ನಮ್ಮನ್ನು ಒಡೆಯುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ
ಒಕ್ಕಲಿಗರನ್ನು ನೇರವಾಗಿ ವಿರೋಧಿಸಿದರೆ ಸಮಸ್ಯೆಯಾಗುತ್ತದೆ ಎನ್ನುವ ಕಾರಣಕ್ಕೆ, ಒಡೆದು ಆಳುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚ್ಚಪ್ಪಗೌಡ ಆಗ್ರಹಿಸಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ವಿಶ್ವವಾಣಿಯೊಂದಿಗೆ ಮಾತನಾಡಿರುವ ಅವರು, ಜಾತಿ ಗಣತಿಗೆ ವಿರೋಧಿಸುತ್ತಿರುವುದಕ್ಕೆ ಕಾರಣ, ಉಪಜಾತಿಗಳ ಲೆಕ್ಕಾಚಾರ, ಜನಸಂಖ್ಯೆಯಲ್ಲಿನ ವ್ಯತ್ಯಾಸ ಸೇರಿದಂತೆ ಹಲವು ವಿಷಯದ ಬಗ್ಗೆ ಮಾತ ನಾಡಿದ್ದಾರೆ.