬಂಧಗಳ ನೆಲೆ ಬೆಲೆಗಳನ್ನು ಲೋಕಕ್ಕೆ ತಿಳಿಸಿದವರು. ಅಳಿಮನದವರಾಗಿ ಮನುಷ್ಯ ಪ್ರೇಮವನ್ನು ಲಾಭನಷ್ಟದ ವ್ಯವಹಾರಿಕ ತಕ್ಕಡಿಯಲ್ಲಿಟ್ಟು ತೂಗುವ ನಮ್ಮಂತಹ ಆಧುನಿಕರಿಗೆ ಎಚೆಸ್ವಿಯರ ಕಾವ್ಯ ಮನುಷ್ಯತ್ವದ ಚಿಕಿತ್ಸೆ ನೀಡುವಂತಿದೆ. ಸ್ವಾರ್ಥದ ಬಯಕೆ ಯೆಂದಿಗೂ ಶರಣಾ ಗತಿಯ ಭಾವವನ್ನು ರೂಪಿಸುವುದಿಲ್ಲ; ಹಾಗೆ ಪ್ರೀತಿಯನ್ನೂ. ಆಸೆಗಳ ಸುಳಿಯಿಂದ ಪ್ರೀತಿಯನ್ನು ಕಾಪಾಡಿಕೊಳ್ಳಬೇಕಾದ ಜರೂರತ್ತು ವಿಶ್ವಕ್ಕಿದೆ.